Connect with us

Chamarajanagar

ಕೋಟಂಬಳ್ಳಿ ಗ್ರಾಮದಲ್ಲಿ ಸಾಕ್ಷರತಾ ಜಾಗೃತಿ

Published

on

ಚಾಮರಾಜನಗರ ಜ೧೯ ತಾಲೋಕಿನ ಕೋಟಂಬಳ್ಳಿ ಗ್ರಾಮದಲ್ಲಿ  ,  ಸಾಕ್ಷರತಾ ಜಾಥಾ ಏರ್ಪಡಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಿದರು.
ಮಕ್ಕಳು ಹಾಗೂ ಗ್ರಾಮಸ್ಥರು ಊರಿನಲ್ಲಿ ಸಾಕ್ಷರತಾಜಾಗೃತಿ ಜಾಥಾ ಮಾಡುವುದರ ಜೊತೆಗೆ ಮೂರು ಪ್ರಮುಖ  ಬೀದಿಗಳಲ್ಲಿ ವಿದ್ಯಾರ್ಥಿಗಳೇ  ಸ್ವತಃ ನಾಟಕ ಮತ್ತು ಹಾಡಿನ ಮೂಲಕ ಊರಿನ ಹಿರಿಯರಿಗೆ ಸಾಕ್ಷರತೆಯ ಹಾಗೂ ಸಾಕ್ಷರರಾಗುವ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಿದರು….
BRC ರಾಜೀವ್ ಮಾತಾನಾಡಿ ಅಕ್ಷರಕಲಿಯಲು ವಯಸ್ಸಿನ ತಾರತಮ್ಯವಿಲ್ಲ ನಾವು ಒಂದಲ್ಲು ಒಂದು ರೀತಿ ಕಲಿಯುತ್ತ ಇರುತ್ತೇವೆ ವಯಸ್ಕರ ಶಿಕ್ಷಣದಿಂದಾಗಿ ಗ್ರಾಮದಲ್ಲಿ ಅಕ್ಷರವಂತರು ಹೆಚ್ಚಾಗುತ್ತಾರೆ ಅದ್ದರಿಂದ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು
ಕಾರ್ಯಕ್ರಮದಲ್ಲಿ  ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ರವರು  ಸಾಕ್ಷರತಾ ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸಿಕೊಟ್ಟರು
ಅತಿಥಿ ಶಿಕ್ಷಕ ಕಲಾವಿದರು ಆದಾ  ಮನೋಜ್ ಮಸು  ಬೀದಿ ನಾಟಕ ಹಾಗೂ ಹಾಡುಗಳನ್ನು ಮಕ್ಕಳಿಗೆ 2 ಗಂಟೆಯಲ್ಲಿ  ಕಲಿಸಿ ಕಾರ್ಯಕ್ರಮ ಉತ್ತಮವಾಗಿ ಮೂಡಿಬರಲು ಶ್ರಮಿಸಿದರು….
ಈ ಸಂದರ್ಭದಲ್ಲಿ  CRP ಕಿಟ್ಟು, ಗ್ರಾಮಪಂಚಾಯಿತಿ ಸದ್ಯಸರು ಚಿನ್ನಸ್ವಾಮಿ, SDMC ಅಧ್ಯಕ್ಷರು ಶಿವಸ್ವಾಮಿ, ಶಾಲಾ  ಶಿಕ್ಷಕರು ನಾಗಸೇನ, ಸಾವಿತ್ರಿಭಾಪುಲೆ ಸಂಘದ ಜಿಲ್ಲಾಧ್ಯಕ್ಷರು ಭವಾನಿದೇವಿ,
 ಕೋಟಂಬಳ್ಳಿ ಶಾಲಮಕ್ಕಳು ಗ್ರಾಮಸ್ಥರು ಭಾಗವಹಿಸಿದ್ದರು
Continue Reading
Click to comment

Leave a Reply

Your email address will not be published. Required fields are marked *

Chamarajanagar

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಚಾಮರಾಜನಗರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಚಾಮರಾಜನಗರ ಜಿಲ್ಲೆಯಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಜನವರಿ 25ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading

Chamarajanagar

ಮೂರು ಚಕ್ರದ ಸ್ಕೂಟರ್‌ಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

Published

on

ಚಾಮರಾಜನಗರ:- ಕೊಳ್ಳೇಗಾಲ ನಗರಸಭೆಯ ೨೦೨೦-೨೧ ಮತ್ತು೨೦೨೧-೨೨ನೇ ಸಾಲಿನ ಎಸ್.ಎಫ್.ಸಿ ಸಾಲಿನ ಶೇ.೫ರ ಅನುಮೋದಿತ ಕ್ರಿಯಾ ಯೋಜನೆಯಂತೆ ಯಂತ್ರಚಾಲಿತ ಕಂಪನಿಯ ಮೂರು ಚಕ್ರದ ಸ್ಕೂಟರ್‌ಗಳನ್ನು ನೀಡಲು ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುವ ಶೇ.೭೫ರಷ್ಟು ಮೇಲ್ಪಟ್ಟ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ನಗರಸಭಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕರಿಸಿ ಜನವರಿ ೩೦ ರೊಳಗೆ ಕಚೇರಿಗೆ ಸಲ್ಲಿಸಬೇಕು.

Continue Reading

Chamarajanagar

ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ.ನಾಳೆ ನವೋದಯ ಪರೀಕ್ಷೆ

Published

on

ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ.ನಾಳೆ ನವೋದಯ ಪರೀಕ್ಷೆ

ಪಟ್ಟಣದ ಪಬ್ಲಿಕ್ ಶಾಲೆಯಲ್ಲಿ ನಡೆದ ನವೋದಯ ಪರೀಕ್ಷೆಯ ಪೂರ್ವ ಸಿದ್ಧತೆಯನ್ನು ಶಿಕ್ಷಕರಿಗೆ ತಿಳಿಸಿದ್ದಾರೆ
ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ರವರು ನವೋದಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು

ಮಾತನಾಡಿದ ಶಾಖೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ನಮ್ಮ ಶಾಲೆಯಲ್ಲಿ ನಡೆಯುವ ನವೋದಯ ಪರೀಕ್ಷೆಯು ಯಶಸ್ವೀಯಾಗಿ ನಡೆಸಿ ಕೋಡಿ ಎಂದು ಶಿಕ್ಷಕರಿಗೆ ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಶಶಿಧರ, ಮಹೇಶ್ ಕುಮಾರ್, ಪುಟ್ಟರಾಜು, ಹಾಜರಿದ್ದರು,

Continue Reading

Trending

error: Content is protected !!