Mysore
ನಂಜನಗೂಡು ತಾಲ್ಲೂಕಿನ ಮಲ್ಲೂಪುರ ಗ್ರಾಮದಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ, ಅಪಘಾತದ ರಭಸಕ್ಕೆ ಇಬ್ಬರು ಯುವ ಕಾರ್ಮಿಕರು ಬಲಿ
ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರ್ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಇಂದು ಬೆಳಂ ಬೆಳಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲೂಪುರ ಗ್ರಾಮದಲ್ಲಿ ಟ್ಯಾಂಕರ್ ಲಾರಿಯು ಕಾರ್ಮಿಕರು ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದರು. ಮತ್ತೊರ್ವ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಗಡೂರು ಗ್ರಾಮದ ಶಿವಮಲ್ಲೆಗೌಡ ಎಂಬುವವರ ಪುತ್ರ 24 ವರ್ಷದ ಮಹೇಶ್, ಮತ್ತು ಅದೇ ಗ್ರಾಮದ ನಾಗರಾಜು ಎಂಬುವವರ ಪುತ್ರ 23 ವರ್ಷದ ಮಹೇಶ್ ಮೃತ ಯುವ ಕಾರ್ಮಿಕರಾಗಿದ್ದು, ಸಾವಿನಲ್ಲೂ ಕುಚುಕು ಗೆಳೆಯರು ಒಂದಾಗಿದ್ದಾರೆ.
ತಗಡೂರು ಗ್ರಾಮದಿಂದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಇಬ್ಬರು ಕಾರ್ಮಿಕರು ಹೋಗುತ್ತಿದ್ದ ವೇಳೆ, ಟ್ಯಾಂಕರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಹೇಶ್ ಮೃತಪಟ್ಟಿದ್ದರು. ಮತ್ತೋರ್ವ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ವರುಣ ಕ್ಷೇತ್ರದ ಮಾಜಿ ಶಾಸಕರು ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾ. ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ಲಾರಿ ಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟ್ಯಾಂಕರ್ ಲಾರಿಯ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.
ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮೃತ ಯುವ ಕಾರ್ಮಿಕರ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.
ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ಚುಂಚನಕಟ್ಟೆ ಕಾವೇರಿ ನದಿಯಲ್ಲಿ ಶ್ರೀ ರಾಮ ದೇವರ ತೆಪ್ಪೋತ್ಸವ
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ :- ಕಿವಿತುಂಬೆಲ್ಲಾ ಪಟಾಕಿ ಸದ್ದು. . . ಇದರ ನಡುವೆ ದೇವಾಲಯದಿಂದ ಉತ್ಸವ ಮೂರ್ತಿಯನ್ನು ಹೊತ್ತು ತಂದ ಭಕ್ತಾದಿಗಳು . . . ಅಲಂಕೃತಗೊಂಡಿದ್ದ ಮಂಟಪದಲ್ಲಿ ಪ್ರತಿಷ್ಠಾಪನೆಗೊಂಡ ಸೀತಾ ರಾಮ ಲಕ್ಷ್ಮಣ. . . ನದಿಯಲ್ಲಿ ಮೂರು ಸುತ್ತು ಸುತ್ತಿದ ಉತ್ಸವ ಮೂರ್ತಿಗಳು . . . ದೇವಲೋಕವೇ ಧರೆಗೆ ಬಂದ ಅನುಭವ . . . ಈ ಇಂತಹ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಮಂದಿ. . .
ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪುರಾಣ ಪ್ರಸಿದ್ದವಾಗಿರುವ ಶ್ರೀ ರಾಮದೇವರ ತೆಪ್ಪೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.
ರಾತ್ರಿ 7.45 ರ ನಂತರ ಇಲ್ಲಿನ ಶ್ರೀ ರಾಮದೇವರ ದೇವಾಲಯದಿಂದ ಶ್ರೀ ರಾಮ, ಲಕ್ಷಣ, ಸೀತಾಮಾತೆ ದೇವರುಗಳ ಉತ್ಸವ ಮೂರ್ತಿಗಳನ್ನು ಪಟಾಕಿ ಸಿಡಿಸುವ ಮೂಲಕ ಅದ್ದೂರಿ ಮೆರವಣಿಗೆ ಮೂಲಕ ಕಾವೇರಿ ನದಿಯ ದಡದಲ್ಲಿ ದೇವಾಲಯದ ಸಮೀಪವಿರುವ ಆಂಜನೇಯ ಗುಡಿಯ ಬಳಿ ವರ್ಣರಂಜಿತ ವಿದ್ಯುತ್ ಲೈಟ್ಗಳು ಮತ್ತು ಹೂವಿನ ಅಲಂಕಾರಗಳಿಂದ ಶೃಂಗಾರಗೊoಡಿದ್ದ ತೆಪ್ಪದಲ್ಲಿ ಪ್ರತಿಷ್ಠಾಪಿಸಲಾಯಿತು.
ಅನಂತರ ತೆಪ್ಪದಲ್ಲಿ ದೇವರ ಉತ್ಸವ ಮೂರ್ತಿಗಳನ್ನು ರಾತ್ರಿ 8.15ರ ಸಮಯದಲ್ಲಿ ಕಾವೇರಿ ನದಿಯ ಮಧ್ಯ ಭಾಗಕ್ಕೆ ತೆಗೆದುಕೊಂಡು ಹೋಗಿ 3 ಭಾರಿ ತಿರುಗಿಸುತ್ತಿದ್ದಂತೆಯೇ ತೆಪ್ಪದಲ್ಲಿದ್ದ ಅರ್ಚಕ ವಾಸುದೇವನ್ ಉತ್ಸವ ಮೂರ್ತಿಗಳಿಗೆ ಮಂಗಳಾರತಿಯನ್ನು ಮಾಡಿದಾಗ ನೆರೆದಿದ್ದ ಸಾವಿರಾರು ಭಕ್ತಾಧಿಗಳು ಶ್ರೀ ರಾಮನಿಗೆ ಜೈಕಾರ, ಶ್ರೀರಮಣನ ಗೋವಿಂದಾ ಗೋ..ವಿಂದಾ ಎಂಬ ಘೋಷಣೆಗಳನ್ನು ಮೊಳಗಿಸಿದಾಗ ದೇವಲೋಕವೇ ಧರೆಗೆ ಬಂದಂತೆ ಭಾಸವಾಯಿತು.
ಕಾವೇರಿ ನದಿಯಲ್ಲಿ ಸುತ್ತಿ ಬಂದ ಶ್ರೀರಾಮ, ಲಕ್ಷಣ, ಸೀತಾ ದೇವರುಗಳ ಉತ್ಸವ ಮೂರ್ತಿಗಳನ್ನು ಭಕ್ತಾಧಿಗಳು ಚಪ್ಪಾಳೆ ತಟ್ಟುವ ಮೂಲಕ ಸ್ವಾಗತಿಸಿ ಪೂಜಾ ಕೈಂಕರ್ಯಗಳನ್ನು ಕೈಗೊಂಡು ತಮ್ಮ ಇಷ್ಟಾರ್ಥವನ್ನು ಈಡೇರುವಂತೆ ಪ್ರಾರ್ಥಿಸಿಕೊಂಡರು.
ಆನಂತರ ಉತ್ಸವ ಮೂರ್ತಿಗಳನ್ನು ಮತ್ತೆ ದೇವಾಲಯಕ್ಕೆ ಒತ್ತು ತರಲಾಯಿತು. ಈ ಬಾರಿಯ ತೆಪ್ಪೋತ್ಸವಕ್ಕೆ ಗುಂಡ್ಲುಪೇಟೆ ಆನಂದ್ಕುಮಾರ್ ಎಂಬುವವರು ಭಾರಿ ಪಟಾಕಿಗಳನ್ನು ಸಿಡಿಸುವ ಮೂಲಕ ತೆಪ್ಪೋತ್ಸವಕ್ಕೆ ಕಳೆತಂದರು.
ಕಾರ್ಯಕ್ರಮದಲ್ಲಿ ಸಾಲಿಗ್ರಾಮ ತಸೀಲ್ದಾರ್ ನರಗುಂದ, ಉಪತಹಸೀಲ್ದಾರ್ ಕೆ.ಜೆ.ಶರತ್ , ಗ್ರಾಮ ಲೆಕ್ಕಿಗರಾದ ಮೇಘ, ಮೌನೇಶ್,ಕಾವೇರಿ,ಪ್ರಿಯಾ,
ದೇವಾಲಯದ ಇಓ ಕೆ.ರಘು, ಪಾರುಪತ್ತೆದಾರ್ ಯತೀರಾಜ್, ಸೇರಿದಂತೆ 3 ಸಾವಿರ ಭಕ್ತಾಧಿಗಳು ಹಾಜರಿದ್ದರು.
Mysore
ಇಂದು ಬೆಳ್ಳಂಬೆಳಗ್ಗೆ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಕ್ಷೇತ್ರದ ಶಾಸಕರು ,ನಟ ಡಾಲಿ ಧನಂಜಯ
ವರದಿ : ಮಹದೇವಸ್ವಾಮಿ ಪಟೇಲ್
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕ್ಷೇತ್ರದ ಯುವ ಶಾಸಕ ದರ್ಶನ್ ಧ್ರುವನಾರಾಯಣ್, ಹಾಗೂ ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರು, ಭೇಟಿ ನೀಡಿ ದೇವರ ದರ್ಶನ ಪಡೆದರು.
ಇಂದು ಭಾನುವಾರ ಬೆಳ್ಳಂಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಶಾಸಕರಿಗೆ ಮತ್ತು ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರಿಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತವನ್ನು ಕೋರಿದರು.
ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ದೇವರ ಕೃಪೆಗೆ ಪಾತ್ರನಾಗಿ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.
ಈ ವೇಳೆ ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ದೇವಸ್ಥಾನ ಕಾರ್ಯನಿರ್ವಾಹಕಧಿಕಾರಿ ಜಗದೀಶ್, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಶಂಕರ್, ಕಾಂಗ್ರೆಸ್ ಪಕ್ಷದ ಯೂತ್ ಅಧ್ಯಕ್ಷ ದೇಬೂರು ಅಶೋಕ್, ಸೇರಿದಂತೆ ಹಲವಾರು ಭಾಗವಹಿಸಿದ್ದರು.
Mysore
ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ
ಮೈಸೂರು : ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರಿಗೆ ಪಿಎಚ್ ಡಿ ಪದವಿಯನ್ನು ಉನ್ನತ ಶಿಕ್ಷಣ ಸಚಿವರಾದ ಡಾ ಸುಧಾಕರ್ ಅವರು ಪ್ರದಾನ ಮಾಡಿದರು.
ಪ್ರೊ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಪಿ.ಎಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಅಂಗೀಕರಿಸಿದೆ.
-
Kodagu20 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu19 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech17 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports21 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
Cinema23 hours ago
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
-
National - International23 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Mysore20 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore19 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು