Connect with us

Mysore

ಚುಂಚನಕಟ್ಟೆ ಧನಗಳ  ಜಾತ್ರೆ  ಬಲು ಜೋರು : ಆಕರ್ಷಣೀಯ ವಾಗಿ  ಬಿಂಬಿಸುವ ಜಾನುವಾರು ಜಾತ್ರೆ,

Published

on

ಸುಗ್ಗಿಯ ನಂತರ ನಡೆಯುವ ದಕ್ಷಿಣ ಭಾರತದ ಮೊದಲ ಜಾತ್ರೆ, ಎಂದೇ ಹೆಸರು ಪಡೆದಿರುವ   ಜಾತ್ರೆಯಲ್ಲಿ  ಕಣ್ತುಂಬಿ ಕೊಳ್ಳಲು ಜನ ಸಾಗರವೇ ಹರಿದು ಬರುತ್ತಿದೆ. ಕೃಷಿಯಂತ್ರೋ ಪಕರಣಗಳು ಬಂದರು ರೈತರ ಅಭಿಮಾನ ಮತ್ತು ಪ್ರೀತಿಗೆ ಸಾಕ್ಷಿ ಯಾಗಿರುವ ಜೋಡೆತ್ತುಗಳು,ಇಲ್ಲಿ ಎಲ್ಲಿ ನೋಡಿದರೂ ದೇಶಿ ತಳಿಯ ಗೋಸಂಪತ್ತಿನ ದರ್ಬಾರ್, ಶ್ರೀಮಂತ ರೈತರ ವೈಭೋಗಕ್ಕೆ ರಾಸುಗಳಿಗೆ ಶೃಂಗಾರಗೊಂಡ ಚಪ್ಪರ, ಜಾನುವಾರುಗಳನ್ನು ಕೊಳ್ಳುವ ಮಾರಾಟ ಮಾಡುವ ಭರ್ಜರಿ ಭರಾಟೆ, ಜಾತ್ರೆ ನೋಡಲು ಹರಿದು ಬರುತ್ತಿರುವ ಜನಸಾಗರ,
ಮೈಸೂರು ಜಿಲ್ಲೆಯ ಭತ್ತದ ಕಣಜ ಎಂದೇ ಹೆಸರು ಪಡೆದಿರುವ ಸಾಲಿಗ್ರಾಮ ತಾಲೂಕು ಚುಂಚನಕಟ್ಟೆಯಲ್ಲಿ ಕಂಡು ಬರುತ್ತಿರುವ ಗ್ರಾಮೀಣ ಸಂಸ್ಕೃತಿ, ಸೊಗಡು ಬಿಂಬಿಸುವ ಜಾನುವಾರು ಜಾತ್ರೆಯ ದೃಶ್ಯ ವೈಭವಗಳು.
ಕಳೆದ ಬಾರಿ ಚರ್ಮ ಗಂಟು ರೋಗದ ಹಿನ್ನಲೆಯಲ್ಲಿ ರದ್ದು ಗೊಂಡಿದ್ದ ಈ ಜಾನುವಾರು ಜಾತ್ರೆ ಈ ಬಾರಿ  ಭರ್ಜರಿಯಾಗಿ ಆರಂಭಗೊಂಡಿರುವ ಚುಂಚನಕಟ್ಟೆ ಜಾನುವಾರು ಜಾತ್ರೆಯಲ್ಲಿ ಸಿಂಗಾರಗೊಂಡ ಜಾನುವಾರುಗಳ ಮೇಳ ಕಿ.ಮೀ. ಗಟ್ಟಲೆ ಕಂಡು ಬರುತ್ತಿದ್ದು, ಸುಗ್ಗಿಯ ದಣಿವನ್ನು ತಣಿಸಿಕೊಳ್ಳಲು ರೈತರು ಜಾನುವಾರು ಜಾತ್ರೆಯತ್ತ ಮುಗಿ ಬೀಳುತ್ತಿದ್ದು 50 ಸಾವಿರ ರೂ.ಗಳಿಂದ ಆರಂಭಿಸಿ 5 ಲಕ್ಷಕ್ಕೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಜಾತ್ರೆಯಲ್ಲಿ ಜನಾ ಕರ್ಷಣೆಯ ಕೇಂದ್ರಬಿಂದುವಾಗಿವೆ.
ಸುಗ್ಗಿಯ ನಂತರ ನಡೆಯವ ಮತ್ತು ದಕ್ಷಿಣ ಭಾರತದಲ್ಲಿ ಅತ್ಯಂತ ಹೆಸರುವಾಸಿಯಾದ ಚುಂಚನಕಟ್ಟೆ ಜಾತ್ರೆಯಲ್ಲಿ ಈಗ ಮೈಸೂರು ಜಿಲ್ಲೆ ಮಾತ್ರವಲ್ಲದೇ ಮಂಡ್ಯ, ಹಾಸನ, ಚಿಕ್ಕಮಂಗಳೂರು, ಹುಬ್ಬಳ್ಳಿ, ಧಾರವಾಡ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ,  ತುಮಕೂರು, ಕೋಲಾರ ಸೇರಿದಂತೆ ಇನ್ನಿತರ ಜಿಲ್ಲೆಗಳ ರೈತರು ಪ್ರತಿಷ್ಠೆಗೆ ಬಿದ್ದವರಂತೆ ಜಾನುವಾರು ಗಳನ್ನು ಇಲ್ಲಿಗೆ ವಾದ್ಯಗೋಷ್ಠಿಯ ಮೂಲಕ ಕರೆತರುತ್ತಿರುವುದು ನೋಡಲು ಎರಡು ಕಣ್ಣು ಸಾಲದಾಗಿದೆ.

ಚುಂಚನಕಟ್ಟೆಯಲ್ಲಿ 5 ಲಕ್ಷ ಬೆಲೆಬಾಳುವ ಹೊಸೂರು ಗ್ರಾಮದ ವಸಂತ್ ಅವರ ರಾಸುಗಳು
ಚುಂಚನಕಟ್ಟೆಯ ಜಾನುವಾರು ಜಾತ್ರೆ ಯಲ್ಲಿ ಸದ್ಯ ಪಶುಸಂಗೋಪನೆ ಇಲಾಖೆಯ ಮಾಹಿತಿಯ ಪ್ರಕಾರ  ಸುಮಾರು 6 ರಿಂದ 7 ಸಾವಿರಕ್ಕೂ ಅಧಿಕ ಎತ್ತುಗಳು ಬಂದಿದ್ದು,  ರೈತರು ತಮ್ಮ ರಾಸುಗಳ ಮೇಲಿರುವ ಪ್ರತಿಷ್ಠೆಯನ್ನು  ಹೆಚ್ಚಿಸಿಕೊಳ್ಳಲು ತಮ್ಮ ರಾಸುಗಳಿಗೆ ಬೃಹತ್ ಶಾಮಿಯಾನ, ವಿದ್ಯುತ್ ಅಲಂಕಾರಿಕ ಚಪ್ಪರಗಳನ್ನು ಹಾಕಿಸಿ ದೇಶಿ ತಳಿಯ ಗೋಸಂಪತ್ತಿನ ರಾಜ ದರ್ಬಾರ್ ನಡೆಸುತ್ತಿರುವುದು ಅಕರ್ಷಣೀಯವಾಗಿದೆ.
ಸದ್ಯ ರೈತರಿಗೆ ಕೃಷಿ ಯಂತ್ರೋಪಕರಣಗಳು ಹೆಜ್ಜೆ-ಹೆಜ್ಜೆಗೂ ಸಿಗುತ್ತಿದ್ದರು ಸಹ ರೈತರಿಗೆ ಮಾತ್ರ ಜೊಡೆತ್ತುಗಳ ಮೇಲೆ ಪ್ರೀತಿ ಕಮ್ಮಿಯಾಗುತ್ತಿಲ್ಲ ಇದರಿಂದಲೇ  ಚುಂಚನಕಟ್ಟೆ ಜಾತ್ರೆಯ ರಾಸುಗಳಿಗೆ ರಾಜ್ಯದಲ್ಲಿಯೇ ಉತ್ತಮ ಹೆಸರಿದ್ದು ಅಲ್ಲದೇ `ಗಂಡು  ರಾಸುಗಳ ಜಾತ್ರೆ’ ಎಂದೇ ಹೆಸರು ಪಡೆದಿರುವ ಈ ಜಾತ್ರೆಯ ವಿಶೇಷವೆಂದರೆ ಭಾಗಶಃ ಎತ್ತುಗಳೇ ಭಾಗವಹಿಸುವುದು ಮಾತ್ರ ವಲ್ಲದೇ ಬೀಜದ ಹೋರಿಗಳು ಮತ್ತು ಹೆಚ್ಚು ದುಡಿಮೆಗೆ ಒಗ್ಗುವ ಹಳ್ಳಿ ಕಾರ್ ತಳಿಯ ಎತ್ತುಗಳು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿವೆ.
ಚುಂಚನಕಟ್ಟೆಯು ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹೆಸರು ವಾಸಿಯಾಗಿದ್ದು, ಇಲ್ಲಿಗೆ ರಾಸುಗಳನ್ನು ಕೊಳ್ಳಲು ದೂರದ ಗದಗ, ಹುಬ್ಬಳ್ಳಿ, ಧಾರವಾಡ, ಕಲಬರುಗಿ, ವಿಜಯಪುರ ದಾವಣಗೆರೆ, ಶಿವಮೊಗ್ಗ ಸೇರಿ ದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಮತ್ತು ಆಂಧ್ರ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಇನ್ನಿತರ ಕಡೆ ಯಿಂದ ರೈತರು ಬರುತ್ತಿದ್ದು, ಇದು ಜಾತ್ರೆಯಲ್ಲಿ ಭಾಗವಹಿಸುವ ರೈತರಲ್ಲಿ ಕೋಟ್ಯಾಂತರ ರೂಗಳ ಉತ್ತಮ ವ್ಯವಹಾರದ ನಿರೀಕ್ಷೆಯಲ್ಲಿದ್ದಾರೆ.
ಈ ಬಾರಿ ಜಿಲ್ಲೆಯಲ್ಲಿ  ಉತ್ತಮ ಮಳೆ ಆಗದ ನಡುವೆಯು ರೈತರು ಮಾತ್ರ ರಾಸುಗಳ ಮೇಲೆ ಇಟ್ಟಿರುವ ಪ್ರೀತಿ‌ ಮಾತ್ರ ಕಡಿಮೆ ಆಗಿಲ್ಲ ರಾಸುಗಳನ್ನು ಕೊಳ್ಳುವುದು ಮತ್ತು ಮಾರುವುದರಲ್ಲೂ ಸಾಕಷ್ಟು ಲಾಭ ದೊರೆಯುವುದರಿಂದ ಮತ್ತು ಉತ್ತಮ ರಾಸುಗಳ ಕೊಳ್ಳುವಿಕೆಗೆ ಈ ಚುಂಚನಕಟ್ಟೆ ಜಾನುವಾರು   ಜಾತ್ರೆ ಉತ್ತಮ ವೇದಿಕೆಯಾಗುತ್ತಿದ್ದು ಇದರಿಂದಲೇ ರೈತರು ಮತ್ತು ದಲ್ಲಾಳಿಗಳು ಇತ್ತ ಮುಖಮಾಡಿ ಭರ್ಜರಿ‌ ಲಾಭಗಳಿಸುತ್ತಿರುವುದು ವಿಶೇಷವಾಗಿದೆ.
ಈಗಾಗಲೇ ಸಾವಿರಾರು ರೈತರು ತಮ್ಮ ಎತ್ತುಗಳನ್ನು ಜಾತ್ರಾ ಮಾಳಕ್ಕೆ ಕರೆತರುವಾಗ ಸಾವಿರಾರು ರೂ ಖರ್ಚು ಮಾಡಿ ನೂರಾರು ಮಂದಿಗೆ ಔತಣಕೂಟವನ್ನು ಏರ್ಪಡಿಸಿ ವಾದ್ಯ ಗೋಷ್ಠಿ ಮತ್ತು ಅದ್ಧೂರಿ ಮೆರವಣಿಗೆ ಮೂಲಕ ತಂದಿದ್ದು, ಜತಗೆ ನಿತ್ಯ ಹಾಲು, ರವೆ, ತುಪ್ಪ ಮತ್ತಿತರ ಪೌಷ್ಟಿಕಾಂಶಭರಿತ ‘ಮೃಷ್ಟಾನ್ನ ಭೋಜನ ಉಣಬಡಿಸುತ್ತಾ ತಮ್ಮ ರಾಸುಗಳ ಮೇಲಿರುವ ಕಾಳಜಿಯನ್ನು ತೋರುತ್ತಿರುವ ರೈತರ ಕಾಳಜಿ ನಿಜಕ್ಕು ರೈತರು ಜಾನು ವಾರುಗಳ ಮೇಲಿಟ್ಟಿರುವ ಪ್ರೀತಿಗೆ ಸಾಕ್ಷಿಯಾಗುತ್ತಿದೆ ಈ ಜಾತ್ರೆ
ಬೀಡು ಬಿಟ್ಟ ಪಶು ಇಲಾಖೆ
ಇನ್ನು ಜಾತ್ರೆಯಲ್ಲಿ ರಾಸುಗಳಿಗೆ ಯಾವುದೇ ರೋಗ ರುಜಿನಗಳು ಬಾರದಂತೆ‌ ಶಾಸಕ ಡಿ.ರವಿಶಂಕರ್ ಅವರ ಸೂಚನೆಯ ಮೇರಗೆ ಕೆ.ಆರ್.ನಗರ ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮಂಜುನಾಥ್ ಅವರ ನೇತೃತ್ವದಲ್ಲಿ ಪಶುವೈದ್ಯಾಧಿಕಾರಿಗಳಾದ ಕೆ.ಸಿ.ರಾಮು,ಸಂಜಯ್, ಸಂತೋಷ್, ಸುರೇಂದ್ರ  ಹರೀಶ್, ಡಾ. ಕೃಷ್ಣರಾವ್ ಡಾ. ಚಂದನ್, ಪ್ರಹ್ಲಾದ್,ಪ ಪಶುಪರಿಕ್ಷಕರಾದ ಕೃಷ್ಣಸ್ವಾಮಿ, ಚಿಕ್ಕೇಗೌಡ, ಸಿದ್ದರಾಜು, ರೇವಣ್ಣ, ಮದನ್,  ಸಿಬ್ಬಂದಿಗಳಾದ ಸೋಮಣ್ಣ, ಋಷಿಕುಮಾರ, ಮುಂತಾದವರು ಇಲ್ಲಿನ ಮಂಟದ ಬಾರೆಯಲ್ಲಿ  ಕೃತಕವಾಗಿ  ಪಶು ಚಿಕಿತ್ಸಾಲಯವನ್ನು ತೆರೆದು ಶ್ರಮಿಸುತ್ತಿರುವುದು ರೈತರ ಮೆಚ್ವುಗೆಗೆ ಪಾತ್ರವಾಗಿದೆ.

ರಾಸುಗಳ ಕ್ಯಾಟ್ ವಾಕ್ 
ಜಾತ್ರೆಯ ಮಾಳದಲ್ಲಿ ಅಲಕಾಂರಗೊಂಡ ರಾಸುಗಳನ್ನು ಕ್ಯಾಟ್ ವಾಕ್ ಮಾದರಿಯಲ್ಲಿ ರಸ್ತೆಗಳಲ್ಲಿ ನಡೆಸಿ ತಮ್ಮ ರಾಸುಗಳ ಬಗ್ಗೆ  ಖರೀದಿದಾರರನ್ನು ಆಕರ್ಷಿಸುವ ಪ್ರಯತ್ನ ಮಾಡುವ ರೈತರ ಪ್ರಯತ್ನ ಗಮನ ಸೆಳೆಯುತ್ತಿದೆ.
ಇದೀಗ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ಉತ್ತಮ ಆರಂಭ ದೊರೆಯುತ್ತಿದ್ದಂತೆಯೇ ಇಲ್ಲಿ ಹಾಕಲಾಗಿರುವ ಸಿಹಿ ತಿಂಡಿ, ಜ್ಯೂಸ್, ಪಾನಿಪುರಿ,ಗೋಬಿ, ನೊಗ, ಓನಕೆ, ಸೇರಿದಂತೆ ವಿವಿಧ ಬಗೆಯ ಆಟಿಕೆಗಳ ಅಂಗಡಿ ಮುಗ್ಗಟ್ಟು ಮತ್ತು  ವಿವಿಧ ಬಗೆಯ ಸಸ್ಯಹಾರಿ ಮತ್ತು ಮಾಂಸಹಾರಿ ಹೋಟೆಲ್‍ಗಳಿಗೆ ಭರ್ಜರಿ ವ್ಯಾಪಾರ ಶುರುವಾಗಿದ್ದು ಇದರಿಂದ ದೂರದ ಊರುಗಳಿಂದ ಬಂದ ಪ್ರವಾಸಿಗರು ಜಾತ್ರೆಯ ಸೊಬಗನ್ನು ಕಣ್ಣು ತುಂಬಿಕೊಳ್ಳುತ್ತಿದ್ದಾರೆ.
ಒಟ್ಟಿನಲ್ಲಿ ಇತ್ತೀಚಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಆಧುನಿಕ ಜೀವನ ಶೈಲಿಯಿಂದ ಮರೆಯಾಗುತ್ತಿರುವ ಗ್ರಾಮೀಣ ಪರಂಪರೆಯ ನಡುವೆಯೂ ಇಲ್ಲಿನ ಜಾನುವಾರು ಜಾತ್ರೆಯ ಸೊಬಗನ್ನು ಕಣ್ತುಂಬಿ ಕೊಳ್ಳಲು ಮತ್ತು ಶ್ರೀರಾಮದೇವರ ದೇವಾಲಯ, ಕಾವೇರಿ ನದಿಯ ಜಲಪಾತ, ಜಾತ್ರೆಯ ತಿಂಡಿತಿನಿಸುಗಳನ್ನು ಸವಿಯಲು ಇಲ್ಲಿಗೆ ನೀವೂ ಒಮ್ಮೆ ಬರಬೇಕು. ಅದಕ್ಕಾಗಿ ಕೈಬೀಸಿ ಕರೆಯುತ್ತಿದೆ ಚುಂಚನಕಟ್ಟೆ ಜಾನುವಾರು ಜಾತ್ರೆ.

ಉತ್ತಮ ರಾಸುಗಳಿಗಾಗಿ ಈ ಜಾತ್ರೆಗೆ ಬರುತ್ತೇವೆ 
ಚುಂಚನಕಟ್ಟೆ ಜಾನುವಾರು ಜಾತ್ರೆಯಲ್ಲಿ ಭೂಮಿ ಉಳುಮೆ ಮಾಡಲು ಹೆಸರು ಪಡೆದಿರುವ ಹಳ್ಳಿಕಾರ್ ತಳಿಯ ರಾಸುಗಳು ಸಿಗುವುದರಿಂದ ಇಲ್ಲಿ 4 ಜೊತೆ ರಾಸುಗಳನ್ನು ಕೊಳ್ಳಲು ಇಲ್ಲಿಗೆ ಆಗಮಿಸಿದ್ದೇವೆ ಜತಗೆ ಈ ಜಾತ್ರೆಯ ನೋಡಿ ಕಣ್ಣು ತುಂಬಿ ಕೊಳ್ಳುವುದೇ ಒಂದು ಸೌಭಾಗ್ಯವಾಗಿದ್ದು ಜಾತ್ರೆಯ ಬಗ್ಗೆ ಹೆಚ್ಚು ಪ್ರಚಾರದ ಅವಶ್ಯಕತೆ ಇದೆ

ಪ್ರದೀಪ್ ಕಿಲ್ಲದ,  ಧಾರವಾಡದ ಯುವ ರೈತ

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ 

Continue Reading
Click to comment

Leave a Reply

Your email address will not be published. Required fields are marked *

Mysore

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣ ತುರ್ತು ಕ್ರಮಕ್ಕೆ ಡಿಸಿ ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

Published

on

ಮೈಸೂರು: ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ.ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಪಡುವಾರಳ್ಳಿಯಲ್ಲಿರುವ ಬಾಬು ಜಗಜೀವನ ರಾಮ್ ಭವನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ‌ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿಯು ಸದಸ್ಯರನ್ನು ಠಾಣೆ ವ್ಯಾಪ್ತಿಯ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ನಗರದಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ದೂರುಗಳು ಬಂದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ರೀತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.

Continue Reading

Mysore

ಫುಟ್‌ಪಾತ್‌ ವ್ಯಾಪಾರಿಗಳ ತೆರವುಗೊಳಿಸಿ ಇಲ್ಲವೆ ಅವರಿಗೆ ಸೂಕ್ತ ಸ್ಥಳ ನಿಗಧಿಪಡಿಸಿ

Published

on

ಮೈಸೂರು: ಹೋಟೆಲ್ ಉದ್ಯಮಕ್ಕೆ ತಲೆ ನೋವಾಗಿರುವ ಫುಟ್‌ ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಬೇಕು. ಇಲ್ಲವೆ ಅವರಿಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು ಎಂದು ಮೈಸೂರು ಹೋಟೆಲ್ ಮಾಲೀಕರು, ಪಾಲಿಕೆ ಆರೋಗ್ಯಾಧಿಕಾರಿಗಳನ್ನು ಒತ್ತಾಯಿಸಿದರು.

ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರು ವಾರ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಆಹಾರ ಸುರಕ್ಷಣಾ ಅಧಿಕಾರಿ ಡಾ.ಎಸ್.ಎಲ್.ರವೀಂದ್ರ ಅವರೊಂದಿಗೆ ನಡೆದ ಆಹಾರ ಸುರಕ್ಷತೆ ಹಾಗೂ ಉದ್ದಮ ನವೀಕರಣ ಕುರಿತ ಸಂವಾದ ಕಾರ್ಯಕ್ರಮ ದಲ್ಲಿ ಫುಟ್‌ಪಾತ್ ವ್ಯಾಪಾರವೆಂಬುದು ದೊಡ್ಡ ಮಾಫಿಯಾ ಆಗಿ ಬೆಳೆದಿದೆ. ಪಾಲಿಕೆ ಅಧಿಕಾರಿಗಳು ಫುಟ್ ಪಾತ್ ವ್ಯಾಪಾರಿಗಳನ್ನು ಟಚ್ ಮಾಡಲು ಸಾಧ್ಯವಿಲ್ಲ. ಫುಟ್‌ಪಾತ್ ವ್ಯಾಪಾರಿಗಳಿಂದ ಸರ್ಕಾರಕ್ಕೆ ಲಕ್ಷ ಲಕ್ಷ ತೆರಿಗೆ ಕಟ್ಟುವ ಹೋಟೆಲ್ ಉದ್ಯಮ ನಷ್ಟದತ್ತ ಸಾಗುವಂತಾಗಿದೆ ಆದ್ದರಿಂದ ಕೂಡಲೇ ಎಲ್ಲೆಂದರಲ್ಲಿ ವ್ಯಾಪಾರ ನಡೆಸುವ ಫುಟ್ ಪಾತ್ ವ್ಯಾಪಾರಿ ಗಳನ್ನು ತೆರವುಗೊಳಿಸಿ, ಇಲ್ಲವೆ ಅವರಿಗೆ ಸೂಕ್ತ ಸ್ಥಳ ನೀಡಿ ಎಂದು ಮನವಿ ಮಾಡಲಾಯಿತು.

ಹೋಟೆಲ್ ಮಾಲೀಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಫುಟ್ ಪಾತ್ ವ್ಯಾಪಾರಿಗಳ ಸರ್ವೆ ಕಾರ್ಯ ನಡೆಯುತ್ತಿದೆ. ಸ್ವಚ್ಛ ಸರ್ವೇಕ್ಷಣೆ ಮುಗಿದ ಕೂಡಲೇ ಪರವಾನಗಿ ಇಲ್ಲದ ಫುತ್ ಪಾತ್ ವ್ಯಾಪಾರಿ ಗಳನ್ನು ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸುವ ಹಾಗೂ ಅವರಿಗೆ ಸೂಕ್ತಸ್ಥಳ ಸೂಚಿಸುವ ಅಭಿಯಾನ ನಡೆಸಲಾ ಗುವುದು ಎಂದು ಭರವಸೆ ನೀಡಿದರು.

ಹಾಗೆಯೇ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ. ಸಾಧ್ಯವಾದಷ್ಟು ನಿಮ್ಮ ಹೋಟೆಲ್ ಲೋಗೋ ಇರುವ ಬಟ್ಟೆ ಬ್ಯಾಗ್‌ ಗಳನ್ನು ಬಳಸಿ, ಸಾಕಾಣಿಕೆ ದಾರರಿಗೆ ಹಾಗೂ ಪೌರಕಾರ್ಮಿಕರಿಗೆ ನೀಡುವ ಆಹಾರ ತ್ಯಾಜ್ಯವನ್ನು ಪ್ಲಾಸ್ಟಿಕ್ ನಿಂದ ಬೇರ್ಪಡಿಸಿ ನೀಡಿ. ಎಲ್ಲೆಂದರಲ್ಲಿ ಆಹಾರ ತ್ಯಾಜ್ಯ ಹಾಗೂ ಪ್ಲಾಸ್ಟಿಕ್ ಬಿಸಾಡಿದ್ದರೆ ಕೂಡಲೇ ಮಾಹಿತಿ ನೀಡಿ. ಮುಂದಿನ ತಿಂಗಳು ಉದ್ಯಮ ಪರವಾನಗಿ ನವೀಕರಣ ಇನ್ನಿತರೆ ಲೈಸೆನ್ಸ್‌ಗಳ ಅಭಿಯಾನವನ್ನು ನಡೆಸಲಿದ್ದು, ಹೋಟೆಲ್ ಮಾಲೀಕರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಶುಚಿತ್ವ ಕಾಪಾಡಿ: ಆಹಾರ ಸುರಕ್ಷತಾ ಅಧಿಕಾರಿ ಡಾ.ಎಸ್.ಎಲ್.ರವೀಂದ್ರ ಮಾತನಾಡಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡು ವುದರ ಜೊತೆಗೆ ಆಹಾರ ಪದಾರ್ಥ ಗಳನ್ನು ಕಡ್ಡಾಯವಾಗಿ ತೊಳೆದು ಬಳಸ ಬೇಕು. ಅದರಲ್ಲೂ ಮುಖ್ಯವಾಗಿ ಅಡುಗೆ ತಯಾರಕರು ಕೈ ತೊಳೆದು, ಆಹಾರ ಪದಾರ್ಥಗಳನ್ನು ಕಟ್ ಮಾಡಬೇಕು. ಕಟಿಂಗ್ ನಂತರವೂ ಕೈ ತೊಳೆಯಬೇಕು. ಆಹಾರಕ್ಕೆ ತಲೆ ಕೂದಲೂ ಬೀಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೆಯೇ ಆಹಾರ ಭದ್ರತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕು. ಪರವಾನಗಿಗಳು ಗ್ರಾಹಕರಿಗೆ ಕಾಣುವಂತೆ ಇರಿಸಬೇಕು ಎಂದು ಸಲಹೆ ನೀಡಿದರು. ಹಾಗೆಯೇ ಆನ್‌ಲೈನ್ ಮೂಲಕ ಉದ್ಯಮ ಪರವಾನಗಿ, ತೆರಿಗೆ ಕುರಿತು ಮಾಹಿತಿ ನೀಡ ಲಾಯಿತು. ಮೈಸೂರು ಹೋಟೆಲ್ ಮಾಲೀ
ಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಕಾರ್ಯದರ್ಶಿ ಎ.ಆರ್.ರವೀಂದ್ರ ಭಟ್, ಹೋಟೆಲ್‌ ಮಾಲೀಕರ ಸಂಘದ ಧರ್ಮದತ್ತಿ ಅಧ್ಯಕ್ಷ ರವಿಶಾಸ್ತ್ರಿ, ಉಪಾಧ್ಯಕ್ಷ ಸುರೇಶ್(ಉಗ್ರಯ್ಯ), ಕಾರ್ಯದರ್ಶಿ ಸುಬ್ರಹ್ಮಣ್ಯ ತಂತ್ರಿ, ಪತ್ತಿನ ಸಹಕಾರ ಸಂಘದ ಅದ್ಯಕ್ಷ ನಾರಾಯಣಹೆಗಡೆ ಮತ್ತಿತರರಿದ್ದರು.

Continue Reading

Mysore

ಮುಂದಿನ‌ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅನ್ನೊದು ಅವರಿಗೆ ಗೊತ್ತಾಗಿದೆ – ಛಲವಾದಿ ನಾರಾಯಣಸ್ವಾಮಿ

Published

on

ಮೈಸೂರು:

ಮೈಸೂರಿನಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ.
ಅಧಿಕಾರಕ್ಕೆ ಬಂದ ತಕ್ಷಣ ಪೆಟ್ರೋಲ್ ಡೀಸೆಲ್, ಹಾಲು, ವಿದ್ಯುತ್ ಸೇರಿದಂತೆ ಎಲ್ಲಾ ವಸ್ತುಗಳು ಏರಕೆಯಾಗಿದೆ.
ಹಾಲಿನ ದರ ಮೂರು ಬಾರಿ ಏರಿಕೆಯಾಗಿದೆ.
ವಿದ್ಯುತ್ ನಾಲ್ಕು ಬಾರಿ ಏರಿಕೆಯಾಗುತ್ತಿದೆ.
ಗ್ಯಾರಂಟಿಯ ಹಣವನ್ನ ಮೂರು ತಿಂಗಳಿಗೆ ಒಂದು ಬಾರಿ ಕೊಡುತ್ತಿದ್ದಾರೆ.
5 ಗ್ಯಾರೆಂಟಿ ಹೆಸರು ಹೇಳಿಕೊಂಡು 5 ವರ್ಷ ಕಳೆಯುತ್ತಾರೆ.
ಮುಂದಿನ‌ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅನ್ನೊದು ಅವರಿಗೆ ಗೊತ್ತಾಗಿದೆ.
ಪರಿಶಿಷ್ಟ ವರ್ಗದ ಜನರಿಗೆ ಗ್ಯಾರೆಂಟಿ ಸಿಗುತ್ತಿಲ್ಲ.
40 ಸಾವಿರ ಕೋಟಿ ರೂಪಾಯಿ ಮೂರು ಬಜೆಟ್ ಗೆ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಇಷ್ಟೊಂದು ಕನಿಷ್ಟ ಅಂದುಕೊಂಡಿರಲಿಲ್ಲ.
ಕನಿಷ್ಟ ಅನಿಷ್ಟವಾಗಿದೆ.
ಕಳೆದ 5 ವರ್ಷಗಳಲ್ಲಿ ಸಾಕಷ್ಟು ತಪ್ಪುಗಳಾಗಿತ್ತು.
ಅದನ್ನ ತಿದ್ದಿಕೊಂಡು ಒಳ್ಳೆಯ ಅಧಿಕಾರ ಕೊಡಬಹುದಿತ್ತು.
ಕರ್ನಾಟಕದಲ್ಲಿ ಹಣ ಮಾಡಿ ದೇಶದಲ್ಲಿ ಕಾಂಗ್ರೆಸ್ ಕಾಪಾಡಬೇಕಾದ ಪರಿಸ್ಥಿತಿ ಬಂದಿದೆ.

ಮೈಸೂರು:

ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆಯಾಗಬೇಕು.

ಹನಿಟ್ರ್ಯಾಪ್ ಎಂದರೇನು ಎಂದು ಜನ ತಲೆ ಕೆಡಿಸಿಕೊಂಡಿದ್ದಾರೆ.

ರಾಜೇಂದ್ರ ರಾಜಣ್ಣ ಹೊಸ ವಿಚಾರ ತೆಗೆದಿದ್ದಾರೆ.

ನನ್ನ ಮೇಲೆ ಕೊಲೆಗೆ ಯತ್ನ ನಡೆದಿದೆ ಎಂದು ಹೇಳಿದ್ದಾರೆ.

ದೇಶದ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ.

ಡಿ.ಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಡಿಸಿಎಂ ಸ್ಥಾನದಲ್ಲಿ ಮುಂದುವರೆಯ ಬಾರದು
ತಕ್ಷಣ ರಾಜೀನಾಮೆ ನೀಡಬೇಕು.

ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ್ ಅವರನ್ನು ಉಚ್ಚಾಟನೆ ಮಾಡಲಿ.

ಸಿಎಂ ಕೈಯಲ್ಲಿ ಡಿಸಿಎಂ ಅವರನ್ನು ಉಚ್ಚಾಟನೆ ಮಾಡಲು ಸಾಧ್ಯವಿಲ್ಲದಿದ್ದರೆ ಶಿವಕುಮಾರ್ ಗೆ ಸಿಎಂ ಸ್ಥಾನ ಕೊಟ್ಟು ಬಿಡಲಿ.

ಮೈಸೂರು:

ಬಿಜೆಪಿಯಿಂದ ಉಚ್ಚಾಟನೆಯಾಗ್ತಾರಾ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್.

ಮಹತ್ವದ ಸುಳಿವು ನೀಡಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ.
ಹೈಕಮಾಂಡ್ ಟೆಸ್ಟ್ ಆಟ ಬಿಟ್ಟಿದೆ.

ನೆಕ್ಷ್ಟ್ ಏನಿದ್ರು ಟಿ ಟ್ವೆಂಟ್ ಮ್ಯಾಚ್ ಆಡುತ್ತೆ.

ನೆಕ್ಷ್ಟ್ ವಿಕೆಟ್ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್.

ಮೈಸೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹೇಳಿಕೆ.

ಮೈಸೂರು:

ರಾಜೇಂದ್ರ ರಾಜಣ್ಣ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಯಾರ ಕಿವಿಗೆ ಹೂ ಇಡುತ್ತಿದ್ದಾರೆ ಗೊತ್ತಿಲ್ಲ.

ಯತ್ನಾಳ್ ಉಚ್ಚಾಟನೆ ವಿಚಾರ.

ಯತ್ನಾಳ್ ನನಗೆ ಬಹಳ ಆತ್ಮೀಯರು.

ಮೈಕ್ ಮುಂದೆ ನಿಂತಾಗ ಮಾತನಾಡುಬಿಡುತ್ತಾರೆ.

ಪಕ್ಷವನ್ನೇ ಸಾಕಷ್ಟು ಬಾರಿ ಅವರಿಗೆ ತಪ್ಪು ತಿದ್ದುಕೊಳ್ಳಲು ಅವಕಾಶ ಕೊಟ್ಟಿತ್ತು.

ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.

ನಮ್ಮ ಪಕ್ಷ ಕಾರ್ಯಕರ್ತರಿಂದ ಉಳಿದಿದೆ ಹೊರತು ನಾಯಕರಿಂದಲ್ಲ.

ಈ ಪಕ್ಷ ಕಾರ್ಯಕರ್ತರ ಪಕ್ಷ.
ನಮ್ಮಲ್ಲಿ ಹುಲಿ ಯಾರು ಇಲ್ಲ.
ಹುಲಿ ಎಂದರೆ ಕಾಡಿಗೆ ಕಳುಹಿಸಿಬಿಡುತ್ತಾರೆ.

ಹೈಕಮಾಂಡ್ ನಿರ್ಧಾರವನ್ನ ಯಾರು ವಿರೋಧ ಮಾಡಬಾರದು.

ಯತ್ನಾಳ್ ಪರವಾಗಿ ನಾವಿದ್ದೇವೆ ಎಂದು ಯಾರ ಹೇಳಬಾರದು.

ಅಡ್ಜಸ್ಟಮೆಂಟ್ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕುತ್ತೆ.
ಮೈಸೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹೇಳಿಕೆ.

Continue Reading

Trending

error: Content is protected !!