Mysore
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲು ಬದ್ಧ : ಶಾಸಕ ಡಿ. ರವಿಶಂಕರ್

ಸಾಲಿಗ್ರಾಮ : ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದು ಸರ್ಕಾರದಿಂದ ಅಗತ್ಯ ಅನುದಾನ ತಂದು ಆದ್ಯತೆಯ ಮೇರೆಗೆ ಕಾರ್ಯ ಯೋಜನೆ ರೂಪಿಸುತ್ತೇನೆ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.
ತಾಲೂಕಿನ ಮಾರಿಗುಡಿ ಕೊಪ್ಪಲು ಗ್ರಾಮದಲ್ಲಿ ನಡೆದ ಕಾಲ ಭೈರವೇಶ್ವರ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಭಿವೃದ್ಧಿಗೆ ಅನುದಾನ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದರು.
ತಾಲೂಕಿನ ಕೆಸ್ತೂರು ಕೊಪ್ಪಲು ಏತ ನೀರಾವರಿ ಯೋಜನೆಯ ಕಾಮಗಾರಿಗೆ ಪ್ರಸಕ್ತ ಬಜೆಟ್ ನಲ್ಲಿ 50 ಕೋಟಿ ರೂಗಳನ್ನು ಮೀಸಲಿಟ್ಟಿದ್ದು, ಇದಕ್ಕಾಗಿ ಎಲ್ಲರ ಪರವಾಗಿ ಸರ್ಕಾರವನ್ನು ಅಭಿನಂದಿಸುವುದಾಗಿ ತಿಳಿಸಿದ ಅವರು ಮತ್ತಷ್ಟು ಅನುದಾನ ನೀಡಲು ಸರ್ಕಾರ ಸಿದ್ಧವಿದ್ದು, ಈ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಮಾರಿಗುಡಿ ಕೊಪ್ಪಲು ಮತ್ತು ಸುತ್ತಮುತ್ತಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕೆ. ಆರ್. ನಗರ ಮತ್ತು ಹುಣಸೂರು ರಸ್ತೆಯ ಎಡ ಬದಿಯಲ್ಲಿರುವ ಕೆರೆಯ ಬಳಿ ಜಾಗ ಗುರುತು ಮಾಡಿದ್ದು ಅಲ್ಲಿ ಬೃಹತ್ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಿ ಆನಂತರ ನೀರು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಭಾಗದ ನಾಲ್ಕಾರು ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲು ಚಿಂತನೆ ನಡೆಸಿದ್ದು ಈ ವಿಚಾರವನ್ನು ಶಿಕ್ಷಣ ಸಚಿವರ ಜೊತೆ ಚರ್ಚಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಿಸುತ್ತೇನೆ ಎಂದು ಭರವಸೆ ನೀಡಿದ ಶಾಸಕರು ಇದರ ಜತೆಗೆ ಮಾರಿಗುಡಿಕೊಪ್ಪಲು, ಕಾಳೇನಹಳ್ಳಿ ಮತ್ತು ಕೆಂಪನಕೊಪ್ಪಲು, ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ ಅನುದಾನ ನೀಡಲಾಗಿದೆ ಎಂದು ಪ್ರಕಟಿಸಿದರು.
ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಸಾಲಿಗ್ರಾಮ ಮತ್ತು ಕೆ ಆರ್ ನಗರ ತಾಲೂಕುಗಳನ್ನು ರಾಜ್ಯ ಸರ್ಕಾರ ಬರ ಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿದ್ದು ರೈತ ಬಾಂಧವರು ಎಫ್ ಐ ಡಿ ನೋಂದಣಿ ಮಾಡಿಸಿಕೊಂಡು ಸರ್ಕಾರದಿಂದ ಬರುವ ಪರಿಹಾರದ ಸವಲತ್ತು ಪಡೆದುಕೊಳ್ಳಬೇಕೆಂದು ಡಿ. ರವಿಶಂಕರ್ ಸಲಹೆ ನೀಡಿದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ದೊಡ್ಡೇ ಕೊಪ್ಪಲು ಗ್ರಾ.ಪಂ.ಅಧ್ಯಕ್ಷೆ ಸವಿತಾ ಸ್ವಾಮೀಗೌಡ, ಸದಸ್ಯರಾದ ಶ್ವೇತಾ ರವಿ, ಮಹೇಶ್ ಗೌಡ, ಕೆ.ಪಿ. ಜಗದೀಶ್, ಚೌಕಹಳ್ಳಿ ಶೇಖರ್, ಮಾಜಿ ಸದಸ್ಯರಾದ ಮೋಟೆಗೌಡ, ಜವರೇಗೌಡ, ಅಪ್ಪಾಜಿಗೌಡ, ಶಾರದಾ ಶಿವರಾಂ, ಗ್ರಾಮದ ಯಜನಾನರಾದ ರಾಜೇಗೌಡ, ರಾಮೇಗೌಡ, ವೆಂಕಟೇಗೌಡ ಮತ್ತು ಇತರ ಮುಖಂಡರು ಗ್ರಾಮಸ್ಥರು ಹಾಜರಿದ್ದರು.
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
Mysore
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.
ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mysore
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಣ್ಣ ಸಮುದಾಯದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
.
ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ, ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
Mysore
ಸಾವಿರಾರೂ ಪರಿಸರ ಪ್ರೇಮಿಗಳಿಂದ ಮೌನ ಪ್ರತಿಭಟನೆ

ಮೈಸೂರು: ಇಲ್ಲಿನ ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಮರಗಳ ಹನನ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ಮೌನ ಪ್ರತಿಭಟಿಸಲಾಯಿತು.
ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ ವತಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಬಳಿ ಮರಗಳು ಹನನ ಗೊಂದ ಸ್ಥಳದಲ್ಲಿ. ಸಾವಿರಾರೂ ಪರಿಸರ ಪ್ರೇಮಿಗಳು ಸೇರಿ ಕಪ್ಪು ಪಟ್ಟಿ ಧರಿಸಿ, ಮೊಂಬತ್ತಿ ಬೆಳಗುವ ಮೂಲಕ ಅಮಾನುಷವಾಗಿ ಕಡಿಯಲ್ಪಟ್ಟ 40 ಮರಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಗಿಡಗಳನ್ನು ನೆಟ್ಟು ಬೆಳೆಸಬೇಕಾದ ಅರಣ್ಯ ಇಲಾಖೆ 40 ಮರಗಳನ್ನು ಕಡಿಯಲು ಅನುಮತಿ ನೀಡಿದೆ. ಈ ರಸ್ತೆಯ ಅಗಲೀಕರಣವೇ ಅಗತ್ಯವಿಲ್ಲ. ಅನಿವಾರ್ಯವಾಗಿದ್ದರೆ ಲಲಿತ್ ಮಹಲ್ ಹತ್ತಿರದ ಎಟಿಐ ಮುಂಭಾಗದಲ್ಲಿ ಮಾಡಿರುವಂತೆ ಮರಗಳನ್ನು ಉಳಿಸಿಕೊಂಡು ರಸ್ತೆ ಅಗಲೀಕರಣ ಮಾಡಬಹುದಿತ್ತು ಎಂಬುವುದು ಪರಿಸರ ಪ್ರೇಮಿಗಳ ಒತ್ತಾಯದ ಮಾತಾಗಿದೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ