Mysore
ನಾಲೆಯಿಂದ ಹರಿಯುತ್ತಿರುವ ತ್ಯಾಜ್ಯ ನೀರು

ಉರಿದು ಹೋದ ಭತ್ತದ ಬೆಳೆ
ಹತ್ತಾರು ಎಕರೆಯಲ್ಲಿ ಬೆಳೆದ ಭತ್ತ ನಾಶವಾಗುವ ಭೀತಿ
ಇದು ಚುಂಚನಕಟ್ಟೆ ಕಟ್ಟೆಪುರ ನಾಲಾ ವ್ಯಾಪ್ತಿಯ ರೈತರ ಗೋಳು.
ಸಾಲಿಗ್ರಾಮ ತಾಲ್ಲೋಕಿನ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯ ತ್ಯಾಜ್ಯ ನೀರು ಕಟ್ಟೆಪುರ ನಾಲೆಯನ್ನು ಸೇರಿ ರೈತರ ಜಮೀನುಗಳಿಗೆ ನಿರಂತರವಾಗಿ ಹರಿದ ಕಾರಣ ರಾಸಾಯನಿಕ ಮಿಶ್ರಣದ ನೀರಿನ ಕಾರಣ ಹುಲುಸಾಗಿ ಬೆಳೆದಿದ್ದ ಭತ್ತದ ಪೈರುಗಳು ಇದೀಗ ಬೆಂಕಿಯಲ್ಲಿ ಸುಟ್ಟಂತೆ ಆಗುತ್ತಿದ್ದು ಅಲ್ಲದೇ ರೈತರ ಮನವಿಗೂ ಸ್ಪಂದಿಸದೇ ಇಂದಿಗೂ ನೀರು ಹರಿಯುತ್ತಿರುವುದು ಸಮಸ್ಯೆ ಹೆಚ್ಚಾಗುವಂತೆ ಮಾಡಿದೆ.
ಕಳೆದ ೧೦ವರ್ಷಗಳಿಂದ ಸ್ಥಗಿತವಾಗಿದ್ದ ಕಾರ್ಖಾನೆ ಕಳೆದ ಹಂಗಾಮಿನಲ್ಲಿ ನಿರಾಣಿ ಶುಗರ್ಸ ಮಾಲೀಕತ್ವದಲ್ಲಿ ಆರಂಭವಾಗಿದ್ದು ಕಳೆದ ವರ್ಷವೇ ಕಾರ್ಖಾನೆಯ ತ್ಯಾಜ್ಯ ವಿಷಯುಕ್ತ ನೀರು ಹರಿದಿದ್ದರೂ, ಅಲ್ಲದೇ ಈ ಭಾಗದ ರೈತರು ದೂರಿದಾಗ ತ್ಯಾಜ್ಯ ನೀರನ್ನು ಬೇರೆಡೆಗೆ ಪಂಪ್ ಮಾಡಲಾಗುತ್ತದೆ ಕಾರ್ಖಾನೆಯ ತ್ಯಾಜ್ಯ ನೀರನ್ನು ಈ ಹಿಂದಿನಿ0ದಲೂ ಕಾರ್ಖಾನೆಯ ಮಾಳದಲ್ಲಿ ತೆರೆದ ಬಾವಿಯನ್ನು ಮಾಡಿದ್ದು,ಅಲ್ಲಿಗೆ ಪೈಪ್ಗಳ ಮೂಲಕ ಸಾಗಿಸಿ ತುಂಬಿಸಲಾಗುತ್ತಿತ್ತು.ಆದರೆ ಅಲ್ಲಿನ ಪೈಪ್ಲೈನ್ ಹಾಳಾದ ಕಾರಣ ರೈತರು ಕೇಳಿದಾಗ ಪಂಪ್ ಮಾಡುವ ನಾಟಕವಾಡಿ ಬೇರೆ ಸಮಯದಲ್ಲಿ ನಾಲೆಗೆ ನೀರು ಬಿಡುತ್ತಾ ಇರುತ್ತಾರೆ ಎಂದು ರೈತರು ಆರೋಪಿಸುತ್ತಾರೆ.
ಇಲ್ಲಿಂದ ಮುಂದೆ ಶ್ರೀರಾಂಪುರ,ಕೆಸ್ತೂರುಕೊಪ್ಪಲು ಮಾರ್ಗವಾಗಿ ನಾಲೆಯ ನೀರು ಹರಿಯುತ್ತಿದ್ದು ಚುಂಚನಕಟ್ಟೆ ಸಮೀಪ ಮಾತ್ರವಲ್ಲದೇ ಇಲ್ಲಿಂದ ಮುಂದೆ ಸುಮಾರು ೫ಕೀಮಿ ಸಾಗುವ ಈ ನಾಲೆಯ ನೀರು ಸಂಪೂರ್ಣವಾಗಿ ವಿಷಯುಕ್ತವಾಗುತ್ತಿದ್ದು ಕೆಸ್ತೂರುಕೊಪ್ಪಲು ಬಳಿ ಕೆರೆಕಟ್ಟೆಗಳನ್ನು ಸೇರಿ ಸಹಿಸಲು ಆಸಾಧ್ಯವಾದ ದುರ್ವಾಸನೆ ಬೀರುತ್ತಿದ್ದು ಸಂಬ0ಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿರುವುದು ರೈತರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಟ್ಟಾರೆ ಕಟ್ಟೆಪುರ ಬಲದಂಡೆ ನಾಲೆಯ ನೀರು ಸ್ಥಗಿತಗೊಂಡು, ಭತ್ತವನ್ನು ಕಾಪಾಡಲು ಬೇರೆ ಕಡೆಯಿಂದ ನೀರು ಹಾಯಿಸಿ ಬೆಳೆ ಬೆಳೆಯುತ್ತಿರುವ ಇಲ್ಲಿನ ರೈತರಿಗೆ ಕಾರ್ಖಾನೆಯ ತ್ಯಾಜ್ಯ ನೀರಿನಿಂದ ಸಂಪೂರ್ಣ ಬೆಳೆ ಬಾರದೆ ನಷ್ಟ ಉಂಟಾಗಿದೆ ಎಂದರು.
ಇಲ್ಲಿನ ರೈತರಿಗೆ ಕಾರ್ಖಾನೆಯ ತ್ಯಾಜ್ಯ ನೀರಿನಿಂದ ಸಂಪೂರ್ಣ ಬೆಳೆ ಈಗಾಗಲೇ ಈ ವಿಷಯುಕ್ತ ರಾಸಾಯನಿಕ ನೀರಿನಿಂದ ತೋಯ್ದು ಹೋಗಿದ್ದು ಧಿಕ್ಕೇ ತೋಚದಂತಾಗಿದೆ.ಈಗಲಾದರೂ ತಾಲ್ಲೋಕು ಆಡಳಿತ ಚುನಾಯಿತ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಪರಿಹಾರ ಒದಗಿಸುವರೇ ಕಾದು ನೋಡಬೇಕಿದೆ. ಕಾರ್ಖಾನೆಯ ಅಧಿಕಾರಿಗಳು ತ್ಯಾಜ್ಯ ನೀರನ್ನು ಯಾವುದೇ ಭಯಭೀತಿ ಇಲ್ಲದೇ ರೈತರ ಬೆಳೆಗಳು ಹಾಳಾಗುತ್ತವೆ ಎಂಬ ಅರಿವೇ ಇಲ್ಲದೇ ನಿರಂತರವಾಗಿ ನಾಲೆಗೆ ಬಿಡುತ್ತಿದ್ದು, ಇದೀಗ ಬೆಳೆ ಹಾಳಾಗಿದ್ದರೂ ಈ ಬಗ್ಗೆ ಸೂಕ್ತವಾಗಿ ಸ್ಪಂಧಿಸಲು ಹಿಂದೇಟು ಹಾಕುತ್ತಿರುವುದು ಬೇಸರದ ಸಂಗತಿ ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ರೈತ ಮುಖಂಡ ಎಚ್. ಡಿ. ಭಾಸ್ಕರ್ ಎಚ್ಚರಿಕೆ ನೀಡಿರುತ್ತಾರೆ.
ಮತೋರ್ವ ರೈತ ರಂಗಸ್ವಾಮಿ ಮಾತನಾಡಿ ನಾನು ೩ಎಕರೆಯಲ್ಲಿ ಭತ್ತ ನಾಟಿ ಮಾಡಿದ್ದು ಇನ್ನು ಒಂದು ತಿಂಗಳಲ್ಲಿ ಕಾಳುಗಟ್ಟಬೇಕಿದೆ, ಆದರೆ ಕಳೆದ ಒಂದು ವಾರದಿಂದ ನಾಲೆಯ ನೀರು ಸ್ಥಗಿತಗೊಂಡು ಈ ಕಾರ್ಖಾನೆಯ ನೀರು ಭತ್ತದ ಗದ್ದೆಗಳಿಗೆ ಹರಿದ ಪರಿಣಾಮ ೩ಎಕರೆಯ ಬೆಳೆ ಸಂಪೂರ್ಣವಾಗಿ ನಷ್ಟವಾಗಿದ್ದು, ನನಗೆ ಪರಿಹಾರ ಕೊಡಿ ಇಲ್ಲವಾದರೆ ನಮಗೆ ಸಾವೇ ಗತಿ ಎಂದಿದ್ದಾರೆ.
ವರದಿ: ಹರೀಶ್ ಸಾಲಿಗ್ರಾಮ
Mysore
ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ ಧರಣಪ್ಪಗೌಡ, ಕರ್ಪೂರವಳ್ಳಿ ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Mysore4 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ
-
Hassan1 day ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore4 days ago
ಹಳೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ದರಿದ್ರ ನನಗೆ ಬಂದಿಲ್ಲ, ಹೊಸದಾಗಿ ತರುವ ತಾಕತ್ತು ನನಗೆ ಇದೆ – ಶಾಸಕ ಡಿ. ರವಿಶಂಕರ್