State
ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವರಿ, 29: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ.
ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.
ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.
State
ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 4 ಸಾವಿರ ರೂ. ಹಣ ಈ ದಿನ ಜಮವಾಗಲಿದೆ : ಸ್ಟೇಟಸ್ ಚೆಕ್ ಮಾಡುವುದು ಹೇಗೆ?

Gruhalakshmi Scheme Pending Amount Credit Date – ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಜಮವಾಗುವ 2000ರೂ. ಹಣವು ಕಳೆದ ಎರಡು ತಿಂಗಳಿನಿಂದ ಪಲಾನುಭವಿಗಳ ಖಾತೆಗೆ ವಿವಿಧ ಕಾರಣಕ್ಕಾಗಿ ಜಮವಾಗಿಲ್ಲ.
ಇದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದ ಮುಕಾಂತರ ಪಲಾನುಭವಿಗಳಿಗೆ ಬಾಕಿ ಇರುವ ಎರಡು ಕಂತುಗಳ 4 ಸಾವಿರ ರೂಪಾಯಿ ಹಣವನ್ನು ಶೀಘ್ರದಲ್ಲಿಯೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯಾವಾಗ ಜಮಾವಾಗಲಿದೆ? ಜಮಾವಾದ ಹಣವನ್ನು ಪರಿಶೀಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ..
ಯಾವ ದಿನಾಂಕದಂದು ಜಮವಾಗಲಿದೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ ಪ್ರಕಾರ ಬಾಕಿ ಇರುವ ಎರಡು ಕಂತುಗಳ 4,000ರೂ. ಹಣವನ್ನು ಶೀಘ್ರದಲ್ಲಿಯೆ ಅಂದರೆ ಮಾರ್ಚ್ 31 ರನಂತರ ಖಚಿತವಾಗಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜಮವಾದ ಹಣದ ಸ್ಟೇಟಸ್ ಪರಿಶೀಲಿಸುವುದು ಹೇಗೆ?
ಗೃಹಲಕ್ಷ್ಮಿ ಯೋಜನೆಯ ಬಾಕಿ ಮೊತ್ತ ಜಮವಾದ ಹಣದ ಸ್ಟೇಟಸ್ ನೀವು ನಿಮ್ಮ ಮೊಬೈಲ್ ಮುಕಾಂತರ ಸುಲಭವಾಗಿ DBT ಅಪ್ ಮುಕಾಂತರ ಪರಿಶೀಲಿಕೊಳ್ಳಬಹುದು. ಗೂಗಲ್ ಪ್ಲೇ ಸ್ಟೋರ್ ನಲ್ಲಿ DBT ಆಪ್ ಡೌನ್ಲೋಡ್ ಮಾಡಿ, ನೋಂದಣಿಯಾಗಿ ನಿಮ್ಮ ಆಧಾರ್ ಕಾರ್ಡ್ ಮುಕಾಂತರ ನಿಮ್ಮ ಖಾತೆಗೆ ಜಮವಾಗುವುದರ ಕುರಿತು ಪರಿಶೀಲಿಕೊಳ್ಳಿ. DBT ಆಪ್ ನ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಕೆಳಗಡೆ ನೀಡಲಾಗಿದೆ.
DBT ಆಪ್ ಲಿಂಕ್ – https://play.google.com/store/apps/details?id=com.dbtkarnataka
State
ಮುನಿರತ್ನನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು: ಕೆ.ಎನ್ ರಾಜಣ್ಣ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.
State
ಫೋನ್ ಕದ್ದಾಲಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಿಷ್ಟು?

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಫೋನ್ ಕದ್ದಾಲಿಕೆಯಾಗಿದೆ. ಇದೇ ರೀತಿ ಹಲವು ಶಾಸಕರ ಫೋನ್ ಕದ್ದಾಲಿಕೆಯಾಗಿದೆ. ರಾಜಣ್ಣ ಮತ್ತು ರಾಜೇಂದ್ರ ಅವರನ್ನು ಟ್ರ್ಯಾಪ್ ಮಾಡಲು ಕದ್ದಾಲಿಕೆ ಮಾಡಿಸಿದ್ದಾರೆ. ಈ ಬಗ್ಗೆ ನಾನು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಿದ್ದೇವೆ. ಸುಮಾರು 2 ವರ್ಷಗಳಿಂದಲೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದರು.
ಇನ್ನು ನಾವು ಧರ್ಮಾಧಾರಿತ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದೇವೆ. ಮೀಸಲಾತಿ ಭೂತವನ್ನು ರಾಜ್ಯದ ಹಿಂದೂಗಳ ಮೇಲೆ ಹೇರುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶೇ.5ರಷ್ಟು ಮುಸ್ಲಿಮರು ಗುತ್ತಿಗೆದಾರರಾಗಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಬೇಡ ಎಂದಿದ್ದಾರೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.
-
Mandya6 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan13 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya9 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Hassan12 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu9 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Mandya8 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan8 hours ago
ಮತಾಂತರಕ್ಕೆ ಪ್ರಯತ್ನಿಸುತ್ತಿರುವುದಾಗಿ ಸುಳ್ಳು ದೂರು ದಾಖಲು: ಪ್ರಶಾಂತ್