Connect with us

Mysore

ನನ್ನ ಬಳಿ ಯಾವ ಅಧಿಕಾರಿ ಬಂಧಿಲ್ಲ ಪಂ.ರಾಜೀವ್‌ ತಾರಾನಾಥ್‌

Published

on

ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಸಂಭಾವನೆಯಲ್ಲಿ ಕಮಿಷನ್‌ ವಿಚಾರಕ್ಕೆ ಸ್ಪಷ್ಟನೆ
ಮೈಸೂರು: ನಾಡಹಬ್ಬ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನೀಡಲು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಅಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟರೆಂದು ಜಿಲ್ಲಾಡಳಿತ ಮತ್ತು ಸರ್ಕಾರದ ಮುಜಾಗರಕ್ಕೆ ಕಾರಣವಾಗಿದ್ದ ವಿಷಯಕ್ಕೆ ಪಂಡಿತ್‌ ರಾಜೀವ್‌ ತಾರಾನಾಥ್‌ ಸ್ಪಷ್ಟನೆ ನೀಡಿದ್ದಾರೆ.
ನನ್ನ ಬಳಿ ಯಾವುದೇ ಅಧಿಕಾರಿಗಳು ಮತ್ತು ಸಮಿತಿಗೆ ಸಂಬಂಧಪಟ್ಟ ಯಾರು ಹಣದ ಬೇಡಿಕೆ ಇಟ್ಟಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಹೇಳಿದ್ದಾರೆ.
ದಸರಾ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಸರೋದ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಅಹ್ವಾನಿಸಿದ ಅಧಿಕಾರಿಗಳು ಸಂಭಾವನೆಯಲ್ಲಿ ಬೇಡಿಕೆ ಇಟ್ಟಿದ್ದು ಸ್ವತಃ ಅವರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬಿತ್ಯಾದಿಯಾಗಿ ಸ್ಥಳೀಯ ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಸೂಚನೆಯಂತೆ ದಸರಾ ಸಾಂಸ್ಕೃತಿಕ ಉಪ ಸಮಿತಿಯ ಉಪ ವಿಶೇಷಧಿಕಾರಿ ಕೆ.ಎಂ.ಗಾಯತ್ರಿ, ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನಸ್ವಾಮಿ ಖುದ್ದಾಗಿ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಸ್ವಗೃಹದಲ್ಲಿ ಬೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ತಾರಾನಾಥ್‌ ಅವರು, ನನ್ನ ಬಳಿ ಯಾವುದೇ ಅಧಿಕಾರಿಗಳು ಹಾಗೂ ಸಮಿತಿಗೆ ಸಂಬಂಧಪಟ್ಟ ಯಾರು ಹಣದ ಬೇಡಿಕೆ ಇಟ್ಟಿಲ್ಲ. ಜೊತೆಗೆ ಈ ಕುರಿತು ನಾನು ಯಾವುದೇ ಪತ್ರಿಕೆಗಳಿಗೆ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರಮನೆ ವೇದಿಕೆಯಲ್ಲಿ ಸರೋದ್‌ ವಾದನ ಕಾರ್ಯಕ್ರಮ ಪ್ರಸ್ತುತ ಪಡಿಸಿಲು ರಾಜೀವ್‌ ತಾರಾನಾಥ್‌ ಅವರನ್ನು ಸಮಿತಿಯು ನೇರವಾಗಿ ಸಂಪರ್ಕಿಸಿ ವಿನಂತಿಸಿತ್ತು. ಕಲಾವಿದರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿಯೂ ಅವರ ಹೆಸರನ್ನು ಸೇರಿಸಿಕೊಳ್ಳಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ತದನಂತರ ಅ.21ರಂದು ಮೈಸೂರು ಅರಮನೆ ಪ್ರಧಾನ ವೇದಿಕೆಯಲ್ಲಿ ಒಂದು ಗಂಟೆ ಅವಧಿಯ ಕಾರ್ಯಕ್ರಮ ಪಸ್ತುತಪಡಿಸಲು ಒಪ್ಪಿಗೆ ಕೊಟ್ಟ ಕಾರಣ ಸರೋದ್‌ ವಾದನ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.
ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ವೇದಿಕೆ ಒಳಗೊಂಡಂತೆ ಇತರೆ ವೇದಿಕೆಗಳಲ್ಲಿ ಕಾರ್ಯಕ್ರಮ ಪ್ರಸ್ತುತ ಪಡಿಸುತ್ತಿರುವ ಕಲಾವಿದರಿಗೆ ಯಾವುದೇ ವ್ಯಕ್ತಿಯಿಂದ ನೇರವಾಗಿ ಅಥವಾ ದೂರವಾಣಿ ಮೂಲಕ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಸಮಿತಿಯ ವಿಶೇಷಾಧಿಕಾರಿ ಕೆ.ಎಂ.ಗಾಯತ್ರಿ ಮೊ.ಸಂ.9448083000 ಮತ್ತು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್‌‍.ಸುಬ್ರಹಣ್ಯ ಮೊ.ಸಂ.9448882766, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನ್‌ ಮೊ.ಸಂ.9916600027 ಮತ್ತು ಉಪ ಸಮಿತಿ ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌ ಮೊ.ಸಂ.9448244340 ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.

ಮೈಸೂರು: ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹೇವಪ್ಪ ಸೂಚಿಸಿದ್ದಾರೆ.
ಖ್ಯಾತ ಸರೋದ್‌ ವಾದಕ ರಾಜೀವ್‌ ತಾರಾನಾಥ್‌ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದ್ದಾರೆ.

ನನ್ನ ಬಳಿ ಯಾವ ಅಧಿಕಾರಿ ಬಂಧಿಲ್ಲ ಪಂ.ರಾಜೀವ್‌ ತಾರಾನಾಥ್‌ ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಸಂಭಾವನೆಯಲ್ಲಿ ಕಮಿಷನ್‌ ವಿಚಾರಕ್ಕೆ ಸ್ಪಷ್ಟನೆ
ಮೈಸೂರು: ನಾಡಹಬ್ಬ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನೀಡಲು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಅಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟರೆಂದು ಜಿಲ್ಲಾಡಳಿತ ಮತ್ತು ಸರ್ಕಾರದ ಮುಜಾಗರಕ್ಕೆ ಕಾರಣವಾಗಿದ್ದ ವಿಷಯಕ್ಕೆ ಪಂಡಿತ್‌ ರಾಜೀವ್‌ ತಾರಾನಾಥ್‌ ಸ್ಪಷ್ಟನೆ ನೀಡಿದ್ದಾರೆ.
ನನ್ನ ಬಳಿ ಯಾವುದೇ ಅಧಿಕಾರಿಗಳು ಮತ್ತು ಸಮಿತಿಗೆ ಸಂಬಂಧಪಟ್ಟ ಯಾರು ಹಣದ ಬೇಡಿಕೆ ಇಟ್ಟಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಹೇಳಿದ್ದಾರೆ.
ದಸರಾ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಸರೋದ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಅಹ್ವಾನಿಸಿದ ಅಧಿಕಾರಿಗಳು ಸಂಭಾವನೆಯಲ್ಲಿ ಬೇಡಿಕೆ ಇಟ್ಟಿದ್ದು ಸ್ವತಃ ಅವರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬಿತ್ಯಾದಿಯಾಗಿ ಸ್ಥಳೀಯ ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಸೂಚನೆಯಂತೆ ದಸರಾ ಸಾಂಸ್ಕೃತಿಕ ಉಪ ಸಮಿತಿಯ ಉಪ ವಿಶೇಷಧಿಕಾರಿ ಕೆ.ಎಂ.ಗಾಯತ್ರಿ, ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನಸ್ವಾಮಿ ಖುದ್ದಾಗಿ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಸ್ವಗೃಹದಲ್ಲಿ ಬೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ತಾರಾನಾಥ್‌ ಅವರು, ನನ್ನ ಬಳಿ ಯಾವುದೇ ಅಧಿಕಾರಿಗಳು ಹಾಗೂ ಸಮಿತಿಗೆ ಸಂಬಂಧಪಟ್ಟ ಯಾರು ಹಣದ ಬೇಡಿಕೆ ಇಟ್ಟಿಲ್ಲ. ಜೊತೆಗೆ ಈ ಕುರಿತು ನಾನು ಯಾವುದೇ ಪತ್ರಿಕೆಗಳಿಗೆ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರಮನೆ ವೇದಿಕೆಯಲ್ಲಿ ಸರೋದ್‌ ವಾದನ ಕಾರ್ಯಕ್ರಮ ಪ್ರಸ್ತುತ ಪಡಿಸಿಲು ರಾಜೀವ್‌ ತಾರಾನಾಥ್‌ ಅವರನ್ನು ಸಮಿತಿಯು ನೇರವಾಗಿ ಸಂಪರ್ಕಿಸಿ ವಿನಂತಿಸಿತ್ತು. ಕಲಾವಿದರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿಯೂ ಅವರ ಹೆಸರನ್ನು ಸೇರಿಸಿಕೊಳ್ಳಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ತದನಂತರ ಅ.21ರಂದು ಮೈಸೂರು ಅರಮನೆ ಪ್ರಧಾನ ವೇದಿಕೆಯಲ್ಲಿ ಒಂದು ಗಂಟೆ ಅವಧಿಯ ಕಾರ್ಯಕ್ರಮ ಪಸ್ತುತಪಡಿಸಲು ಒಪ್ಪಿಗೆ ಕೊಟ್ಟ ಕಾರಣ ಸರೋದ್‌ ವಾದನ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.
ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ವೇದಿಕೆ ಒಳಗೊಂಡಂತೆ ಇತರೆ ವೇದಿಕೆಗಳಲ್ಲಿ ಕಾರ್ಯಕ್ರಮ ಪ್ರಸ್ತುತ ಪಡಿಸುತ್ತಿರುವ ಕಲಾವಿದರಿಗೆ ಯಾವುದೇ ವ್ಯಕ್ತಿಯಿಂದ ನೇರವಾಗಿ ಅಥವಾ ದೂರವಾಣಿ ಮೂಲಕ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಸಮಿತಿಯ ವಿಶೇಷಾಧಿಕಾರಿ ಕೆ.ಎಂ.ಗಾಯತ್ರಿ ಮೊ.ಸಂ.9448083000 ಮತ್ತು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್‌‍.ಸುಬ್ರಹಣ್ಯ ಮೊ.ಸಂ.9448882766, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನ್‌ ಮೊ.ಸಂ.9916600027 ಮತ್ತು ಉಪ ಸಮಿತಿ ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌ ಮೊ.ಸಂ.9448244340 ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.

ಮೈಸೂರು: ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹೇವಪ್ಪ ಸೂಚಿಸಿದ್ದಾರೆ.
ಖ್ಯಾತ ಸರೋದ್‌ ವಾದಕ ರಾಜೀವ್‌ ತಾರಾನಾಥ್‌ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Published

on

ಮೈಸೂರು: ಈ ವರ್ಷದ ನವೆಂಬರ್‌ಗೆ ಸಿಎಂ ಬದಲಾವಣೆ ಆಗುತ್ತದೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಎಂಎಲ್‌ಸಿ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕಾಗಿ 170 ಕೋಟಿ ರೂ. ಅಧಿಕ ಹಣ ಖರ್ಚಾಗಿತ್ತು. ಆಗಿನ ಕಾಲದಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್‌ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಪ್ರಾರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳುತ್ತಿದ್ದಾರೆ. ಮುಂದಿನ ನವೆಂಬರ್ ಮತ್ತು ಡಿಸೆಂಬರ್‌ಗೆ ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಆಗುತ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ? ಮರುಜಾತಿಗಣತಿ ಮಾಡಿಸುವುದಿಲ್ಲವೆಂದು ಹೈಕಮಾಂಡ್‌ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ‌ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಡಿ.ಕೆ.ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು

ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದುಕೊಂಡಿದ್ದೆ, ಆದರೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು. ಆರ್‌ಸಿಬಿಯಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಆರ್‌ಸಿಬಿಗೂ ನಮ್ಮ ರಾಜ್ಯಕ್ಕೂ ಸಂಬಂಧವೇ ಇಲ್ಲ. ಕಾಲ್ತುಳಿತ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗಳು ವೈರುಧ್ಯದಿಂದ ಕೂಡಿವೆ ಎಂದು ಕಿಡಿಕಾರಿದರು.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3:30ಕ್ಕೆ ಕಾಲ್ತುಳಿತ ಆದರೂ ಸಂಜೆ 5:30 ಕ್ಕೆ ಗೊತ್ತಾಯಿತು. ವಿಧಾನಸೌಧ ಕಾರ್ಯಕ್ರಮಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ‌‌. ರಾಜ್ಯಪಾಲರನ್ನು ಆಹ್ವಾನಿಸಿರಲಿಲ್ಲ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದು ಹೇಳಿದ್ದಾರೆ. ಇವರ ತಪ್ಪು ಇಲ್ಲದಿದ್ದರೇ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಏಕೆ ತೆಗೆದರು ಎಂದು ಹೇಳಬೇಕು? ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.

Continue Reading

Mysore

ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕಿ ನಿರ್ಮಾಣ ಖಂಡಿಸಿ ಪ್ರತಿಭಟನೆ.

Published

on

ಮೈಸೂರು: ಕೆ,ಆರ್,ಎಸ್, ಅಣೆಕಟ್ಟೆಯ ಬಳಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕಿಗಲ್ಲ ನಿರ್ಮಾಣ ಮಾಡುವುದನ್ನು ಖಂಡಿಸಿ ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು.
ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿಯ ಬಳಿ ಶನಿವಾರ ಜಮಾಗೊಂಡ ಪ್ರತಿಭಟನಕಾರರು, ಕೆ. ಆರ್.ಎಸ್. ಅಣೆಕಟ್ಟೆ ನಿರ್ಮಾಸಿರೋದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮೋಜು ಮಸ್ತಿ ಮಾಡೋದಕ್ಕೆ ಅಲ್ಲ. ರೈತಾಪಿ ವರ್ಗದವರು ಕೃಷಿ ಚಟುವಟಿಕೆಗಳು, ಹಾಗೂ ಮೈಸೂರು ಬೆಂಗಳೂರಿನ ಕುಡಿಯುವ ನೀರಿನ ಯೋಜನೆಗಾಗಿ ರಾಣಿ ಕೆಂಪ ನಂಜಮ್ಮಣಿ ಕೃಷ್ಣರಾಜಸಾಗರ ಮೀಸಲಾಗಿದೆ. ವಿನಹ ಮೋಜು ಮಸ್ತಿ ಮಾಡುವಂತಹ ಅಮ್ಯೂಸ್ಮೆಂಟ್ ಪಾರ್ಕಿಗಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿದರು.


ಕನ್ನಡ ವೇದಿಕೆ ಅಧ್ಯಕ್ಷ ಎಸ್ ಬಾಲಕೃಷ್ಣ ಮಾತನಾಡಿ, ಕರ್ನಾಟಕ ಮತ್ತು ತಮಿಳುನಾಡು ಜನರ ಜೀವ ನದಿ ಕಾವೇರಿ ಮೈಸೂರಿನ ಇತಿಹಾಸ ತಿಳಿಯದ ಸಚಿವರು ವಿಧಾನಸೌಧದ ಎಲ್ಲೋ ಒಂದು ಮೂಲೆಯಲ್ಲಿ ಕುಳಿತು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಎಷ್ಟು ಸಮಂಜಸ. ಈಗಾಗಲೇ ಡಿ.ಸಿಎಂ. ಡಿ.ಕೆ.ಶಿವಕುಮಾರ ಅವರ ನಿರ್ಧಾರದಿಂದ ಆರ್‌.ಸಿ.ಬಿ ಕ್ರಿಕೆಟಿನ ವಿಜಯ್ಯೋತ್ಸವ ಆಚರಣೆಯಲ್ಲಿ ಕಾಲು ತುಳಿತಕ್ಕೆ 11 ಅಮಾಯಕ ಜನ ಬಲಿಯಾಗಿದ್ದಾರೆ. ಮೈಸೂರು ಮತ್ತು ಮಂಡ್ಯ ಭಾಗದ ಕೆಲವು ಶಾಸಕರು,ರೈತ ಹೋರಾಟಗಾರರು, ಕನ್ನಡ ಪರ ಹೋರಾಟಗಾರರು ಅಮ್ಯುಸ್ಮೆಂಟ್ ಪಾರ್ಕ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಆದರೆ ಸರ್ಕಾರದ ಮಂತ್ರಿಮಂಡಲದವರು ನಾವೇ ಕೆ.ಆರ್.ಎಸ್ ಅಣೆಕಟ್ಟು ಕಟ್ಟಿದ ರೀತಿಯಲ್ಲಿ ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.


ಮಂಡ್ಯ ಮತ್ತು ಮೈಸೂರು ಜನತೆಯನ್ನು ಗಣನೆಗೆ ತೆಗೆದುಕೊಳ್ಳದೆ ತುಘುಲಕ್ ದರ್ಬಾರಿನಂತೆ ಸರ್ಕಾರ ದರ್ಬಾರು ಮಾಡುತ್ತಿದೆ ಯಾವೊಬ್ಬ ರೈತನಿಗಾಗಲಿ ಕಿಂಚಿತ್ತು ಗೌರವ ನೀಡುತ್ತಿಲ್ಲ. ಕೋಟ್ಯಾಂತರ ಜನರಿಗೆ ಆಶ್ರಯವಾಗಿರುವ ಕಾವೇರಿ ನೀರು ಇವರ ಮನೆ ಸ್ವತ್ತಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ನೂರು ಕೋಟಿ ರೂ ವೆಚ್ಚ ಮಾಡಿ ಕಾವೇರಿ ಆರತಿ ಮಾಡುತ್ತಿವೆ ಅಂತ ಹೇಳುತ್ತಿದ್ದಾರೆ ಅದೇ ಹಣವನ್ನು ರೈತರ ನಿಧಿಗೆಂದು ಉಪಯೋಗಿಸಿದರೆ ಬೆಳೆ ನಷ್ಟವಾದಾಗ ಅಥವಾ ಯಾವುದಾದರೂ ಬಡ ರೈತ ತೀರಿಕೊಂಡರೆ ಪರಿಹಾರ ನೀಡಬಹುದು. ಇವೆಲ್ಲವನ್ನೂ ಲೆಕ್ಕಿಸದೆ ನಾವು ಕಾವೇರಿ ಆರತಿ ಮಾಡೇ ಮಾಡುತ್ತೇವೆ ಎಂದು ಪಟ್ಟು ಹಿಡಿತಿರುವುದು ರೈತರ ದಂಗೆ ಉಂಟು ಮಾಡುವುದಕ್ಕೆ ಎಡೆ ಮಾಡಿಕೊಡುತ್ತಿದೆ ಎಂದರು.
ನಾಲಾ ಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಗುರು ಬಸಪ್ಪ, ಮಾದಪ್ಪ, ಗೋವಿಂದರಾಜು, ಕಾವೇರಮ್ಮ, ಹರೀಶ್, ಮಾಲಿನಿ, ಪ್ರೇಮ, ಪುಷ್ಪ, ಸುನಿಲ್, ಶಿವು ಗೌಡ, ಚಿನ್ನಪ್ಪ, ಸ್ವಾಮಿ ಗೈಡ್, ಎಲ್ಐಸಿ ಸಿದ್ದಪ್ಪ, ಸ್ವಾಮಿ ಹೊನಕೆರೆ, ಮೋದಿ, ರಮೇಶ್ ಮುಂತಾದವರಿದ್ದರು.

Continue Reading

Mysore

ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನ ವೇದಿಕೆ ಉದ್ಘಾಟಿಸಿದ ರೊಟೇರಿಯನ್ ವಿಕ್ರಂದತ್ತ

Published

on

ಮೈಸೂರು : ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ವತಿಯಿಂದ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಡಿಸ್ಟ್ರಿಕ್ ಗವರ್ನರ್ ರೊಟೇರಿಯನ್ ವಿಕ್ರಂದತ್ತ ಉದ್ಘಾಟಿಸಿದರು.

ಶುಕ್ರವಾರ ಬೆಳಗ್ಗೆ ಶಾಲಾ ಆವರಣದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್‌ನಲ್ಲಿ ಇದುವರೆಗೂ ಅಧ್ಯಕ್ಷರಾಗಿದ್ದ ಎಲ್ಲರೂ ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡಿ ಗಮನಸೆಳೆದಿದ್ದಾರೆ. ಅದೇ ರೀತಿ ರೊಟೇರಿಯನ್ ಕೆ.ಎ.ಗೋವರ್ಧನ್ ಯಾದವ್ ಅವರೂ ಸಹ ಜಯನಗರ ಸರ್ಕಾರಿ ಶಾಲೆಗೆ ಅಗತ್ಯವಾಗಿ ಬೇಕಾದ ವೇದಿಕೆಯನ್ನು 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ.

ಈ ವೇದಿಕೆಯಲ್ಲಿ ಮಕ್ಕಳು ಯಾವುದೇ ಸಭೆ ಸಮಾರಂಭ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಬಹುದು. ಪಠ್ಯ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆ ಅನಾವರಣವಾಗುತ್ತದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಸಹಾಯ ಮಾಡುತ್ತದೆ. ಇಂತಹ ಶಾಶ್ವತ ಉಪಯೋಗಿ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆ ಮಾಡುತ್ತಿದೆ ಈ ಚಟುವಟಿಕೆ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.

 

ಕಳೆದ ಮಾರ್ಚ್‌ನಲ್ಲಿ ಇದೇ ವೇದಿಕೆ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ನೆರವೇರಿಸಿದ್ದೆ ಮೂರು ತಿಂಗಳ ಬಳಿಕ ನಾನೇ ಇದನ್ನು ಉದ್ಘಾಟಿಸುತ್ತಿರುವುದು ಸಂತಸ ತಂದಿದೆ. ಮಕ್ಕಳು ತಾವು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇವೆ ಎಂಬ ಕೀಳರಿಮೆ ಬಿಟ್ಟು ಉತ್ತಮವಾಗಿ ಕಲಿತು ನಿಮ್ಮ ಶಾಲೆಗೆ ನಾಡಿಗೆ ಪೋಷಕರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಮಕ್ಕಳಿಗೆ ಬಿಸಿಯೂಟ, ಬಾಳೆಹಣ್ಣು, ಮೊಟ್ಟೆ, ಉಚಿತ ಸಮವಸ್ತ್ರ, ಉಚಿತ ಪುಸ್ತಕಗಳನ್ನು ನೀಡುವುದರ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಈ ರೀತಿ ಹಲವಾರು ಕಾರ್ಯಕ್ರಮಗಳು ಸರ್ಕಾರ ಒದಗಿಸುತ್ತಿದೆ. ಇದರ ಜತೆಗೆ ಸಂಘ ಸಂಸ್ಥೆಗಳು ಸಹ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪದಾಧಿಕಾರಿಗಳನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಬಡೆಸಿಕೊಟ್ಟರು.

ಈ ಸಂದರ್ಭದಲ್ಲಿ ರೊಟೇರಿಯನ್‌ಗಳಾದ ಎಂ.ರಾಜೀವ್, ಎಂ.ಮೋಹನ್, ಕೆ.ಎ.ಗೋವರ್ಧನ್ ಯಾದವ್, ಆರ್.ರಮೇಶ್‌ರಾವ್, ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಸರಾದ ಡಾ.ಈ.ಸಿ.ನಿಂಗರಾಜ್ ಗೌಡ, ವೆಂಕಟೇಶ್, ನಾಗರಾಜ್, ರಾಕೇಶ್ ಭಟ್, ಮುರಳಿ, ರವೀಂದ್ರ ಸೇರಿದಂತೆ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Continue Reading

Trending

error: Content is protected !!