State
ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ
ಕೆಯುಡಬ್ಲ್ಯೂಜೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ
ಬೆಂಗಳೂರು-ಡಿ.1. ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ
ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.
ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

ಇಂದಿನ ಸಮಾಜದಲ್ಲಿ ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು.
ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಭುದ್ಧತೆ ಹೊಂದಿದ ಪತ್ರಕರ್ತರು ಇದ್ದರು. ಈಗ ಆ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ವೃತ್ತಿ ಭಾಂದವರ ಬಗ್ಗೆ ತೋರುತ್ತಿರುವ ಕಾಳಜಿಯು ನಿಜಕ್ಕೂ ಸ್ತುತ್ಯಾರ್ಹ. ನಿರಂತರ ಕಾರ್ಯಕ್ರಮ ಮೂಲಕ ಕೆಯುಡಬ್ಲ್ಯೂಜೆ ಹೊಸ ಹೆಜ್ಜೆ ಇಟ್ಟಿರುವುದು ವಿಶೇಷ ಎಂದು ಅಭಿನಂದಿಸಿದರು.

ಪತ್ರಿಕಾ ವಿತರಕರನ್ನೂ ಸರ್ಕಾರ ಈ ಬಾರಿ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆಸ್ಪತ್ರೆಗೆ ಸೇರಿದವರಿಗೆ ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ವಿತರಕರನ್ನು ಗುರುತಿಸುವ ಕಾರ್ಯವು ಇನ್ನೂ ಮುಂದುವರಿಯಲಿದೆ ಎಂದು ಅವರು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತರಾದ ಮಾಯಾ ಶರ್ಮಾ
ಮಾತನಾಡಿ, ಪತ್ರಕರ್ತರು ಯಾವ ಪಕ್ಷಕ್ಕೂ ಮತ್ತು ಯಾವ ಪಂಥಕ್ಕೂ ಸೇರಿದವರಲ್ಲ. ಸದಾ ನಿಸ್ಪಕ್ಷಪಾತವಾಗಿ ಕೆಲಸ ಮಾಡುವ ಮೂಲಕ ವೃತ್ತಿ ಬದ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸುದ್ದಿಮನೆಯ ಹಿರಿಯ ಸುಬ್ಬು ಹೊಲೆಯಾರ್ ಮಾತನಾಡಿ, ವೃತ್ತಿಪರವಾದ ಕೆಯುಡಬ್ಲ್ಯೂಜೆ ಸಂಸ್ಥೆಯಲ್ಲಿ ನನಗೆ ಗೌರವಿಸುತ್ತಿರುವುದು ಅಭಿಮಾನದ ಸಂಗತಿ ಎಂದರು. ಡಾ.ಅಂಬೇಡ್ಕರ್ ಆಶಯಗಳು ಸಂವಿಧಾನಬದ್ದವಾಗಿ ಶೋಷಿತ ಸಮುದಾಯಗಳಿಗೆ ನಿಜ ಅರ್ಥದಲ್ಲಿ ತಲುಪಬೇಕು ಎಂದರು.

ಹಿರಿಯ ಪತ್ರಕರ್ತ ರಫೀಕ್ ಭಂಡಾರಿ, ಪತ್ರಿಕಾ ವಿತರಕರಾದ ಜವರಪ್ಪ ಮೈಸೂರುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸಭಾಪತಿಗಳ ವಿಶೇಷಾಧಿಕಾರಿ ಡಾ. ಮಹೇಶ್ ವಾಳ್ವೇಕರ್ , ವಿಧಾನಸಭಾಧ್ಯಕ್ಷರ ಮಾಧ್ಯಮ ಸಂಯೋಜಕರಾದ ಜ್ಞಾನಶೇಖರ್ ಅವರನ್ನೂ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ
ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸದಾ ಬದ್ಧವಾಗಿ ಕೆಲಸ ಮಾಡುತ್ತದೆ. ವೃತ್ತಿ ಬಾಂಧವರನ್ನು ಕೆಯುಡಬ್ಲ್ಯೂಜೆ ಅಂಗಳದಲ್ಲಿ ಸನ್ಮಾನಿಸತ್ತಿರುವುದು ಅಭಿಮಾನದ ಸಂಗತಿ ಎಂದರು.

ಸಮಾರಂಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ನಿಂಗಪ್ಪ ಚಾವಡಿ,
ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ, ಶೇಷಚಂದ್ರಿಕಾ, ಡಿ. ಉಮಾಪತಿ, ಪತ್ರಿಕಾ ವಿತರಕರಒಕ್ಕೂಟದ ಅಧ್ಯಕ್ಷ ಶಂಭುಲಿಂಗ, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್, ಕೆ.ಆರ್.ದೇವರಾಜ್, ಕೋಲಾರದ ವಿ.ಮುನಿರಾಜು, ನಗರ ಘಟಕದ ಪದಾಧಿಕಾರಿಗಳು, ಹಿರಿಯ ಪತ್ರಕರ್ತೆ ಶಮಂತಾ, ಶಶಿಕಲಾ ಸೇರಿದಂತೆ ಹಿರಿಯ ಪತ್ರಕರ್ತರು ಮತ್ತು ಬೆಂಗಳೂರು ನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರೂ ಹಾಜಾರಿದ್ದರು.
ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಸ್ವಾಗತಿಸಿದರು, ಕೊನೆಯಲ್ಲಿ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು

Special
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್: 25 ಲಕ್ಷ ರೂ.ವರೆಗೆ ಸುಲಭ ಸಾಲ
ವೈಯಕ್ತಿಕ ಅಗತ್ಯಗಳಿಗೆ ತಕ್ಷಣ ಹಣದ ಅವಶ್ಯಕತೆ ಇರುವವರಿಗೆ ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಉತ್ತಮ ಆಯ್ಕೆಯಾಗಿ ಪರಿಣಮಿಸಿದೆ. ಕಡಿಮೆ ಬಡ್ಡಿ, ಸರಳ ದಾಖಲೆಗಳು ಹಾಗೂ ವೇಗವಾದ ಅನುಮೋದನೆಯೊಂದಿಗೆ ಈ ಸಾಲವನ್ನು ಪ್ರತಿಯೊಬ್ಬರು ಸುಲಭವಾಗಿ ಪಡೆಯಬಹುದು.
ಯೋಜನೆಯ ಪ್ರಮುಖ ವೈಶಿಷ್ಟ್ಯಗಳು
•25 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು.
•ಕಡಿಮೆ ಬಡ್ಡಿದರ
•ಕಡಿಮೆ ದಾಖಲೆಗಳ ಪರಿಶೀಲನೆಯ ನಂತರ ಬೇಗನೆ ಸಾಲ ಬಿಡುಗಡೆಯಾಗುತ್ತದೆ.
•ನಿಮ್ಮ ಮಾಸಿಕ ಆದಾಯದ ಮೇಲೆ ಆಧರಿಸಿ ಪಾವತಿ ಅವಧಿಯನ್ನು ಆರಿಸಿಕೊಳ್ಳಲು ಅವಕಾಶವಿದೆ.
ಯಾರು ಅರ್ಹರು?
•ನಿಯಮಿತ ಆದಾಯವಿರುವ ನಾಗರಿಕರು
•ಉದ್ಯೋಗಸ್ತರು, ಸ್ವಯಂ ಉದ್ಯೋಗಿಗಳು ಹಾಗೂ ವ್ಯವಹಾರಿಗಳು
•ಮಾನ್ಯ ಗುರುತಿನ ದಾಖಲೆ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ ನೀಡಬಲ್ಲವರು

ಅರ್ಜಿ ಪ್ರಕ್ರಿಯೆ:
•ಅಧಿಕೃತ ವೆಬ್ಸೈಟ್ಗೆ ಹೋಗಿ ಆನ್ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
•ಅಗತ್ಯ KYC ದಾಖಲೆಗಳನ್ನು ಅಪ್ಲೋಡ್ ಮಾಡಿ.
•ಬ್ಯಾಂಕ್ 24–48 ಗಂಟೆಗಳಲ್ಲಿ ಪರಿಶೀಲನೆ ಮಾಡುತ್ತದೆ.ಬೇಕಾದರೆ ಹತ್ತಿರದ ಶಾಖೆಗೆ ದಾಖಲೆ ದೃಢೀಕರಣಕ್ಕೆ ಭೇಟಿ ಮಾಡಬಹುದು.
•ದಾಖಲೆಗಳು ಸರಿಯಾಗಿದ್ದರೆ ಸಾಲ ಮಂಜೂರಾತಿ. ಮಂಜೂರಾದ ನಂತರ ಸಾಲ ಮೊತ್ತ ಖಾತೆಗೆ ಜಮಾ
ಅಗತ್ಯ ದಾಖಲೆಗಳು
•ಆಧಾರ್ / ಪಾನ್ ಕಾರ್ಡ್
•ಆದಾಯ ಪ್ರಮಾಣ
•6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
•ಪಾಸ್ಪೋರ್ಟ್ ಗಾತ್ರದ ಫೋಟೋ
•ಪೂರ್ಣಗೊಂಡ ಸಾಲ ಅರ್ಜಿ ನಮೂನೆ

ಅಧಿಕೃತ ವೆಬ್ಸೈಟ್: Karnataka Bank https://share.google/Sdx236NRFLScWpmGm
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಕಡಿಮೆ ಷರತ್ತುಗಳು, ಬೇಗ ಅನುಮೋದನೆ ಮತ್ತು ಸುಲಭ ಪಾವತಿ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ತುಂಬಾ ಅನುಕೂಲಕರ. ದೊಡ್ಡ ಮೊತ್ತದ ಸಾಲವನ್ನು ತೊಂದರೆ ಇಲ್ಲದೆ, ಕಡಿಮೆ ಸಮಯದಲ್ಲಿ ಪಡೆಯಲು ಇದು ವಿಶ್ವಾಸಾರ್ಹ ಆಯ್ಕೆ.
State
ರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಅವರ ತಂದೆ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ಹಾಗಾದರೆ ಲೋಕಸಭೆ ವಿಪಕ್ಷ ನಾಯಕ ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಇಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಕುರ್ಚಿಗೆ ಪೈಪೋಟಿ ನಡೆಯುತ್ತಿದೆ. ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಅಲ್ಲದೇ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಸಿಎಂ ಸಿದ್ದರಾಮಯ್ಯನವರಿಗೆ ಅಧಿವೇಶನ ಪ್ರಾರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸಿಎಂ ವಿಚಾರದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಹೇಳಿದ್ದಾರೆ.
ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ಬಳಿಕವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು. ಆದರೆ ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರೈತರು ಮೆಕ್ಕೆಜೋಳವನ್ನು 1,700- 1,600 ರೂ.ಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ. ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
State
ನಾಳೆ ದೆಹಲಿಯಲ್ಲಿ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜ್ಯದ ಸಿಎಂ ಡಿಸಿಎಂ ಭಾಗಿ
ಬೆಂಗಳೂರು: ನಾಳೆ ದೆಹಲಿಯಲ್ಲಿ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿನ್ನರ್, ಬ್ರೇಕ್ಫಾಸ್ಟ್ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಅಲ್ಲದೇ ನಾಳೆ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ನೆಪದಲ್ಲಿ ಇಬ್ಬರು ನಾಯಕರನ್ನು ದೆಹಲಿ ಕರೆಸಿಕೊಂಡರಾ ಎಂಬ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ದೇಶದ ಅನೇಕ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ವೋಟ್ ಚೋರಿ ನಡೆದಿದೆ ಅಂತಾ ಕಾಂಗ್ರೆಸ್ ಸಮರ ಸಾರಿದೆ. ಇದೀಗ ಎರಡನೇ ಹಂತದ ವೋಟ್ ಚೋರಿ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ನಾಳೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಅಭಿಯಾನ ನಡೆಯಲಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಮಂಡ್ಯ ನಾಯಕರ ಟೀಂ ದಿಲ್ಲಿ ಯಾತ್ರೆ ಕೈಗೊಂಡಿದೆ. ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ತಂಡ ದೆಹಲಿಗೆ ತೆರಳುವ ಯೋಜನೆ ಇತ್ತು. ಆದರೆ ಅನಾರೋಗ್ಯದ ಕಾರಣ ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿಲ್ಲ. ಉಳಿದಂತೆ ಶಾಸಕರುಗಳಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ದೆಹಲಿಗೆ ತೆರಳಿದ್ದಾರೆ.

ಮಂಡ್ಯ ಶಾಸಕ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನನ್ನ ಜೊತೆ ಯಾರೂ ದೆಹಲಿಗೆ ಬರುತ್ತಿಲ್ಲ. ಅವರವರ ಕ್ಷೇತ್ರದವರ ಜೊತೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ವೋಟ್ ಚೋರಿ ಬಗ್ಗೆ ಕಿಡಿಕಾರಿದ ಎಂಎಲ್ಸಿ ಸಲೀಂ ಅಹ್ಮದ್, ಇದು ವೋಟ್ ಚೋರಿ ಅಲ್ಲ, ಬಿಜೆಪಿ ಹಾಗೂ ಎಲೆಕ್ಷನ್ ಕಮಿಷನ್ನಿಂದ ಡಕಾಯಿತಿ ಅಂದಿದ್ದಾರೆ.
-
Hassan16 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
Kodagu16 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
Hassan23 hours agoಟಿಕೆಟ್ ಪರಿಶೀಲನೆ ವೇಳೆ ಭೀಕರ ಅಪಘಾತ: ಲಾರಿ ಗುದ್ದಿ KSRTC ಟಿಕೆಟ್ ತನಿಖಾಧಿಕಾರಿ ಸ್ಥಳದಲ್ಲೇ ಸಾ*ವು
-
State12 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
State16 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Mandya15 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Hassan14 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Kodagu14 hours agoಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಸಭೆ : ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ನಿರ್ಧಾರ
