State
ನಾಳೆ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ- ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ನಿನ್ನೆ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆ ಪಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು, ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ನಾಳೆ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.
ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನು ಓಲೈಸುವ ರಾಜ್ಯದ ಕಾಂಗ್ರೆಸ್ ಸರಕಾರ, ಬರಗಾಲದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇಡೀ ದೇಶದಲ್ಲಿ ಸಂಭ್ರಮ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಅಡ್ಡಿ ಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ ಎಂದು ಗೊತ್ತಾಗಿದೆ. ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ದುಸ್ಸಾಹಸಕ್ಕೆ ಕೈಹಾಕಿದ ಸಿಎಂ..
ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ಸೂಚಿಸಿದರು.
ರಾಜ್ಯ ಸರಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು? ತಪ್ಪು ಮಾಡಿದ್ದಾರೆ ಅಥವಾ ಇಲ್ಲವೇ ಎಂದು ನೀವು ತೀರ್ಮಾನ ಮಾಡುವುದಲ್ಲ; 31 ವರ್ಷ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇದೆ; ತುಂಬ ಸಂತೋಷ. ಆದರೆ, ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದರು.
ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವವನ್ನು ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು. ಕಾಂಗ್ರೆಸ್ಸಿಗರು ನಾಲಿಗೆ ಮತ್ತು ಮಾತುಗಳು ಅವರ ಸಂಸ್ಕøತಿಯನ್ನು ತೋರಿಸುತ್ತದೆ. ಅಯೋಧ್ಯೆ ಎಂಬುದು ಒಂದು ಭಾವನಾತ್ಮಕ ಸಂಬಂಧದ ವಿಚಾರ. ಶ್ರೀರಾಮನ ಜನ್ಮಸ್ಥಳವದು. ಕಾಂಗ್ರೆಸ್ಸಿಗರು ಹುಚ್ಚುಚ್ಚು ಹೇಳಿಕೆಗಳಿಗೆ ನಾವು ಉತ್ತರ ಕೊಡಬೇಕಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ ಎಂದು ಟೀಕಿಸಿದರು.
State
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?

Cochin Shipyard Recruitment – ಮಿನಿರತ್ನ ಕಂಪನಿಯಾಗಿರುವ ಕೋಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ 70 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಬಾಕಿ ಇದೆ.
ಹಾಗಿದ್ದರೆ ಈ ನೇಮಕಾತಿಯಲ್ಲಿ ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ..
ಯಾವ ಯಾವ ಹುದ್ದೆಗಳು ಖಾಲಿ ಇವೆ?
• Scaffolder ಹುದ್ದೆಗಳು – 11
• Semi Skilled Rigger – 59 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?
• Scaffolder ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 2 ವರ್ಷದ ಅನುಭವ ಹೊಂದಿರಬೇಕು.
• Semi Skilled Rigger ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ ಅರ್ಹತೆ – ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು ಇರಲಿದೆ?
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,100 ಸಂಬಳದ ಜೊತೆಗೆ ಹೆಚ್ಚಿನ ಕೆಲಸಕ್ಕೆ ಮಾಸಿಕ ₹5,530 ರೂ. ಪಡೆಯುವ ಅವಕಾಶವಿದೆ.
ಅರ್ಜಿ ಶುಲ್ಕ – 200ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಮಾರ್ಚ್ 2025
ಅರ್ಜಿ ಸಲ್ಲಿಸುವ ವಿಧಾನ : ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.
ಅಧಿಕೃತ ಜಾಲತಾಣ – https://cochinshipyard.in/careerdetail/career_locations/672
State
ಎಚ್ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಫಸ್ಟ್ ರಿಯಾಕ್ಷನ್

ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್ ನಾಯಕರಿಗೆ ಹೇಳಿದ್ದೇನೆ. ಎಚ್ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.
State
ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್ಸಿ ರಾಜೇಂದ್ರ ಹೊಸ ಬಾಂಬ್

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
State24 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan21 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
Mysore20 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ