Connect with us

Mysore

ಚಿಕ್ಕ ಭೇರ್ಯ ಗ್ರಾಮದ   ಬಾಲಕ ನಾಪತ್ತೆ : ಠಾಣೆಯಲ್ಲಿ  ದೂರು ದಾಖಲು

Published

on

ಸಾಲಿಗ್ರಾಮ ತಾಲೂಕಿನ ಚಿಕ್ಕ ಭೇರ್ಯ ಗ್ರಾಮದ   ಪ್ರೀತಮ್ ಗೌಡ 14 ವರ್ಷ ಇವನು ಸಕ್ಕರೆ  ಮೊರಾರ್ಜಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಅವನಿಗೆ ಕಾಲು ಗಾಯವಾಗಿರುವುದರಿಂದ ಒಂದು ದಿನದ ಮಟ್ಟಿಗೆ ಶಾಲೆಯಿಂದ ನಮ್ಮ ಮನೆಗೆ ಕರೆದುಕೊಂಡು ಬಂದಿದ್ದೆ, ನಂತರ ದಿ : 19-01-2024 ರ ಶುಕ್ರವಾರ ದಿವಸ ಬೆಳಿಗ್ಗೆ ಶಾಲೆಗೆ ಹೋಗುತ್ತೇನೆ ಎಂದು ಹೇಳಿ ಹೋದವನು, ಸಂಜೆಯಾದರೂ  ಹಾಸ್ಟೆಲ್ ಗೂ ಹೋಗದೆ ಇದ್ದುದರಿಂದ ಅದೇ ಮೊರಾರ್ಜಿ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿ ನಮ್ಮ ಸಂಬಂದಿ ಅಧಿತ್ಯ ನನಗೆ ಸಂಜೆ  6 ಗಂಟೆಗೆ ಫೋನ್ ಮಾಡಿ, ನಿಮ್ಮ ಮಗ ಹಾಸ್ಟೆಲ್ ಗೆ ಬಂದಿಲ್ಲ ಎಂದು ತಿಳಿಸಿದನು. ನಂತರ ಬೆಳಿಗ್ಗೆ ಸಕ್ಕರೆ ಗ್ರಾಮದ ಮೊರಾರ್ಜಿ ಶಾಲೆಯ ಪ್ರಾಂಶುಪಾಲರನ್ನು ವಿಚಾರಿಸಲಾಗಿ ಇಲ್ಲಿಗೆ ನಿಮ್ಮ ಮಗ ಬಂದಿಲ್ಲ ಎಂದು ಹೇಳಿರುತ್ತಾರೆ. ಎಂದು ನಾಪತ್ತೆಯಾಗಿರುವ  ಬಾಲಕನ  ತಾಯಿ  ಲಕ್ಷ್ಮಿ ಕೋಂ ಲೇಟ್ ರಾಘವೇಂದ್ರ ಸಾಲಿಗ್ರಾಮ ಠಾಣೆಯಲ್ಲಿ ದೂರು ನೀಡಿದ್ದು, ಕೇಸು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈ ಗೊಂಡು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆದರೆ ನಾಪತ್ತೆ ಯಾಗಿರುವ ಬಾಲಕ ಯಾವ ಸ್ಥಿತಿ ಯಲ್ಲಿ ಇದ್ದಾನೆ ಎಂದು ತನಿಖೆಯಿಂದ ಗೊತ್ತಾಗಬೇಕಾಗಿದೆ.

ಪ್ರೀತಮ್ ಗೌಡ 14 ವರ್ಷ, ಕೋಲು ಮುಖ, ಸಾಧಾರಣ ಮೈ ಕಟ್ಟು, ಬಿಳಿ ಮೈ, ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ಜೊತೆಗೆ ಸ್ಕೂಲ್ ಬ್ಯಾಗ್ ಇದ್ದು, ಕತ್ತಿನ ಮುಂಭಾಗ ಕಪ್ಪು ಕಾರಳ್ಳು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾನೆ ಎಂದು ನಾಪತ್ತೆ ಯಾಗಿರುವ ಬಾಲಕನ ತಾಯಿ  ಚಹರೆಯನ್ನು ದೂರಿನಲ್ಲಿ ನೀಡಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು : ಹಲವು ಕ್ರೀಡೆಗಳ ಜೊತೆಗೆ ಕುಸ್ತಿ ಪಂದ್ಯಾವಳಿಗಳಿಗೆ ಹೆಸರುವಾಸಿಯಾಗಿದೆ ಶಾಸಕ ದರ್ಶನ್ ತಿಳಿಸಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಪುರುಷರು ಮತ್ತು ಮಹಿಳೆಯರ ಹೊನಲು -ಬೆಳಕಿನ ಎರಡು ದಿನಗಳ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿ ಕುಸ್ತಿ ಪಂದ್ಯಾವಳಿ ಆ ಯೋಜನೆ ಮಾಡುವಂತೆ ಕಳೆದ ಎರಡು ವರ್ಷಗಳಿಂದ ಹೇಳುತ್ತಿದ್ದರು. ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಂದ್ಯಾವಳಿ ಅನುಕೂಲವಾಗಿದೆ. ನಾನು ಕೂಡ ಕ್ರೀಡಾಭಿಮಾನಿಯಾಗಿ ಪ್ರೋತ್ಸಾಹ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಉರಿಲಿಂಗ ಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ಕುಸ್ತಿ ಪಂದ್ಯಾವಳಿ ಒಂದು ಜನಪದ ಶೈಲಿ ಕ್ರೀಡೆಯಾಗಿದೆ. ಇಂತಹ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ವರ್ಷ ಇಂತಹ ಕ್ರೀಡೆಗಳು ನಡೆಯಬೇಕು. ದಿ. ಧ್ರುವ ನಾರಾಯಣ್ ರವರಂತೆ ದರ್ಶನ್ ಕೂಡ ಇಂತಹ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮೈಸೂರಿನ ಮಾಜಿ ಮಹಾಪೌರರಾದ ಪುರುಷೋತ್ತಮ್, ಕಳಲೆ ಕೇಶವಮೂರ್ತಿ, ರಾಂಬೊ ಕಿರಣ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತೊರೆಮಾವು ಟಿ .ಡಿ.ಗಿರೀಶ್, ಸುಂದರ್ ರಾಜ್, ರಾಜೇಶ್, ಪರಮೇಶ್, ಈಶ್ವರ್, ಕೃಷ್ಣಪ್ಪ, ಗಿರೀಶ್ ಹಾಜರಿದ್ದರು.

Continue Reading

Mysore

ಉದಯಗಿರಿಯ ನೂತನ ಪೊಲೀಸ್‌ ಠಾಣೆ ಉದ್ಘಾಟಿಸಿದ ಡಾ.ಜಿ.ಪರಮೇಶ್ವರ್

Published

on

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ವ್ಯಾಪ್ತಿ ದೊಡ್ಡದಾಗಿದ್ದು, ಠಾಣೆಯನ್ನು ಎರಡು ವಿಭಾಗ ಮಾಡಿ ಹೊಸ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ನಗರದ ಸಿದ್ದಾರ್ಥನಗರದಲ್ಲಿ ನಿರ್ಮಿಸಿರುವ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ಇರುವ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಪೊಲೀಸ್ ಠಾಣೆಯ ವ್ಯಾಪ್ತಿಯನ್ನು ವಿಭಾಗಿಸಿ ಹೊಸ ಪೊಲೀಸ್ ಠಾಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಪ್ರತಿಯೊಂದು ಪೊಲೀಸ್ ಠಾಣೆಯೂ ದೇವಸ್ಥಾನ ಎಂದು ನಾವು ತಿಳಿದುಕೊಳ್ಳಬೇಕು. ಜನ ಸ್ನೇಹಿಯಾಗಿ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ದೇಶದಲ್ಲೇ ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮವು ಯಶಸ್ವಿಯಾಗಿದ್ದು, ರಾಜ್ಯವು 3ನೇ ಸ್ಥಾನವನ್ನು ಪಡೆದುಕೊಂಡಿದೆ ಎಂದರು.


ಸುರಕ್ಷತೆ ಹೆಚ್ಚಲಿ: ಮೈಸೂರು ಪಾರಂಪರಿಕತೆ ಹಾಗೂ ಇತಿಹಾಸಕ್ಕೆ ಹೆಸರುವಾಸಿಯಾಗಿದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸಿ ಪ್ರವಾಸಿಗರು ಇನ್ನು ಹೆಚ್ಚು ಬೇಟಿ ನೀಡುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು, ಸಾರ್ವಜನಿಕರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯ ಲಕ್ಷಿö್ಮಪುರಂ ಠಾಣೆ ವ್ಯಾಪ್ತಿಯ ವಿಸ್ತೀರ್ಣ ದೊಡ್ಡದಾಗಿದೆ. ಹೀಗಾಗಿ ಕುವೆಂಪು ನಗರ ಭಾಗಕ್ಕೆ ಒಂದು ಸಂಚಾರ ಪೊಲೀಸ್ ಠಾಣೆಯನ್ನು ನಿರ್ಮಿಸಿಕೊಡಬೇಕು. ಇಂದು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಬೇಕು ಎಂದು ಹೇಳಿದರು.


ಶಾಸಕ ತನ್ವೀರ್ ಸೇಠ್ ಮಾತನಾಡಿ, ಇಂದು ವ್ಯಸನ ಮುಕ್ತದ ಜತೆಗೆ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.

ಶಾಸಕ ಅನಿಲ್ ಕುಮಾರ್ ಮಾತನಾಡಿ, ಎಚ್‍.ಡಿ.ಕೋಟೆ ತಾಲೂಕಿಗೂ ಹೆಚ್ಚಿನ ಪೊಲೀಸ್ ಠಾಣೆಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.


ವಿಧಾನ ಪರಿಷತ್ತು ಸದಸ್ಯ ಸಿ.ಎನ್. ಮಂಜೇಗೌಡ, ಮೈಲ್ಯಾಕ್ ಅಧ್ಯಕ್ಷ ಎಚ್.ಡಿ.ಗಣೇಶ್, ದಕ್ಷಿಣ ವಲಯ ಮಹಾನಿರೀಕ್ಷಕ ಡಾ.ಬೋರಲಿಂಗಯ್ಯ ಎಂ.ಬಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿಪಿ ಕೆ.ಎಸ್.ಸುಂದರ್ ರಾಜ್ ಉಪಸ್ಥಿತರಿದ್ದರು.

 

Continue Reading

Mysore

ವಿದ್ಯಾರ್ಥಿಗಳು ನಿಶ್ಚಲ ಗುರಿಯೊಂದಿಗೆ ಸಾಗಿದರೆ ಸಾಧನೆ ಸಾಧ್ಯವಾಗುತ್ತದೆ: ಟಿ.ಜಿ.ಸುರೇಶ್‌ ಆಚಾರ್‌

Published

on

ತಿ.ನರಸೀಪುರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಧನೆ ಮಾಡಬೇಕಿದ್ದಲ್ಲಿ ಸಮಯ, ಪರಿಸ್ಥಿತಿ ಮತ್ತು ಪ್ರಭಾವಕ್ಕೆ ತಕ್ಕಂತೆ ತಮ್ಮ ಗುರಿಯನ್ನು ಬದಲಾಯಿಸದೆ ನಿಶ್ಚಲ ಗುರಿಯೊಂದಿಗೆ ಸಾಗಿದರೆ ಸಾಧನೆ ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಟಿ.ಜಿ.ಸುರೇಶ್ ಆಚಾರ್ ತಿಳಿಸಿದರು.

ಪಟ್ಟಣದ ಗುರುಭವನದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಸೈನಿಕ,ರಾಜಕಾರಣಿ,ಶಿಕ್ಷಕ,ವೈದ್ಯ, ಐಪಿಎಸ್ ಕೊನೆಪಕ್ಷ ರೈತನಾಗಬೇಕಾದರೂ ತಮ್ಮ ಜೀವನದಲ್ಲಿ ಕಟ್ಟುನಿಟ್ಟಾದ ಶಿಸ್ತನ್ನು ಪರಿಪಾಲನೆ ಮಾಡಬೇಕು. ಜತೆಗೆ ಏಕಾಗ್ರತೆ, ಸಂಯಮ, ನಿರಂತರ ಕಲಿಕೆ, ಅಭ್ಯಾಸ ಮತ್ತು ಅಚಲ ಗುರಿಯನ್ನು ಪಾಲನೆ ಮಾಡಿದರೆ ಯಶಸ್ಸು ಕಾಣಬಹುದು ಎಂದು ಹೇಳಿದರು.

ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಮಯ, ಸಂದರ್ಭ ಮತ್ತು ಪ್ರಭಾವಕ್ಕೆ ತಕ್ಕಂತೆ ಗುರಿಯನ್ನು ಬದಲಾವಣೆ ಮಾಡಿಕೊಳ್ಳುತ್ತಿರುವುದರಿಂದ ಯಶಸ್ಸು ಕಾಣುವುದರಲ್ಲಿ ಹಿನ್ನೆಡೆಯಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ದೆಸೆಯಿಂದಲೇ ತಮ್ಮ ಗುರಿಯನ್ನು ನಿಗದಿ ಮಾಡಿಕೊಳ್ಳಬೇಕು.ಕಠಿಣ ಪರಿಶ್ರಮ, ನಿರಂತರ ಪ್ರಯತ್ನದಿಂದ ಸಾಧನೆ ಮಾಡಬಹುದು ಎಂದರು.

ಸಿಡಿಪಿಒ ಗೋವಿಂದರಾಜು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಾವು ಏನು ಮಾಡಬೇಕು ಅನ್ನುವುದಕ್ಕಿಂತ ಏನನ್ನು ಮಾಡಬಾರದು ಎಂಬುದಷ್ಟೇ ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳು ಅಭ್ಯಾಸಕ್ಕೆ ನಿರ್ದಿಷ್ಟ ಸಮಯ ನಿಗದಿ ಪಡಿಸಿಕೊಳ್ಳಬೇಕು. ಆ ಸಮಯವನ್ನು ಅಭ್ಯಾಸಕ್ಕೆ ಮಾತ್ರ ಮೀಸಲಿರಿಸಬೇಕು ಎಂದು ಸಲಹೆ ನೀಡಿದರು.

ಇಂದಿನ ಯುವ ಸಮೂಹ ಮೊಬೈಲ್ ಗೀಳಿಗೆ ಬಿದ್ದು ಸಮಾಜ ಸ್ವಾಸ್ತ್ಯ ಮತ್ತು ವೈಯುಕ್ತಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆಧುನಿಕ ಕಾಲಘಟ್ಟದಲ್ಲಿ ಸೌಲಭ್ಯಗಳ ವಿಪುಲವಾಗಿವೆ. ಯುವ ಸಮೂಹ ಸೌಲಭ್ಯಗಳ ಸದ್ಬಳಕೆಯಲ್ಲಿ ಸೋತಿದೆ. ಇಂದಿನ ಶಿಕ್ಷಣ ಪದ್ದತಿ ಉತ್ತಮ ಫಲಿತಾoಶ ನೀಡುತ್ತಿದೆ. ಆದರೆ, ಯುವ ಜನಾಂಗ ಶಿಕ್ಷಣದ ಜತೆಗೆ ಸ್ಪರ್ಧಾತ್ಮಕ ಮನೋವೃತ್ತಿಯನ್ನು ರೂಢಿಸಿಕೊಳ್ಳುವುದರಲ್ಲಿ ಹಿಂದೆ ಬೀಳುವ ಮುಖೇನ ಸಾಧನೆ ಮಾಡುವಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ ಎಂದರು.


ಕಾರ್ಯಕ್ರಮದಲ್ಲಿ ತಾಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಕೆ. ರಂಗಸ್ವಾಮಿ, ಬಿಇಒ ಶಿವಮೂರ್ತಿ, ಬಿ ಆರ್ ಸಿ ನಾಗೇಶ್,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜಣ್ಣ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕಿ ಶಾಂತ, ಹಿಂದುಳಿದ ವರ್ಗಗಳ ನಿಲಯ ಪಾಲಕಿ ವರಲಕ್ಷ್ಮಿ, ಸ್ಪರ್ಧಾತ್ಮಕ ಮತ್ತು ವೃತ್ತಿ ಮಾರ್ಗದರ್ಶನ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್, ಸಿರಿದೇವಿ, ಹಿಂದುಳಿದ ವರ್ಗಗಳ ನಿಲಯ ಮೇಲ್ವಿಚಾರಕರು, ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Trending

error: Content is protected !!