Hassan
ಕೆಂಚಮ್ಮನ ಹೊಸಕೋಟೆ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಅಲೂರು : ಜಿಲ್ಲಾ ಕೇಂದ್ರ ಹಾಸನಾಂಬೆ ದೇವಿಯ ಜಾತ್ರಾ ಉತ್ಸವ ಮುಗಿದ ನಂತರ ಆಕೆಯ ಹಿರಿಯ ಸಹೋದರಿ ಶ್ರೀ ಕೆಂಚಾಂಬಿಕೆ ದೇವಿಯ ಚಿಕ್ಕಜಾತ್ರೆ ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಹಾಸನಾಂಬೆ ದೇವಸ್ಥಾನದ ಬಾಗಿಲು ಹಾಕಿದ ಮರುದಿನ ಕೆಂಚಾಂಬಿಕೆ ದೇವಿ ಜಾತ್ರೆ ಉತ್ಸವಾದಿಗಳು ಪ್ರಾರಂಭವಾಗುತ್ತವೆ. ಶನಿವಾರ ಕೆಂಚಾಂಬ ದೇವಿಯ ಒಡವೆ ಹಾಗೂ ವಿಗ್ರಹಗಳನ್ನು ಮೂಲ ದೇವಸ್ಥಾನದಿಂದ ಜನಪದ ಕಲಾ ತಂಡಗಳೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಮೆರವಣಿಗೆಯ ಮೂಲಕ ದೇವಾಲಯಕ್ಕೆ ಕೆರೆ ತಂದು ಪ್ರಧಾನ ಅರ್ಚಕ ಎಚ್.ಎನ್.ರಾಮಸ್ವಾಮಿ ಮತ್ತು ಸತ್ಯನಾರಾಯಣ್ ಸೇರಿದಂತೆ ಹಲವು ವ್ಯವಸ್ಥಾಪನ ಮಂಡಳಿ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಸುತ್ತಮುತ್ತಲಿನ 48 ಹಳ್ಳಿಗಳ ಅಧಿದೇವತೆಯಾಗಿರುವ. ಕೆಂಚಾಂಬ ದೇವಿಯವರ ಉತ್ಸವವು ಜಾತ್ರಾ ಮಹೋತ್ಸವದ ಮೊದಲ ದಿನವಾದ ಶನಿವಾರ ರಾತ್ರಿ ಮೂಲ ದೇವಾಸ್ಥಾನದಲ್ಲಿ ದೇವಿಯ ಏಳು ಮುಖಗಳುಳ್ಳ ಮೂರ್ತಿಗಳಾದ ಬ್ರಾಹ್ಮಿದೇವಿ, ಮಹೇಶ್ವರಿ ದೇವಿ, ವೈಷ್ಣವಿ ದೇವಿ, ಕೌಮಾರಿ ದೇವಿ, ವರಾಹಿದೇವಿ ಮತ್ತು ಇಂದ್ರಾಣಿ ದೇವಿ ಎಂಬ ಸಪ್ತ ಮಾತೃಕಾ ಅಲಂಕಾರ ಮಾಡಿ ಮಹಾ ಮಂಗಳಾರತಿ ಬೆಳಗುವ ಮೂಲಕ ಜಾತ್ರಾ ಕೈಂಕರ್ಯಗಳನ್ನು ವಿದ್ಯುಕ್ತವಾಗಿ ಆರಂಭಿಸಲಾಯಿತು. ಈ ಸಂದರ್ಭ ಚಾಮುಂಡೇಶ್ವರಿ ದೇವಿಯ ಸಮಾಗಮನವನ್ನು ಇಲ್ಲಿ ನೋಡಬಹುದಾಗಿದ್ದು ನಂತರ ದೇವಾಲಯ ಆವರಣದಲ್ಲಿರುವ ಸುಗ್ಗಿ ಕಟ್ಟೆ ಮುಂದೆ ವಿಶೇಷ ಪೂಜೆ ನಡೆದು ಜನರು ಸುಗ್ಗಿ ಕಟ್ಟೆ ಮುಂದೆ ಕುಣಿದು ಸಂಭ್ರಮಿಸಿದರು.
ಭಾನುವಾರ ಬೆಳಗ್ಗೆ ಮಡಿವಾಳ ವಂಶಸ್ಥರಿಂದ ದೇವಿಯ ಸೀರೆ ಮುಂತಾದ ಉಡುಗೆ ತೊಡುಗೆಗಳನ್ನು ಶುದ್ದಗೊಳಿಸಿ ನಡೆಮುಡಿಯನ್ನು ಸಲ್ಲಿಸಲಾಯಿತು ಪ್ರಧಾನ ಆರ್ಚಕ ರಾಮಸ್ವಾಮಿ ನೇತೃತ್ವದಲ್ಲಿ ಬೆಳಿಗ್ಗೆ 8.30 ರಿಂದ ಶ್ರೀ ಕೆಂಚಾಂಬ ದೇವಿಯ ಮೂಲ ದೇವಾಸ್ಥಾನದಿಂದ ದೇವಿಯ ಮೆರವಣಿಗೆ ನಡೆಯಿತು. 12.30ರಿಂದ 1 ಗಂಟೆವರೆಗೆ ಬಲಿ ಪ್ರಧಾನ ಮಾಡಲಾಯಿತು ಮಧ್ಯಾಹ್ನ 2.30 ರಿಂದ 3. ಗಂಟೆವರೆಗೆ ಕೆಂಡ ಹಾಯುವ ಕಾರ್ಯಕ್ರಮ ಜರುಗಿದವು 3.30ರಿಂದ ರಾತ್ರಿ 10.30ರವರೆಗೆ ದೇವಿ ಪಾದಮುಟ್ಟಿ ನಮಸ್ಕರಿಸುವ ಶ್ರೀ ಕೆ ಅವಕಾಶವನ್ನು ಕಲ್ಪಿಸಲಾಗಿತ್ತು ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ಪಾದಮುಟ್ಟಿ ನಮಸ್ಕರಿಸಿದರು.
ಸತೀಶ್ ಚಿಕ್ಕಕಣಗಾಲು
Hassan
ಸತ್ಯಮಂಗಲದಲ್ಲಿ ನಮ್ಮ ಕ್ಲಿನಿಕ್ ಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ

ಹಾಸನ: ಹಾಸನ ನಗರದ ಹೋರ ವಲಯದ ಸತ್ಯ ಮಂಗಲ ಬಡಾವಣೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರು ನಮ್ಮ ಕ್ಲಿನಿಕ್ ಉದ್ಘಾಟಿಸಿದರು.
ಅದಕ್ಕೂ ಮುನ್ನ ಕ್ಲಿನಿಕ್ ನಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಆವರಣದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದ ಅವರು, ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಕ್ಲಿನಿಕ್ ಗೆ ಚಾಲನೆ ನೀಡಿದ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ಗ್ರಾಮಸ್ಥರು ಪ್ರೀತಿಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಹಾಸನ ನಗರಸಭೆ ನಗರಪಾಲಿಕೆಯಾಗಿ ಬೆಳೆಯುತ್ತಿವ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳಿಗೆ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಾಸನಕ್ಕೆ ತರಲಾಗುತ್ತಿದೆ ಎಂದರು.
ಅದರಂತೆ ಸತ್ಯಮಂಗಲಕ್ಕೆ ಹೇಮಾವತಿ ನದಿಯಿಂದ ಕುಡಿಯುವ ನೀರು ಒದಗಿಸುವ ಬಹುಮುಖ್ಯ ಕೆಲಸಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕಾಮಗಾರಿಯು ಮುಗಿಯುವ ಹಂತದಲ್ಲಿದೆ. ಅಲ್ಲದೆ ಮನುಷ್ಯನ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಬಹಳ ಮುಖ್ಯ ಇದನ್ನು ಮನಗಂಡು ಅವರ ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್ ತೆರೆಯಲಾಗಿದೆ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಆಸ್ಪತ್ರೆಗೆ ಅಗತ್ಯ ಇರುವ ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅನುದಾನ ತಂದು ಬಡಾವಣೆಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಶ್ರಮ ವಹಿಸಿ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು .
ಈ ವೇಳೆ ನಗರಸಭೆ ಅಧ್ಯಕ್ಷರು ಸದಸ್ಯರುಗಳು, ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಗ್ರಾಮದ ಮುಖಂಡರು, ಕಾರ್ಯಕರ್ತರು, ಯುವಕರು,ಹಿರಿಯರು, ಗ್ರಾಮಸ್ಥರು, ಸಾರ್ವಜನಿಕರು ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು…
Hassan
ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದಂದು ಮುಸ್ಲಿಂ ಕಾಜಿಯವರಿಂದ ಕುರಾನ್ ಪಟಿಸದಂತೆ ಮನವಿ

ಬೇಲೂರು : ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದ ಅಂಗವಾಗಿ ಯಾವುದೇ ರೀತಿಯ ಹಿಂದು ಧರ್ಮಿಯರಿಗೆ ಅವರ ಭಾವನೆಗೆ ದಕ್ಕೆ ಬಾರದಂತೆ ಮುಸ್ಲಿಂ ಕಾಜಿಯವರಿಂದ ಕುರಾನ್ ಪಟ್ಟಣವನ್ನು ನಡೆಸದಂತೆ ಹಿಂದೂ ಸಮಾಜದ ಮುಖಂಡರು ತಾಲೂಕು ದಂಡಾಧಿಕಾರಿಗಳಿಗೆ ಪೊಲೀಸ್ ಇಲಾಖೆಗೆ ಮತ್ತು ದೇಗುಲದ ಕಾರ್ಯನಿರ್ವಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಮುಸ್ಲಿಂ ಕಾಜಿಯವರಿಗೆ ದೇವಾಲಯದ ವತಿಯಿಂದ ಸಂಪ್ರದಾಯದಂತೆ ನೀಡುವ ಕಾಣಿಕೆಯನ್ನು ನೀಡಲಿ ಮತ್ತು ಅವರು ಹಿಂದೆ ನಡೆಯುತ್ತಿದ್ದ ಸಂಪ್ರದಾಯದಂತೆ ದೇವರಿಗೆ ಒಂದನೇ ತಿಳಿಸಿ ಹೋಗಲಿ ಅದನ್ನು ಬಿಟ್ಟು ಕುರಾನ್ ಪಟ್ಟಣವನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಹಿಂದೂ ಮುಖಂಡರಾದ ರಘು ಸಕಲೇಶಪುರ ಒತ್ತಾಯಿಸಿದ್ದಾರೆ ಕುರಾನ್ ಪಟ್ಟಣಕ್ಕೆ ಅವಕಾಶ ನೀಡಿದ್ದಾರೆ ಇದಕ್ಕೆ ಸಂಪೂರ್ಣ ಹೊಣೆಯನ್ನ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ
Hassan
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು 12ಜನ ನೂತನ ನಿರ್ದೇಶಕರುಗಳು ಆಯ್ಕೆಯಾದರು.
ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 12ಜನ ನಿರ್ದೇಶಕ ಸದಸ್ಯ ಬಲ ಹೊಂದಿದ್ದು ನೂತನ ನಿರ್ದೇಶಕ 23 ಜನ ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಚುನಾವಣೆ ಮೂಲಕ ನೂತನ ನಿರ್ದೇಶಕರನ್ನ ಆಯ್ಕೆ ಮಾಡಲಾಯಿತು.
ಸಾಮಾನ್ಯ ಕ್ಷೇತ್ರದಿಂದ ಅವಿನಾಶ್, ವಿ.ಎಸ್ ಆನಂದ್, ಚಂದ್ರು, ಕುಬೇರಪ್ಪ, ಯೋಗೇಶ್, ಮಹಿಳಾ ಕ್ಷೇತ್ರದಿಂದ ಮಂಜುಳಾ, ಗಿರಿಜಾ, ಹಿಂದುಳಿದ ವರ್ಗ ‘ಎ’ ನಿಂದ ರವಿ ಕುಮಾರ್, ಹಿಂದುಳಿದ ವರ್ಗ ‘ಬಿ’ ನಿಂದ ಮೋಹನ್ ಕುಮಾರ್, ಪರಿಶಿಷ್ಟ ಜಾತಿಯಿಂದ ಪುಟ್ಟಸ್ವಾಮಿ ಆಯ್ಕೆಯಾದರೆ ಪರಿಶಿಷ್ಟ ಪಂಗಡದಿಂದ ಶಾಂತಪ್ಪ ನಾಯಕ ಅವಿರೋಧವಾಗಿ ಆಯ್ಕೆಯಾದರು, ಇನ್ನೂ ಸಾಲಗಾರರಲ್ಲದ ಕ್ಷೇತ್ರದಿಂದ ಕಿಶೋರ್ ಕುಮಾರ್ ಆಯ್ಕೆಯಾದರು 2030ರವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ ಎಂದು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್ ತಿಳಿಸಿದರು.
ಚುನಾವಣೆ ಮೂಲಕ ನೂತನ ನಿರ್ದೇಶಕರುಗಳ ಆಯ್ಕೆ ಘೋಷಣೆ ಹೊರಬಿದ್ದ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್. ಎಸ್ ನಟರಾಜ್, ಪಾಳ್ಯ ಸೊಸೈಟಿ ನಿರ್ದೇಶಕ ಕಟ್ಟೆಗದ್ದೆ ನಾಗರಾಜ್, ಬಿಜೆಪಿ ಮುಖಂಡ ಕೆ.ಕೆ ಪ್ರಸಾದ್, ರುದ್ರೇಶ್ ಕಾಡ್ಲೂರು, ನಂದನ್, ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿವೇಕ್ ವೈದ್ಯನಾಥ್ ಸೇರಿದಂತೆ ಮುಂತಾದವರು ನೂತನ ನಿರ್ದೇಶಕರುಗಳನ್ನು ಅಭಿನಂದಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪೋಟೋ ಕ್ಯಾಪ್ಶನ್: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚುನಾಯಿತನಾದ ನೂತನ ನಿರ್ದೇಶಕರನ್ನ ಹಾಸನ ಜಿಲ್ಲಾ ಹೆಚ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಲ್ಲಿ ಜಗದೀಶ್, ಆರ್.ಎಸ್ ನಟರಾಜ್ ಕೆ.ಕೆ ಪ್ರಸಾದ್ ಸೇರಿದಂತೆ ಇತರರು ಅಭಿನಂದಿಸಿದರು.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
State24 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan21 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
Mysore21 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?