Connect with us

Kodagu

ಕೊಡ್ಲಿಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ನಾಯಿಗೆ ಕಚ್ಚಿ ಗಾಯ

Published

on

ಕೊಡ್ಲಿಪೇಟೆ : ಸಮೀಪದ ಬೆಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಮ್ಮನೆ ಕೊರಗಲ್ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ಸ್ಥಳೀಯರು ಅತಂಕ ವ್ಯಕ್ತಪಡಿಸಿದ್ದಾರೆ.
ಸೋಮವಾರ ರಾತ್ರಿ 8.30 ಕ್ಕೆ ಕೊರಗಲ್ ಗ್ರಾಮದ ಕೆ.ಪಿ.ಗುರುರಾಜ್ ಮನೆಯ ಪಕ್ಕದಲ್ಲಿ ನಾಯಿ ಜೋರಾಗಿ ಕಿರುಚಿದ್ದು ಕೇಳಿ ಮನೆಯ ಬಾಗಿಲು ತೆರೆದು ಶಬ್ದ ಮಾಡಿದಾಗ ಚಿರತೆ ತೋಟದೊಳಗೆ ಕಣ್ಮರೆಯಾಯಿತೆಂದು ಗುರುರಾಜ್ ತಿಳಿಸಿದ್ದಾರೆ.
ಮಾತ್ರವಲ್ಲದೇ ಚಿರತೆ ನಾಯಿಗೆ ಕಚ್ಚಿ ಗಾಯಗೊಳಿಸಿದೆ. ಮಂಗಳವಾರ ರಾತ್ರಿ ಕೂಡ ಗ್ರಾಮದಲ್ಲಿ ಚಿರತೆ ಸಂಚರಿಸಿದೆ. ರಾಮೇಗೌಡರ ಗದ್ದೆಯಲ್ಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದೆ ಎಂದು ಸ್ಥಳಿಯ ಪ್ರಸನ್ನ ಹೇಳಿದ್ದಾರೆ.
ಅರಣ್ಯ ಸಿಬ್ಬಂದಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಅನುಮಾನಸ್ಪದವಾಗಿ ವೈದ್ಯನ ಮೃತದೇಹ ಪತ್ತೆ

Published

on

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 275 ರ
ಆನೆಕಾಡು ಬಳಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ಪಿರಿಯಾಪಟ್ಟಣ ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಸತೀಶ್ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ.

ಮೂಲತಹ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದವರಾದ ಡಾ. ಸತೀಶ್ (47) ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಣಸುಾರು ಗ್ರಾಮದ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು ಪಟ್ಟಣದ ತಾಲೂಕು ಆಯುರ್ವೇದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕಡೆಯವವರಿಗೆ ಮಾಹಿತಿ ನೀಡಿದ್ದಾರೆ

 

 

Continue Reading

Kodagu

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ ಕೆ ಒತ್ತಾಯ

Published

on

ಮಡಿಕೇರಿ : ಅಲೆಮನೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಅತ್ಯಂತ ಆಘಾತಕಾರಿ ಹಾಗೂ ಅಮಾನವೀಯವಾದ ಘಟನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೊಡಗಿನ ಹಾಕತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಸರ್ಕಾರಕ್ಕೆ ಈ ಪ್ರಕರಣದಲ್ಲಿ ಯಾರ ಯಾರ ಪಾತ್ರಗಳು ಇದೆ ಎಂಬುದು ಗೊತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕು. ಇದು ಸ್ಯಾಂಪಲ್ ಅಷ್ಟೇ, ಆರೋಗ್ಯ ಇಲಾಖೆ ಅಧಿಕಾರಿಗಳು ಗೊತ್ತೇ ಇಲ್ಲದಂತೆ ನಟಿಸ್ತಾರೆ. ಹೀಗಾಗಿ ಸರ್ಕಾರ ಎಲ್ಲವನ್ನು ಕೂಲಂಕೂಷವಾಗಿ ಪರಿಶೀಲನೆ ಮಾಡಿ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಏನು ಮಾಡಿಕೊಳ್ಳುತ್ತಾರೋ ಅದು ಅವರ ಪಕ್ಷಕ್ಕೆ ಬಿಟ್ಟಿರುವ ವಿಚಾರ. ಆದರೆ ನಮಗೆ ಬೇಕಾಗಿರುವುದು ರಾಜ್ಯದಲ್ಲಿ ಬರಗಾಲಕ್ಕೆ ಪರಿಹಾರ. ಆ ಬರಗಾಲಕ್ಕೆ ಒಂದು ಕಡೆ ದುಡ್ಡಿಲ್ಲ, ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿ ಹಾಕಿಕೊಂಡಿದ್ದಾರೆ. ಆದರೆ ಈಗ ತಾನೆ ಎಲ್ಲಾ ಸಚಿವರಿಗೆ ಹೊಸ ಕಾರು ಕೊಡಿಸಿದ್ದಾರೆ, ಅದಕ್ಕೆ ಒಂಭತ್ತುವರೆ ಕೋಟಿ ಖರ್ಚು ಮಾಡಿದ್ದಾರೆ. ಮನೆ ರಿನೋವೇಷನ್‌ಗಾಗಿ ಕೋಟ್ಯಂತರ ಖರ್ಚು ಮಾಡಿದ್ದಾರೆ. ಇದಕ್ಕೆ ಹಣ ಎಷ್ಟೊಂದು ಖರ್ಚಾಗುತ್ತದೆ ಎಂದು ಪ್ರಶ್ನಿಸಿದರು.

೮೦೦ ಕೋಟಿ ಡಿಸಿ ಖಾತೆಗಳಲ್ಲಿ ಇರುವುದು ಬರಗಾಲ ಹಣ ಅಲ್ಲ. ಅದು ಕುಡಿಯುವ ನೀರು ಮತ್ತು ಮೇವಿಗಾಗಿ ಮೀಸಲಿರಿಸಿರುವ ಹಣ. ರೈತರ ಪರಿಸ್ಥಿತಿ ಏನು ಎನ್ನುವುದಕ್ಕೆ ಇವರು ಚಿಂತಿಸುತ್ತಿಲ್ಲ. ಈಗ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿದರೆ ದುಡ್ಡು ಎಷ್ಟು ಖರ್ಚಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷದಿಂದ ಹಣ ಕೊಡುತ್ತಾರಾ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್‌ಡಿಕೆ ಗರಂ ಆದರು.

ನ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ. ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ನೈಜ ಪರಿಸ್ಥಿತಿ ಅರ್ಥವಾಗಿದೆ ಎಂದುಕೊAಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನಾ ಮಾಡುವುದನ್ನು ನಾನು ಅಭಿನಂದಿಸುತ್ತೇನೆ ಎಲ್ಲವನ್ನು ಟೀಕಿಸುವುದಿಲ್ಲ, ಮುಂದಿನ ೩ ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ ೩ ತಿಂಗಳ ಗಡುವು ನೀಡಿದ್ದಾರೆ. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ಈಗ ಅವರಿಗೆ ಅರ್ಥ ಆಗಿರಬಹುದು ಎಂದು ಹೇಳಿದ್ದಾರೆ.

ನಾನು ಜನತಾ ದರ್ಶನ ಮಾಡಿದಾಗ ಬೆಳಿಗ್ಗೆ ೯ ರಿಂದ ರಾತ್ರಿ ೧ ಗಂಟೆವರೆಗೆ ಮಾಡಿದ್ದೆ. ಅವತ್ತು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ. ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಆರ್ ಅಶೋಕ್ ಅವರು ಕೂಡ ಮಾಡಿದ್ದರು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಅಂತ ಮಾಡಿದ್ರು. ತಿಂಗಳಿಗೆ ಒಂದು ಗ್ರಾಮಕ್ಕೆ ಅವರು ಭೇಟಿ ನೀಡಿದ್ದರು. ಈಗ ಸಿಎಂ ಅವರು ಜನಸ್ಪಂದನಾ ಮಾಡಿದ್ದಾರೆ. ಅವರಿಗೆ ಮನವರಿಕೆ ಆಗಿರುವ ಕಷ್ಟಗಳನ್ನು ಸಿಎಂ ಬಗೆಹರಿಸಲಿ. ಆಗ ಅವು ಅರ್ಥಪೂರ್ಣ ಆಗುತ್ತವೆ ಎಂದು ಹೇಳಿದ್ದಾರೆ.

ಮಾಜಿ ಸಚಿವ ಸಾ.ರಾ ಮಹೇಶ್, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಮಹದೇವ್, ಮನ್ಸೂರ್ ಆಲಿ ಪ್ರಮುಖರು ಇದ್ದರು.

Continue Reading

Kodagu

ಕೊಡಗಿನಾದ್ಯಂತ ಇಂದು ಪುತ್ತರಿ ಹಬ್ಬದ ಸಂಭ್ರಮ

Published

on

ನಾಪೋಕ್ಲುವಿನಲ್ಲಿ ಪುತ್ತರಿ ಸಂಭ್ರಮಿಸಲು ಪಟಾಕಿಗಾಗಿ ಮುಗಿಬಿದ್ದ ಜನ

ನಾಪೋಕ್ಲು : ಕೊಡಗು ಜಿಲ್ಲೆಯಲ್ಲಿ ಇಂದು ಪುತ್ತರಿ ಹಬ್ಬದ ಸಂಭ್ರಮದ ಸಡಗರ, ಇನ್ನೇನು ಕ್ಷಣಗಣನೆಯಲ್ಲಿ ಹಬ್ಬವನ್ನು ಆಚರಿಸಲಾಗುವುದು.

ಪುತ್ತರಿ ಎಂದರೆ ಕೊಡಗಿನ ಸುಗ್ಗಿಯ ಹಬ್ಬ ಎಂದೇ ಪ್ರಖ್ಯಾತಿಯನ್ನು ಪಡೆದಿದೆ. ಹಬ್ಬಕ್ಕೆ ಮೊದಲು ಮನೆಗಳನ್ನು ಸುಣ್ಣ,ಬಣ್ಣ ಪೇಂಟಿಂಗ್ ಗಳಿಂದ ಸಿಂಗರಿಸಿ ಹಬ್ಬಕ್ಕೆ ಮೆರಗು ನೀಡುತ್ತಾರೆ.

ಅದರಂತೆ ಹಬ್ಬಕ್ಕೆ 5 ದಿನಗಳ ಮೊದಲು ಊರಿನ ಮಂದ್ ನಲ್ಲಿ ಈಡು ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ನಂತರ 5ನೇ ದಿನ ಪುತ್ತರಿ ಹಬ್ಬವನ್ನು ಕೊಡಗಿನ ಜನರು ವಿಜೃಂಭಣೆಯಿಂದ ಆಚರಿಸುತ್ತಾರೆ.

ಕೊಡಗಿನ ಕುಲದೇವರಾದ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ಇಂದು ರಾತ್ರಿ 7.20ಕ್ಕೆ ನೆರೆ ಕಟ್ಟುವುದು,8.20ಕ್ಕೆ ಕದಿರು ತೆಗೆಯುವುದು,9.20ಕ್ಕೆ ಪ್ರಸಾದ ವಿತರಣೆಯ ಮೂಲಕ ಪುತ್ತರಿ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಅದರಂತೆ ಜಿಲ್ಲಾದ್ಯಂತ 7.45ಕ್ಕೆ ನೆರೆ ಕಟ್ಟುವುದು 8.45ಕ್ಕೆ ಕದಿರುತೆಗೆಯುವುದು 9.45ಕ್ಕೆ ಭೋಜನ ಮಾಡಲಾಗುವುದೆಂದು ವರದಿಯಾಗಿದೆ.

: ಪುತ್ತರಿ ಸಂಭ್ರಮಿಸಲು ನಾಪೋಕ್ಲುವಿನಲ್ಲಿ ಪಟಾಕಿಗಾಗಿ ಮುಗಿಬಿದ್ದ ಜನ

ನಾಪೋಕ್ಲು ಪಟ್ಟಣದ ಮಾರುಕಟ್ಟೆಯ ಬಳಿ ಪಟಾಕಿ ಮಾರಾಟ ಬಿರುಸಿನಿಂದ ಸಾಗುತ್ತಿದೆ.ಪುತ್ತರಿಹಬ್ಬವು ಸಂಭ್ರಮವಾಗಬೇಕಾದರೆ ಪಟಾಕಿ ಮುಖ್ಯ, ಪಟಾಕಿಯ ಶಬ್ದಗಳು ಪ್ರತಿ ಮನೆಗಳಲ್ಲಿ ಸ್ಪರ್ಧೆಯಂತೆ ನಡೆಯುತ್ತವೆ.
ನೆಲದ ಮೇಲೆ ಪಟಾಕಿ ಶಬ್ದದ ಭರಟೆಯಾದರೆ, ಆಗಸದಲ್ಲಿ ನಕ್ಷತ್ರಗಳ ಚಿತ್ತಾರದ ಪಟಾಕಿಗಳು ನೋಡುಗರನ್ನು ಮೂಕ ಪ್ರೇಕ್ಷಕರನ್ನಾಗಿಸುತ್ತದೆ.

ಪ್ರತಿಯೊಬ್ಬರೂ ಈ ಹಬ್ಬಕ್ಕಾಗಿ 5ರಿಂದ 10 ಸಾವಿರಗಳಷ್ಟು ಹಣವನ್ನು ಬರೀ ಪಟಾಕಿಗಾಗಿ ವಹಿಸುತ್ತಾರೆ. ಅದರಂತೆ ನಾಪೋಕ್ಲು ನಗರದ ಮಾರುಕಟ್ಟೆಯ ಬಳಿಯಲ್ಲಿ ಪಟಾಕಿ ಮಾರಾಟದ 5 ಮಳಿಗೆಗಳಿದ್ದು ಪಟಾಕಿ ಕೊಂಡುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ದೀಪಾವಳಿಯ ಸಂದರ್ಭದಲ್ಲಿ ಸರ್ಕಾರ ಈಗಾಗಲೇ ಪಟಾಕಿಯ ಮೇಲೆ ನಿರ್ಬಂಧ ಏರಿ ಬರೀ ಹಸಿರು ಪಟಾಕಿಯನ್ನು ಮಾರಾಟ ಮಾಡಬೇಕೆಂದು ವ್ಯಾಪಾರಿಗಳ ಮೇಲೆ ಕಡ್ಡಾಯದ ನಿರ್ಬಂಧ ಹೇರಿದ್ದರೂ ಕೂಡ ಪುತ್ತರಿ ಹಬ್ಬಕ್ಕೆ ಪಟಾಕಿ ವ್ಯಾಪಾರ ಮಾತ್ರ ಬರದಿಂದ ಸಾಗಿದೆ.

ವರದಿ :ಝಕರಿಯ ನಾಪೋಕ್ಲು

Continue Reading

Trending

error: Content is protected !!