Kodagu
ಕೊಡಗಿನಲ್ಲಿ ಕೆಸರುಗದ್ದೆ ಕ್ರೀಡಾಕಾಲದ ಸಂಭ್ರಮ

ಮಡಿಕೇರಿ : ಕೊಡಗಿನಲ್ಲಿ ಮಳೆಗಾಲ ಬಂತೆAದರೆ ಕೆಸರುಗದ್ದೆ ಕ್ರೀಡಾಕೂಟದ ಸಂಭ್ರಮ ಮನೆಮಾಡುತ್ತದೆ.
ಜಿಲ್ಲೆಯ ವಿವಿಧೆಡೆ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದ ಸಂಭ್ರಮವನ್ನು ಒಮ್ಮೆಯಾದರೂ
ಕಣ್ತುಂಬಿಕೊಳ್ಳಲೇಬೇಕು ಎಂದೆನಿಸದೇ ಇರದು.
ಕೃಷಿ ಪ್ರಧಾನ ಜಿಲ್ಲೆ ಕೊಡಗು. ನಾಟಿ ಓಟ ಹಿಂದೆ ಮಳೆಗಾಲದ ಮನೋರಂಜನೆಯ ನಡೆಯಾಗಿ ಜನಮನ ಗೆದ್ದಿತ್ತು.
ಈಗ ಅದು ಕೆಸರುಗದ್ದೆ ಕ್ರೀಡಾಕೂಟವಾಗಿ ಬದಲಾಗಿದೆ. ಒಂದು ಉತ್ತಮ ಗ್ರಾಮೀಣ ಕ್ರೀಡೆ ಇದಾಗಿದ್ದು, ಇದೀಗ
ಕೊಡಗಿನಲ್ಲಿ ಕೆಸರುಗದ್ದೆ ಕ್ರೀಡಾಕಾಲದ ಸಂಭ್ರಮ ಗರಿಗೆದರಿದೆ.
ಹಿಂದಿನ ಕಾಲದಲ್ಲಿ ಭತ್ತದ ನಾಟಿ ಎಂದರೆ ಒಂದು ರೀತಿಯ ಸಂಭ್ರಮ ಹಾಗೂ ಕಠಿಣವಾದ ಕೆಲಸವಾಗಿತ್ತು. ಆಧುನಿಕ
ಉಪಕರಣಗಳು ಇರಲಿಲ್ಲ, ಎತ್ತುಗಳಿಂದಲೇ ಉಳುಮೆ ಮಾಡಿ ಸುರಿಯುವ ಜಡಿ ಮಳೆಯಲ್ಲೇ ನಾಟಿ ಮಾಡಬೇಕಿತ್ತು. ಈ ನಾಟಿ
ಕೆಲಸ ಒಂದೆರಡು ದಿನಕ್ಕೆ ಮುಗಿಯುತ್ತಿರಲಿಲ್ಲ. ತಿಂಗಳುಗಟ್ಟಲೆ ನಡೆಯುತ್ತಿತ್ತು. ಹೆಚ್ಚಿನವರು
ಚಿಕ್ಕಗದ್ದೆಗಳಲ್ಲಿ ನಾಟಿ ಮಾಡಿ ದೊಡ್ಡ ಗದ್ದೆಯೊಂದನ್ನು ಉಳಿಸಿಕೊಳ್ಳುತ್ತಿದ್ದರು. ಈ ಗದ್ದೆ ನಾಟಿಗೆ ಹೆಚ್ಚಿನ ಜನ
ಸೇರುತ್ತಿದ್ದರು. ಕೆಲಸ ಮುಗಿದ ಮೇಲೆ ಸಂಜೆ ನಾಟಿ ನೆಟ್ಟ ಗದ್ದೆಯಲ್ಲಿ ಓಟ ಏರ್ಪಡಿಸಲಾಗುತ್ತಿತ್ತು. ನಾಟಿ ಓಟದಲ್ಲಿ ಸ್ಪರ್ಧಿಸಿ
ವಿಜೇತರಾದವರಿಗೆ ನಗದು, ಬಾಳೆಗೊನೆ, ತೆಂಗಿನಕಾಯಿ, ವೀಳ್ಯದೆಲೆ ನೀಡಲಾಗುತ್ತಿತ್ತು. ನಾಟಿ ಓಟದಲ್ಲಿ ಪಾಲ್ಗೊಳ್ಳುವ
ಸ್ಪರ್ಧಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಇದೊಂದು ವೇದಿಕೆಯಾಗಿತ್ತು.
ಮಕ್ಕಳು, ಮಹಿಳೆಯರು ಪುರುಷರು ಕೆಸರು ಗದ್ದೆಯಲ್ಲಿ ಎದ್ದು, ಬಿದ್ದು ಕೆಸರಿನ ಸ್ನಾನ ಮಾಡುತ್ತ, ಏಳುತ್ತ,
ಬೀಳುತ್ತ ಸಾಗುವ ಓಟವು ಎಲ್ಲರನ್ನೂ ನಗೆ ಗಡಲಿನಲ್ಲಿ ತೇಲಿಸುತ್ತದೆ. ಕೆಸರನ್ನು ಚಿಮ್ಮಿಸುತ್ತ ಗುರಿ ಮುಟ್ಟಲು
ಓಡುವ ಭರದಲ್ಲಿ ಕ್ರೀಡಾಳುಗಳ ಕಾಲು ಹೂತು ಒಂದೆಡೆ ದೊಪ್ಪೆಂದು ಬಿದ್ದರೆ ನೋಡುಗರಿಗೆ ಖುಷಿಯೋ ಖುಷಿ.
ಇದರೊಂದಿಗೆ ಈಗ ಕೊಡಗಿನಲ್ಲಿ ಮಳೆ ಬೇರೆ. ಒಂದು ಸುತ್ತು ಹೊಡೆದರೆ ವಿಶಾಲ ಗದ್ದೆಗಳಲ್ಲಿ ಸುರಿಯುವ
ಮಳೆಯಲ್ಲಿ ಒಂದೆಡೆ ನಾಟಿ, ಮತ್ತೊಂದೆಡೆ ಕೆಸರು ಗದ್ದೆ ಕ್ರೀಡಾಕೂಟದ ಮನಮೋಹಕ ದೃಶ್ಯ ಕಂಡುಬರುತ್ತದೆ.
ಹಿAದೆ ನಾಟಿ ಓಟಗಳು ಕೊಡಗಿನಲ್ಲಿ ಅಲ್ಲಲ್ಲಿ ನಡೆಯುತ್ತಿತ್ತಾದರೂ ಕೆಲ ವರ್ಷಗಳಿಂದ ಇದು ಒಂದಷ್ಟು ಬದಲಾಗಿ
ಕೆಸರುಗದ್ದೆ ಕ್ರೀಡಾಕೂಟ ಎನಿಸಿದೆ. ವರ್ಷಗಳ ಹಿಂದೆ ನಾಟಿ ಕಾರ್ಯ ಮುಗಿದ ಮೇಲೆ ಸ್ಥಳೀಯ ಊರಿನವರು ನಾಟಿ ಓಟವನ್ನು
ಮಾತ್ರ ಏರ್ಪಡಿಸುತ್ತಿದ್ದರು. ಇಂದು ಇದೇ ನಾಟಿ ಓಟದೊಂದಿಗೆ ಕೆಸರುಗದ್ದೆ ಫುಟ್ಬಾಲ್, ಹಗ್ಗಜಗ್ಗಾಟ, ವಾಲಿಬಾಲ್ ಕ್ರಿಕೆಟ್
ಕ್ರೀಡೆಯನ್ನು ನಾನಾ ಸಂಘಸAಸ್ಥೆಯವರು ಆಯೋಜನೆ ಮಾಡುತ್ತಿದ್ದಾರೆ.
ಬೇಸಿಗೆಯಲ್ಲಿ ನಡೆಯುತ್ತಿದ್ದ ಕೆಲವು ಕ್ರೀಡಾಕೂಟಗಳು ಮಳೆಗಾಲದಲ್ಲಿ, ಅದೂ ಕೆಸರುಗದ್ದೆಯಲ್ಲಿ
ನಡೆಯುತ್ತಿರುವುದು ವಿಶೇಷ. ಇದರಿಂದ ಇಂದು ಭತ್ತದ ಕೃಷಿ ಮರೆಯಾಗುತ್ತಿದ್ದರೂ, ಅವಕಾಶ ಇರುವಲ್ಲಿ ಈ
ಕ್ರೀಡಾಕೂಟ ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡುತ್ತಿದೆ. ಹಳೆಯ ಕಾಲದ ಕ್ರೀಡೆಗೆ ಒಂದಿಷ್ಟು
ಪರಿವರ್ತನೆ ನೀಡಿ ಅದನ್ನು ಉಳಿಸಿಕೊಂಡು ಹೋಗುತ್ತಿರುವುದು ಕ್ರೀಡೆಯ ತವರು ಕೊಡಗಿಗೆ ಒಂದು ಹೆಮ್ಮೆ.
ಬಾಕ್ಸ್
ಆ.೧೪ ಮತ್ತು ೧೫ ರಂದು ಕೊಂಡAಗೇರಿಯಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ
ಮಡಿಕೇರಿ : ಬುಲೆಟ್ ಫ್ರೆಂಡ್ಸ್ ಕೊಂಡAಗೇರಿ ವತಿಯಿಂದ ಆ.೧೪ ಮತ್ತು ೧೫ ರಂದು ಎರಡು ದಿನಗಳ ಕಾಲ
ಕೊಂಡAಗೇರಿಯಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕಾಲ್ಚೆಂಡು ಹಾಗೂ ಫುಟ್ಬಾಲ್ ಪಂದ್ಯಾವಳಿಯ ನಡೆಯಲಿದ್ದು
ಆಸಕ್ತ ತಂಡಗಳು ೭೨೫೯೪೯೯೬೮೦, ೯೭೩೧೩೧೧೧೯೭,೯೪೮೩೧೦೪೪೧೨ ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ ತಂಡವನ್ನು ನೋಂದಣಿ
ಮಾಡಬಹುದಾಗಿದೆ ಎಂದು ಬುಲೆಟ್ ಫ್ರೆಂಡ್ಸ್ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಕ್ಸ್
ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು
Kodagu
ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕ

ಮಡಿಕೇರಿ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕಗಳೊಂದಿಗೆ ವಿಶ್ವವಿದ್ಯಾನಿಲಯಕ್ಕೆ 7ನೇ ರ್ಯಾಂಕ್ ಪಡೆದಿರುತ್ತಾರೆ. ಅಲ್ಲದೆ ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿಂದ ಕನ್ನಡ ವಿಷಯದಲ್ಲಿ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಸುಮನ್ 2014ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ಸುಮನ್’ರವರ ಪತಿ ಬೊಟ್ಟಂಗಡ ತಿಲಕ್ ಹಾಗೂ ಮಗಳು ಸ್ತುತಿ ಬೋಜಮ್ಮ. ಇವರು ತೆರಾಲುವಿನಲ್ಲಿ ವಾಸವಾಗಿದ್ದಾರೆ.
Kodagu
ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.
ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.
ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಹಾಜರಿದ್ದರು
Kodagu
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ

ಮಡಿಕೇರಿ : ಮಡಿಕೇರಿ ಕಾಟಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡಿಕೇರಿ-ಮಂಗಳೂರು ಮುಖ್ಯರಸ್ತೆಯ ಕಾಟಕೇರಿ ಬಳಿಯ ಪ್ರಶಾಂತಿ ಹೋಂ ಸ್ಟೇ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ನಾಪೋಕ್ಲು ಬಳಿಯ ಕಕ್ಕಬ್ಬೆ ನಿವಾಸಿ ಬೆಟ್ಟಗೇರಿಯಲ್ಲಿ ವಾಸವಿರುವ ಶರತ್ (28) ಮೃತ ವ್ಯಕ್ತಿ.
ಮಡಿಕೇರಿ ಮಂಗಳೂರು ಮುಖ್ಯರಸ್ತೆಯಲ್ಲಿ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Chamarajanagar21 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu22 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan22 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore21 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
Mysore21 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
State23 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?