Connect with us

State

ಕರ್ನಾಟಕ ರಾಜ್ಯ ಪಶುವೈದ್ಯಕೀಯ ಪರೀಕ್ಷಕರ ಸಂಘದ ಚುನಾವಣೆ ಫೆ.17ಕ್ಕೆ

Published

on

ಕರ್ನಾಟಕ ರಾಜ್ಯ ಪಶುವೈದ್ಯಕೀಯ ಪರೀಕ್ಷಕರ ಸಂಘ(ನೋ)ದ
ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಖಜಾಂಚಿ ಸ್ಥಾನಗಳಿಗೆ ಚುನಾವಣೆ ದಿನಾಂಕ 17-02-2024 ರಂದು ಶನಿವಾರ ನಡೆಯಲಿದೆ.
ಚುನಾವಣಾ ವೇಳಾಪಟ್ಟಿಯನ್ನ ಚುನಾವಣಾಧಿಕಾರಿಗಳು ಪ್ರಕಟಿಸಲಾಗಿದೆ.

ನಾಮಪತ್ರ ಸಲ್ಲಿಸಲು ಆರಂಭದ ದಿನಾಂಕ 02-02-2024 ಶುಕ್ರವಾರ ಬೆಳಿಗ್ಗೆ 11.00 ರಿಂದ 3.00 ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 09-02-2024 ಶುಕ್ರವಾರ ಮಧ್ಯಾಹ್ನ 4.00 ಗಂಟೆವರೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ 10-02-2024 ಶನಿವಾರ ಬೆಳಿಗ್ಗೆ 11.30 ಕ್ಕೆ
ನಾಮ ಪತ್ರ ಹಿಂಪಡೆಯಲು ಕೊನೆಯ ದಿನಾಂಕ 11-02-2024 ಭಾನುವಾರ ಮಧ್ಯಾಹ್ನ 3.00 ಗಂಟೆವರೆಗೆ ನಾಮಪತ್ರ ಹಿಂಪಡೆದವರ ಪಟ್ಟಿ ಪ್ರಕಟಣೆ 11-02-2024 ಭಾನುವಾರ ಮಧ್ಯಾಹ್ನ 3.00 ಗಂಟೆ ನಂತರ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ 11-02-2024 ಭಾನುವಾರ 3.00 ಗಂಟೆ ನಂತರ
ನಾಮಪತ್ರ ಸಲ್ಲಿಸಲು, ಹಿಂಪಡೆಯಲು, ಪರಿಶೀಲನೆ, ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ ಸ್ಥಳ ಕರ್ನಾಟಕ ಪಶುವೈದ್ಯಕೀಯ ಪರಿಷತ್ತು ಹೆಬ್ಬಾಳ ಬೆಂಗಳೂರು ಅಗತ್ಯವಿದ್ದಲ್ಲಿ ಚುನಾವಣೆ,ಮತ ಎಣಿಕೆ,ಫಲಿತಾಂಶ ಪ್ರಕಟಣೆ ಸಾಮಾನ್ಯ ಸಭೆ ಹಾಗೂ ಚುನಾವಣೆ ಡಾ ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ ಸಿ ಸೋಮಶೇಖರ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

State

ದಾಖಲೆಯ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಕೋನ: ಸಿಎಂ ಸಾಧನೆಗೆ ಎಂ.ಬಿ. ಪಾಟೀಲ್ ಶ್ಲಾಘನೆ

Published

on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 17ನೇ ದಾಖಲೆಯ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಒಂದು ಉಜ್ವಲ ಸಾಕ್ಷಿಯಾಗಿದೆ. ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂ. ಗಳಿಗೆ ಏರಿಸಿರುವುದು ಮತ್ತು ಅದಕ್ಕೆ ಪೂರಕವಾಗಿ ಬಂಡವಾಳ ವೆಚ್ಚವನ್ನು ಘೋಷಿಸಿರುವುದು ಸ್ವಾಗತಾರ್ಹ. ಈ ಕ್ರಮಗಳಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ವೇಗ ದೊರೆಯಲಿದ್ದು, ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರಿಗೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಲ :

ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ನ್ಯಾಯ ಒದಗಿಸಲಾಗಿದೆ. ಪ್ರತಿ ಎಕರೆ ಖುಷ್ಕಿ ಜಮೀನಿಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ 40 ಲಕ್ಷ ರೂ. ಪರಿಹಾರ ಘೋಷಿಸಿರುವುದು ರೈತರ ಪಾಲಿನ ದೊಡ್ಡ ಜಯವಾಗಿದೆ ಎಂದು ಅವರು ಬಣ್ಣಿಸಿದರು.

ಕೈಗಾರಿಕೆ ಮತ್ತು ಶಿಕ್ಷಣಕ್ಕೆ ಒತ್ತು :

ಜಿಟಿಟಿಸಿ (GTTC) ಕೇಂದ್ರಗಳು ಮತ್ತು ಕೌಶಲ್ಯ ತರಬೇತಿ ಅಕಾಡೆಮಿಗಳ ಸ್ಥಾಪನೆಯು ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಗುಣಮಟ್ಟದ ಮಾನವ ಸಂಪನ್ಮೂಲವನ್ನು ಒದಗಿಸಲಿದೆ. ಇದರೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯತ್ತ ಹೆಜ್ಜೆ ಇಟ್ಟಿರುವುದು ಜಿಲ್ಲೆಯ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದ ಪ್ರಗತಿಗೆ ಪೂರಕವಾಗಿದೆ ಎಂದು ಸಚಿವರು ತಿಳಿಸಿದರು. ಒಟ್ಟಾರೆಯಾಗಿ ಕೃಷಿ, ಕೈಗಾರಿಕೆ, ನೀರಾವರಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಿರುವ ಈ ಬಜೆಟ್ ರಾಜ್ಯವನ್ನು ಸುಸ್ಥಿರ ಬೆಳವಣಿಗೆಯತ್ತ ಮುನ್ನಡೆಸಲಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Continue Reading

Politics

ನಾಳೆ ಬೆಳಗ್ಗೆ 10:15ಕ್ಕೆ ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ದೀರ್ಘಕಾಲಿಕ ಸಿಎಂ ಆಗಿ ರೆಕಾರ್ಡ್ ಮಾಡಿರುವ ಸಿಎಂ ಸಿದ್ದರಾಮಯ್ಯ  ನಾಳೆ ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ದತೆ ನಡೆಸಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ, ನಾಳೆ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ಮುಟ್ಟುವ ಸಾಧ್ಯತೆ ಇದೆ. ಕಳೆದ ಬಾರಿ ಆದಾಯ ಸಂಗ್ರಹದ ಗುರಿ ಮುಟ್ಟಿಲ್ಲ. ಇದರ ಪರಿಣಾಮವೂ 2026-27ನೇ ಸಾಲಿನ ಬಜೆಟ್ ಮೇಲೆ ಪರಿಣಾಮ ಬೀರಲಿದೆ.

ಸಾಲ ಮಾಡಿ ತುಪ್ಪ ತಿನ್ನುವುದು ರಾಜ್ಯಕ್ಕೆ ಹೊಸದೇನಲ್ಲ. ಈ ಬಾರಿ 75 ಸಾವಿರ ಕೋಟಿ ರೂ. ಸಾಲ ಮಾಡುವ ಲೆಕ್ಕಾಚಾರದಲ್ಲಿದ್ದು, ರಾಜ್ಯದ ಸಾಲ 8 ಲಕ್ಷದ 30 ಸಾವಿರ ದಾಟುವ ಸಾಧ್ಯತೆಯೇ ಅಧಿಕ. ಗ್ಯಾರಂಟಿ ಯೋಜನೆಗಳ ಹೊರೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ , ಸಿಎಂ ಹಾದಿಯಾಗಿ ಕೆಲವರು ಮಾತನಾಡಿದ್ದಾರೆ. ಆದರೆ ಬಜೆಟ್‌ನಲ್ಲಿ ಪರಿಷ್ಕರಣೆ ಬಗ್ಗೆ ಸುಳಿವು ನೀಡದೆ ಹಂತ ಹಂತವಾಗಿ ಲೆಕ್ಕಾಚಾರ ಹಾಕಲು ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಗ್ಯಾರಂಟಿಗಳಿಗೆ ಮೀಸಲಿಡುವ ಹಣ ಮುಂದುವರಿಸುವ ಜೊತೆಗೆ ಕಡಿಮೆ ಹಣ ಮೀಸಲಿಟ್ಟು ಮಹಿಳೆಯರಿಗೆ ರಿಯಾಯಿತಿ ಯೋಜನೆ ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಈ ಮಧ್ಯೆ ಅಭಿವೃದ್ಧಿ ಯೋಜನೆಗಳತ್ತ ಗಮನಹರಿಸಬೇಕಿದ್ದು ಸಿಎಂ ಬ್ಯಾಲೆನ್ಸಿಂಗ್ ಬಜೆಟ್ ಮಂಡಿಸುತ್ತಾರೆ ಎನ್ನಲಾಗುತ್ತಿದೆ.

Continue Reading

State

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರಪ್ರಸಾರ

Published

on

ಬೆಂಗಳೂರು: ರಾಜ್ಯ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರ(ನಾಳೆ) ಮಂಡಿಸಲಿದ್ದು, ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.

17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ.

ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.

ಈ  ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು  ಪ್ರಕಟಣೆ ತಿಳಿಸಿದೆ.

Continue Reading

Trending

error: Content is protected !!