Connect with us

Chamarajanagar

ಕ್ರೀಡೆಗಳನ್ನು ಆಡುವುದರಿಂದ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು – ಶಾಸಕ ಎ ಆರ್ ಕೃಷ್ಣಮೂರ್ತಿ ಸಲಹೆ

Published

on

ಕ್ರೀಡೆಗಳನ್ನು ಆಡುವುದರಿಂದ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಸಲಹೆ ನೀಡಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯವಾಗಲಿ ಆಯೋಜಿಸಿದ್ದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು

ಗ್ರಾಮೀಣ ಭಾಗದಲ್ಲಿ ಕ್ರೀಡಾಪಟುಗಳು ಹೆಚ್ಚಾಗಿದ್ದು ಕ್ರೀಡಾಪಟುಗಳಿಗೆ ಗ್ರಾಮೀಣ ಆಟಗಳನ್ನು ಉತ್ತೇಜಿಸಿ ಪೋಷಿಸಬೇಕಿದೆ ಎಂದು ಶಾಸಕ ಆರ್ ಕೃಷ್ಣಮೂರ್ತಿ ಸಲಹೆ ನೀಡಿದರು. ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವುದಕ್ಕಾಗಿಯೇ ಸರ್ಕಾರ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ ಪ್ರತಿ ಗ್ರಾಮ್ ಪಂಚಾಯ್ತಿ ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳಿಂದ ನಾನು ಕ್ರೀಡೆಗಳನ್ನು ನಡೆಸಿ ಅಲ್ಲಿ ವಿಜೇತರಾದಾರರನ್ನು ತಾಲೂಕು ಮಟ್ಟದಲ್ಲಿ ನಂತರ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟದವರೆಗೂ ಕ್ರೀಡೆ ನಡೆಸಲಾಗುತ್ತದೆ ಎಂದು ತಿಳಿಸಿದರು. ತಾಲೂಕು ಕೇಂದ್ರದಲ್ಲಿ ಕ್ರೀಡಾಂಗಣವಿಲ್ಲದ ಕ್ರೀಡಾಪಟುಗಳು ಅನೇಕ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸ್ಥಳ ನಿಗದಿಪಡಿಸುವಂತೆ ಸೂಚನೆ ನೀಡಿ ಮಳ್ಳಳ್ಳಿ ಗ್ರಾಮದಲ್ಲಿರುವ ಆದರ್ಶ ಶಾಲೆಯ ಪಕ್ಕದಲ್ಲಿ ಎರಡು ಎಕ್ಕರೆ ಪ್ರದೇಶವನ್ನು ಗುರುತಿಸಲಾಗಿದೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಳಕೆ ಮಾಡಿಕೊಂಡು ತಾಲೂಕಿನಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು .

ಪಟ್ಟಣ ಪಂಚಾಯತಿ ಸದಸ್ಯ ಮಹೇಶ್, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್ ಶಿವಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯೋಗೇಶ್, ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮುರುಳಿಧರ್, ಉಪ ಪ್ರಾಂಶುಪಾಲರಾದ ನಂಜುಂಡಯ್ಯ, ಪ್ರಭಾರ ಪ್ರಾಂಶುಪಾಲರಾದ ಮಹೇಶ್ ಗ್ರಾಮದ ಕ್ರೀಡಾಪಟುಗಳು, ಶಾಲಾ ವಿದ್ಯಾರ್ಥಿಗಳು, ಮುಖಂಡರುಗಳು ಹಾಜರಿದ್ದರು

Continue Reading
Click to comment

Leave a Reply

Your email address will not be published. Required fields are marked *

Chamarajanagar

ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು: ಕೃಷ್ಣನಾಯಕ

Published

on

ಯಳಂದೂರು: ಗುಂಬಳ್ಳಿ ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಬಿಲ್ ಕಲೆಕ್ಟರ್ ಕೃಷ್ಣನಾಯಕ ತಿಳಿಸಿದರು.

ಗುಂಬಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಎರಡು ವರ್ಷಗಳಿಂದ ಗುಂಬಳ್ಳಿ ಗ್ರಾಮ ಪಂಚಾಯಿತಿಯು ಕ್ಷಯಮುಕ್ತ ಗ್ರಾಮ ಪಂಚಾಯಿತಿಯಾಗಿ ಪ್ರಶಸ್ತಿಯನ್ನು ಪಡೆದಿತ್ತು. ಆದರೆ ಈ ಬಾರಿ ಕ್ಷಯ ರೋಗದ ಲಕ್ಷಣ ಕ್ಷಣ ಕಂಡು ಬಂದು ರೋಗಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದ್ದಾರೆ. ಅವರಿಗೆ ಸರಿಯಾದ ಚಿಕಿತ್ಸೆಯನ್ನು ಕೊಡಿಸಿ ಗುಂಬಳ್ಳಿ ಗ್ರಾಮ ಪಂಚಾಯಿತಿಯನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಗುಂಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಪುಟ್ಟ ಮಾಧವಿ ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ವೈದ್ಯರು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರು ಹಾಜರಿದ್ದರು.

Continue Reading

Chamarajanagar

ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘಟನೆಯಿಂದ ಪ್ರತಿಭಟನೆ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ರೈತರಿಗೆ ಸಾಲ ವಸೂಲಿಗೆ ಬಗ್ಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಮುಂಭಾಗ ರೈತ ಸಂಘ ಗಳಿಂದ ಪ್ರತಿಭಟನೆ

ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಸಾಲ ಪಡೆದ ರೈತರಿಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿ ಗಳು ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದರು. ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂದೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ರೈತರಿಗೆ ಹಣ ಕಟ್ಟುವಂತೆ ನೋಟಿಸ್ ನೀಡಿ ಕಿರುಕುಳ

ಈ ಪ್ರತಿಭಟನೆ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ವೀರನಪುರ ನಾಗಪ್ಪ, ಬೇಗೂರು ಸಮೀಪದ ಬೆಳಚಲವಾಡಿ ಗ್ರಾಮದ ನಂಜುಂಡಸ್ವಾಮಿ ಎಂಬ ರೈತ ಬೇಗೂರು ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ಬೆಳೆ ಸಾಲ ಪಡೆದಿದ್ದಾರೆ. ಇವರಿಗೆ ಹೆಚ್ಚು ಪ್ರಮಾಣದಲ್ಲಿ ಬಡ್ಡಿ ವಿಧಿಸಿ ಹಣ ಕಟ್ಟುವಂತೆ ನೋಟಿಸ್ ನೀಡಿದ್ದಾರೆ. ಸಕಾಲಕ್ಕೆ ಮಳೆ ಬೀಳದೆ ರೈತರು ಬೆಳೆದ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಇದೆ ಸಮಯಕ್ಕೆ ಈ ಬ್ಯಾಂಕಿನವರು ಸಾಲ ವಸೂಲಿಗೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಬೆಳೆದ ಬೆಳೆಗೆ ಬೆಲೆ ಸಿಗದೆ ರೈತ ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ನವರು ನೋಟಿಸ್ ನೀಡುವ ಮೂಲಕ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.

ನಂತರ ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್.ವ್ಯವಸ್ಥಾಪಕರು ಈ ವಿಚಾರವಾಗಿ ಮುಖ್ಯ ಕಚೇರಿಯ ಗಮನಕ್ಕೆ ತಂದು ಬಡ್ಡಿ ಕಡಿಮೆ ಮಾಡಿಸಲು ಪ್ರಯತ್ನ ಪಡಲಾಗುವುದು ಎಂದು ಭರವಸೆ ನೀಡಿದರು.

ರೈತರ ನೆರವಿಗೆ ನಿಲ್ಲದ ಸರ್ಕಾರಗಳು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈ ಕಟ್ಟಿ ಕುಳಿತು ಅಧಿಕಾರಿಗಳ ಮೂಲಕ ಸಾಲ ವಸೂಲಿಗೆ ಕುಮ್ಮಕ್ಕು ನೀಡುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ನೊಂದ ರೈತರ ನೆರವಿಗೆ ನಿಲ್ಲಬೇಕು ಹಾಗೂ ಸಾಲದ ಬಡ್ಡಿ ಮನ್ನಾ ಮಾಡಿ ಕೇವಲ ಸಾಲದ ಹಣವನ್ನು ಮಾತ್ರ ಕಟ್ಟಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನ ವಲಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ

ಈ ಸಮಸ್ಯೆ ಬಗ್ಗೆ ಮುಖ್ಯ ಕಚೇರಿಗೆ ಗಮನಕ್ಕೆ ತಂದು ಬಡ್ಡಿಕಡಿಮೆ ಮಾಡಲುಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನ ಮಾಡುತಿದ್ದ ರೈತರು ಪ್ರತಿಭಟನೆ ಯನ್ನು ಕೈಬಿಟ್ಟರು.

ಈ ಸಂದರ್ಭದಲ್ಲಿ ,ಸಂಘದ ಜಿಲ್ಲಾ ಉಪಾಧ್ಯಕ್ಷ ಮಲಯ್ಯನಪುರ ಪುಟ್ಟೇಗೌಡ, ಹಸಿರು ಸೇನೆ ಅಧ್ಯಕ್ಷ ಕಮರಹಳ್ಳಿ ಪ್ರಸಾದ್, ಕಾರ್ಯದರ್ಶಿ ಯತವನ ಹಳ್ಳಿ ಸಿದ್ದರಾಜು, ಸೋಮಹಳ್ಳಿ ನವೀನ್, ಶಿವಕುಮಾರ್, ಹಕ್ಕಲಪುರ ಸ್ವಾಮಿ, ಪಡಗೂರು ಮಹದೇವ ಸ್ವಾಮಿ ಸೇರಿದಂತೆ ಹಲವು ಮಂದಿ ರೈತರು ಹಾಜರಿದ್ದರು

Continue Reading

Chamarajanagar

ಎಸ್ಎಸ್ಎಲ್ ಸಿ ಪತ್ರಿಕೆ-2 ಫಲಿತಾಂಶದಲ್ಲಿ ಕಬ್ಬಹಳ್ಳಿ ಸರ್ಕಾರಿ ಬಾಲಕರ ಪ್ರೌಢಶಾಲೆ ತಾಲೂಕಿಗೆ ಪ್ರಥಮ ಸ್ಥಾನ

Published

on

ಗುಂಡ್ಲುಪೇಟೆ: ಎಸ್ಎಸ್ಎಲ್ ಸಿ ಪತ್ರಿಕೆ-2 ಫಲಿತಾಂಶದಲ್ಲಿ ಸರ್ಕಾರಿ ಪ್ರೌಢಶಾಲೆಗಳ ಪೈಕಿ ಕಬ್ಬಹಳ್ಳಿ ಸರ್ಕಾರಿ ಬಾಲಕರ ಪ್ರೌಢಶಾಲೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದೆ.

ಕಬ್ಬಹಳ್ಳಿ ಶಾಲೆಯಲ್ಲಿ ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.6 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾಗಿದ್ದು,
ರಜತ್ 587 ಅಂಕಗಳನ್ನು ಗಳಿಸಿ ಶಾಲೆಗೆ ಮೊದಲ ಸ್ಥಾನ ಗಳಿಸಿದ್ದಾನೆ

ಒಟ್ಟು 87%ಫಲಿತಾಂಶ ಈ ಶಾಲೆಗೆ ಬಂದಿದ್ದು, ಈ ಫಲಿತಾಂಶ ಉತ್ತಮವಾಗಿ ಮೂಡಿ ಬರಲು ಶಿಕ್ಷಕರ ಕಾರ್ಯ ಹೆಚ್ಚಿನದ್ದಾಗಿದೆ. ಪ್ರತಿ ದಿನ ಸಂಜೆ ತರಗತಿಗಳನ್ನು ತೆಗೆದುಕೊಂಡು ಉತ್ತಮ ರೀತಿಯ ಬೋಧನೆ ಮಾಡಿ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಶ್ರಮ ಬಹುಮುಖ್ಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕರಾದ ಉಮೇಶ್ ಸಹ ಶಿಕ್ಷಕರಾದ ಪ್ರಶಾಂತ್, ವಿಜಯ್ ಕುಮಾರ್, ನಾಗೇಶ್, ಚೈತನ್ಯ, ಕವಿತಾ, ಶೃತಿ ಈ ಎಲ್ಲಾ ಶಿಕ್ಷಕರ ಶ್ರಮ ಸಾರ್ಥಕವಾಗಿದೆ. ಗ್ರಾಮಸ್ಥರು ಮತ್ತು ಪೋಷಕರ ಸಹಕಾರವೂ ಕಾರಣವಾಗಿದೆ.

ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಕಬ್ಬಹಳ್ಳಿಯಲ್ಲಿನ ವಿಧ್ಯಾರ್ಥಿಗಳ ಫಲಿತಾಂಶದಲ್ಲಿ 87%. ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ 87% ಲಭಿಸಿದೆ.15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು .3 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ಕುಮಾರ್, ಮೇಲ್ವಿಚಾರಕರಾದ ಪೃಥ್ವಿರಾಜ್‌ ಎಚ್ ಎಮ್.ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Continue Reading

Trending

error: Content is protected !!