Health
ಗಂಟಲು ನೋವು ಇದ್ರೆ ಯೋಚ್ನೆ ಬೇಡ, ಇಲ್ಲಿದೆ ಇದಕ್ಕೆ ಪರಿಹಾರ!

ಈ ನಿಯಮವನ್ನು ಸತತ ಐದು ದಿನಗಳವರೆಗೆ ಅನುಸರಿಸಿ ಮತ್ತು ಎಲ್ಲಾ ನೋವುಗಳು ಮಾಯವಾಗುತ್ತವೆ. ಟಾನ್ಸಿಲ್ ಸಮಸ್ಯೆಗಳೂ ಕಡಿಮೆಯಾಗುತ್ತವೆ. ಶೀತ ನೋಯುತ್ತಿರುವ ಗಂಟಲಿನಿಂದ ಬಳಲುತ್ತಿದ್ದೀರಾ? ಈ ಮೂರು ಮನೆ ಸಲಹೆಗಳೊಂದಿಗೆ ನೀವು ಪರಿಹಾರವನ್ನು ಕಂಡುಕೊಳ್ಳುತ್ತೀರಿ. ಶೀತವು ಗಂಟಲು ನೋವು, ಜ್ವರ, ಉಸಿರಾಟದ ತೊಂದರೆ ಮತ್ತು ಕಿವಿನೋವಿನಂತಹ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಈ ಅವಧಿಯಲ್ಲಿ ಅನೇಕ ಜನರು ಗಲಗ್ರಂಥಿಯ ಉರಿಯೂತದಿಂದ ಬಳಲುತ್ತಿದ್ದಾರೆ.
ಆದರೆ ಅಂತಹ ಸಂದರ್ಭಗಳಲ್ಲಿ ಗಲಗ್ರಂಥಿಯ ಉರಿಯೂತವನ್ನು ಕೆಲವು ಮನೆಮದ್ದುಗಳಿಂದ ಸುಲಭವಾಗಿ ಪರಿಹರಿಸಬಹುದು. ಗಲಗ್ರಂಥಿಯ ಉರಿಯೂತದ ಸಮಸ್ಯೆಯನ್ನು ತೊಡೆದುಹಾಕಲು ಈ ಮೂರು ಮನೆಮದ್ದುಗಳು ನಿಮಗೆ ಈ ನೋವಿನಿಂದ ಬಹಳ ಸುಲಭವಾಗಿ ಪರಿಹಾರವನ್ನು ನೀಡುತ್ತದೆ ಎಂದು ತಜ್ಞ ವೈದ್ಯ ಚಿನ್ಮೊಯ್ ದೇವಗುಪ್ತ ಹೇಳುತ್ತಾರೆ. ಟಾನ್ಸಿಲ್ ನೋವನ್ನು ತೊಡೆದುಹಾಕಲು, ಟಾನ್ಸಿಲ್ ನೋವಿನಿಂದ ಸುಲಭವಾಗಿ ಪರಿಹಾರವನ್ನು ಪಡೆಯಲು ನೀವು ಐದು ದಿನಗಳವರೆಗೆ ನಿಯಮಿತವಾಗಿ ಯಾವುದಾದರೂ ಒಂದು ಕಟ್ಟುಪಾಡುಗಳನ್ನು ಅನುಸರಿಸಬಹುದು.

ಗಾರ್ಗ್ಲ್ – ಟಾನ್ಸಿಲ್ ನೋವನ್ನು ನಿವಾರಿಸಲು ಉಪ್ಪು ನೀರಿನಿಂದ ಗಾರ್ಗ್ಲ್ ಮಾಡಿ. ಜೇನುತುಪ್ಪವನ್ನು ಬಿಸಿ ನೀರಿನಲ್ಲಿ ಬೆರೆಸಿ ಸೇವಿಸಬಹುದು – ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಈ ಕಾರಣಕ್ಕಾಗಿ, ಟಾನ್ಸಿಲ್ ಸೋಂಕನ್ನು ನಿವಾರಿಸಲು ಜೇನುತುಪ್ಪವನ್ನು ಶಿಫಾರಸು ಮಾಡಲಾಗುತ್ತದೆ.
ತುಳಸಿ ಮತ್ತು ಜೇನು ಮಿಶ್ರಣ ಮಹಾಶಾಧಿ – ತುಳಸಿ ಮತ್ತು ಜೇನು ಮಿಶ್ರಣ ಮಹಾಶಾಧಿ. ತುಳಸಿ ಮತ್ತು ಜೇನುತುಪ್ಪದ ಮಿಶ್ರಣವು ನೋಯುತ್ತಿರುವ ಗಂಟಲಿನ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Health
ತೋಟಗಾರಿಕೆ ಇಲಾಖೆಯಲ್ಲಿ ಯುವಕರಿಗೆ ಶಿಷ್ಯವೇತನದ ಜೊತೆಗೆ ಉಚಿತ 10 ತಿಂಗಳ ತರಬೇತಿ : ಅರ್ಜಿ ಅಹ್ವಾನ

Free Training by Horticulture Department : ರಾಜ್ಯ ತೋಟಗಾರಿಕೆ ಇಲಾಖೆಯು 2025 – 26 ನೇ ಸಾಲಿಗೆ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ವೈಜ್ಞಾನಿಕವಾಗಿ ಉತ್ತಮ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಹಾಗೂ ಆರ್ಥಿಕವಾಗಿ ಸಬಲರಾಗಲು ಅವಶ್ಯವಿರುವ ತರಬೇತಿಯನ್ನು ಯುವಕರಿಗೆ ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಿದೆ.
ಉಚಿತ ತರಬೇತಿ ಯೋಜನೆಯ ವಿವರ :
ಈ ಉಚಿತ ತರಬೇತಿಯನ್ನು ಒಟ್ಟು 10 ತಿಂಗಳ ಅವಧಿಯವರೆಗೆ ನೀಡಲಾಗುವುದು. ತರಬೇತಿಯು ಮೇ 02, 2025 ರಿಂದ ಆರಂಭವಾಗಲಿದೆ. ವಿಶೇಷವೇನೆಂದರೆ ಈ ಉಚಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ 1,750ರೂ. ಶಿಷ್ಯವೇತನವನ್ನು ನೀಡಲಾಗುತ್ತದೆ.
ಯಾರು ಅರ್ಜಿ ಸಲ್ಲಿಸಬಹುದು?
ತೋಟಗಾರಿಕೆ ಇಲಾಖೆಯ ಈ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಕೇವಲ ರೈತರ ಮಕ್ಕಳಿಗೆ ಮಾತ್ರ ಅವಕಾಶವಿದೆ. ಅದೇ ರೀತಿ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು ಹಾಗೂ 18 ರಿಂದ 30 ವರ್ಷದ ವಯೋಮಿತಿಯಲ್ಲಿರಬೇಕು. ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವಾಗ?
ಅರ್ಜಿ ಸಲ್ಲಿಸಲು ನೀವು ಅರ್ಹತೆ ಹೊಂದಿದ್ದಲ್ಲಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಅಥವಾ ಆನ್ಲೈನ್ ಮೂಲಕ ಅರ್ಜಿ ಫಾರಂ ಪಡೆದು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ, ” ತೋಟಗಾರಿಕೆ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಧಾರವಾಡ ಕಚೇರಿಗೆ” ಸಲ್ಲಿಸಬೇಕು.
ತೋಟಗಾರಿಕೆ ಇಲಾಖೆಯ ಅಧಿಕೃತ ಜಾಲತಾಣ : https://horticulturedir.karnataka.gov.in/
Health
ಕಡಿಮೆ ದರಕ್ಕೆ ಸಿಗುತ್ತದೆ ಎಂದು ಈ ಎಣ್ಣೆಯನ್ನು ಅಡುಗೆ ಮಾಡಲು ಬಳಸಿದರೆ ಕ್ಯಾನ್ಸರ್, ಶುಗರ್ ಬರುವುದು ಖಂಡಿತ

Effects of Refined Oil in food : ಅನೇಕ ಜನರು ಅಡುಗೆ ಮಾಡಲು ಕಡಿಮೆ ದರಕ್ಕೆ ಸಿಗುತ್ತದೆ ಅಥವಾ ಅದರ ಬಗ್ಗೆ ಅರಿವಿಲ್ಲದ ಕಾರಣದಿಂದಾಗಿ ಸಂಸ್ಕರಿಸಿದ ಎಣ್ಣೆಯನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.
ಈ ಲೇಖನದಲ್ಲಿ ಸಂಸ್ಕರಿಸಿದ ಎಣ್ಣೆ ಎಂದರೇನು? ಯಾವೆಲ್ಲಾ ಸಂಸ್ಕರಿಸಿದ ಎಣ್ಣೆಯ ಅಡಿಯಲ್ಲಿ ಬರುತ್ತವೆ? ಹಾಗಿದ್ದರೆ ಅಡುಗೆ ಮಾಡಲು ಯಾವ ಎಣ್ಣೆ ಬಳಸಿದರೆ ಉತ್ತಮ ಎಂದು ಈ ಲೇಖನದಲ್ಲಿ ತಿಳಿಸಳಿದ್ದೇವೆ.
ಸಂಸ್ಕರಿಸಿದ ಎಣ್ಣೆ ಎಂದರೇನು?
ನೈಸರ್ಗಿಕ ತೈಲದ ಸಂಸ್ಕರಿತ ರೂಪವೆ ಸಂಸ್ಕರಿಸಿದ ತೈಲ ಅಥವಾ ಇಂಗ್ಲಿಷ್ ನಲ್ಲಿ ಇದನ್ನು Refined Oil ಎಂದು ಕರೆಯಲಾಗುತ್ತದೆ. ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವ ಉದ್ದೇಶದಿಂದ ನೈಸರ್ಗಿಕ ತೈಲವನ್ನು ಹಲವಾರು ರಾಸಾಯನಿಕಗಳೊಂದಿಗೆ ಸಂಸ್ಕರಿಸಿ, ದೀರ್ಘಾವಧಿಯ ಜೀವಿತಾವಧಿಯೊಂದಿಗೆ ವಾಸನೆ-ಮುಕ್ತ & ಸುವಾಸನೆ-ಮುಕ್ತ ತೈಲವಾಗಿ ಇದನ್ನು ತಯಾರಿಸಲಾಗುತ್ತದೆ.
ಸಂಸ್ಕರಣೆಯ ಮಾಡುವ ಪ್ರಕ್ರಿಯೆಯಲ್ಲಿ ಇದಕ್ಕೆ ಅಧಿಕ ತಾಪಮಾನ ಕೊಡುವುದರಿಂದ ಅದರಲ್ಲಿರುವ ಎಲ್ಲಾ ಮೌಲ್ಯವಾದ ಅಂಶಗಳು ಕಳೆದು ಹೋಗುತ್ತವೆ. ಜೊತೆಗೆ ಇದರಲ್ಲಿ ಕೆಟ್ಟ LDL ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್ಗಳು ಹಾಗೂ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಬಹುದಾದ ಟ್ರಾನ್ಸ್ ಕೊಬ್ಬಿನ ಪ್ರಮಾಣಗಳನ್ನು ಹೆಚ್ಚಿಸುತ್ತದೆ.
ಸಂಸ್ಕರಿಸಿದ ಎಣ್ಣೆಗೆ ಉದಾಹರಣೆಗಳು :
• ಸೂರ್ಯಕಾಂತಿ ಎಣ್ಣೆ
• ಅಕ್ಕಿ ಹೊಟ್ಟು ಎಣ್ಣೆ
• ಸೋಯಾ ಬೀನ್ ಎಣ್ಣೆ
• ಕಡಲೆಕಾಯಿ ಎಣ್ಣೆ ಹಾಗೂ ಮುಂತಾದವು
ಇದರಿಂದ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬಿರಲಿದೆ?
ಸಂಸ್ಕರಿಸಿದ ಎಣ್ಣೆಯನ್ನು ದಿನನಿತ್ಯ ಸೇವಿಸಿದಂತೆ ನಿಯಮಿತ ಕ್ಯಾನ್ಸರ್, ಶುಗರ್ ಸೇರಿದಂತೆ ಹಲವಾರು ಅರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ.
ಆದ್ದರಿಂದ ನೀವು ಅಡುಗೆ ಮಾಡಲು ಈ ಕೆಳಗಿನ ಎಣ್ಣೆಗಳನ್ನು ಬಳಸಬಹುದು :
• ಕೋಲ್ಡ್ ಪ್ರೆಸ್ ಎಣ್ಣೆಗಳು –
ಎಳ್ಳೆಣ್ಣೆ, ಕಡಲೆಕಾಯಿ ಎಣ್ಣೆ, ಸಾಸಿವೆ ಎಣ್ಣೆ ಮುಂತಾದವು..
ವಿ. ಸೂ : ಈ ಮೇಲಿನ ಲೇಖನವು ಕೇವಲ ಮಾಹಿತಿ ನೀಡುವ ಉದ್ದೇಶವಾಗಿದ್ದು, ನಿಮ್ಮ ಆರೋಗ್ಯಕ್ಕೆ ಸಂಬಂದಿಸಿದ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೊದಲು ಇದಕ್ಕೆ ಸಂಬಂದಿಸಿದ ಪರಿಣಿತರ ಸಹಾಯ ಪಡೆದು ನಿರ್ಧಾರ ತೆಗೆದುಕೊಳ್ಳಿ.
Health
ಮೀಸಲ್ಸ್- ರುಬೆಲ್ಲಾ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಿ

ಮಂಡ್ಯ : ದಢಾರ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದು ಒಬ್ಬರಿಂದ ಮತ್ತೊಬ್ಬರಿಗೆ ಬಹುಬೇಗ ಹರಡುತ್ತದೆ. ಜಿಲ್ಲೆಯಲ್ಲಿ ಮಕ್ಕಳು ಮೀಸಲ್ಸ್- ರುಬೆಲ್ಲಾ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮತ್ತು ದಢಾರ ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿ ಮಾತನಾಡಿದರು.
ಮಧ್ಯಮ ಅಥವಾ ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳಲ್ಲಿ ರೋಗದ ಹರಡುವಿಕೆ ಹೆಚ್ಚು. ದಢಾರ-ರುಬೆಲ್ಲಾ ಖಾಯಿಲೆಯಿಂದ ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಮಕ್ಕಳಿಗೆ 9 ರಿಂದ 11 ತಿಂಗಳುಗಳಲ್ಲಿ ಮೊದಲನೇ ವರಸೆ ಲಸಿಕೆಯನ್ನು ಮತ್ತು 16 ರಿಂದ 24 ತಿಂಗಳಲ್ಲಿ ಎರಡನೇ ವರಸೆ ದಢಾರ-ರುಬೆಲ್ಲಾ ಲಸಿಕೆ ಯನ್ನು ನೀಡಲಾಗುವುದು ಎಂದರು.
ಮಂಡ್ಯ ಜಿಲ್ಲೆಯಲ್ಲಿ ಏಪ್ರಿಲ್ 2024 ರಿಂದ ಅಕ್ಟೋಬರ್ 2024 ರವರೆಗೆ ಮೀಸಲ್ಸ್- ರುಬೆಲ್ಲಾ ಮೊದಲನೇ ವರಸೆ ಲಸಿಕೆ ಪಡೆಯಲು 12361 ಗುರಿ ನಿಗಧಿಯಾಗಿದ್ದು 11885 ಮಕ್ಕಳಿಗೆ ಲಸಿಕೆ ನೀಡಿ ಶೇ 96.1 % ಗುರಿ ಸಾಧಿಸಲಾಗಿದೆ. ಎರಡನೇ ವರಸೆಯಲ್ಲಿ 12361 ಗುರಿ ನಿಗಧಿಯಾಗಿದ್ದು 11759 ಮಕ್ಕಳಿಗೆ ಲಸಿಕೆ ನೀಡಿ 95.1% ಗುರಿ ಸಾಧಿಸಲಾಗಿದೆ. ಶೇ 100 ರಷ್ಟು ಸಾಧನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದರು.
ಮೀಸಲ್ಸ್- ರುಬೆಲ್ಲಾ ಖಾಯಿಲೆಯ ಲಕ್ಷಣಗಳು ಅಥವಾ ಯಾವುದೇ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಗೆ ವರದಿ ಮಾಡುವಂತೆ ತಿಳಿಸಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಕುರಿತು ಹಾಗೂ ದಢಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವಲ್ಲಿ ಧಾರ್ಮಿಕ ಮುಖಂಡರು/ಪ್ರಭಾವಿ ವ್ಯಕ್ತಿಗಳು/ಇಲಾಖಾ ಮುಖ್ಯಸ್ಥರುಗಳು ವ್ಯಾಪಕವಾಗಿ ಐ.ಇ.ಸಿ ಚಟುವಟಿಕೆ ನಡೆಸಿ ಸಹಕರಿಸುವುದು ಎಂದರು.
ತಾಲ್ಲೂಕು ಮಟ್ಟದಲ್ಲಿ ಆರೋಗ್ಯ ಇಲಾಖಾ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಕ್ಕಳು ಲಸಿಕೆ ಪಡೆದಿರುವುದರ ಕುರಿತು ಖಾತರಿಪಡಿಸಿಕೊಳ್ಳಬೇಕು ಎಂದರು
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಅಶ್ವಥ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಸೇರಿದಂತೆ ಇನ್ನಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
-
State11 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Hassan4 hours ago
ಜಮೀನು ವಿಚಾಕ್ಕೆ ಕೊಲೆ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu7 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ