Chikmagalur
ಕ್ರಿಕೆಟ್ ಆಡಲು ಬಂದಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ಪಶುವೈದ್ಯ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ

ಚಿಕ್ಕಮಗಳೂರು: ಕ್ರಿಕೆಟ್ ಆಡಲು ಬಂದಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ಪಶುವೈದ್ಯ ಹೃದಯಾಘಾತದಿಂದ ಕ್ರೀಡಾಂ ಗಣದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಆಯೋಜಿಸ ಲಾಗಿತ್ತು.
ಕೊಡಗು ಜಿಲ್ಲೆ ಸೋಮವಾರ ಪೇಟೆಯ ಪಶುವೈದ್ಯ ಶಿವಪ್ಪ ಬಾದಾಮಿ ಎಂಬುವರು ಕ್ರಿಕೆಟ್ ಆಡಿ ಪೋಟೋ ಸೆಷನ್ ನಲ್ಲಿ ಪಾಲ್ಗೊಂಡ ನಂತರ ಅಲ್ಲಿಯೇ ಕುಸಿದು ಬಿದ್ದಿದ್ದಾರೆ.
ತಕ್ಷಣ ಇತರೆ ವೈದ್ಯರು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.
ಮೈಸೂರು ವಿಭಾಗ ಮಟ್ಟದ ಪಶುವೈದ್ಯರ ಕ್ರೀಡಾಕೂಟಕ್ಕೆ ಏಳು ಜಿಲ್ಲೆಗಳ 12 ತಂಡಗಳು ಆಗಮಿಸಿದ್ದವು. ಚಿಕ್ಕಮಗ ಳೂರು ಪಶುವೈದ್ಯ ಸಂಘ ಆಯೋಜಿಸಿದ್ದ ಎರಡು ದಿನಗಳ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೊಡಗು ತಂಡದಿಂದ ಶಿವಪ್ಪ ಬಾದಾಮಿ ಇಂದು ನಗರಕ್ಕೆ ಆಗಮಿಸಿದ್ದರು.
ಒಂದು ಪಂದ್ಯ ಉತ್ಸಾಹದಿಂದ ಆಡಿದ ಅವರು ಗ್ರೂಪ್ ಪೋಟೋ ತಗೆಸಿಕೊಳ್ಳುವ ವೇಳೆ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಮೂಲತಃ ಶಿವಪ್ಪ ಬಾದಾಮಿ ಅವರು ಬೆಳಗಾವಿ ಜಿಲ್ಲೆಯವರಾಗಿದ್ದು, ಅವರ ಹಠತ್ ನಿಧನದಿಂದ ಕ್ರೀಡಾಕೂಟವನ್ನು ಸ್ಥಗಿತಗೊ ಳಿಸಲಾಗಿದೆ. ಈ ಅಕಾಲಿಕ ಮರಣಕ್ಕೆ ಪಶು ವೈದ್ಯರು ಕಂಬನಿ ಮಿಡಿದಿದ್ದಾರೆ.
Chikmagalur
ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ ಕಲ್ಪಿಸುವರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನಸವಾರರ ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Chikmagalur
ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.
Chikmagalur
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚಿಕ್ಕಮಗಳೂರು : ಕೆಎಸ್ಆರ್ಟಿಸಿ ಬಸ್ – ಬೈ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು. ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State20 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan21 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu24 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ