Connect with us

Kodagu

ಕೊಡವ ಲ್ಯಾಂಡ್ ಮತ್ತು ಸ್ವಯಂ ನಿರ್ಣಯದ ಹಕ್ಕು ಕೊಡವರ ಜನ್ಮ ಸಿದ್ಧ ಹಕ್ಕು : ಎನ್.ಯು.ನಾಚಪ್ಪ ಪ್ರತಿಪಾದನೆ

Published

on

ಮಡಿಕೇರಿ : ಕೊಡವರಂತಹ ಆದಿಮ ಸಂಜಾತ ಅತೀಸೂಕ್ಷ÷್ಮ ಸಮುದಾಯಗಳ ಉಳಿವಿಗಾಗಿ ಸಂವಿಧಾನದಡಿಯಲ್ಲಿ ನ್ಯಾಯಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಲು ಅವಕಾಶವಿದ್ದು, ಸ್ವಯಂ ನಿರ್ಣಯದ ಹಕ್ಕಿನ ಮೂಲಕ ಕೊಡವ ಲ್ಯಾಂಡ್ ಹೊಂದುವುದು ಕೊಡವರ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ.
ರಾಜ್ಯದಲ್ಲಿ ಇತರರ ಬಗ್ಗೆ ಎಂದಿಗೂ ಕಾಳಜಿ ಇಲ್ಲದ ಜನರು ಊಳಿಗಮಾನ್ಯ ಮನೋಭಾವದಿಂದ ರಾಜ್ಯವನ್ನು ಆಳುತ್ತಿದ್ದಾರೆ. ಅವರು ರಾಜ್ಯದ ಕನಿಷ್ಠ ೬೦ ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಮತವನ್ನು ಹೊಂದಿದ್ದಾರೆ ಮತ್ತು ತಮ್ಮ ೬೦ ವಿಧಾನಸಭಾ ಕ್ಷೇತ್ರಗಳ ಭಾಗವಾಗಿರುವ ಇತರ ಸೂಕ್ಷ÷್ಮ ಸಮುದಾಯಗಳ ಯೋಗಕ್ಷೇಮದ ಬಗ್ಗೆ ಅವರು ಎಂದಿಗೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.


ಇತರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಮಂದಿ ತಮ್ಮ ಸಮುದಾಯಕ್ಕೆ ಎಷ್ಟು ಸೀಟು ಬೇಕೆನ್ನುವ ಲೆಕ್ಕಾಚಾರದಲ್ಲಿ ಚುನಾವಣೆಗಳ ಸಂದರ್ಭ ಮತಾಂಧತೆಯ ಅಶ್ಲೀಲತೆಯನ್ನು ಅನಾವಣಗೊಳಿಸುತ್ತಾರೆ. ತಮ್ಮ ಈ ನಡೆ ಜಾತ್ಯತೀತತೆಯ ಮತ್ತು ಅಂತರ್ಗತ ರುಜುವಾತುಗಳಿಗೆ ಅನುಗುಣವಾಗಿದೆ ಎಂದು ಹೇಳಿಕೊಂಡೆ ಮತಾಂಧತೆಯ ವಿಕೃತಿಯನ್ನು ಮೆರೆಯುತ್ತಾರೆ. ಕೊಡವರಂತಹ ಆದಿಮ ಸಂಜಾತ ನಗಣ್ಯ ಅತೀಸೂಕ್ಷ÷್ಮ ಸಮುದಾಯಗಳು ತಮ್ಮ ಉಳಿವಿಗಾಗಿ ಸಂವಿಧಾನದಡಿಯಲ್ಲಿ ನ್ಯಾಯಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಿದರೆ, ಈ ಕೋಮುವಾದಿಗಳು ಮೊಸಳೆ ಕಣ್ಣೀರು ಸುರಿಸುತ್ತಾ, ಕೊಡವರ ಹಕ್ಕುಗಳು ಇತರ ಸಮುದಾಯದ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತವೆ ಎಂದು ಅರ್ಥಹೀನವಾಗಿ ವರ್ತಿಸುತ್ತಿದ್ದಾರೆ. ತಾವು ಬಹುದೊಡ್ಡ ಮಾನವತಾವಾದದ ಹರಿಕಾರರು ಮತ್ತು ಸಾಮಾಜಿಕ ಸಮತಾವಾದದ ವೀರಾಗ್ರೇಸರೆಂದು ಹುಸಿಯಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಸುಳ್ಯ-ಬೆಳ್ತAಗಡಿಯಿAದ ಹಾವೇರಿ ತನಕ, ಹಾವೇರಿಯಿಂದ ಚಿತ್ರದುರ್ಗ, ಚಿತ್ರದುರ್ಗದಿಂದ ಕೋಲಾರÀ, ಕೋಲಾರದಿಂದ ಚಾಮರಾಜನಗರ, ಚಾಮರಾಜನಗರದಿಂದ ಪಿರಿಯಾಪಟ್ಟಣದವರೆಗಿನ ದಟ್ಟ ಬಾಹುಳ್ಯ ಪ್ರದೇಶದಲ್ಲಿ ತಮ್ಮ ಜನಸಂಖ್ಯಾ ತೂಕವನ್ನು ಹೊಂದಿರುವ ಅವರು ಮಾನಸಿಕ ಯುದ್ಧದ ಮೂಲಕ ನಮ್ಮನ್ನು ಬೆದರಿಸಲು ಮತ್ತು ಕೊಡವರಲ್ಲಿ ಭಯದ ಮನೋವಿಕಾರವನ್ನು ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಹೇಯ ಕೃತ್ಯಕ್ಕೆ ರಾಜ್ಯದ ಇತರ ಸಣ್ಣಪುಟ್ಟ ಸಮುದಾಯಗಳನ್ನು ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಾರೆ. ವಾಸ್ತವವಾಗಿ ಅವರಿಗೆ ಪರಿಶಿಷ್ಟರು ಹಾಗೂ ರಾಜ್ಯದ ಇತರ ಅಳಿವಿನಂಚಿನಲ್ಲಿರುವ ಕೆಳ ಹಂತದ ಸಮುದಾಯಗಳ ಬಗ್ಗೆ ಕಾಳಜಿ ಅಥವಾ ಪ್ರೀತಿ ಲವಲೇಷವು ಇಲ್ಲ. ಮಾನವ ಮಲ(ಅಮೇಧ್ಯ) ತಿನ್ನುವಂತೆ ಮಾಡಿದ ಅನೇಕ ಅಮಾನವೀಯ ಹೇಯ ಕೃತ್ಯಗಳೊಂದಿಗೆ ತಮ್ಮ ಕೊಳಕು ಮುಖವನ್ನು ಪ್ರದರ್ಶಿಸಿದ ನಿದರ್ಶನವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ.


ಕೊಡವರಿಗೆ ಸಂವಿಧಾನವೇ ಸರ್ವಶ್ರೇಷ್ಠವಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಉದಾತ್ತ ಸಂವಿಧಾನ ಮಾತ್ರ ಈ ಬಹುಸಂಖ್ಯಾತ ಸಮುದಾಯಗಳ ದುಷ್ಟ ವಿನ್ಯಾಸಗಳ ಕಪಿಮುಷ್ಠಿಯಿಂದ ಕೊಡವರು ಹೊರಬರಲು ದಿವ್ಯಾಔಷಧವಾಗಿದೆ. ತಮ್ಮ ಜನಸಂಖ್ಯಾ ಬಾಹುಳ್ಯದ ತೂಕದ ಮೂಲಕ ಬೆದರಿಕೆ ಹಾಕುವುದರೊಂದಿಗೆ ವ್ಯವಸ್ಥಿತವಾದ ಸಾಂವಿಧಾನಿಕ ಉಲ್ಲಂಘನೆಯನ್ನು ಈ ಸಮುದಾಯಗಳು ನಡೆಸಿದ್ದು, ನಮ್ಮ ರಕ್ಷಣೆಗಾಗಿ ಮತ್ತು ಅವರಿಂದ ಉಂಟಾದ ಅಸಂಗತತೆಗಾಗಿ ನಮ್ಮ ದೇಶದ ಅತ್ಯುನ್ನತ ಕಾನೂನು ನ್ಯಾಯಾಲಯ (ಸರ್ವೋಚ್ಚ ನ್ಯಾಯಾಲಯ) ಮತ್ತು ವಿಶ್ವಸಂಸ್ಥೆಯ ಬಾಗಿಲು ತಟ್ಟಲು ನಮಗೆ ದಾರಿ ಮಾಡಿಕೊಡುತ್ತಿದೆ ಎಂದು ತಿಳಿಸಿದ್ದಾರೆ.
ಕೊಡವರು ಧೈರ್ಯವಾಗಿರಬೇಕು, ಕೊಡವ ನೆಲ ನಮ್ಮ ಸಾಂಪ್ರದಾಯಿಕ ಮತ್ತು ಪ್ರಾಚೀನ ಅವಿಭಾಜ್ಯ ತಾಯ್ನಾಡಾಗಿದೆ. ಇದನ್ನು ಪುನರುಜ್ಜೀವನಗೊಳಿಸೋಣ ಮತ್ತು ರಕ್ಷಿಸೋಣ. ಇದು ನಮ್ಮ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕು, ನಮ್ಮ ಹಕ್ಕಿನ ಬಗ್ಗೆ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿದೆ. ಈ ಪ್ರಜಾಪೀಡಕ ಉಪದ್ರ ಜೀವಿಗಳು ತಮ್ಮ ಬಲಾಢ್ಯ ಜನಸಂಖ್ಯಾ ತೂಕದ ಮೂಲಕ ಒಡ್ಡುವ ಗೊಡ್ಡು ಬೆದರಿಕೆಯನ್ನು ನಾವು ಗಮನಿಸಬಾರದು. ನಮ್ಮ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕು ಕೊಡವ ಲ್ಯಾಂಡ್ ಆಗಿದ್ದು, ಇದನ್ನು ವಿಶ್ವರಾಷ್ಟç ಸಂಸ್ಥೆ ಚಾರ್ಟರ್/ಸನದ್ ಮತ್ತು ನಮ್ಮ ಶ್ರೇಷ್ಠ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸುತ್ತದೆ. ಆ ಮೂಲಕ ನಮ್ಮ ಭವಿಷ್ಯ ಮತ್ತು ಸ್ವಯಂ ನಿರ್ಣಯದ ಹಕ್ಕುಗಳÀನ್ನು ನಿರ್ಧರಿಸಿಕೊಳ್ಳೋಣ. ಇರ‍್ಯಾರಿಂದಲೂ ಕೊಡವರನ್ನು ಬೆದರಿಸಲು ಅಥವಾ ಆಮಿಷದಿಂದ ಮಣಿಸಲು ಸಾಧ್ಯವಿಲ್ಲ ಎಂದು ಎನ್.ಯು.ನಾಚಪ್ಪ ದೃಢ ನುಡಿಯಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ

Published

on

ಗೋಣಿಕೊಪ್ಪ : ರೈತರ ಅನುಕೂಲಕ್ಕೆ ಕೃಷಿ ಇಲಾಖೆ ವತಿಯಿಂದ ಶೇಕಡ 90ರಷ್ಟು ಸಹಾಯಧನದಲ್ಲಿ ಹೆಚ್.ಡಿ.ಪಿ.ಇ ಕಪ್ಪು ಬಣ್ಣದ ಸ್ಪಿಂಕ್ಲರ್ ಫೈಲ್ಗಳನ್ನು ವಿತರಸಲಾಗುತ್ತದೆ, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ಸಹಾಯಕ ಕೃಷಿ ಅಧಿಕಾರಿ ಮೂರ್ತಿ ಮಾಹಿತಿ ನೀಡಿದ್ದಾರೆ.
ವಿಚಾರವಾಗಿ ಮಾತನಾಡಿದ ಅವರು, ಸೌಲಭ್ಯವು ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇಕಡ 90ರಷ್ಟು ಸಹಾಯಧನದಲ್ಲಿ ನೀಡಲಾಗುತ್ತಿದೆ.
ರೈತ ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡಾ ಜೆರಾಕ್ಸ್ ಪ್ರತಿ, ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಫಲಾನುಭವಿಗಳಾಗಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಯೋಜನೆ ಫಲಾನುಭವಿಗಳಾಗಲು ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರೂಪಾಯಿ : 4139/- ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪಿಂಕ್ಲಾರ್ ಜೆಟ್ಗಳು ಇತರೆ ಸಾಮಗ್ರಿಗಳನ್ನು ಪಡೆಯಬಹುದಾಗಿದೆ. ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂಪಾಯಿ:2496/- ಹಣವನ್ನು ಪಾವತಿಸುವುದರ ಮುಖಾಂತರ 18 ಪೈವುಗಳು ಮತ್ತು 3 ಸಂಖ್ಯೆಯ ಜೆಟ್ಗಳನ್ನು ಜತೆಗೆ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಳ್ಳಬಹುದಾಗಿದೆ.
ಈ ಸೌಲಭ್ಯವನ್ನು ಸಾಮಾನ್ಯ ರೈತರಿಗೆ ಒಂದು ಬಾರಿ ಮಾತ್ರ ವಿತರಿಸಲಾಗುತ್ತಿದೆ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 7 ವರ್ಷಗಳ ನಂತರ ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ.

Continue Reading

Kodagu

ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಒಳಪಡುವ ಶ್ರೀ ಆಂಜನೇಯ ಮತ್ತು ಕೋಟೆ ಗಣಪತಿ ದೇವಾಲಯದ ಕಾರ್ಯಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 03 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು(ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು). ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-3 (ಸ್ವಚ್ಛತಗಾರ ಮತ್ತು ಕಾವಲುಗಾರರು) ವೇತನ ರೂ.9,600 ಮತ್ತು ಇತರೆ, ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ.
ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಯಾವುದೇ ಕ್ರಿಮಿನಲ್ ಮೊಕದ್ದಮೆ ಹಾಗೂ ನ್ಯಾಯಾಲಯದ ಆದೇಶದಂತೆ ಕಾರಾಗೃಹದ ಶಿಕ್ಷೆಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸಲು ಫೆಬ್ರವರಿ, 26 ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೇವಾಲಯದ ಕಚೇರಿಯ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಒಳಗೆ ಭೇಟಿ ನೀಡಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

Continue Reading

Kodagu

4ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Published

on

ಮಡಿಕೇರಿ : ಹೊದ್ದೂರು ಗ್ರಾಮದ ರಕ್ಷಕ, ಐತಿಹಾಸಿಕ ಹಿನ್ನಲೆಯುಳ್ಳ, ಪವಾಡ ಸದೃಶ ಮಹಿಮೆಯುಳ್ಳ ಶ್ರೀ ಶಾಸ್ತ-ಈಶ್ವರ ಕ್ಷೇತ್ರದಲ್ಲಿ ಶ್ರೀ ಶಾಸ್ತ-ಈಶ್ವರ, ಮಹಾಗಣಪತಿ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೇವತೆಗಳ 4ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.16 ರಿಂದ 18ರ ವರೆಗೆ ನಡೆಯಲಿದೆ.

ದೇವಾಲಯದಲ್ಲಿ ಮೂರು ದಿನಗಳ ಕಾಲ ಜಯರಾಜ್ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ.
ಫೆ.16 ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17 ರಂದು ಬೆಳಿಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶೀ ವಿಷ್ಣು ಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಶ್ರೀ ಈಶ್ವರ ದೇವರ ನೆರ್‌ಪು ಬಲಿ, ಮಹಾಪೂಜೆ, ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, 1 ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ.

ಸಂಜೆ 4 ಗಂಟೆಗೆ ಕಾವೇರಿ ಹೊಳೆಯಲ್ಲಿ ದೇವರ ಜಳಕ, ಗ್ರಾಮದ ಮುಖ್ಯ ರಸ್ತೆಯಲ್ಲಿ ಚಂಡೆ ಮದ್ದಳೆಯೊಂದಿಗೆ ಮೆರವಣಿಗೆ, ಸಂಜೆ 6.30ರ ನಂತರ ದೇವಾಲಯದಲ್ಲಿ ವಿವಿಧ ನೃತ್ಯ (ತಡಂಬ್ ಆಟ್), ಸಂಪ್ರೋಕ್ಷಣೆ, ಅನ್ನದಾನ ನಡೆಯಲಿದೆ.

ರಾತ್ರಿ 9 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ತೋಯತ ತೆರೆ, ಮೇಲೇರಿ ಅಗ್ನಿಸ್ಪರ್ಶ ನಡೆಯಲಿದೆ.

ಫೆ.18 ರಂದು ಬೆಳಿಗ್ಗೆ 8.30ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ನಡೆಯಲಿದ್ದು, ಫೆ.19 ರಂದು ಬೆಳಿಗ್ಗೆ 10 ಗಂಟೆಗೆ ದೇವಾಲಯದಲ್ಲಿ ಶುದ್ಧಕಲಶ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ಹಾಗೂ ಆಡಳಿತ ಮಂಡಳಿ ಕೋರಿದೆ.

Continue Reading

Trending

error: Content is protected !!