Hassan
ಕಳೆದ ೨೦ ವರ್ಷಗಳಿಂದ ಲಾಭದತ್ತ ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ನಾಗರಾಜು ಹೇಳಿಕೆ

ಹಾಸನ : ಕಳೆದ ೨೦ ವರ್ಷಗಳಿಂದ ಲಾಭಗಳಿಸುತ್ತಿರುವ ದಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಕಳೆದ ವರ್ಷದ ಸಾಲಿನಲ್ಲಿ ೧೩ ಕೋಟಿ ೪೮ ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ನಾಗರಾಜು ಸೋಮನಹಳ್ಳಿ ತಿಳಿಸಿದರು.
ನಗರದ ಬಿ.ಎಂ. ರಸ್ತೆ ಬಳಿ ಇರುವ ದಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಶಾಖೆಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ದಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ರೂ. ೮.೫೩ ಲಕ್ಷ ದುಡಿಯುವ ಬಂಡವಾಳದೊಂದಿಗೆ ದಿನಾಂಕ ೨೮-೧೦-೧೯೫೩ ರಲ್ಲಿ ಪ್ರಾರಂಭವಾಗಿದ್ದು, ಇದೀಗ ಜಿಲ್ಲೆಯಲ್ಲಿ ಪ್ರಧಾನ ಕಛೇರಿ ಹಾಗೂ ೩೪ ಶಾಖೆಗಳನ್ನು ಹೊಂದಿದ್ದು, ೨೦೨೩ ಮಾರ್ಚ್ ೩೧ರ ಅಂತ್ಯಕ್ಕೆ ರೂ. ೧೬೩೮.೯೮ ಕೋಟಿ ಠೇವಣಿ, ರೂ. ೮೩.೬೯ ಕೋಟಿ ಷೇರು ಬಂಡವಾಳ ಹಾಗೂ ರೂ. ೨೨೦೭.೬೭ ಕೋಟಿ ದುಡಿಯುವ ಬಂಡವಾಳ ಹೊಂದಿರುತ್ತದೆ. ಒಟ್ಟು ರೂ. ೧೮೩೬.೧೪ ಕೋಟಿ ಸಾಲ ವಿತರಿಸಲಾಗಿರುತ್ತದೆ. ನಮ್ಮ ಬ್ಯಾಂಕು ಜಿಲ್ಲೆಯ ಒಟ್ಟು ೪,೫೮,೨೮೯ ಗ್ರಾಹಕರನ್ನು ಹೊಂದಿದ್ದು. ರೈತರಿಗೆ ಹಾಗೂ ಗ್ರಾಹಕರಿಗೆ ನಿರಂತರವಾಗಿ ಸೇವೆ ಸಲ್ಲಿಸಲಾಗುತ್ತಿರುತ್ತದೆ. ಬ್ಯಾಂಕ್ ಸತತವಾಗಿ ೨೦ ವರ್ಷಗಳಿಂದ ಲಾಭಗಳಿಸುತ್ತಿದ್ದು, ೨೦೨೨- ೨೦೨೩ ನೇ ಸಾಲಿಗೆ ರೂ ೧೩.೪೮ ಕೋಟಿ ನಿವ್ವಳ ಲಾಭವನ್ನು ಗಳಿಸಿರುತ್ತದೆ ಎಂದರು. ಬ್ಯಾಂಕು ಬಹುಮುಖ್ಯವಾಗಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಸಾಲ ಸೌಲಭ್ಯ ನೀಡುತ್ತಿದ್ದು, ಜಿಲ್ಲೆಯಲ್ಲಿರುವ ೨೧೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ೧೭೩೬೧೭ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಬೆಳೆ ಸಾಲವಾಗಿ ರೂ. ೧೦೭೯.೨೩ ಕೋಟಿ ಮತ್ತು ೧೪೮೪ ರೈತರಿಗೆ ಮಧ್ಯಮಾವಧಿ ಸಾಲವಾಗಿ ರೂ. ೮೭.೪೩ ಕೋಟಿ, ಕೃಷಿ ವಲಯಕ್ಕೆ ಒಟ್ಟು ರೂ. ೧೧೪೬.೬೬ ಕೋಟಿ ಸಾಲ ನೀಡಲಾಗಿರುತ್ತದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಹುಉಪಯೋಗಿ ಸೇವಾ ಸಹಕಾರ ಸಂಘಗಳನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರವು ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಗೋದಾಮು ನಿರ್ಮಾಣ, ಕೃಷಿ ಯಂತ್ರೋಪಕರಣಗಳ ಖರೀದಿ ಹಾಗೂ ಇತರೆ ಉದ್ದೇಶಕ್ಕಾಗಿ ಡಿಸೆಂಬರ್-೨೦೨೦ ರ ಅಂತ್ಯಕ್ಕೆ ರೂ. ೧೩.೩೫ ಕೋಟಿ ಸಾಲ ನೀಡಲಾಗಿರುತ್ತದೆ. ಗೃಹ/ವಾಣಿಜ್ಯ ಕಟ್ಟಡ ನಿರ್ಮಾಣ, ಗೃಹ/ವಾಣಿಜ್ಯ ಕಟ್ಟಡ ಖರೀದಿ. ನಿವೇಶನ ಖರೀದಿ/ಅಡಮಾನ ಹಾಗೂ ಇತರೆ ಕೃಷಿಯೇತರ ಉದ್ದೇಶಗಳಿಗೆ ರೂ. ೫೨೦.೫೦ ಕೋಟಿ ಸಾಲ ನೀಡಿದೆ. ನಬಾರ್ಡ್ ಹಾಗೂ ರಾಜ್ಯ ಸರ್ಕಾರ ರೂಪಿಸಿದ ಸ್ವ ಸಹಾಯ ಗುಂಪುಗಳ ರಚನೆ ಹಾಗೂ ಬ್ಯಾಂಕ್ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಬ್ಯಾಂಕಿನಲ್ಲಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಬ್ಯಾಂಕಿನ ಶಾಖೆಗಳು ಹಾಗೂ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಡಿಸೆಂಬರ್-೨೦೨೩ ರ ಅಂತ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು ೧೮೫೭೩ ಸ್ವ ಸಹಾಯ ಗುಂಪುಗಳನ್ನು ರಚಿಸಿದ್ದು ಈ ಪೈಕಿ ಬಹುತೇಕ ಗುಂಪುಗಳು ಸಾಲ ಸೌಲಭ್ಯ ಪಡೆದಿದ್ದು, ಪ್ರಸ್ತುತ ೪೨೨೧ ಗುಂಪುಗಳಿಗೆ ಬ್ಯಾಂಕ್ ಅಂಕೇಜ್ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗಿದ್ದು, ಶೂನ್ಯ ಬಡ್ಡಿ ದರ ಅನ್ವಯವಾಗುವಂತೆ ರೂ. ೧೦೪.೯೬ ಕೋಟಿ ಸಾಲ ನೀಡಲಾಗಿರುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸುಮಾರು ೧೩೦೦ ಹಾಲು ಉತ್ಪಾದಕ ಸಹಕಾರ ಸಂಘಗಳು ಕಾರ್ಯಚಟುವಟಿಕೆ ನಡೆಸುತ್ತಿದ್ದು, ೩೬೦೮ ರೈತ ಸದಸ್ಯರುಗಳಿಗೆ ಹೈನುಗಾರಿಕೆ ಉತ್ತೇಜನಕ್ಕಾಗಿ ಮಿಶ್ರತಳಿ ಹಸು, ಎಮ್ಮೆ ಖರೀದಿಗೆ, ಗರಿಷ್ಠ ರೂ ೧,೦೦,೦೦೦/- ಗಳ ವರೆಗೆ ಶೇ. ೧೦.೫೦ ರ ಬಡ್ಡಿ ದರದಲ್ಲಿ ಒಟ್ಟು ರೂ. ೩೦.೩೬ ಕೋಟಿ ನೀಡಲಾಗಿರುತ್ತದೆ. ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯಡಿಯಲ್ಲಿ ಗರಿಷ್ಟ ರೂ. ೫೦,೦೦೦-೦೦ ಗಳವರೆಗೆ ಸಾಲ ನೀಡಲಾಗುತ್ತಿದ್ದು. ಇದುವರೆಗೂ ೯೬ ಜನರಿಗೆ ರೂ. ೧೧.೬೬ ಲಕ್ಷ ಸಾಲ ನೀಡಲಾಗಿರುತ್ತದೆ. ಭಾರತೀಯ ರಿಸರ್ವ್ ಬ್ಯಾಂಕು, ಬ್ಯಾಂಕುಗಳಿಗೆ ನಿಗದಿಪಡಿಸಿರುವ ಆರ್ಥಿಕ ಮಾನದಂಡಗಳನ್ವಯ ಸಿ.ಆರ್.ಎ.ಆರ್. ಅನುಪಾತವನ್ನು ಕನಿಷ್ಟ ಶೇ. ೯ ಕ್ಕೆ ನಿಗದಿಪಡಿಸಿದ್ದು, ಡಿಸೆಂಬರ್-೨೦೨೩ ರ ಅಂತ್ಯಕ್ಕೆ ಬ್ಯಾಂಕು ಶೇ. ೧೧.೧೦ ಸಿ.ಆರ್.ಎ.ಆರ್. ಹೊಂದಿರುತ್ತದೆ ಎಂದರು. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣವಾಗಿ ಕೋರ್ ತಂತ್ರಜ್ಞಾನದಡಿ ಗಣಕೀಕರಣಗೊಂಡಿದ್ದು, ಗ್ರಾಹಕರು ತಮ್ಮ ವ್ಯವಹಾರವನ್ನು ಯಾವುದೇ ಶಾಖೆಗಳಲ್ಲಿ (ಂಟಿಥಿತಿheಡಿe bಚಿಟಿಞiಟಿg) ವ್ಯವಹಾರ ನಡೆಸಬಹುದಾಗಿದೆ. ಎಲ್ಲಾ ಶಾಖೆಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವ ದೇಶಾದ್ಯಂತ ಹಣ ವರ್ಗಾವಣೆ ಮಾಡುವ ೧೫ ಎಟಿಎಂ ಯಂತ್ರಗಳನ್ನು ಸ್ಥಾಪಿಸಲಾಗಿದ್ದು, ಗ್ರಾಹಕರು ಈ ಸೌಲಭ್ಯ ಉಪಯೋಗಿಸಿಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ವ್ಯವಹಾರಗಳ/ಸೌಲಭ್ಯಗಳ ಅರಿವು ಮೂಡಿಸಲು ಹಾಗೂ ತ್ವರಿತ ನಗದು ಸೌಲಭ್ಯ ಕಲ್ಪಿಸಲು ಬ್ಯಾಂಕಿನ ವತಿಯಿಂದ ನಬಾರ್ಡ್ ಸಹಾಯಧನದೊಂದಿಗೆ ಬ್ಯಾಂಕಿನಲ್ಲಿ ಮೊಬೈಲ್ ಎಟಿಎಂ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬ್ಯಾಂಕಿನ ಬಗ್ಗೆ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ.ಸಿ.ಸಿ. ಬ್ಯಾಂಕ್ ಮುಖ್ಯ ಕಾರ್ಯನಿವಹಣಾಧಿಕಾರಿ ಆರ್.ಜೆ. ಕಾಂತರಾಜು, ಮಾಜಿ ಅಧ್ಯಕ್ಷರಾದ ಕೆ. ಸತೀಶ್, ನಿರ್ದೇಶಕರಾದ ಗಿರೀಶ್ ಚನ್ನವೀರಪ್ಪ, ಬಿದರಿಕೆರೆ ಜಯರಾಮ್, ಜಗದೀಶ್ ಇತರರು ಉಪಸ್ಥಿತರಿದ್ದರು.
Hassan
ಫೆ.15 ಮತ್ತು 16 ರಂದು ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ಜಾತ್ರೆ

ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಪುರಾಣ ಪ್ರಸಿದ್ಧ ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ದೇವರ ಐತಿಹಾಸಿಕ ಜಾತ್ರೆ ಫೆ.೧೫ ಮತ್ತು ೧೬ ರಂದು ನಡೆಯಲಿದೆ.
ದೇವಸ್ಥಾನದಲ್ಲಿ ಫೆ.೮ ರಿಂದ ೧೭ ರವರೆಗೆ ಉತ್ಸವಗಳು ಮತ್ತು ಅನ್ನ ಸಂತರ್ಪಣೆ ನಡೆಯುತ್ತದೆ. ಇತಿಹಾಸ ಹೇಳುವಂತೆ ಒಬ್ಬ ಕೊರಮನು ಬುಟ್ಟಿ ಹೆಣೆಯಲು ಬಿದಿರು ತರಲು ಹೋಗಿದ್ದನು. ಬಿದಿರು ಮೆಣೆ (ಗುಂಪೊದಕ್ಕೆ) ಕತ್ತಿಯನ್ನು ಹೊಡೆಯುವಾಗ ಆಯತಪ್ಪಿ ಏಟು ಒಂದು ಬಂಡೆಗೆ ತಾಗುತ್ತದೆ. ಆ ಬಂಡೆಯಿಂದ ಒಂದು ಬದಿಯಲ್ಲಿ ಹಾಲು ಮತ್ತೊಂದು ಬದಿಯಲ್ಲಿ ರಕ್ತ ಬರುತ್ತದೆ ಇದರಿಂದ ಗಾಬರಿಯಾದ ಅವನು ಪ್ರಜ್ಞೆ ತಪ್ಪಿ ಬೀಳುವನು. ಮನೆಗೆ ವಾಪಾಸು ಬಾರದ ಈತನನ್ನು ಮನೆಯವರು ಹುಡುಕಿಕೊಂಡು ಹೋದರು. ಪ್ರಜ್ಞೆಬಂದ ವ್ಯಕ್ತಿಯು ನಡೆದ ವಿಷಯವನ್ನು ತಿಳಿಸುತ್ತಾನೆ.
ಸ್ಥಳವನ್ನು ಗಮನಿಸಿದಾಗ ಬ್ರಹ್ಮದೇವನ ವಿಗ್ರಹ ಪತ್ತೆಯಾಗುತ್ತದೆ.ಆ ಉದ್ಭವ ಮೂರ್ತಿಯನ್ನು ಪಾಳೆಗಾರರಿಂದ ರಕ್ಷಿಸಲೆಂದು ವಿಷ್ಣುವರ್ಧನ ರಾಜನು ದೇವಾಲಯವನ್ನು ನಿರ್ಮಾಣ ಮಾಡಿಸುತ್ತಾನೆ. ಹೊಯ್ಸಳ ದೊರೆ ವಿಷ್ಣುವರ್ಧನ ಜೈನ ಧರ್ಮದಿಂದ ವೈಷ್ಣವ ಧರ್ಮಕ್ಕೆ ಮತಾಂತರ ಹೊಂದಿದ್ದರಿಂದ ಬ್ರಹ್ಮದೇವನನ್ನು ರಂಗನಾಥನೆಂಬ ಹೆಸರಿನಿಂದ ಕರೆಯಲಾರಂಭಿಸಿದರು.
ಕೆಂಚಮ್ಮನ ಹೊಸಕೋಟೆ ಮತ್ತು ಕುಂದೂರು ಹೋಬಳಿಗೆ ಸೇರಿದ ಸುಮಾರು ೪೮ ಹಳ್ಳಿಗಳಿಗೆ ಸಂಬಂಧಿಸಿದ ಈ ಜಾತ್ರೆ ಸಂಕ್ರಾಂತಿ ಹಬ್ಬದ ದಿನದಂದು ಕುಂದೂರು ಹೋಬಳಿ ವ್ಯಾಪ್ತಿಗೊಳಪುಡುವ ಸುಮಾರು ೨೦ ಗ್ರಾಮಗಳಿಗೆ ಅಡ್ಡೆ ದೇವರು ಹೋಗುತ್ತದೆ. ಉತ್ಸವ ಮುಗಿದ ನಂತರ ಜಾತ್ರೆ ನಡೆಯುವ ಏಳು ದಿನಗಳ ಮೊದಲು ಬೆಟ್ಟದಲ್ಲಿರುವ ದೇವಾಲಯಕ್ಕೆ ಕರೆತರಲಾಗುತ್ತದೆ.
ಮೊದಲ ದಿನ ಶನಿವಾರ ದೊಡ್ಡ ಹರಿಸೇವೆ. ಭಾನುವಾರ, ಸೋಮವಾರ ಹಕ್ಕಿನ ಉತ್ಸವ ನಡೆಯುತ್ತದೆ. ಮಂಗಳವಾರ ಬಿಂದಿಗಮ್ಮ ಕಳಸ ಹೊರುವ ಪೂಜಾರಿಯವರಿಗೆ ತಲೆ ಬೋಳಿಸಿ, ಹಸೆ ಹಾಕಿ ಕಾಸೆ ವೇಷದೊಂದಿಗೆ ದೇವಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ಇವರು ಜಾತ್ರಾ ಮಹೋತ್ಸವ ಮುಗಿಯುವವರೆಗೂ ಹಣ್ಣ-ಹಂಪಲು ಬಿಟ್ಟರೆ ಬೇರೆನನ್ನೂ ಸೇವಿಸದೆ ಪೂಜಾ ಕೈಂಕರ್ಯದಲ್ಲಿ ತೊಡಗುತ್ತಾರೆ. ಶ್ರೀ ರಂಗನಾಥಸ್ವಾಮಿಗೂ ಬಿಂದಿಗಮ್ಮನಿಗೂ ಮದುವೆ ಮಾಡಿ ಆ ವೈಭವವನ್ನು ಆನಂದಿಸುವುದು ಈ ಜಾತ್ರೆಯ ವಿಶೇಷವಾಗಿದೆ.
ದೇವಾಲಯದಲ್ಲಿ ಗುರುವಾರ ರಾತ್ರಿ ಬಿಂದಿಗಮ್ಮನವರಿಗೆ ಹಸೆ ಹಾಕುವ ವಿಶೇಷ ಪೂಜೆ ಇರುತ್ತದೆ. ಶುಕ್ರವಾರ ರಾತ್ರಿ ಗಂಡನ ಕಡೆ ಊರಾದ ಭರತೂರಿನ ಹೊಳೆ ದಡಕ್ಕೆ ಉತ್ಸವ ಮೂರ್ತಿಯೊಂದಿಗೆ ಬಿಂದಿಗಮ್ಮನವರನ್ನು ಕರೆ ತರಲಾಗುವುದು. ಶನಿವಾರ ಹೊಳೆ ದಡದಲ್ಲಿ ಜಾತ್ರೆ ನಡೆಯುತ್ತದೆ. ಸಂಜೆ ಬಿಂದಿಗಮ್ಮನವರನ್ನು ಗಂಡನ ಮನೆಗೆ ಅಂದರೆ ರಂಗನಾಥಸ್ವಾಮಿ ದೇವಾಲಯಕ್ಕೆ ಕಳುಹಿಸುವ ಸಂದರ್ಭ ನೋಡಲೇಬೇಕಾದುದು. ಕಳಸ ಹೊರಡುವ ಮುನ್ನ ಕುಂದೂರಿನ ಗ್ರಾಮಸ್ಥರನ್ನು ಭರತೂರು ಗ್ರಾಮಸ್ಥರು ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಿ ಗೌರವಿಸುತ್ತಾರೆ.
ಹೂವು ತುಳಸಿಯಿಂದ ಅಲಂಕೃತವಾದ ಹರಿವಾಣದಲ್ಲಿ ಬಿಂದಿಗಮ್ಮನವರ ಕಳಸವನ್ನು ತಲೆ ಬೋಳಿಸಿದ್ದ ಪೂಜಾರಿ ತಲೆ ಮೇಲೆ ಇಡಲಾಗುತ್ತದೆ. ಸ್ವಲ್ಪ ದೂರ ನಿಧಾನವಾಗಿ ನಡೆದು ಹೋಗುತ್ತಿದ್ದ ಕಳಸ ಹೊತ್ತವರು, ನಂತರದಲ್ಲಿ ತಲೆ ಮೇಲಿರುವ ಕಳಸವನ್ನು ಕೈಯಲ್ಲಿ ಹಿಡಿಯದೆ ಓಡಲು ಪ್ರಾರಂಭ ಮಾಡುತ್ತಾರೆ. ಹೊಳೆಯಿಂದ ಸುಮಾರು ೧೦ ಕಿ. ಮೀ. ದೂರದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಏಳು ಊರು ಬಾಗಿಲಗಳನ್ನು ದಾಟಿಕೊಂಡು ಕೇವಲ ಮುಕ್ಕಾಲು ಗಂಟೆಯಲ್ಲಿ ತಲುಪುತ್ತದೆ.
ಊರು ಬಾಗಿಲಲ್ಲಿ ಅಕ್ಕಿ ಹಸೆ ಬರೆದು ಹಣ ಹಾಕಿರುತ್ತಾರೆ. ಬಾಗಿಲು ದಾಟುವ ಸಂದರ್ಭದಲ್ಲಿ ಕಳಸ ಹೊತ್ತವರು ತನ್ನ ಗದ್ದದಿಂದ ನೆಲದ ಮೇಲಿಟ್ಟ ಹಣವನ್ನು ಮುಟ್ಟುತ್ತಾರೆೆ. ಕಳಸ ಮುಂದೆ ಹೋದ ಕೂಡಲೆ ನೆರೆದಿದ್ದವರು ಹಸೆ ಅಕ್ಕಿಯನ್ನು ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ಈ ಸಂದರ್ಭ ನೋಡಲು ಅತ್ಯಂತ ಕುತೂಹಲಕಾರಿಯಾಗಿರುತ್ತದೆ.
ಭಾನುವಾರ ಬೆಟ್ಟದ ಮೇಲೆ ಹಗಲು ಜಾತ್ರೆ ನಡೆಯುತ್ತದೆ. ಸೋಮವಾರ ಹೇಮಾವತಿ ನದಿ ನೀರಿನಿಂದ ಅಭಿಷೇಕದೊಂದಿಗೆ ಜಾತ್ರಾ ವಿಶೇಷ ಪೂಜಾ ಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ. ನಂತರ ಯುಗಾದಿ ಹಬ್ಬದ ಸಂದರ್ಭದಲ್ಲಿ ಭರತೂರು ಕಡೆಗೆ ಸೇರುವ ಸುಮಾರು ೧೦ ಗ್ರಾಮಗಳಲ್ಲಿ ಅಡ್ಡೆ ಉತ್ಸವ ನಡೆಯುತ್ತದೆ ಮುಜರಾಯಿ ಇಲಾಖೆಗೆ ಸೇರಿದ ಅಡಿಬೈಲು ಶ್ರೀ ರಂಗನಾಥಸ್ವಾಮಿ ದೇವರ ಜಾತ್ರೆ ಫೆ. ೧೫ ರಂದು ಭರತೂರು ಗ್ರಾಮ ಹೇಮಾವತಿ ಹಿನ್ನಿರು ಬದಿಯಲ್ಲಿ ಮತ್ತು ೧೬ ರಂದು ರಂಗನಬೆಟ್ಟದ ಮೇಲೆ ನಡೆಯುತ್ತದೆ ಆಲೂರಿನಿಂದ ೧೮ ಕಿ. ಮೀ. ಮಗ್ಗೆ-ರಾಯರಕೊಪ್ಪಲು ಮಾರ್ಗವಾಗಿ ಪ್ರತಿದಿನ ಸಾರಿಗೆ ಬಸ್ ವ್ಯವಸ್ಥೆ ಇರುತ್ತದೆ ಭಕ್ತರು ಸ್ವಚ್ಚತೆಯನ್ನು ಕಾಪಾಡಬೇಕು ಎನ್ನುತ್ತಾರೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಿ. ಉಮೇಶ್.
Hassan
ಅರಕಲಗೂಡು: ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟ ಮುಷ್ಕರ

ವರದಿ:-ರಾಜೇಂದ್ರ ಸುಹಾಸ್
ಅರಕಲಗೂಡು: ತಾಲೂಕು ಕಛೇರಿಯ ಆವರಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.
ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ತಾಲೂಕು ಗ್ರಾಮ ಆಡಳಿತ ಅದಿಕಾರಿಗಳ ಸಂಘದ ಪ್ರದೀಪ್ ಮಾತನಾಡಿ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದು, ಇದರ ಬಗ್ಗೆ ಹಿಂದೆ ಪ್ರತಿಭಟನೆಯ ಮೂಲಕವೇ ರಾಜ್ಯ ಸರ್ಕಾರದ ಗಮನವನ್ನ ಸೆಳೆಯಲಾಗಿತ್ತಾದರೂ ನಮ್ಮ ಬೇಡಿಕೆಗಳು ಈಡೇರಿಲ್ಲ. ಸರ್ಕಾರ ರಾಜ್ಯದ ಅಭಿವೃದ್ದಿಗೆ ಹಗಲಿರುಳು ನಮ್ಮನ್ನ ಬಳಸಿಕೊಳ್ಳುತ್ತದೆ. ಆದರೆ ನಮ್ಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿದೆ. ಈ ಬಾರೀ ನಮ್ಮಗಳ ಬೇಡಿಕೆಯನ್ನ ಈಡೇರಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ತಾಲೂಕು ಕಛೇರಿ ಆವರಣದಲ್ಲಿ ಪ್ರತಿಭಟನಕಾರರು, ತಹಸಿಲ್ದಾರ್ ಮಲ್ಲಿಕಾರ್ಜುನ್ ರವರಿಗೆ ಮನವಿ ಪತ್ರ ಸಲ್ಲಿಸಿದರು.
Hassan
ಅರಕಲಗೂಡು: ಪಟ್ಟಣ ಪಂಚಾಯತಿ ಬಜೆಟ್ ಮಂಡನೆ

ವರದಿ: ರಾಜೇಂದ್ರ ಸುಹಾಸ್
ಅರಕಲಗೂಡು: ಪಟ್ಟಣದ ಸಮಗ್ರ ಅಭಿವೃದ್ದಿಗಾಗಿ 2025-26 ನೇ ಸಾಲಿನ ಆಯವ್ಯಯದಲ್ಲಿ ಆಧ್ಯತೆ ನೀಡಲಾಗಿದೆ ಎಂದು ಪಪಂಚಾಯಿತಿ ಅಧ್ಯಕ್ಷ ಪ್ರದೀಪ್ಕುಮಾರ್ ಆಯವ್ಯಯ ಮಂಡಿಸಿ ಸಭೆಗೆ ತಿಳಿಸಿದರು.
ಪ.ಪಂಚಾಯಿತಿ ಸಭಾಂಗಣದಲ್ಲಿ ಇಂದು ಪಪಂಚಾಯಿತಿ ಅಧ್ಯಕ್ಷ ಪ್ರದೀಪ್ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2025-26 ನೇ ಸಾಲಿನ ಆಯವ್ಯಯವನ್ನ ಮಂಡಿಸಿದ ಅವರು ಪ್ರಾರಂಭ ಶುಲ್ಕ 1,24,37,294 ಸೇರಿಕೊಂಡಂತೆ ಈ ವರ್ಷದ ನಿರೀಕ್ಷಿತ ಆಧಾಯ 18 ಕೋಟಿ 18 ಲಕ್ಷ 26 ಸಾವಿರದ 567 ರೂ.ಗಳು ಸೇರಿ ಒಟ್ಟು 19 ಕೋಟಿ 42 ಲಕ್ಷದ 61 ಸಾವಿರದ 861 ರೂ.ಗಳು ನಿರೀಕ್ಷೆಯಲ್ಲಿದ್ದು, ಖರ್ಚು 19 ಕೋಟಿ 32 ಲಕ್ಷದ 88 ಸಾವಿರದ 295 ನ್ನು ಅಂದಾಜಿಸಿದ್ದು, ಉಳಿತಾಯ 9 ಲಕ್ಷದ 73 ಸಾವಿರದ 566 ರೂಗಳನ್ನ ನಿರೀಕ್ಷಿಸುವ ಮೂಲಕ ಈ ವರ್ಷದ ಪಪಂಚಾಯಿತಿ ಅಯವ್ಯಯ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಸಭೆಗೆ ಅಧ್ಯಕ್ಷರು ಮಂಡಿಸಿದರು. ಆಗ ಸಭೆ ಸರ್ವಾನುಮತದಿಂದ ಅನುಮೋದಿಸಿತು.
ಆಯವ್ಯಯದ ಮುಖ್ಯಾಂಶಗಳು: ಪಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದನ್ನ ಗಮನದಲ್ಲಿಟ್ಟುಕೊಂಡು ರಸ್ತೆ, ಶುದ್ದಕುಡಿಯುವ ನೀರು, ಚಿರಂಡಿ, ಉಧ್ಯಾನವನ ಅಭಿವೃದ್ದಿ, ಬೀದಿ ದೀಪ ಹಾಗೂ ಸ್ವಚ್ಚತೆ ಮತ್ತು ಸ್ಮಶಾಣದ ಅಭಿವೃದ್ದಿಗೆ ಹೆಚ್ಚು ಆಧ್ಯತೆಯನ್ನ ನೀಡಲಾಗಿದೆ. ಈ ಬಾರೀ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುಧಾನವನ್ನ ಹೆಚ್ಚು ನಿರೀಕ್ಷಿಸಲಾಗಿದ್ದು, ಇದನ್ನ ಹೊರತುಪಡಿಸಿದರೆ ಪಪಂಚಾಯಿತಿಯ ಮಳಿಗೆಗಳ ಆಧಾಯದ ಮೇಲೆ ಹೆಚ್ಚು ಕಣ್ಣಿರಿಸಲಾಗಿದೆ.
ವಿರೋದ ಪಕ್ಷದ ಸಧಸ್ಯರಿಂದ ಶ್ಲಾಘನೆ: ಪ.ಪಂಚಾಯಿತಿಯ ಆಯವ್ಯಯ ಮಂಡಿಸಿದ ನಂತರ ಬಿ.ಜೆ.ಪಿ. ಸಧಸ್ಯೆ ರಶ್ಮಿ ಸಭೆಯನ್ನ ಉದ್ದೇಶಿಸಿ ಮಾತನಾಡಿ ಪ್ರತೀ ವರ್ಷಗಳಿಗಿಂತಲೂ ಈ ವರ್ಷ ಉತ್ತಮ ಆಯವ್ಯಯವನ್ನ ಮಂಡಿಸಿದ್ದೀರಿ, ನಿಮಗೆ ಶುಭವಾಗಲೀ, ಪಟ್ಟಣದಲ್ಲಿ ಫುಡ್ಕೋರ್ಟ್ ನಿರ್ಮಾಣಕ್ಕೆ ಆಧ್ಯತೆ ನೀಡಬೇಕಿತ್ತು ಎಂದು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ತಮ್ಮ ನಿರೀಕ್ಷೆಯಂತೆ ಫುಡ್ಕೋರ್ಟ್ ನಿರ್ಮಾಣಕ್ಕೆ ಈಗಾಗಲೇ ಅಂದಾಜು ವೆಚ್ಚವನ್ನ ತಯಾರಿಸಿ ಕಾಮಗಾರಿ ಟೆಂಡರ್ ಹಂತಕ್ಕೆ ತಲುಪಿದೆ, ಶೀಘ್ರದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಪರ್ತಕರ್ತರ ಆರೋಗ್ಯ ನಿಧಿ ಸ್ಥಾಪನೆ: ಇದೇ ಪ್ರಪ್ರಥಮ ಭಾರಿಗೆ ಪಪಂಚಾಯಿತಿಯ ಆಯವ್ಯಯದಲ್ಲಿ ಪತ್ರಕರ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಪತ್ರಕರ್ತರ ಆರೋಗ್ಯ ನಿಧಿ ಸ್ಥಾಪಿಸಿ ನಿಧಿಗೆ ೫೦ ಸಾವಿರ ಹಣವನ್ನ ಮೀಸಲಿರಿಸಿದ್ದಾರೆ.
ಇಂದಿನ ಆಯವ್ಯಯದಲ್ಲಿ ಪತ್ರಕರ್ತರಿಗೆ ನೀಡಿದ ಸಹಾಯ ಹಸ್ತಕ್ಕೆ ಪತ್ರಕರ್ತರು ಪಪಂಚಾಯಿತಿ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಸಭೆಯಲ್ಲಿ ಪಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜು ಠಾಕಪ್ಪ ಶಿಗ್ಗಾವಿ, ಉಪಾಧ್ಯಕ್ಷ ಸುಭಾನ್ ಷರೀಫ್, ಉಪಸ್ಥಿತರಿದ್ದರು. ಅಕೌಂಟೆಂಟ್ ವಿಮಲಶಂಕರ್ ಸಭೆಯಲ್ಲಿ ಸ್ವಾಗತ ಮಾಡಿದರು.
-
Kodagu13 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu13 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Kodagu16 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Hassan21 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Mysore21 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan17 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State14 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan21 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ