Connect with us

State

ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ “ಮಂತ್ರಾಕ್ಷತೆ” ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ “ಅನ್ನಭಾಗ್ಯ”ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ “ಯುವನಿಧಿ”ಯೇ ಮಂತ್ರಾಕ್ಷತೆ, ಮಹಿಳೆಯರ ಕಷ್ಟಕ್ಕೆ “ಗೃಹಲಕ್ಷ್ಮಿ”ಯೇ ಮಂತ್ರಾಕ್ಷತೆ, ಮಹಿಳೆಯರ ಪ್ರಯಾಣಕ್ಕೆ “ಶಕ್ತಿ”ಯೇ ಮಂತ್ರಾಕ್ಷತೆ, ಮನೆಯ ಬೆಳಕಿಗೆ “ಗೃಹಜ್ಯೋತಿ”ಯೇ ಮಂತ್ರಾಕ್ಷತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

“ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಮೂಲಕ ಫಲಾನುಭವಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿವೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಿಗುತ್ತಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರಿಗೆ ಹಣ ತಲುಪಿಲ್ಲ. ಆ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಶೀಘ್ರವಾಗಿ ಅವರಿಗೂ ಹಣ ನೀಡಲಾಗುವುದು. ಇಲ್ಲಿರುವ ಕೌಂಟರ್ ಗಳಲ್ಲಿ ಈ ಯೋಜನೆ ಸಿಗದವರು ಕೂಡ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಫಲಾನುಭವಿಯಾಗಬಹುದು.

ರಾಜಕಾರಣ ಮುಖ್ಯವಲ್ಲ, ನಿಮ್ಮ ಬದುಕು ಮುಖ್ಯ

ಈ ವಿಧಾನಸಭೆ ಕ್ಷೇತ್ರದಲ್ಲಿ ನಾವು ಸೋತಿದ್ದರೂ ನಿಮ್ಮ ಮೇಲೆ ವಿಶ್ವಾಸ ಇಟ್ಟು ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ.

ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ.

ನಮಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕು ಮುಖ್ಯ. ನಿಮ್ಮ ಬದುಕು ಹಸನಾಗಿಸಲು ನಾವು ಕೆಲಸ ಮಾಡುತ್ತೇವೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಕಳೆದ ಸರ್ಕಾರದ ಪಾಠ ಪುನರಾವರ್ತನೆ ಆಗಿದೆ:

ಅನುದಾನ ಬಿಡುಗಡೆ ವಿಚಾರದಲ್ಲಿ ಕಳೆದ ಸರ್ಕಾರ ಕಲಿಸಿದ ಪಾಠ ಈಗ ಪುನರಾವರ್ತನೆಯಾಗಿದೆ. ಆದರೂ ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇವೆ.

ಈ ಭಾಗದ ಶಾಸಕರಾದ ಭೈರತಿ ಬಸವರಾಜು ಹಾಗೂ ಮಹದೇವಪುರದ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರು, ಸಂಚಾರ ದಟ್ಟಣೆ, ರಾಜಕಾಲುವೆ, ಮಳೆ ನೀರುಗಾಲುವೆ, ಕಸ ವಿಲೇವಾರಿ ವಿಚಾರವಾಗಿ ಗಮನ ಸೆಳೆದಿದ್ದಾರೆ.

ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಜಾಗಗಳನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಕಸವನ್ನು ಗುಡ್ಡೆ ಹಾಕಿಕೊಂಡರೆ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಅವುಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ರಾಜಕಾಲುವೆ ಹೂಳೆತ್ತುವ ವಿಚಾರದಲ್ಲಿ NGT ಆದೇಶ ಪಾಲನೆ ಮಾಡಬೇಕಿದೆ. ಆ ಆದೇಶದ ಪ್ರಕಾರ ರಾಜಕಾಲುವೆ ಪಕ್ಕ 50 ಮೀಟರ್ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಹೀಗಾಗಿ ರಾಜಕಾಲುವೆ ಪಕ್ಕದ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಅಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ರಾಜಕಾಲುವೆ ಹೂಳೆತ್ತಲು ಸಹಕಾರಿ ಆಗುತ್ತದೆ. ಜತೆಗೆ ಸ್ಥಳೀಯ ನಾಗರೀಕರ ಸಂಚಾರಕ್ಕೆ ಹೊಸ ರಸ್ತೆ ಸಿಕ್ಕಂತಾಗುತ್ತದೆ.

ನಿಮ್ಮ ಮನೆ ಬಾಗಿಲಿಗೆ ಆಸ್ತಿ ದಾಖಲೆ ಪತ್ರ ವಿತರಣೆ:

ಇನ್ನು ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ.

ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ. ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ದೂರು ನೀಡಿ.”

ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ ಸಮಸ್ಯೆಗಳ ಬಗ್ಗೆ ಅಹವಾಲು ನೀಡಿ. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.

State

INDvsENG 1st t20: ಟೀಂ ಇಂಡಿಯಾ ಅಲ್‌ರೌಂಡರ್‌ ಪ್ರದರ್ಶನ; ಸೂರ್ಯ ಬಳಕ್ಕೆ ಮೊದಲ ಜಯ

Published

on

ಕೊಲ್ಕತ್ತಾ: ಭಾರತ ತಂಡದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ನಲುಗಿದ ಇಂಗ್ಲೆಂಡ್‌ ತಂಡ ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಅಂತರದಿಂದ ಗೆಲುವು ದಾಖಲಿಸಿದೆ.

ಇಲ್ಲಿನ ಈಡೆನ್‌ ಗಾರ್ಡೆನ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ 132 ರನ್‌ ಗಳಿಸಿ ಟೀಂ ಇಂಡಿಯಾಗೆ 133 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿ ಭಾರತ ತಂಡ 12.5 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 133 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಇಂಗ್ಲೆಂಡ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ಪರವಾಗಿ ಬೆನ್‌ ಡಕೆಟ್‌ ಹಾಗೂ ಫಿಲ್‌ ಸಾಲ್ಟ್‌ ಇನ್ನಿಂಗ್ಸ್‌ ಆರಂಭಿಸಿದರು. ಸಾಲ್ಟ್‌ ಶೂನ್ಯ ಸುತ್ತಿ ಹೊರನಡೆದರೇ, ಡಕೆಟ್‌ 4(4) ರನ್‌ ಗಳಿಸಿ ಇನ್ನಿಂಗ್ಸ್‌ ಮುಗಿಸಿದರು.

ನಾಯಕ ಜೋಸ್‌ ಬಟ್ಲರ್‌ 44 ಎಸೆತ 8 ಬೌಂಡರಿ, 2 ಸಿಕ್ಸರ್‌ ಸಹಿತ 68 ರನ್‌ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಅಧಿಕ ರನ್‌. ಬಟ್ಲರ್‌ ಏಕಾಂಕಿ ಹೋರಾಟದ ಫಲವಾಗಿ ಇಂಗ್ಲೆಂಡ್‌ ನೂರರ ಗಡಿ ದಾಟಿತು.

ಉಳಿದಂತೆ ಹ್ಯಾರಿ ಬ್ರೂಕ್‌ 17(14), ಲಿವಿಂಗ್‌ಸ್ಟೋನ್‌ ಡಕ್‌ಔಟ್‌, ಬೆಥೆಲ್‌ 7(14), ಓವರ್‌ಟನ್‌ 2(4), ಆಟ್ಕಿನ್ಸನ್‌ 2(13), ಜೋಫ್ರಾ ಆರ್ಚರ್‌ 12(10), ಮಾರ್ಕ್‌ವುಡ್‌ 1(1) ಹಾಗೂ ಆದಿಲ್‌ ರಶೀದ್‌ ಔಟಾಗದೇ 8(11) ರನ್‌ ಗಳಿಸಿದರು.

ಟೀಂ ಇಂಡಿಯಾ ಪರ ವರುಣ್‌ ಚಕ್ರವರ್ತಿ 3, ಅರ್ಶದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ ಹಾಗೂ ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಕಬಳಿಸಿ ಮಿಂಚಿದರು.

ಟೀಂ ಇಂಡಿಯಾ ಇನ್ನಿಂಗ್ಸ್‌: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್‌ ಶರ್ಮಾ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಸಂಜು ಸ್ಯಾಮ್ಸನ್‌ 26(20) ರನ್‌ ಗಳಿಸಿದರೇ, ನಾಯಕ ಸೂರ್ಯಕುಮಾರ್‌ ಯಾದವ್‌ ಡಕ್‌ಔಟ್‌ ಆಗಿ ಹೊರನಡೆದರು.

ಇತ್ತ ಆರಂಭದಿಂದಲೇ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಅಭಿಷೇಕ್‌ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ ಭರ್ಜರಿ 8 ಸಿಕ್ಸರ್‌ಗಳ ಸಹಾಯದಿಂದ 79 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಜೊತೆಯಾದ ತಿಲಕ್‌ ವರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ ಕ್ರಮವಾಗಿ 19 ಹಾಗೂ 3 ರನ್‌ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಇಂಗ್ಲೆಂಡ್‌ ಪರ ಜೋಫ್ರಾ ಆರ್ಚರ್‌ ಎರಡು, ಆದಿಲ್‌ ರಶೀದ್‌ ಒಂದು ವಿಕೆಟ್‌ ಕಬಳಿಸಿದರು.

Continue Reading

State

ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ

Published

on

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 3ಲಕ್ಷ ಪರಿಹಾರ ಘೋಷಿಸಲಾಗಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.

ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.

ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಆಫ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ ಪರಿಹಾರ ಘೋಷಿಸಿದ್ದಾರೆ.

Continue Reading

State

ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?

Published

on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್‌ ಕೊಟ್ಟರು.

ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Continue Reading

Trending

error: Content is protected !!