Connect with us

State

ನಾಳೆ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ- ವಿಜಯೇಂದ್ರ

Published

on

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.


ರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ನಿನ್ನೆ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆ ಪಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು, ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ನಾಳೆ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.
ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನು ಓಲೈಸುವ ರಾಜ್ಯದ ಕಾಂಗ್ರೆಸ್ ಸರಕಾರ, ಬರಗಾಲದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇಡೀ ದೇಶದಲ್ಲಿ ಸಂಭ್ರಮ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಅಡ್ಡಿ ಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ ಎಂದು ಗೊತ್ತಾಗಿದೆ. ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ದುಸ್ಸಾಹಸಕ್ಕೆ ಕೈಹಾಕಿದ ಸಿಎಂ..
ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ಸೂಚಿಸಿದರು.
ರಾಜ್ಯ ಸರಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು? ತಪ್ಪು ಮಾಡಿದ್ದಾರೆ ಅಥವಾ ಇಲ್ಲವೇ ಎಂದು ನೀವು ತೀರ್ಮಾನ ಮಾಡುವುದಲ್ಲ; 31 ವರ್ಷ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇದೆ; ತುಂಬ ಸಂತೋಷ. ಆದರೆ, ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದರು.

ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವವನ್ನು ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು. ಕಾಂಗ್ರೆಸ್ಸಿಗರು ನಾಲಿಗೆ ಮತ್ತು ಮಾತುಗಳು ಅವರ ಸಂಸ್ಕøತಿಯನ್ನು ತೋರಿಸುತ್ತದೆ. ಅಯೋಧ್ಯೆ ಎಂಬುದು ಒಂದು ಭಾವನಾತ್ಮಕ ಸಂಬಂಧದ ವಿಚಾರ. ಶ್ರೀರಾಮನ ಜನ್ಮಸ್ಥಳವದು. ಕಾಂಗ್ರೆಸ್ಸಿಗರು ಹುಚ್ಚುಚ್ಚು ಹೇಳಿಕೆಗಳಿಗೆ ನಾವು ಉತ್ತರ ಕೊಡಬೇಕಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ ಎಂದು ಟೀಕಿಸಿದರು.

State

ನಾಳೆ KSCA ಚುನಾವಣಾ ಮತದಾನ: ವೆಂಕಟೇಶ್‌ ಪ್ರಸಾದ್ v/s ಬ್ರಿಜೇಶ್ ಪಟೇಲ್ ಬಣಗಳ ಮಧ್ಯೆ ಜಿದ್ದಾಜಿದ್ದಿ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಚುನಾವಣಾ ಮತದಾನ ನಾಳೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣ ಮ ಬ್ರಿಜೇಶ್ ಪಟೇಲ್  ಬಣಗಳ ಮಧ್ಯೆ  ಭಾರೀ ಹಣಾಹಣಿ ನಡೆದಿದೆ.
ಚುನಾವಣೆಯನ್ನು ಸುತ್ತುವರಿದ ವಿವಾದಗಳ ನಡುವೆ ಇಂದು ಪ್ರಸಾದ್ ಬಣವೂ ಕೆಎಸ್‌ಸಿಎ ಸದಸ್ಯರೊಂದಿಗೆ ಸಂವಾದ ನಡೆಸಿತು.

ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.

ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.

Continue Reading

State

ಡಿವೈಡರ್‌ಗೆ ಕಾರ್‌ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published

on

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹೊತ್ತಿ ಉರಿದ ಕಾರಿನಿಂದ ಹೊರಬರಲು ಸಾಧ್ಯವಾಗದೇ ಇನ್ಸ್‌ಪೆಕ್ಟರ್ ಕೂಡ ಅದರ ಒಳಗೆ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

State

SSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…

Published

on

ಕರ್ನಾಟಕದಲ್ಲಿ SSLC ಪಾಸ್ ಮಾಡಿದವರಿಗೆ ಇದೀಗ ಸರ್ಕಾರದ ವಿವಿಧ ಇಲಾಖೆಗಳಡಿ ಕೆಲಸ ಪಡೆಯುವ ದೊಡ್ಡ ಅವಕಾಶ ದೊರಕಿದೆ. ಕಡಿಮೆ ವಿದ್ಯಾರ್ಹತೆಯಲ್ಲೇ ಸ್ಥಿರ ಸರ್ಕಾರಿ ಉದ್ಯೋಗ ಪಡೆಯಲು ಹಲವು ಹುದ್ದೆಗಳು ಲಭ್ಯವಾಗಿದ್ದು, ಯುವಕರಿಗೆ ಭದ್ರ ಭವಿಷ್ಯ ನಿರ್ಮಿಸಿಕೊಳ್ಳಲು ಇದು ಮಹತ್ವದ ಅವಕಾಶವಾಗಿದೆ.

ಹುದ್ದೆಗಳ ವಿವರ:
•ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಜೈಲು ವಾರ್ಡರ್ ಹುದ್ದೆಗಳು
•ಅಂಚೆ ಇಲಾಖೆಯ GDS, ಪೋಸ್ಟ್‌ಮನ್ ಮತ್ತು MTS ಹುದ್ದೆಗಳು
•KSRTC, BMTC ಮೊದಲಾದ ಸಾರಿಗೆ ಸಂಸ್ಥೆಗಳಲ್ಲಿ ಕಂಡಕ್ಟರ್/ಡ್ರೈವರ್ ಹುದ್ದೆಗಳು
•ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
•ವಿವಿಧ ಇಲಾಖೆಗಳ ಪಿಯೋನ್, ಅಟೆಂಡರ್, ಕ್ಲರ್ಕ್ ಮತ್ತು ಗ್ರೂಪ್–D ಹುದ್ದೆಗಳು

ವೇತನ: ₹18,000 ರಿಂದ ₹32,000ರವರೆಗೆ

ಅರ್ಹತೆ:
•ಕನಿಷ್ಠ SSLC ಪಾಸ್ ಆಗಿರಬೇಕು
•ವಯೋಮಿತಿ;18ರಿಂದ 35ವರ್ಷ
•ಕೆಲವು ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ
•ಡ್ರೈವರ್ ಹುದ್ದೆಗೆ ಮಾನ್ಯ ಡ್ರೈವಿಂಗ್ ಲೈಸೆನ್ಸ್

ಅರ್ಜಿ ಹೇಗೆ ಸಲ್ಲಿಸಬೇಕು?
•ಅಧಿಕೃತ ಪ್ರಕಟಣೆ ಹೊರಬಂದ ನಂತರ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಹಾಕಬಹುದು
•ಆಧಾರ್, SSLC ಮಾರ್ಕ್ಸ್ ಕಾರ್ಡ್, ಜಾತಿ ಪ್ರಮಾಣಪತ್ರ, ವಿಳಾಸ ದೃಢೀಕರಣ ಮುಂತಾದ ದಾಖಲಾತಿಗಳು ಅಗತ್ಯ
•ಶುಲ್ಕವನ್ನು ಆನ್‌ಲೈನ್ ಪಾವತಿಸಿ ಅರ್ಜಿ ಪೂರ್ಣಗೊಳಿಸಬಹುದು
•ಆಯ್ಕೆ ಪ್ರಕ್ರಿಯೆಯಲ್ಲಿ ಪರೀಕ್ಷೆ/ದೈಹಿಕ ಪರೀಕ್ಷೆ ಇರಬಹುದು

ಸರ್ಕಾರಿ ಉದ್ಯೋಗ ಎಂದರೆ ಸ್ಥಿರತೆ, ಭದ್ರತೆ ಮತ್ತು ಉತ್ತಮ ಭವಿಷ್ಯ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ಅಗತ್ಯವಿರುವರಿಗೆ ಕಳುಹಿಸಿ.

Continue Reading

Trending

error: Content is protected !!