Connect with us

State

ನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು, ಫೆ.19: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಸೋಮವಾರ ಹೇಳಿದ್ದಿಷ್ಟು:

“ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ.”

ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಸೋಮಶೇಖರ್, ಗೋಪಾಲಯ್ಯ ಜತೆ ವೈಯಕ್ತಿಕ ಬಾಂಧವ್ಯವಿದೆ:

ಸೋಮಶೇಖರ್ ಅವರ ಜತೆ ವಿಮಾನ ಪ್ರಯಾಣ ಹಾಗೂ ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ” ಎಂದು ತಿಳಿಸಿದರು.

ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ತಿಳಿಸಿದರು.

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ:

ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಜಾತಿ ಕೆಡಿಸಿ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.

ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಅವರು ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ.

ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?

“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದರು.

ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು:

ಸಚಿವರು ಲೋಕಸಭೆ ಚುನಾವಣೆಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ತಿಳಿಸಿದರು.

ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು ನಾವು:

ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.

ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ” ಎಂದರು.

ಬರ ನಿರ್ವಹಣೆಗೆ ಅಗತ್ಯ ಕ್ರಮ:

ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ಕಮಲ್ ಹಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.

ಶಾಸಕರ ವಿರುದ್ಧದ ಎಫ್ಐಆರ್ ಖಂಡಿಸಿ ಬಿಜೆಪಿ, ವಿಹೆಚ್ ಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸ್ನೇಹಿತರು ನಮಗೆ ಕೆಲವು ಪಾಠ ಕಲಿಸಿದ್ದು, ನಾವು ಆ ಪಾಠ ಕಲಿತಿದ್ದೇವೆ” ಎಂದರು.

Continue Reading
Click to comment

Leave a Reply

Your email address will not be published. Required fields are marked *

Special

ಕರ್ನಾಟಕದಲ್ಲಿ 2.93 ಲಕ್ಷ ಹೊಸ BPL ಕಾರ್ಡ್ ಬಿಡುಗಡೆ : ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಇದೆಯೇ?

Published

on

ಕರ್ನಾಟಕ ಸರ್ಕಾರದಿಂದ ಬಡ ಕುಟುಂಬಗಳ ಸಹಾಯಕ್ಕಾಗಿ ಹೊಸ BPL (Below Poverty Line) ಕಾರ್ಡ್ ವಿತರಣೆ ಕಾರ್ಯ ನಡೆದಿದೆ. ರಾಜ್ಯದಾದ್ಯಂತ ಸುಮಾರು 2.93 ಲಕ್ಷ ಹೊಸ BPL ಕಾರ್ಡ್‌ಗಳು ಮಂಜೂರಾಗಿದ್ದು, ಅರ್ಜಿ ಸಲ್ಲಿಸಿದ ಕುಟುಂಬಗಳು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಈಗಲೇ ಪರಿಶೀಲಿಸಬಹುದು.

ಹೊಸ BPL ಕಾರ್ಡ್ ಪಡೆಯಲು ಅರ್ಹರು:
•ಆರ್ಥಿಕವಾಗಿ ದುರ್ಬಲ ಮತ್ತು ಬಡ ಕುಟುಂಬಗಳು
•ಆದಾಯ ಮಿತಿ ಸರ್ಕಾರ ನಿಗದಿಪಡಿಸಿರುವ ಮಾನದಂಡಕ್ಕೆ ಒಳಪಡುವವರು
•ಹಿಂದಿನಿಂದಲೂ BPL ಕಾರ್ಡ್ ಸಲ್ಲಿಸಿದರೂ ಮಂಜೂರಾಗದ ಕುಟುಂಬಗಳು
•ಪರಿಶೀಲನಾ ಹಂತದಲ್ಲಿ ತಪ್ಪಾಗಿ APL ಪಟ್ಟಿಗೆ ಸೇರಿಸಲ್ಪಟ್ಟ ಕುಟುಂಬಗಳು

ಪಟ್ಟಿ ಪರಿಶೀಲನೆ ಮಾಡುವುದು ಹೇಗೆ?
•ಅಧಿಕೃತ ಸಾರ್ವಜನಿಕ ಪೋರ್ಟಲ್‌ಗೆ ಭೇಟಿ ನೀಡಿ ನಿಮ್ಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಆಯ್ಕೆ ಮಾಡಿ
•ಕುಟುಂಬದ ಮುಖ್ಯಸ್ಥರ ಹೆಸರು ಅಥವಾ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ
•‘Search’ ಒತ್ತಿದರೆ ಪಟ್ಟಿಯಲ್ಲಿ ನಿಮ್ಮ ವಿವರಗಳು ಕಾಣಿಸುತ್ತವೆ

ಈ ಹೊಸ ಹಂತದ ಮಹತ್ವ:
ಮುನ್ನಡೆಯ ವರ್ಷಗಳಲ್ಲಿ BPL ಕಾರ್ಡ್‌ಗಳ ಸಂಖ್ಯೆಯಲ್ಲಿ ಗೊಂದಲ, ಅನರ್ಹರ ಸೇರ್ಪಡೆ, ಅರ್ಹರು ಹೊರಬೀಳುವ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ವಿಮರ್ಶೆ ನಡೆಸಿ ಹೊಸ ವ್ಯವಸ್ಥೆ ತರಲಾಗಿದೆ.

BPL ಕಾರ್ಡ್ ಪಡೆಯುವ ಪ್ರಯೋಜನಗಳು:
•ಅನ್ನಭಾಗ್ಯ ಯೋಜನೆಯಡಿ ಉಚಿತ/ಕಡಿಮೆ ದರದ ಧಾನ್ಯ
•ಸಿಲಿಂಡರ್, ಆರೋಗ್ಯ, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅನೇಕ ಸರ್ಕಾರಿ ಯೋಜನೆಗಳ ಸೌಲಭ್ಯ
•ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳಿಗೆ ಅರ್ಹತೆ

ಅರ್ಹ ಕುಟುಂಬಗಳು ಯಾವುದೇ ವಿಳಂಬವಿಲ್ಲದೆ ಪಡಿತರ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಬಹುದು.ಕರ್ನಾಟಕದ 2.93 ಲಕ್ಷ ಹೊಸ BPL ಕಾರ್ಡ್ ವಿತರಣೆಯು ಹಲವು ಬಡ ಕುಟುಂಬಗಳಿಗೆ ನಿಜವಾದ ಆಶಾಕಿರಣ.

Continue Reading

State

ನಾಳೆ KSCA ಚುನಾವಣಾ ಮತದಾನ: ವೆಂಕಟೇಶ್‌ ಪ್ರಸಾದ್ v/s ಬ್ರಿಜೇಶ್ ಪಟೇಲ್ ಬಣಗಳ ಮಧ್ಯೆ ಜಿದ್ದಾಜಿದ್ದಿ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಚುನಾವಣಾ ಮತದಾನ ನಾಳೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣ ಮ ಬ್ರಿಜೇಶ್ ಪಟೇಲ್  ಬಣಗಳ ಮಧ್ಯೆ  ಭಾರೀ ಹಣಾಹಣಿ ನಡೆದಿದೆ.
ಚುನಾವಣೆಯನ್ನು ಸುತ್ತುವರಿದ ವಿವಾದಗಳ ನಡುವೆ ಇಂದು ಪ್ರಸಾದ್ ಬಣವೂ ಕೆಎಸ್‌ಸಿಎ ಸದಸ್ಯರೊಂದಿಗೆ ಸಂವಾದ ನಡೆಸಿತು.

ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.

ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.

Continue Reading

State

ಡಿವೈಡರ್‌ಗೆ ಕಾರ್‌ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published

on

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹೊತ್ತಿ ಉರಿದ ಕಾರಿನಿಂದ ಹೊರಬರಲು ಸಾಧ್ಯವಾಗದೇ ಇನ್ಸ್‌ಪೆಕ್ಟರ್ ಕೂಡ ಅದರ ಒಳಗೆ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

Trending

error: Content is protected !!