State
ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ “ಮಂತ್ರಾಕ್ಷತೆ” ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ “ಅನ್ನಭಾಗ್ಯ”ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ “ಯುವನಿಧಿ”ಯೇ ಮಂತ್ರಾಕ್ಷತೆ, ಮಹಿಳೆಯರ ಕಷ್ಟಕ್ಕೆ “ಗೃಹಲಕ್ಷ್ಮಿ”ಯೇ ಮಂತ್ರಾಕ್ಷತೆ, ಮಹಿಳೆಯರ ಪ್ರಯಾಣಕ್ಕೆ “ಶಕ್ತಿ”ಯೇ ಮಂತ್ರಾಕ್ಷತೆ, ಮನೆಯ ಬೆಳಕಿಗೆ “ಗೃಹಜ್ಯೋತಿ”ಯೇ ಮಂತ್ರಾಕ್ಷತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.
ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;
“ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಮೂಲಕ ಫಲಾನುಭವಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿವೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಿಗುತ್ತಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರಿಗೆ ಹಣ ತಲುಪಿಲ್ಲ. ಆ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಶೀಘ್ರವಾಗಿ ಅವರಿಗೂ ಹಣ ನೀಡಲಾಗುವುದು. ಇಲ್ಲಿರುವ ಕೌಂಟರ್ ಗಳಲ್ಲಿ ಈ ಯೋಜನೆ ಸಿಗದವರು ಕೂಡ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಫಲಾನುಭವಿಯಾಗಬಹುದು.

ರಾಜಕಾರಣ ಮುಖ್ಯವಲ್ಲ, ನಿಮ್ಮ ಬದುಕು ಮುಖ್ಯ
ಈ ವಿಧಾನಸಭೆ ಕ್ಷೇತ್ರದಲ್ಲಿ ನಾವು ಸೋತಿದ್ದರೂ ನಿಮ್ಮ ಮೇಲೆ ವಿಶ್ವಾಸ ಇಟ್ಟು ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ.
ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ.
ನಮಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕು ಮುಖ್ಯ. ನಿಮ್ಮ ಬದುಕು ಹಸನಾಗಿಸಲು ನಾವು ಕೆಲಸ ಮಾಡುತ್ತೇವೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಕಳೆದ ಸರ್ಕಾರದ ಪಾಠ ಪುನರಾವರ್ತನೆ ಆಗಿದೆ:
ಅನುದಾನ ಬಿಡುಗಡೆ ವಿಚಾರದಲ್ಲಿ ಕಳೆದ ಸರ್ಕಾರ ಕಲಿಸಿದ ಪಾಠ ಈಗ ಪುನರಾವರ್ತನೆಯಾಗಿದೆ. ಆದರೂ ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇವೆ.
ಈ ಭಾಗದ ಶಾಸಕರಾದ ಭೈರತಿ ಬಸವರಾಜು ಹಾಗೂ ಮಹದೇವಪುರದ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರು, ಸಂಚಾರ ದಟ್ಟಣೆ, ರಾಜಕಾಲುವೆ, ಮಳೆ ನೀರುಗಾಲುವೆ, ಕಸ ವಿಲೇವಾರಿ ವಿಚಾರವಾಗಿ ಗಮನ ಸೆಳೆದಿದ್ದಾರೆ.
ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಜಾಗಗಳನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಕಸವನ್ನು ಗುಡ್ಡೆ ಹಾಕಿಕೊಂಡರೆ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಅವುಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜಕಾಲುವೆ ಹೂಳೆತ್ತುವ ವಿಚಾರದಲ್ಲಿ NGT ಆದೇಶ ಪಾಲನೆ ಮಾಡಬೇಕಿದೆ. ಆ ಆದೇಶದ ಪ್ರಕಾರ ರಾಜಕಾಲುವೆ ಪಕ್ಕ 50 ಮೀಟರ್ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಹೀಗಾಗಿ ರಾಜಕಾಲುವೆ ಪಕ್ಕದ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಅಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ರಾಜಕಾಲುವೆ ಹೂಳೆತ್ತಲು ಸಹಕಾರಿ ಆಗುತ್ತದೆ. ಜತೆಗೆ ಸ್ಥಳೀಯ ನಾಗರೀಕರ ಸಂಚಾರಕ್ಕೆ ಹೊಸ ರಸ್ತೆ ಸಿಕ್ಕಂತಾಗುತ್ತದೆ.

ನಿಮ್ಮ ಮನೆ ಬಾಗಿಲಿಗೆ ಆಸ್ತಿ ದಾಖಲೆ ಪತ್ರ ವಿತರಣೆ:
ಇನ್ನು ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ.
ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ. ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ದೂರು ನೀಡಿ.”
ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ ಸಮಸ್ಯೆಗಳ ಬಗ್ಗೆ ಅಹವಾಲು ನೀಡಿ. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.
State
ಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಬಿ.ಜಗನ್ನಾಥ್ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂಬ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
Politics
ವಿಬಿ ಜಿ ರಾಮ್ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್ಜಿ ಕಾಯ್ದೆವಿಚಾರದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.
ವಿಧಾನಸೌಧದಲ್ಲಿ ಇಂದು ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್ ನೀಡಿದರು.
ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.
ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.
Politics
ಪ್ರಧಾನಿ ಮೋದಿ-ಟ್ರಂಪ್ ನಡುವಿನ ಒಪ್ಪಂದ ಮಹತ್ವದ ಮೈಲಿಗಲ್ಲು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
-
National12 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Special16 hours agoಪೋಸ್ಟ್ ಆಫೀಸ್ ಉದ್ಯೋಗ ಅವಕಾಶ: ನೇರ ನೇಮಕಾತಿ
-
Hassan6 hours agoಎಸ್ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್ಡಿಪಿಐ ಮುಖಂಡ
-
Special6 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
Kodagu18 hours agoಹೂಡಿಕೆ ಹೆಸರಲ್ಲಿ ಸೈಬರ್ ವಂಚನೆ : 1.14 ಕೋಟಿ ರೂ. ಕಳೆದುಕೊಂಡ ಸಿದ್ದಾಪುರದ ವ್ಯಕ್ತಿ
-
State7 hours agoಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Kodagu8 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Mandya10 hours agoಅದ್ದೂರಿಯಾಗಿ ಜರುಗಿದ ಶ್ರೀ ಮಾರಮ್ಮ ದೇವಿ ಅಮ್ಮನವರ 3 ನೇ ವರ್ಷದ ವಾರ್ಷಿಕೋತ್ಸವ
