Connect with us

Kodagu

ಇಂದಿನಿಂದ ಕುಂಜಿಲ ಪೈನರಿ ಮಖಾಂ ಉರೂಸ್ ಆರಂಭ- ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ನಿರ್ಧಾರ.

Published

on

ನಾಪೋಕ್ಲು :ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭವು ತಾ.23ರಿಂದ 27ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೈನರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಸೌಕತ್ ಅಲಿ ತಿಳಿಸಿದ್ದಾರೆ.

ಕುಂಜಿಲ ಪೈನರಿ ಜಮಾಅತ್ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉರೂಸ್ ಸಮಾರಂಭ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದು ಜಾತಿ ಧರ್ಮ ಭೇದ ಮರೆತು ಸರ್ವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಜಮಾಅತ್ ಕಾರ್ಯದರ್ಶಿ ಸಹೀದ್ ಪಯ್ಯಡತ್ ಮಾತನಾಡಿ ಫೆ.23 ಶುಕ್ರವಾರ ಜುಮಾ ನಮಾಜ್ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ.ಸೌಕತ್ ಅಲಿ ದ್ವಜಾರೋಹಣ ನೆರವೇರಿಸುವುದರ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.
ಅಂದು ರಾತ್ರಿ ಕಾಂತಪುರಂ ಅಬ್ದುಲ್ ಲತೀಫ್ ಸಖಾಫಿ ಅವರ ನೇತೃತ್ವದಲ್ಲಿ ಆತ್ಮೀಯ ಮದನಿಯಂ ಮಜ್ಲಿಸ್ ನಡೆಯಲಿದೆ.

ಫೆ.24 ರಂದು ರಾತ್ರಿ ಸ್ವಲಾತ್ ವಾರ್ಷಿಕ ಮತ್ತು ದುಆ ಮಜ್ಲಿಸ್ ಗೆ ರಈಸುಲ್ ಉಲಮಾ ಶೈಖುನಾ ಸುಲೈಮಾನ್ ಮುಸ್ಲಿಯಾರ್ ನೇತೃತ್ವ ವಹಿಸಲಿದ್ದಾರೆ.
ಫೆ.25 ರಂದು ರಾತ್ರಿ ಮುಳ್ಳೂರ್ ಕರ ಮಹಮ್ಮದಲಿ ಸಖಾಫಿ ಧಾರ್ಮಿಕ ಪ್ರಭಾಷಣ ಮಾಡಲಿದ್ದಾರೆ.

ಫೆ.26ರಂದು ಮದ್ಯಾಹ್ನ 1.30ಗಂಟೆಗೆ ಸೌಹಾರ್ದ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು ಡಾ.ಅಬ್ದುಲ್ ರಶೀದ್ ಝೖನಿ ಕಾಮಿಲ್ ಸಖಾಫಿ ಕಕ್ಕಿಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಾ.ಮೌಲಾನ ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಧಾರ್ಮಿಕ ಪ್ರಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುಲ್ ಲತೀಫ್ ಸುಂಟಿಕೊಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಸೇರಿದಂತೆ ವಿವಿಧ ಧಾರ್ಮಿಕ ಸಾಮಾಜಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ. ಅಂದು ಸಂಜೆ 4ಗಂಟೆಗೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ.
ಅಂದು ರಾತ್ರಿ ಅನ್ವರಲಿ ಹುದವಿ ಅವರ ನೇತೃತ್ವದಲ್ಲಿ ಇಸ್ಕ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ.
ಫೆ.27 ರಂದು ರಾತ್ರಿ ವಲಿಯುದ್ದಿನ್ ಫೈಝಿ ವಝಕ್ಕಾಡ್ ಅವರ ನೇತೃತ್ವದಲ್ಲಿ ನೂರೇ ಅಜ್ಮಿರ್ ಆತ್ಮೀಯ ಮಜ್ಲಿಸ್ ಜರುಗಲಿದೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ಲ ಫೈಝಿ,ಸಯ್ಯದ್ ಶರಫುದ್ದಿನ್ ಸಅದಿ ಅಲ್ ಮುಖೈಬಿಲಿ ಮುಳವೂರ್ ತಂಙಳ್, ಸಯ್ಯದ್ ಶಿಯಾಬುದ್ದೀನ್ ಅಲ್ ಹೈದರೂಸಿ ಕಿಲ್ಲೂರ್ ತಂಙಳ್, ನಿಝಾರ್ ಅಹ್ಸನಿ ಕಕ್ಕಡಿಪುರಂ, ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ ಭಾಗವಹಿಸಲಿದ್ದಾರೆ.


ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಸಹೀದ್ ಕೋರಿದರು.

ಸುದ್ದಿಗೊಷ್ಟಿಯಲ್ಲಿ ಜಮಾಅತ್ ಉಪಾಧ್ಯಕ್ಷ ಇಬ್ರಾಹಿಂ(ಇಬ್ಬು )ಸಲಹಾ ಸಮಿತಿ ಸದಸ್ಯರಾದ ಮೂಸಾ ಪತ್ತಂಗೋಡ್, ಹಮೀದ್ ಪಯ್ಯಡತ್,ದರ್ಸ್ ಸಮಿತಿ ಉಪಾಧ್ಯಕ್ಷ ಉಸ್ಮಾನ್ ವಯಕೋಲ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕ

Published

on

ಮಡಿಕೇರಿ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕಗಳೊಂದಿಗೆ ವಿಶ್ವವಿದ್ಯಾನಿಲಯಕ್ಕೆ 7ನೇ ರ್ಯಾಂಕ್ ಪಡೆದಿರುತ್ತಾರೆ. ಅಲ್ಲದೆ ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿಂದ ಕನ್ನಡ ವಿಷಯದಲ್ಲಿ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.

ಸುಮನ್ 2014ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ಸುಮನ್’ರವರ ಪತಿ ಬೊಟ್ಟಂಗಡ ತಿಲಕ್ ಹಾಗೂ ಮಗಳು ಸ್ತುತಿ ಬೋಜಮ್ಮ. ಇವರು ತೆರಾಲುವಿನಲ್ಲಿ ವಾಸವಾಗಿದ್ದಾರೆ.

Continue Reading

Kodagu

ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

Published

on

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.

ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.

ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು  ಹಾಜರಿದ್ದರು

Continue Reading

Kodagu

ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ

Published

on

ಮಡಿಕೇರಿ : ಮಡಿಕೇರಿ ಕಾಟಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡಿಕೇರಿ-ಮಂಗಳೂರು ಮುಖ್ಯರಸ್ತೆಯ ಕಾಟಕೇರಿ ಬಳಿಯ ಪ್ರಶಾಂತಿ ಹೋಂ ಸ್ಟೇ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ನಾಪೋಕ್ಲು ಬಳಿಯ ಕಕ್ಕಬ್ಬೆ ನಿವಾಸಿ ಬೆಟ್ಟಗೇರಿಯಲ್ಲಿ ವಾಸವಿರುವ ಶರತ್ (28) ಮೃತ ವ್ಯಕ್ತಿ.
ಮಡಿಕೇರಿ ಮಂಗಳೂರು ಮುಖ್ಯರಸ್ತೆಯಲ್ಲಿ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Trending

error: Content is protected !!