Connect with us

Mandya

ದೆಹಲಿ ಪ್ರತಿಭಟನೆಯು ಖಲಿಸ್ತಾನ್‌, ದಲ್ಲಾಳಿಗಳು ರೈತರ ಹೆಸರಿನಲ್ಲಿ ನಡೆಸುತ್ತಿರುವ ಧರಣಿ

Published

on

ಮಂಡ್ಯ: ದೆಹಲಿ ಬಳಿ ರೈತರ ಹೆಸರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ಖಲಿಸ್ತಾನ್ ಮತ್ತು ದಲ್ಲಾಳಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇದಕ್ಕೆ ಕಾಂಗ್ರೆಸ್ ಕಾರಣವಾಗಿದ್ದು, ವಿದೇಶಿ ಶಕ್ತಿಗಳೂ ಸಹ ಇದರಲ್ಲಿ ಹಣ ಹೂಡಿಕೆ ಮಾಡುತ್ತಿವೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಗಂಭೀರ ಆರೋಪ ಮಾಡಿದರು.

ಸಾಮಾನ್ಯ ರೈತರು ಕೋಟ್ಯಾಂತರ ರೂ. ಮೌಲ್ಯದ ಕಾರು, ಟ್ರಾಕ್ಟರ್ ಇತರೆ ವಾಹನಗಳನ್ನು ತರಲು ಸಾಧ್ಯವೇ? ಈ ಹಿಂದೆ ನಡೆದ ಪ್ರತಿಭಟನೆ ಯಾವ ಸ್ವರೂಪ ಪಡೆದುಕೊಂಡಿತ್ತು ಎಂಬುದನ್ನು ಮನಗಂಡಿರುವ ದೆಹಲಿ ಮತ್ತು ಹರಿಯಾಣ ಸರ್ಕಾರಗಳು ಯಾವುದೇ ಹಾನಿಯಾಗದಂತೆ ತಡೆಯಲು ಪ್ರಯತ್ನ ಪಡುತ್ತಿರುವುದೇ ತಪ್ಪಾ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಪ್ರಶ್ನಿಸಿದರು.

ಬರದಿಂದ ತತ್ತರಿಸಿರುವ ರೈತರ ಸ್ಥಿತಿಗತಿಯನ್ನು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಂತ್ವನ ಹೇಳುವ ಪ್ರಯತ್ನವನ್ನು ಸರ್ಕಾರ ಮತ್ತು ಕೃಷಿ ಸಚಿವರು ಮಾಡಿಲ್ಲ, ರೈತ ಮೋರ್ಚಾ ವತಿಯಿಂದ ಗ್ರಾಮ ಪರಿಶ್ರಮ ಯಾತ್ರೆ ಪ್ರಾರಂಭಿಸಲಾಗಿದ್ದು, ಈಗಾಗಲೇ ಒಂದೆರಡು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಂಡ್ಯಜಿಲ್ಲೆಗೆ ಭೇಟಿ ನೀಡಿದ್ದೇವೆ. ಇಲ್ಲಿನ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗೆ ನೀರಿಲ್ಲದೆ ಒಣಗುತ್ತಿವೆ. ಇದರಿಂದಾಗಿ ಕಬ್ಬು, ಬಾಳೆ, ಇತರೆ ತೋಟಗಾರಿಕೆ ಬೆಳೆಗಳನ್ನು ರೈತರು ಕಿತ್ತುಹಾಕುತ್ತಿದ್ದಾರೆ, 6 ತಿಂಗಳ ಕಬ್ಬಿನ ಬೆಳೆ ಕಟಾವು ಮಾಡಿ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇನ್ನು ಬಾಳೆ ಸಂಪೂರ್ಣ ಒಣಗಿಹೋಗಿದ್ದು, ಅದನ್ನೂ ರೈತರು ಕಿತ್ತುಹಾಕುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿದ್ದರೂ ಸರ್ಕಾರದ ಅಧಿಕಾರಿಗಳು, ಜನಪ್ರತಿನಿಧಿಗಳು, ಅಷ್ಟೇ ಏಕೆ ಈ ಜಿಲ್ಲೆಯವರೇ ಆದ ಕೃಷಿ ಸಚಿವರೂ ಸಹ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ ಎಂದು ಅರೋಪಿಸಿದರು.

ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಲ್ಲಿ ಹರಿಯುವ ನೀರು ಮಳವಳ್ಳಿ ಕೊನೇ ಭಾಗಕ್ಕೆ ತಲುಪಿಲ್ಲ. ಇಂಡಿಯಾ ಮೈತ್ರಿಕೂಟದಲ್ಲಿರುವ ತಮಿಳುನಾಡು ಮುಖ್ಯಮಂತ್ರಿಯ ಸ್ಟಾಲಿನ್ ಮನವೊಲಿಸಿ ನೀರು ಉಳಿಸಿಕೊಂಡು ಜಿಲ್ಲೆಯ ರೈತರಿಗೆ ನೀಡುವುದನ್ನು ಬಿಟ್ಟು ತಮಿಳುನಾಡಿಗೆ ನೀರು ಬಿಟ್ಟು ನಮ್ಮ ರೈತರನ್ನು ಬಲಿಕೊಟ್ಟಿದ್ದಾರೆ, ಕನಿಷ್ಟ ಬೋರ್‌ವೆಲ್‌ಗಳಲ್ಲೂ ಸಹ ನೀರು ಇಲ್ಲದಂತಾಗಿದೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿಲ್ಲ. ಇದೆಲ್ಲದ್ದಕ್ಕೂ ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳು, ಜಲಸಂಪನ್ಮೂಲ ಸಚಿವರು, ಸರ್ಕಾರವೇ ಕಾರಣ ಎಂದು ಗುಡುಗಿದರು.

ಕಳೆದ ಬಾರಿ ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿ ಎದುರಾದಾಗ ಎನ್‌ಡಿಆರ್‌ಎಫ್ ನಿಯಮಾನುಸಾರ 6800 ರೂ. ಪರಿಹಾರ ಜೊತೆಗೆ ಇನ್ನೂ 6500 ರೂ. ಸೇರಿಸಿ 13 ಸಾವಿರ ಪರಿಹಾರ ನೀಡಲಾಗಿತ್ತು. ಕಬ್ಬಿನ ಬೆಳೆಗೆ 11,500ಕ್ಕೆ ಬದಲಾಗಿ 25 ಸಾವಿರ ರೂ. ಕೊಟ್ಟಿದ್ದೆವು. ತೆಂಗು ಸೇರಿದಂತೆ ಧೀರ್ಘಕಾಲದ ಬೆಳೆಗೆ 18 ಸಾವಿರಕ್ಕೆ ಬದಲಾಗಿ 28 ಸಾವಿರ ಪರಿಹಾರ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ವ್ಯಾಪಕವಾಗಿದ್ದರೂ ರಾಜ್ಯ ಸರ್ಕಾರ ಇನ್ನೂ ವೈಜ್ಞಾನಿಕ ಪರಿಹಾರ ನೀಡಿಲ್ಲ, 2 ಸಾವಿರ ಪರಿಹಾರ ಕೊಡುವುದಾಗಿ ಹೇಳಿದ್ದಾರೆ ಆದರೆ ಇನ್ನೂ ರೈತರ ಖಾತೆಗೆ ಅದೂ ಬಂದಿಲ್ಲ ಎಂದು ಟೀಕಿಸಿದರು.

ಬರಗಾಲದ ತೀವ್ರತೆ ಹೆಚ್ಚಾಗಿದೆ. ನಾಲೆಗಳಲ್ಲಿ ಸರ್ಕಾರ ನೀರು ಹರಿಸುತ್ತಿಲ್ಲ. ಇರುವ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ಬೋರ್‌ವೆಲ್‌ ಮೋರೆ ಹೋದರೂ ಅಲ್ಲೂ ಸಹ ವಿದ್ಯುತ್ ಕಣ್ಣಾಮುಚ್ಚಾಲೆ. ರೈತರಿಗೆ ರಾತ್ರಿ ವೇಳೆ 3 ಗಂಟೆ ವಿದ್ಯುತ್ ಕೊಡುತ್ತಾರೆ. ನೀರು ಹರಿಸಲು ರಾತ್ರಿ ರೈತರು ಹೊಲ-ಗದ್ದೆಗಳಲಿ ಕಾಯಬೇಕಿದೆ. ಚಿರತೆ ಕಾಟ ಬೇರೆ. ಪರಿಸ್ಥಿತಿ ಹೀಗಿರುವಾಗ ಹೇಗೆ ನಿಭಾಯಿಸುವುದು, ಕನಿಷ್ಟ ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ನೀಡುವಂತೆ ಒತ್ತಾಯಿಸಿದರು.

ರಾಜ್ಯ ಸರ್ಕಾರ ಖಜಾನೆ ಸಂಪೂರ್ಣ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ವೇತನ ಕೊಡಲು ಹಣವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಾಟಕವಾಡಿದ್ದಾರೆ. ರಾಜ್ಯ ಸರ್ಕಾರ ಪ್ರತಿಭಟನೆ ಎಂದು ಹೇಳಿ ಇಲ್ಲಿನ ಜನರಲ್ಲಿ ಗೊಂದಲ ಮೂಡಿಸಿ ಅಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಎಂಬುದನ್ನು ಸಾಭೀತುಪಡಿಸಿದ್ದಾರೆ. ಪಕ್ಷದ ಪರವಾಗಿ ಹೋದರೆ ವಿಮಾನದ ವೆಚ್ಚ, ಉಳಿಯಲು ತಾಜ್ ಹೊಟೇಲ್‌ನ ವ್ಯವಸ್ಥೆ ಎಲ್ಲವೂ ಸಿಗುವುದಿಲ್ಲ ಎಂಬ ಕಾರಣಕ್ಕೆ ಸರ್ಕಾರದ ಹೆಸರಲ್ಲಿ ಸಿದ್ದರಾಮಯ್ಯ ಮತ್ತು ತಂಡ ನಾಟಕವಾಡಿದ್ದಾರೆ ಎಂದು ಕುಟುಕಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್‌.ಎಸ್ಇಂದ್ರೇಶ್, ಮುಖಂಡರಾದ ಕೆ.ಎಸ್. ಜುಂಡೇಗೌಡ, ಎಂ.ಆರ್.ಕುಮಾರಸ್ವಾಮಿ, ಎಚ್.ಆರ್.ಅಶೋಕ್, ಬ್ಯಾಟರಾಯಿಗೌಡ, ಜೋಗೀಗೌಡ ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಬದಲಾಗುತ್ತಿರುವ ಹೊಸ ಆವಿಷ್ಕಾರಗಳಿಗೆ ತಕ್ಕಂತೆ ಸಂಘದ ಸಿಬ್ಬಂದಿಗಳು ಹೊಂದಿಕೊಳ್ಳುವ ಅನಿವಾರ್ಯತೆಯಿದೆ : ಧನಂಜಯ್

Published

on

ಮಂಡ್ಯ : ಬದಲಾಗುತ್ತಿರುವ ಹೊಸ ಆವಿಷ್ಕಾರಗಳಿಗೆ ತಕ್ಕಂತೆ ಸಂಘದ ಸಿಬ್ಬಂದಿಗಳು ಹೊಂದಿಕೊಳ್ಳುವ ಅನಿವಾರ್ಯತೆ ಇರುವುದಾಗಿ ಶಾಖಾ ಸಮಿತಿ ಸದಸ್ಯ ಜಿ. ಧನಂಜಯ ದರಸಗುಪ್ಪೆ ಕಿವಿ ಮಾತು ಹೇಳಿದರು.

ನಗರದ ಅಶೋಕನಗರ ಒಂದನೇ ಕ್ರಾಸ್ ನಲ್ಲಿರುವ ‘ ದಿ ಪಾವಗಡ ಸೌಹಾರ್ಧ ಮಲ್ಟಿಪರ್ಪಸ್ ಕೋ -ಆಪರೇಟಿವ್ ಸೊಸೈಟಿ ಲಿ,’ ಮಂಡ್ಯ ಶಾಖೆಯಲ್ಲಿ, ಮಂಡ್ಯ -ರಾಮನಗರ, ಮೈಸೂರು -ತುಮಕೂರು ಶಾಖೆಯ ಸಿಬ್ಬಂದಿಗಳಿಗೆ ಆಯೋಜಿಸಿದ್ದ, “ತರಬೇತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡುತ್ತಾ, 22 ವರುಷಗಳ ಹಿಂದೆ ಪ್ರಾರಂಭಗೊಂಡ ಸಂಸ್ಥೆ ತಹಲ್ ವರೆವಿಗೂ, ಪ್ರತಿವರ್ಷವೂ ಲಾಭದಲ್ಲಿಯೇ ನಡೆಯುತಲಿದ್ದು, ದಿ ಪಾವಗಡ ಸಂಸ್ಥೆ, ರಾಜ್ಯದಲ್ಲಿಯೇ ಪ್ರತಿಷ್ಠಿತ-ಆರ್ಥಿಕ ಸದೃಢ ಹಾಗೂ ಸೇವಾ ಮನೋಭಾವದ ಸೌಹಾರ್ಧ ಸಂಸ್ಥೆಯಾಗಿ ಮುನ್ನಡೆಯುತ್ತಿದೆ ಎಂದರು‌

ಬದ್ಧತೆ – ವಿಧೇಯತೆ – ಪ್ರಾಮಾಣಿಕತೆ – ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ಪಂಚ ದ್ಯೇಯಗಳೊಂದಿಗೆ ಪ್ರಾರಂಭವಾದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಹೆಚ್. ಕೃಷ್ಣರೆಡ್ಡಿ ಮಾತನಾಡಿ, ಆಡಳಿತ ಮಂಡಳಿ ನಿರ್ದೇಶಕರ-ಷೇರುದಾರರ-ಸಿಬ್ಬಂದಿಗಳ-ಸಹಕಾರದೊಂದಿಗೆ ಯಶಸ್ವಿಯಾಗಿ ಮುನ್ನಡೆಸುತ್ತಿರುವುದಕ್ಕೆ ಅಭಿನಂದನಾರ್ಹರು ಎಂದರು. ಆಡಳಿತ ಮಂಡಳಿ ನಿರ್ದೇಶನಗಳಿಗನುಗುಣವಾಗಿ, ಹೊಸ ಹೊಸ ಆವಿಷ್ಕಾರ ಹಾಗೂ ನಾವಿನ್ಯತೆಗಳಿಗೆ ತಕ್ಕಂತೆ ಹೊಂದಿಕೊಂಡು, ಸಿಬ್ಬಂದಿಗಳು ಶ್ರದ್ದೆ ಹಾಗೂ ಪ್ರಾಮಾಣಿಕವಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಶಾಖಾ ಸಮಿತಿಯ ಅಧ್ಯಕ್ಷ ನರಸಿಂಹ ಮೂರ್ತಿ ಶೆಟ್ಟಿ ವಹಿಸಿದ್ದರು. ಸದಸ್ಯರಾದ ನಾರಾಯಣ ರೆಡ್ಡಿ, ಗೋವರ್ಧನ್ ರೆಡ್ಡಿ, ಮಂಡ್ಯ ಶಾಖಾ ವ್ಯವಸ್ಥಾಪಕ ಜಯಶಂಕರ ಶೆಟ್ಟಿ, ಉಪಸ್ಥಿತರಿದ್ದರು.

ತುಮಕೂರು ಶಾಖೆಯ ಹಿರಿಯ ವ್ಯವಸ್ಥಾಪಕ ಹಾಗೂ ಅಭಿವೃದ್ಧಿ ತಂಡದ ಮುಖ್ಯಸ್ಥ ನರಸರೆಡ್ಡಿ, ರಾಮನಗರ ಶಾಖೆ ವ್ಯವಸ್ಥಾಪಕ ರುದ್ರೇಶ್, ತರಬೇತುದಾರ ಅನಿಲ್ ರವರುಗಳು ವಿವಿಧ ಶಾಖೆಯ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.

Continue Reading

Mandya

ಕನ್ನಡ ಸಾಹಿತ್ಯ ಪರಿಷತ್ ಬೈಲಾ ತಿದ್ದುಪಡಿಗೆ ಖಂಡನೆ : ಮಹೇಶ್‌ ಜೋಶಿ ನಿರ್ಧಾರಕ್ಕೆ ಕಿಡಿ

Published

on

ಮಂಡ್ಯ: ಕಸಾಪ ಬೈಲಾ ತಿದ್ದುಪಡಿ ಮಾಡಲು ಹೊರಟಿರುವ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ಅವರ ನಿರ್ಧಾರದ ವಿರುದ್ಧ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಲು ನಿರ್ಣಯ ಕೈಗೊಂಡಿವೆ.

ನಗರದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಹೇಶ್ ಜೋಶಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಸಮ್ಮೇಳನ ಮುಗಿದ ಮಾರನೇ ದಿನ ಪರಿಷತ್‌ನ ಬೈಲಾ ನಿಯಮ ಉಲ್ಲಂಘಿಸಿ ಕಾರ್ಯಕಾರಿ ಮಂಡಳಿ ರದ್ದುಪಡಿಸಿ ಹೊಸ ಕಾರ್ಯಕಾರಿ ಮಂಡಳಿ ರಚನೆ ಮಾಡಲಾಗಿತ್ತು. ಇದರ ವಿರುದ್ಧ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದವರಿಗೆ ಸದಸ್ಯತ್ವ ರದ್ದುಪಡಿಸುವ ನೋಟಿಸ್ ನೀಡಲಾಗಿದ್ದು, ಅದಕ್ಕೆ ತಕ್ಕ ಉತ್ತರ ನೀಡುವ ಬಗ್ಗೆ ನಿರ್ಧರಿಸಲಾಯಿತು.

ಅಲ್ಲದೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಬೈಲಾದ 21/1ರಲ್ಲಿರುವಂತೆ ನಿಯಮವನ್ನು ಬಳ್ಳಾರಿ ಯಲ್ಲಿ ನಡೆಯಲಿರುವ ಸರ್ವ ಸದಸ್ಯರ ಸಭೆಗೆ ಹಾಜರು ಪಡಿಸಲು ಮುಂದಾಗಿರುವುದು ಸರಿಯಲ್ಲ. ನ್ಯಾಯಾಲಯ ದಲ್ಲಿದ್ದಾಗ ಯಾವುದೇ ಬೈಲಾದ ನಿಯಮ ರದ್ದುಪಡಿಸಲು ಬರುವುದಿಲ್ಲ.

ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಇರುವ ವಿಶೇಷ ಅಧಿಕಾರದ ನಿಯಮವನ್ನು ಕಸಾಪ ಬೈಲಾದಲ್ಲಿ ಸೇರಿಸುವ ಮೂಲಕ ರಾಜ್ಯಾಧ್ಯಕ್ಷರು ಸಹ ಅವರ ಸರಿಸಮಾನ ಎಂದು ಪರಮೋಚ್ಛ ಅಧಿಕಾರ ಪಡೆಯಲು ಮುಂದಾಗಿದ್ದಾರೆ. ಅದರ ಮೂಲಕ ಯಾರನ್ನಾದರೂ ಸದಸ್ಯತ್ವದಿಂದ ತೆಗೆದು ಹಾಕಬಹುದು ಅಥವಾ ಸೇರಿಸಬಹುದು.

ಆದರೆ, ಸಂವಿಧಾನ ಪರಿಚ್ಛೇದ 164(1) ಅಡಿಯಲ್ಲಿ ಯಾವುದೇ ಸಂಘ-ಸಂಸ್ಥೆಗಳಿಗೆ ಈ ಅಧಿಕಾರ ಪಡೆಯುವ ಅಧಿಕಾರವಿಲ್ಲ. ಇದರ ಬಗ್ಗೆ ತಜ್ಞರ ಜೊತೆ ಚರ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಮಹೇಶ್‌ ಜೋಶಿ ಅವರ ನಿರ್ಣಯ, ನಿರ್ಧಾರದ ಬಗ್ಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದು. ಜೊತೆಗೆ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳೊಡಗೂಡಿ ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ ಗೌಡ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಕಸಾಪ ಮಾಜಿ ಅಧ್ಯಕ್ಷರಾದ ಪ್ರೊ.ಜಿ.ಟಿ.ವೀರಪ್ಪ, ಮೀರಾ ಶಿವಲಿಂಗಯ್ಯ, ಎಂ.ವಿ.ಧರಣೇಂದ್ರಯ್ಯ, ರೈತ ನಾಯಕಿ ಸುನಂದಜಯರಾಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Continue Reading

Mandya

ದೇವಾಲಯಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ಶ್ರದ್ಧಾ ಕೇಂದ್ರಗಳು : ಎನ್.ಚಲುವರಾಯಸ್ವಾಮಿ

Published

on

ಕೆ.ಆರ್.ಪೇಟೆ : ದೇವಾಲಯಗಳು ನಮ್ಮ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ನೀಡುವ ಶ್ರದ್ಧಾ ಕೇಂದ್ರಗಳಾಗಿದ್ದು, ದೈವದ ಮಾರ್ಗದಲ್ಲಿ ಸಾಗಿದರೆ ಯಶಸ್ಸು ನಿಶ್ಚಿತ ಎಂದು ಜಿಲ್ಲಾ ಉಸ್ತವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ಕೆ.ಆರ್.ಪೇಟೆ ಗ್ರಾಮ ದೇವತೆ ಶ್ರೀ ದೊಡ್ಡಕೇರಮ್ಮ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀರಥದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಶಿಥಿಲವಾಗಿದ್ದ ಗ್ರಾಮದೇವತೆಯ ದೇವಾಲಯವನ್ನು ವಾಸ್ತುಬದ್ಧವಾಗಿ ನೂತನವಾಗಿ ನಿರ್ಮಿಸಿ ನಾಗರೀಕ ಸಮಾಜ ಮೆಚ್ಚುವಂತಹ ಕೆಲಸ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು. ದೇವರ ಸ್ಮರಣೆ ಹಾಗೂ ಪೂಜೆಯಿಂದ ಕಾಲ ಕಾಲಕ್ಕೆ ಮಳೆಯಾಗಿ ಉತ್ತಮ ಬೆಳೆಯಾಗಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲಸಲಿ. ಅನ್ನಧಾತರಾದ ರೈತರ ಬಾಳು ಬಂಗಾರವಾಗಲಿ ಎಂದು ಅವರು ಶುಭ ಹಾರೈಸಿದರು.

ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರು ನೀಡಿದ ಹೃದಯಸ್ಪರ್ಶಿ ಅಭಿನಂದನೆಯನ್ನು ಸ್ವೀಕರಿಸಿದರು.

ಸಮಾಜ ಸೇವಕರಾದ ಸ್ಟಾರ್ ಚಂದ್ರು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ. ಎಲ್.ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಪುರಸಭೆ ಅಧ್ಯಕ್ಷೆ ಪಂಕಜಾ, ಉಪಾಧ್ಯಕ್ಷೆ ಸೌಭಾಗ್ಯ, ಸ್ಥಾಯಿಸಮಿತಿ ಅಧ್ಯಕ್ಷ ರವೀಂದ್ರಬಾಬು, ಕಸಬಾ ಸೊಸೈಟಿ ಅಧ್ಯಕ್ಷ ಪುರುಷೋತ್ತಮ್, ಚಿನಕುರಳಿ ರಮೇಶ್, ಉಧ್ಯಮಿ ಬಿ. ರಾಜಶೇಖರ್, ವಕೀಲ ಬಿ. ನಾಗೇಶ್, ಪುರಸಭೆ ಸದಸ್ಯರಾದ ಕೆ.ಎಸ್. ಪ್ರಮೋದ್, ಬಸ್ ಸಂತೋಷ್, ನಟರಾಜ್, ಮಹಾದೇವಿ, ಸುಗುಣ, ಕೆ.ಸಿ.ಮಂಜುನಾಥ್, ಗ್ರಾಮದ ಯಜಮಾನರಾದ ಹೆಗ್ಗಡಿ ಕೃಷ್ಣೆಗೌಡ, ಪಟೇಲ್ ಚಂದ್ರಣ್ಣ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರೆಗೌಡ, ಕೆ.ಸಿ. ವಾಸು, ಉಧ್ಯಮಿ ಹೆಚ್.ಎಂ.ಸಿ ಚಂದ್ರಶೇಖರ್ ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ಅಶೋಕ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಪೊಲೀಸ್ ಇನ್ಸ್ ಪೆಕ್ಟರ್ ಸುಮಾರಾಣಿ, ಗ್ರಾಮದ ಮುಖಂಡರಾದ ಪಟೇಲ್ ಚಂದ್ರಣ್ಣ, ಹೆಗ್ಗಡಿ ಕೃಷ್ಣೆಗೌಡ ಅವರನ್ನು ಸಚಿವ ಚಲುವರಾಯಸ್ವಾಮಿ ಅವರು ಸನ್ಮಾನಿಸಿ ಗೌರವಿಸಿದರು.

Continue Reading

Trending

error: Content is protected !!