State
ನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.19: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಸೋಮವಾರ ಹೇಳಿದ್ದಿಷ್ಟು:
“ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ.”
ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದರು.
ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.
ಶಾಸಕರಾದ ಸೋಮಶೇಖರ್, ಗೋಪಾಲಯ್ಯ ಜತೆ ವೈಯಕ್ತಿಕ ಬಾಂಧವ್ಯವಿದೆ:
ಸೋಮಶೇಖರ್ ಅವರ ಜತೆ ವಿಮಾನ ಪ್ರಯಾಣ ಹಾಗೂ ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ” ಎಂದು ತಿಳಿಸಿದರು.
ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ತಿಳಿಸಿದರು.
ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ:
ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಜಾತಿ ಕೆಡಿಸಿ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.
ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಅವರು ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ.
ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?
“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದರು.
ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು:
ಸಚಿವರು ಲೋಕಸಭೆ ಚುನಾವಣೆಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ತಿಳಿಸಿದರು.
ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು ನಾವು:
ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.
ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ” ಎಂದರು.
ಬರ ನಿರ್ವಹಣೆಗೆ ಅಗತ್ಯ ಕ್ರಮ:
ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.
ತಮಿಳುನಾಡಿನಲ್ಲಿ ಕಮಲ್ ಹಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.
ಶಾಸಕರ ವಿರುದ್ಧದ ಎಫ್ಐಆರ್ ಖಂಡಿಸಿ ಬಿಜೆಪಿ, ವಿಹೆಚ್ ಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸ್ನೇಹಿತರು ನಮಗೆ ಕೆಲವು ಪಾಠ ಕಲಿಸಿದ್ದು, ನಾವು ಆ ಪಾಠ ಕಲಿತಿದ್ದೇವೆ” ಎಂದರು.
State
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?

Cochin Shipyard Recruitment – ಮಿನಿರತ್ನ ಕಂಪನಿಯಾಗಿರುವ ಕೋಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ 70 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಬಾಕಿ ಇದೆ.
ಹಾಗಿದ್ದರೆ ಈ ನೇಮಕಾತಿಯಲ್ಲಿ ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ..
ಯಾವ ಯಾವ ಹುದ್ದೆಗಳು ಖಾಲಿ ಇವೆ?
• Scaffolder ಹುದ್ದೆಗಳು – 11
• Semi Skilled Rigger – 59 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?
• Scaffolder ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 2 ವರ್ಷದ ಅನುಭವ ಹೊಂದಿರಬೇಕು.
• Semi Skilled Rigger ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ ಅರ್ಹತೆ – ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು ಇರಲಿದೆ?
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,100 ಸಂಬಳದ ಜೊತೆಗೆ ಹೆಚ್ಚಿನ ಕೆಲಸಕ್ಕೆ ಮಾಸಿಕ ₹5,530 ರೂ. ಪಡೆಯುವ ಅವಕಾಶವಿದೆ.
ಅರ್ಜಿ ಶುಲ್ಕ – 200ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಮಾರ್ಚ್ 2025
ಅರ್ಜಿ ಸಲ್ಲಿಸುವ ವಿಧಾನ : ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.
ಅಧಿಕೃತ ಜಾಲತಾಣ – https://cochinshipyard.in/careerdetail/career_locations/672
State
ಎಚ್ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಫಸ್ಟ್ ರಿಯಾಕ್ಷನ್

ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್ ನಾಯಕರಿಗೆ ಹೇಳಿದ್ದೇನೆ. ಎಚ್ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.
State
ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್ಸಿ ರಾಜೇಂದ್ರ ಹೊಸ ಬಾಂಬ್

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
-
Special12 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State8 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan9 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State7 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
State9 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
Kodagu5 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan6 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Hassan5 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ