State
ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ…

ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗಧಿ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ
ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು
CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ
ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು
ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ
State
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್.26) ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.
ನಟಿ ರನ್ಯಾರಾವ್ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.
State
ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.
ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.
ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
State
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್.ಅಶೋಕ್

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.
ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
-
State11 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Hassan4 hours ago
ಜಮೀನು ವಿಚಾಕ್ಕೆ ಕೊಲೆ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu7 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ