Connect with us

Mandya

ಜಿಲ್ಲೆಯಲ್ಲಿ ಬಿಸಿ ತಾಪಮಾನದ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Published

on

ಮಂಡ್ಯ: ಜಿಲ್ಲೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದ್ದು
ತಾಪಮಾನದಲ್ಲಿ ಏರಿಕೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ವಿಪತ್ತು ಪ್ರಾಧಿಕಾರ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ತೀವ್ರ ಶಾಖದ ಅಲೆ /ಅತಿಯಾದ ಉಷ್ಣಾಂಶದಿoದಾಗಿ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತಿಯಾದ ಉಷ್ಣಾಂಶದಿoದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳನ್ನು ತಡೆಗಟ್ಟುವಿಕೆಯ ನಿಟ್ಟಿನಲ್ಲಿ ಸಾರ್ವಜನಿಕರು ಆರೋಗ್ಯ ಸಂರಕ್ಷಣಾ ಸಲಹೆಗಳನ್ನು ಪಾಲಿಸಬೇಕು ಎಂದರು.

ಹೆಚ್ಚು ನೀರು ಕುಡಿಯುವುದು: ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ಪ್ರಮಾಣದಲ್ಲಿ ಆಗಾಗ್ಗೆ ನೀರನ್ನು ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಪ್ರಮುಖ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಂದರ್ಭದಲ್ಲೂ ಕುಡಿಯಲು ನೀರನ್ನು ಜೊತೆಗೆ ತೆಗೆದುಕೊಂಡು ಹೋಗಬೇಕು. ಪುನರ್ಜಿಲೀಕರಣ ದ್ರಾವಣ ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ಲಿಂಬು ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಸೇವಿಸಬೇಕು. ಈ ಋತುವಿನಲ್ಲಿ ಸಿಗುವ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಮೂಸಂಬಿ, ದ್ರಾಕ್ಷಿ, ಅನಾನಸ್, ಸೌತೆಕಾಯಿ ಹಾಗೂ ಸ್ಥಳೀಯವಾಗಿ ಸಿಗುವ ಹಣ್ಣು ತರಕಾರಿಗಳನ್ನು ಸೇವಿಸಬೇಕು. ಎಳನೀರನ್ನು ಸೇವಿಸಬೇಕು ಎಂದರು.

ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಸಾರ್ವಜನಿಕವಾಗಿ ಕಲ್ಪಿಸಿರುವ ನೀರಿನ ವ್ಯವಸ್ಥೆ ಯ ಕಾರ್ಯನಿರ್ವಹಣೆಯನ್ನು ಖಾತ್ರಿ ಪಡಿಸಿಕೊಳ್ಳಿ ಎಂದರು.

ಬಿಸಿಲಿನ ಶಾಖದಿಂದ ಮಕ್ಕಳಲ್ಲೂ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದೂ, ಮೂರ್ಛೆ ಹೋಗುವುದು, ಸ್ನಾಯು ಸೆಳೆತ, ರೋಗ ಗ್ರಸ್ತವಾಗುವಿಕೆ, ಸಿಡುಕುತನ, ತಲೆ ನೋವು, ಹೆಚ್ಚಾಗಿ ಬೆವರುವುದು, ಬಲಹೀನತೆ, ತಲೆ ತಿರುಗುವಿಕೆ, ಗೊಂದಲಮಯ ರೀತಿಯಲ್ಲಿ ವರ್ತಿಸುವುದು, ಇನ್ನಿತರ ಲಕ್ಷಣಗಳು ಕಂಡುಬರುವ ಸಾಧ್ಯತೆ ಇರುತ್ತದೆ.ಇಂತಹ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆ ಪಡೆದು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದರು.

ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತ ಪಡಿಸಿಕೊಳ್ಳಿ.

ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿ ಎಂದರು.

ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು. ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸಬೇಕು.

ಬಿಸಿಲಿನ ಸಮಯದಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಾಹ್ನ 12.00 ರಿಂದ 4.00 ರವರೆಗೆ ಬಿಸಿಲಿಗೆ ಹೋಗುವುದನ್ನು ತಪ್ಪಿಸಬೇಕು. ಮಧ್ಯಾಹ್ನದ ಸಮಯದಲ್ಲಿ ಹೊರಾಂಗಣದಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪಾದರಕ್ಷೆಗಳನ್ನು ಧರಿಸದೇ ಹೊರಗಡೆ ಹೋಗಬಾರದು. ಉತ್ತಮ ಗಾಳಿ ಪ್ರಸಾರವಾಗಿ ತಂಪಾಗಿರುವoತೆ ಕಿಟಕಿ, ಬಾಗಿಲುಗಳನ್ನು ತೆರೆದಿಡಬೇಕು. ಮದ್ಯಪಾನ (ಆಲ್ಕೋಹಾಲ್), ಟೀ, ಕಾಫಿ ಮತ್ತು ಕಾರ್ಭೋನೇಟೆಡ್ ತಂಪು ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳನ್ನು ಸೇವಿಸುವುದನ್ನು ತಪ್ಪಿಸಬೇಕು. ಇವು ದೇಹವನ್ನು ನಿರ್ಜಲೀಕರಣ ಹಾಗೂ ಹೊಟ್ಟೆ ನೋವನ್ನು ಉಂಟು ಮಾಡುತ್ತವೆ ಎಂದರು

ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡಬೇಕು.

ಸಾಧ್ಯವಾದಷ್ಟು ಮಟ್ಟಿಗೆ ಸಭೆ/ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗ್ಗೆ ಅಥವಾ ಸಂಜೆ) ನಿಗದಿಪಡಿಸುವುದು ಉತ್ತಮ.

ತೀವ್ರ ಬಿಸಿಲಿನ ಹಿನ್ನೆಲೆ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅಪಘಾತ ಸಂಭವವಿಸುವ ಸಾಧ್ಯತೆಗಳಿದ್ದು, ಅವುಗಳ ಬಗ್ಗೆ ಎಚ್ಚರ ವಹಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ವ್ಯವಸ್ಥಿತವಾಗಿ ನಡೆಯಬೇಕು

ಜಿಲ್ಲೆಯಲ್ಲಿ ಅತಿಯಾದ ಬಿಸಿಲಿನ ತಾಪಮಾನ ಹಾಗೂ ಮಳೆ ಬಾರದೆ ಇರುವುದರಿಂದ ಕೆರೆಗಳೆಲ್ಲ ಬತ್ತಿ ಹೋಗಿವೆ. ಮುಂದಿನ ದಿನಗಳಲ್ಲಿ ಮಳೆಗಾಲ ಬರುವುದರಿಂದ ಮಳೆ ನೀರಿನ ಶೇಖರಣೆ ಮಾಡಲು ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ವ್ಯವಸ್ಥಿತವಾಗಿ ಹಾಗೂ ಶೀಘ್ರವಾಗಿ ನಡೆಯಬೇಕು ಎಂದರು.

ತಾಲ್ಲೂಕುವಾರು ತಹಶೀಲ್ದಾರ್ ಹಾಗೂ ತಾಲ್ಲೂ ಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಇದುವರೆಗೂ ಕೆರೆಗಳಲ್ಲಿ ಹೂಳೆತ್ತಿರುವ ಬಗ್ಗೆ ಹಾಗೂ ಈ ತಿಂಗಳಲ್ಲಿ ಹೂಳೆತ್ತುವ ಕೆರೆಗಳ ಬಗ್ಗೆ ಮಾಹಿತಿ ನೀಡಬೇಕು.

ನೀರು ಬತ್ತಿ ಹೋಗಿರುವ ಕೆರೆಗಳಲ್ಲಿ ರೈತರು ಅನಧಿಕೃತವಾಗಿ ಮಣ್ಣನ್ನು ಇತಿ- ಮಿತಿಯಿಲ್ಲದೇ ತೆಗೆಯುತ್ತಿದ್ದಾರೆ ಎಂದು ದೂರುಗಳು ಕೇಳಿ ಬರುತ್ತಿದೆ. ಮಣ್ಣು ಸಾಗಿಸುವಾಗ ರಸ್ತೆಯ ಮೇಲೆಲ್ಲಾ ಮಣ್ಣು ಹಾಗೂ ಧೂಳು ಚೆಲ್ಲುತ್ತಿದ್ದೂ, ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಿ ಎಂದರು.

.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ ಮಾತನಾಡಿ, ಮಾರ್ಚ್ ತಿಂಗಳಲ್ಲಿ ವಿಶ್ವ ಜಲ ದಿನದ ಪ್ರಯುಕ್ತ ಕೆರೆಗಳ ಹೂಳೆತ್ತುವ ಹಾಗೂ ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಕೆರೆಗಳು, ಕಲ್ಯಾಣಿ, ಕಾಲುವೆಗಳ ಅಭಿವೃದ್ಧಿ ಕಾಮಗಾರಿಯನ್ನು ವ್ಯವಸ್ಥಿತವಾಗಿ ನಡೆಸಿ. ಪ್ರತಿ ತಾಲ್ಲೂಕುವಾರು 2 ಕೆರೆಗಳ ಅಭಿವೃದ್ಧಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಾಗದ ಕಾರಣ ನೀರಿನ ಸಮಸ್ಯೆಯಿದ್ದು, ಜನ ಮತ್ತು ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ ಎಂದರು.

ಹಿಂದಿನ ವರ್ಷಗಳ ಮಾಹಿತಿಯ ಆಧಾರದ ಮೇಲೆ ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಈ ಗ್ರಾಮಗಳ ವಸ್ತುಸ್ಥಿತಿಯ ಮೇಲೆ ನಿಗಾವಹಿಸಿ.

ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಗಳ ಸಭೆಗಳನ್ನು ನಿರಂತರವಾಗಿ ನಡೆಸಿ ತೊಂದರೆಗಳನ್ನು ಪರಿಹರಿಸಿ ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ. ಮೋಹನ್, ಡಿ.ಎಫ್.ಒ ರಾಜು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

Published

on

ಮಂಡ್ಯ : “ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ. ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದ ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.

ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ ಎಂದು ಹೇಳಿದರು.

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.

ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ. ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್‌ಎಸ್‌ಎಚ್‌ಎಂ ಜ್ಞಾನ ಕ್ಯಾಂಪಸ್‌ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ, ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಉಪಸ್ಥಿತರಿದ್ದರು.

Continue Reading

Mandya

ಶ್ರಮಜೀವಿ ರೈತರಿಗೆ ಭೂತಾಯಿ ಮೋಸ ಮಾಡುವುದಿಲ್ಲ : ಸಚಿವ ಎನ್.ಚಲುವರಾಯಸ್ವಾಮಿ

Published

on

ನಾಗಮಂಗಲ : ಶ್ರಮ ಜೀವಿ ರೈತರಿಗೆ ಭೂತಾಯಿ ಯಾವಾಗಲೂ ಮೋಸ ಮಾಡುವುದಿಲ್ಲ. ರೈತರ ಏಳಿಗೆಗಾಗಿ ಪ್ರತಿಫಲ ನೀಡುವ ಭೂಮಿಗೆ ನಾವುಗಳು ಚಿರಋಣಿಯಾಗಿ ಇರಬೇಕೆಂದು ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

ಅವರು ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ ರೈತ ಉದ್ಪಾದಕರ ಕಂಪನಿಯ ನೂತನ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿ ಪೂರಕ ಸಂಸ್ಥೆಗಳು ಇದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವ ಮುಖಾಂತರ ಆರ್ಥಿಕವಾಗಿ ಸದೃಢರಾಗಬೇಕು ಎಂದರು.

ತಾವೇ ಉತ್ಪಾದಕ ಕಂಪನಿಗಳ ನಿರ್ವಹಣೆ ಮಾಡುವ ವ್ಯವಸ್ಥೆ ಇದ್ದರೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಸಿಗಲಿದ್ದು, ರೈತರು ಇಂತಹ ಕೃಷಿ ಪೂರಕ ವ್ಯವಸ್ಥೆಗಳಿಗೆ ಹಾಗೂ ಕೃಷಿ ಭೂಮಿಯ ಬೆಳವಣಿಗೆ ಮಾಡಲು ಅನೇಕ ಯೋಜನೆಗಳು ರೂಪಿಸಿದ್ದು ಕೃಷಿ ಅವಲಂಬಿತ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಸಂಘದ ಅಧ್ಯಕ್ಷರಾದ ಹಾಗೂ ರಾಜ್ಯ ನಿರ್ದೇಶಕರಾದ. ರಾಜೇಶ್ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ತಹಸೀಲ್ದಾರ್ ಆದರ್ಶ್, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್, ಕಾರಸವಾಡಿ ಮಹದೇವ, ನೇಗಿಲು ಯೋಗಿ ಬಸವರಾಜು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ರೈತ ಉತ್ಪಾದಕರ ಸಂಘದ ಅಧ್ಯಕ್ಷರುಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಚಿವರು ಕರಡಹಳ್ಳಿ ಗ್ರಾಮದಲ್ಲಿ ನೂತನವಾಗಿ ಪಶು ಸಂಗೋಪನ ಚಿಕಿತ್ಸಾಲಯ ಉದ್ಘಾಟನೆ ಹಾಗೂ ದೇವಲಾಪುರ ಹ್ಯಾಂಡ್ ಪೋಸ್ಟ್ ಪಾಲಿಟೆಕ್ನಿಕ್ ಪ್ರಯೋಗಾಲಯ ಹಾಗೂ ಪ್ರಥಮ ದರ್ಜೆ ಕಾಲೇಜು ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅರೆ ಅಲ್ಪಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಗುದ್ದಲಿ ಪೂಜೆ ಹಾಗೂ ಅಲ್ಪಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದರು.

Continue Reading

Mandya

ನಮ್ಮ ಬದುಕಿನ ಸಾರ್ಥಕತೆಗೆ ದೇವರಲ್ಲಿ ನಮ್ಮ ಮನಸ್ಸು ಕೇಂದ್ರೀಕೃತವಾಗಿರಬೇಕು: ಶ್ರೀ ಸೋಮನಾಥ ಸ್ವಾಮೀಜಿ

Published

on

ನಾಗಮಂಗಲ : ನಮ್ಮ ಸಾರ್ಥಕ ಬದುಕಿಗೆ ಭಗವಂತನಲ್ಲಿ ನಮ್ಮ ಮನಸ್ಸು ಕೇಂದ್ರೀಕೃತವಾಗಿರಬೇಕು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮೈಸೂರು ಶಾಖ ಮಠದ ಶ್ರೀ ಸೋಮನಾಥ ಸ್ವಾಮೀಜಿ ತಿಳಿಸಿದರು.

ಅವರು ಪಟ್ಟಣದಲ್ಲಿರುವ 800 ವರ್ಷಗಳ ಇತಿಹಾಸವುಳ್ಳ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಗರ್ಭಗುಡಿಯ ಜೀರ್ಣೋದ್ಧಾರ ಮತ್ತು ಕಳಸ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಬದುಕಿನ ಸಾರ್ಥಕತೆಗೆ ನಾವು ದೇವರಲ್ಲಿ ನಮ್ಮಮನಸ್ಸನ್ನು ಕೇಂದ್ರೀಕೃತವಾಗಿ ಇಟ್ಟಿರಬೇಕು. ಇದು ನಮಗೆ ಕೊಟ್ಟಿರುವಂತಹ ಒಂದು ಅವಕಾಶಗಳು. ಇದು ನಮ್ಮ ಋಷಿಮುನಿಗಳು ನಮಗೆ ನೀಡಿರುವಂತಹ ಒಂದು ಸಾರ್ಥಕ ಬದುಕಿನ ಮಾರ್ಗ ಎಂದರು.

ಇದೇ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷರು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ಗಳಿಂದ ಆಶೀರ್ವಾದ ಪಡೆದರು.

Continue Reading

Trending

error: Content is protected !!