State
ಕರ್ತವ್ಯ ಲೋಪ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಅಮಾನತು

ಮೈಸೂರು : ಕರ್ತವ್ಯ ಲೋಪದ ಮೇಲೆ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ C.N. ಶ್ರೀಧರ್ ಅಮಾನತು ಮಾಡಲಾಗಿದೆ.
ನಿನ್ನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲು ಬಟನ್ ಒತ್ತಿದಾಗ ಅದು ಕಾರ್ಯ ನಿರ್ವಹಿಸದೆ ಮುಜುಗರವಾಗಿತ್ತು. ಈ ಹಿನ್ನಲೆ ಶ್ರೀಧರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
State
ಈ ಕೆಲಸ ಮಾಡದಿದ್ದರೆ 7 ವರ್ಷ ತುಂಬಿದ ಮಕ್ಕಳ ಆಧಾರ್ ಕಾರ್ಡ್ ರದ್ದು : ಈಗಲೇ ಉಚಿತವಾಗಿ ಮಾಡಿಸಿ

Biometric Update for Adhar : ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು 7 ವರ್ಷ ಮೀರಿದ ಮಕ್ಕಳ ಬಯೋಮೆಟ್ರಿಕ್ ಮಾಡದಿದ್ದರೆ ಅಂತಹ ಮಕ್ಕಳ ಆಧಾರ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಹೇಳಿದೆ.
7 ವರ್ಷ ಮೀರಿದ ಮಕ್ಕಳ ಬಯೋಮೆಟ್ರಿಕ್ ನೀಡದಿದ್ದರೆ ‘ಆಧಾರ್’ ರದ್ದು: ಎಚ್ಚರಿಕೆ
ಹೌದು, ಯಾವುದೇ ಮಕ್ಕಳ ಆಧಾರ್ ಕಾರ್ಡ್ ಅನ್ನು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾಗ ಮಾಡಿಸಿದ್ದರೆ, ಏಳು ವರ್ಷ ಮುಗಿಯುತ್ತಿದ್ದಂತೆಯೇ ಅಂತವರ ಬಯೋಮೆಟ್ರಿಕ್ ಗಳನ್ನು ಶೀಘ್ರದಲ್ಲಿಯೇ ಕಡ್ಡಾಯವಾಗಿ ಅಪ್ಡೇಟ್ ಮಾಡಿಸಬೇಕೆಂದು ಪ್ರಾಧಿಕಾರವು ತಿಳಿಸಿದೆ.
ಇಲ್ಲದಿದ್ದರೆ ಅಂತವರ ಆಧಾರ್ ಕಾರ್ಡನ್ನು ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ. ಇದಕ್ಕಾಗಿ ಪ್ರಾಧಿಕಾರವು ರಿಮೈಂಡರ್ ಮೆಸೇಜ್ ಗಳನ್ನು ಕೂಡ ಕಳುಹಿಸುತ್ತಿದ್ದು, ಕೂಡಲೇ ನಿಮ್ಮ ಮಕ್ಕಳ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಿ.
ಬಯೋಮೆಟ್ರಿಕ್ ಅಪ್ಡೇಟ್ ಏಕೆ ಮಾಡಿಸಬೇಕು?
ಮಕ್ಕಳ ಆಧಾರ್ ಕಾರ್ಡ್ ಅನ್ನು 5 ವರ್ಷದ ಒಳಗಿನವರಾಗಿದ್ದಾಗ ಮಾಡಿಸಿದ್ದರೆ, 7 ವರ್ಷ ವಯಸ್ಸು ತುಂಬಿದ ನಂತರ ಅವರ ಬೆರಳಚ್ಚು, ಫೋಟೋ ಸೇರಿದಂತೆ ಇತರೆ ಬಯೋಮೆಟ್ರಿಕ್ಗಳನ್ನು ಅಪ್ಡೇಟ್ ಮಾಡಿಸುವುದರಿಂದ ಡೇಟಾ ನಿಖರತೆ ಹಾಗೂ ವಿಶ್ವಾಸಾರ್ಹತೆಯನ್ನು ಹೆಚ್ಚಿಸುತ್ತದೆ.
ಅಪ್ಡೇಟ್ ಮಾಡಿಸಲು ಶುಲ್ಕ ಎಷ್ಟು?
5 ರಿಂದ 7 ವರ್ಷದ ಒಳಗಿನ ಮಕ್ಕಳ ಬಯೋಮೆಟ್ರಿಕ್ ಅನ್ನು ಅಪ್ಡೇಟ್ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ, ಉಚಿತವಾಗಿ ಮಾಡಿಸಬಹುದು. 7 ವರ್ಷ ಮೇಲ್ಪಟ್ಟ ಮಕ್ಕಳ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು 100 ರು. ಶುಲ್ಕ ವಿಧಿಸಲಾಗುವುದು.
ನಿಮ್ಮ ಮಕ್ಕಳ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ನಿಮ್ಮ ಹತ್ತಿರದ ಆಧಾರ್ ಸೆಂಟರ್ ಗೆ ಭೇಟಿ ನೀಡಿ.
State
ಬೈರತಿ ಬಸವರಾಜ್ ವಿರುದ್ಧ FIR ದಾಖಲು: ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಬೆಂಗಳೂರು: ಬೈರತಿ ಬಸವರಾಜ್ ವಿರುದ್ಧ ಹತ್ಯೆ ಪ್ರಕರಣ, ಎಫ್ಐಆರ್ ದಾಖಲಾಗಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿ , ಬೈರತಿ ಬಸವರಾಜ್ ಆರೋಪಿಯೇ ಹೊರತು ಅಪರಾಧಿ ಅಲ್ಲ. ಅವರು ಆ ತರಹದ ಅವಿವೇಕದ ಕೆಲಸ ಮಾಡೋರಲ್ಲ. ಅಷ್ಟು ಕೀಳುತನಕ್ಕೆ ಇಳಿಯಲ್ಲ. ಇದು ಸುಳ್ಳು ಕೇಸ್, ಅವರು ನಿರ್ದೋಷಿಯಾಗಿ ಹೊರಗೆ ಬರುತ್ತಾರೆಂಬ ವಿಶ್ವಾಸ ಇದೆ. ಕಾನೂನು ಮೀರಿ ಒಬ್ಬ ಜನಪ್ರತಿನಿಧಿಗೆ ಸರ್ಕಾರ ತೊಂದರೆ ನೀಡಬಾರದು ಅಥವಾ ಹೊಟ್ಟೆಕಿಚ್ಚಿಗೋಸ್ಕರ ಬೈರತಿ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಬೈರತಿ ಬಸವರಾಜ್ ಅವರನ್ನು ಉದ್ದೇಶಪೂರ್ಕವಾಗಿ ಸಿಲುಕಿಸಲು ಎರಡೆರಡು ಎಫ್ಐಆರ್ ಹಾಕಿದ್ದಾರೆ. ಇದು ಸರ್ಕಾರದ ಮಸಲತ್ತು. ಮೊದಲ ಕಾಪಿಯಲ್ಲಿ ಬೈರತಿ ಬಸವರಾಜ್ ಹೆಸರಿಲ್ಲ. ಎರಡನೇ ಎಫ್ಐಆರ್ನಲ್ಲಿ ವಿಜಯಲಕ್ಷ್ಮಿ ಅವರು ಬೈರತಿ ಬಸವರಾಜ್ ಹೆಸರು ಹೇಳಿದ್ದಾರೆ ಎಂದು ಪೊಲೀಸರು ಬರೆದುಕೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಎರಡೆರಡು ಎಫ್ಐಆರ್ ಹೇಗೆ ದಾಖಲಾದವು? ಯಾಕೆ ದಾಖಲಾಯಿತು? ಇದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.
ಇನ್ನೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ನಿಂದ ಟಾರ್ಗೆಟ್ ರಾಜಕಾರಣ ನಡೆಯುತ್ತಿದೆ. ಪೊಲೀಸರು ಗುಲಾಮಗಿರಿ ಮಾಡುತ್ತಿದ್ದಾರೆ. ಹತ್ಯೆ ಆದವನ ತಾಯಿಯೇ ಶಾಸಕರ ಪಾತ್ರ ಇಲ್ಲ ಎಂದಿದ್ದಾರೆ. ಹೀಗಿರುವಾಗ ಈ ಎಫ್ಐಆರ್ ಯಾಕೆ? ಅಲ್ಲದೇ ಆರೋಪಿಗಳ ಪೋಟೋ ಇದೆ ಮಾತ್ರಕ್ಕೆ ಅವರು ಆಪ್ತರಾ? ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಲಬುರಗಿಯ ಡ್ರಗ್ಸ್ ಕೇಸ್ ಆರೋಪಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಯೊಂದಿಗೆ ಪೋಟೋ ತೆಗೆಸಿಕೊಂಡಿದ್ದಾನೆ. ಅಲ್ಲಿ ಎಫ್ಐಆರ್ ಆಗಿದ್ಯಾ? ಯಾಕೆ ಹೀಗೆ? ಅಧಿಕಾರ ಎಂದಿಗೂ ಶಾಶ್ವತ ಅಲ್ಲ. ನಾವೂ ಅನೇಕ ಬದಲಾವಣೆಗಳನ್ನು ನೋಡಿದ್ದೇವೆ. ಇಂದು ನೀವು, ನಾಳೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಾಗ್ದಾಳಿ ನಡೆಸಿದರು.
State
ಆಗಸ್ಟ್.11ರೊಳಗೆ ಸಮಾನವಾಗಿ ಅನುದಾನ ಹಂಚಿಕೆ ಆಗಬೇಕು: ಸುರೇಶ್ ಬಾಬು

ಬೆಂಗಳೂರು: ರಾಜ್ಯ ಸರ್ಕಾರ, ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ಅನ್ಯಾಯ ಮಾಡುತ್ತಿದೆ. ಹಾಗಾಗಿ ಆಗಸ್ಟ್.11ರೊಳಗೆ ಸಮಾನವಾಗಿ ಅನುದಾನ ಹಂಚಿಕೆ ಆಗಬೇಕು, ಇಲ್ಲವಾದರೆ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಎಚ್ಚರಿಕೆ ನೀಡಿದ್ದಾರೆ
ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕಾಣಿಸುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಕ್ಕೆ ಹಣ ನೀಡುತ್ತಿಲ್ಲ. ಈ ಸರ್ಕಾರ ಅಭಿವೃದ್ಧಿ ಪರ ಇಲ್ಲ. ಈ ಸರ್ಕಾರದಲ್ಲಿ ಸುರ್ಜೇವಾಲ ಸೂಪರ್ ಸಿಎಂ ಆಗಿದ್ದಾರೆ. ಜನರು ಸುರ್ಜೇವಾಲಗೆ ಓಟ್ ಹಾಕಿದ್ದರಾ? ಸುರ್ಜೇವಾಲ ಶಾಸಕರೊಂದಿಗೆ ಚರ್ಚಿಸುತ್ತಿದ್ದಾರೆ. ಸುರ್ಜೇವಾಲ ಹೇಳಿದ ಮೇಲೆ ಸಿಎಂ 50 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ವಿಶೇಷ ಅಧಿಕಾರಿಗಳಿಗೆ ಪಟ್ಟಿ ನೀಡಿ ಎಂದು ಶಾಸಕರಿಗೆ ಸಿಎಂ ಪತ್ರ ಬರೆದಿದ್ದಾರೆ. ದುಡ್ಡು ಇದ್ದರೆ ಇವರು ಯಾಕೆ ಹಣ ನೀಡುತ್ತಿಲ್ಲ? ಹೈಕಮಾಂಡ್ಗೆ ಕಪ್ಪ ಕಾಣಿಕೆ ಕೊಡೋಕೆ ಈ ಸರ್ಕಾರ ಮುಂದಾಗಿದೆ. ವಿಶೇಷ ಅನುದಾನವೆಂದು ಬಿಡುಗಡೆ ಮಾಡಿ ಅದನ್ನು ಹೈಕಮಾಂಡ್ಗೆ ಕಪ್ಪ-ಕಾಣಿಕೆ ಕೊಡುತ್ತಿದ್ದಾರೆ ಅನ್ನಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.
ಸಂಸತ್ನಲ್ಲಿ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ., ಬಿಜೆಪಿ ಅವರಿಗೆ 25 ಕೋಟಿ ರೂ. ಕೊಡೋಣವೆಂದು ಚರ್ಚೆ ಆಗಿದೆ. ಜೆಡಿಎಸ್ ಶಾಸಕರಿಗೆ ಈಗಲೇ ಅನುದಾನ ಕೊಡೋದು ಬೇಡವೆಂದು ಇವರು ಚರ್ಚೆ ಮಾಡಿದ್ದಾರೆ. ರಾಜ್ಯದಲ್ಲಿ 224 ಶಾಸಕರು ಒಂದೇ. ಇವರೇನು ಕೆಪಿಸಿಸಿಯಿಂದ ನಮಗೆ ಹಣ ನೀಡುತ್ತಿಲ್ಲ. ಶಾಸಕರ ನಿಧಿಯಲ್ಲಿ ಹಣ ನೀಡಬೇಕು. ಯಾವುದೇ ತಾರತಮ್ಯ ಮಾಡದೇ ಎಲ್ಲಾ ಶಾಸಕರಿಗೆ ಅನುದಾನ ನೀಡಬೇಕು. ಇಲ್ಲದೇ ಹೋದರೆ ರಾಜ್ಯಾದ್ಯಂತ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಜೆಡಿಎಸ್ ಶಾಸಕರಿಗೆ ಅನುದಾನ ನೀಡಿಲ್ಲ. ಈಗ ಮಾಡಿರೋ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಿಲ್ಲ. ಅವರ ಪಕ್ಷದವರಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಾರೆ. ಜೆಡಿಎಸ್ ಅವರಿಗೆ ಯಾಕೆ ಹಣ ಬಿಡುಗಡೆ ಮಾಡಿಲ್ಲ. ಎಲ್ಲಾ ಶಾಸಕರನ್ನು ಒಂದಾಗಿ ನೋಡಿ. ತಾರತಮ್ಯ ಮಾಡೋದು ಸರಿಯಲ್ಲ. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಶಾಸಕರಿಗೂ ಅನುದಾನ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸೂಪರ್ ಸಿಎಂ ಸಿದ್ದರಾಮಯ್ಯ ಹೇಳಿದ ಮೇಲೆ ಕಾಂಗ್ರೆಸ್ ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ಆಗಸ್ಟ್ 11ರೊಳಗೆ ಸಮಾನವಾಗಿ ಅನುದಾನ ಹಂಚಿಕೆ ಆಗಬೇಕು. ಇಲ್ಲದೆ ಹೋದರೆ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಸಂದೇಶ ನೀಡಿದರು.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya11 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar17 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar11 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore13 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special16 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu12 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar11 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು