Connect with us

Hassan

ನೂತನ ಮನೆ ಕ್ಯೂರಿಂಗ್‌ಗೆ ನೀರನ್ನು ಹಾಕದಿರುವ ವಿಚಾರಕ್ಕೆ ಮಗನಿಂದ ತಂದೆಯ ಹತ್ಯೆ, ಮಗನ ಬಂಧನ: ಎಸ್ಪಿ ಸುಜೀತಾ ಮಾಹಿತಿ

Published

on

ಹಾಸನ: ನೂತನ ಮನೆ ನಿರ್ಮಾಣದ ವೇಳೆ ಕ್ಯೂರಿಂಗ್ ಗೆ ನೀರನ್ನು ಹಾಕಿಲ್ಲ ಎನ್ನುವ ಕಾರಣಕ್ಕೆ ಮಗನಾದ ಸುದೀಪ್ ೨೭ ವರ್ಷ ಎಂಬುವನು ತನ್ನ ತಂದೆ ರವಿ ೫೦ ವರ್ಷ ಹತ್ಯೆ ಆಗಿರುವ ಪ್ರಕರಣದಲ್ಲಿ ತನಿಖೆ ವೇಳೆ ಮಗನನ್ನು ಬಂಧಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಮಾಹಿತಿ ನೀಡಿದರು.

ಎಸ್ಪಿ ಕಛೇರಿಯಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಫೆಬ್ರವರಿ ೧ ರಂದು ಬೆಳಗಿನ ಸಮಯದಲ್ಲಿ ಹಾಸನ ತಾಲ್ಲೂಕು ದುದ್ದ ಹೋಬಳಿ, ಪೂಮಗಾಮೆ ಗ್ರಾಮ ರೇಣುಕಾ ರವರು ದುದ್ದ ಪೊಲೀಸ್ ಠಾಣೆಗೆ ಹಾಜರಾಗಿ ತನ್ನ ತಮ್ಮನಾದ ರವಿಗೌಡ ೫೦ ವರ್ಷ, ಈತನ ಪತ್ನಿ ಮೀನಾಕ್ಷಿ ರವರಿಗೆ ಸುದೀಪ ಮತ್ತು ಸಂದೀಪ ಎಂಬ ಇಬ್ಬರು ಮಕ್ಕಳಿದ್ದು, ಇವರು ತೆಲಂಗಾಣ ರಾಜ್ಯದ ಹೈದ್ರಾಬಾದ್ ನಗರದ ದಾರೂರು ಎಂಬಲ್ಲಿ ಬೇಕರಿ ಇಟ್ಟುಕೊಂಡಿದ್ದು, ರವಿ ಮತ್ತು ಮೀನಾಕ್ಷಿಗೆ ಸಂಬಂಧದಲ್ಲಿ ಹೊಂದಾಣಿಕೆಯಾಗದೇ ಸುಮಾರು ೪-೫ ವರ್ಷಗಳಿಂದಲೂ ರವಿ ರವರನ್ನು ಬಿಟ್ಟು ಮಕ್ಕಳೊಂದಿಗೆ ದಾರೂರಿನಲ್ಲಿ ವಾಸವಾಗಿದ್ದರು. ರವಿಯು ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡು, ತನ್ನ ತಾಯಿ ಬೋರಮ್ಮ ರವರೊಂದಿಗೆ ವಾಸವಾಗಿದ್ದು, ಈಗ್ಗೆ ಸುಮಾರು ೮ ತಿಂಗಳುಗಳಿಂದ ರವಿಯ ಮೊದಲನೆಯ ಮಗ ಸುದೀಪ ಬಿನ್ ರವಿಗೌಡ ರವಿ, ವಯಸ್ಸು ೨೪ ವರ್ಷ ಈತನು ಊರಿಗೆ ಬಂದು ಅವರ ಸೈಟಿನಲ್ಲಿ ಮನೆಯನ್ನು ಕಟ್ಟಿಸುತ್ತಿದ್ದು, ರವಿಯೂ ಮನೆ ನಿರ್ಮಾಣದ ಕೆಲಸಕ್ಕೆ ಸಹಾಯ ಮಾಡುತ್ತಾ, ಅದೇ ಮನೆಯ ಆರ್.ಸಿ.ಸಿ. ಯ ಮೇಲೆ ಮಲಗಿಕೊಳ್ಳುತ್ತಿದ್ದು, ಸುದೀಪನೂ ಯಾವಾಗಲೂ ರಾತ್ರಿ ವೇಳೆಯಲ್ಲಿ ತನ್ನ ತಂದೆ ರವಿಯೊಂದಿಗೆ ಅವರ ಹೊಸ ಮನೆಯ ವಿಚಾರವಾಗಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಹೀಗಿರುವಾಗ ರವಿಯು ಹೊಸಮನೆಯ ಗೃಹ ಪ್ರವೇಶವನ್ನು ಫೆಬ್ರವರಿ ೧೮ ರಂದು ಇಟ್ಟುಕೊಂಡು ರವಿಯ ಪತ್ನಿ ಮೀನಾಕ್ಷಿಯು ಸಹ ಬಂದು ಗೃಹಪ್ರವೇಶದ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಲೆಂದು ಬಂದರು. ಅವರ ತವರು ಮನೆಯಾದ ದ್ಯಾಪಲಾಪುರ ಗ್ರಾಮದಲ್ಲಿದ್ದು, ಜನವರಿ ೩೧ ರಂದು ರಾತ್ರಿ ಸುಮಾರು ೧೦:೩೦ ಗಂಟೆ ಸಮಯದಲ್ಲಿ ಸುದೀಪ ಮತ್ತು ತಮ್ಮ ರವಿಯು ಮನೆಯ ಆರ್.ಸಿ.ಸಿ ಮೇಲೆ ಒಬ್ಬರಿಗೊಬ್ಬರು ಗಲಾಟೆ ಮಾಡಿಕೊಳ್ಳುತ್ತಾ, ರವಿಗೆ ಮನೆಗೆ ಸರಿಯಾಗಿ ಕ್ಯೂರಿಂಗ್ ಆಗಲು ನೀರು ಹಾಕುತ್ತಿಲ್ಲ. ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ.

ಯಾವಾಗಲು ಕುಡಿದಿರುತ್ತೀಯಾ ಈ ದಿನ ಕೊಲೆ ಮಾಡದೇ ಬಿಡುವುದಿಲ್ಲವೆಂದು ಸುದೀಪನು ರವಿಗೆ ಥಳಿಸಲಾಯಿತು. ಯಾವಾಗಲೂ ಇದೇ ರೀತಿ ಗಲಾಟೆ ಮಾಡಿಕೊಳ್ಳುತ್ತಾರಲ್ಲವೆಂದು ಸುಮ್ಮನಿದ್ದು, ರಾತ್ರಿ ಸುಮಾರು ೧೧:೪೫ ಗಂಟೆ ಸಮಯದಲ್ಲಿ ರವಿಯು ಕೂಗಿ ನೀರು ಕೊಡಿ ಎಂದು ಕೇಳಿದಾಗ ನಾನು ಮತ್ತು ಲಕ್ಷ್ಮಿ ದೇವಿ ಇಬ್ಬರು ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರನ್ನು ತೆಗೆದುಕೊಂಡು ಆರ್.ಸಿ.ಸಿ ಮೇಲೆ ಹೋಗಿ ಕುಡಿಯಲು ರವಿಗೆ ನೀರನ್ನು ಕೊಟ್ಟು ಬಂದಿದ್ದು, ಬೆಳಿಗ್ಗೆ ೬ ಗಂಟೆ ಸಮಯದಲ್ಲಿ ರವಿ ರವರ ಮನೆಯ ಪಕ್ಕದ ವಾಸಿಯಾದ ಲಕ್ಷ್ಮಮ್ಮ ರವರು ಸಹ ಕುಡಿಯಲು ನೀರುಕೊಟ್ಟಿದ್ದು, ಬೆಳಿಗ್ಗೆ ಸುಮಾರು ೬ ಗಂಟೆಯಿಂದ ೭ ಗಂಟೆ ಸಮಯದ ಅವಧಿಯಲ್ಲಿ ರವಿಯು ಮೃತಪಟ್ಟಿದ್ದಾನೆ. ರವಿಯ ಮಗ ಸುದೀಪನು ಹೊಸ ಮನೆಗೆ ಸರಿಯಾಗಿ ಕ್ಯೂರಿಂಗ್ ಆಗಲು ನೀರು ಹಾಕುತ್ತಿಲ್ಲ ಹಾಗು ಮನೆ ಕೆಲಸ ಸರಿಯಾಗಿ ಮಾಡದೇ ಯಾವಾಗಲು ಕುಡಿದಿರುತ್ತಾನೆಂದು ಜಗಳ ತೆಗೆದು. ಯಾವುದೋ ಆಯುಧದಿಂದ ಮನೆಯ ಆರ್.ಸಿ.ಸಿ ಮೇಲೆ ಸುದೀಪನು ರವಿಯ ತಲೆಗೆ ಹಾಗು ದೇಹದ ಭಾಗಗಳಿಗೆ ಹೊಡೆದು. ರಕ್ತಗಾಯವಾಗಿದ್ದವನು ಹೊಸ ಮನೆಯ ಪ್ಯಾಸೇಜ್ ಮೇಲೆಯೇ ಮೃತಪಟ್ಟಿರುತ್ತಾರೆಂದು ಹಾಗೂ ಆರೋಪಿ ಮೃತನ ಪತ್ನಿ ಶ್ರೀಮತಿ ಮೀನಾಕ್ಷಿ ಹಾಗೂ ಮಗ ಸುದೀಪ, ರವರುಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಮೃತನ ಅಕ್ಕ ಶ್ರೀಮತಿ ರೇಣುಕಾ, ರವರು ಕೊಟ್ಟ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣಾ ಪ್ರಕರಣ ದಾಖಲಿಸಿ ಆರೋಪಿ ಸುದೀಪ್ ನನ್ನು ಬಂಧಿಸಿ ತನಿಖೆ ಮುಂದುವರಿಸಿರುವುದಾಗಿ ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಮೇಲ್ಸೇತುವೆ ಮುಂದಿನ ಮಾರ್ಚ್‌ಗೆ ಪೂರ್ಣ: ಸಂಸದ ಶ್ರೇಯಸ್‌ ಪಟೇಲ್‌

Published

on

ಹಾಸನ: ನಗರದ ಹೊಸ ಬಸ್ ನಿಲ್ದಾಣದ ಎದುರಿನ ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 2026ರ ಫೆಬ್ರವರಿ ಇಲ್ಲವೇ ಮಾರ್ಚ್ ವೇಳೆಗೆ ಮುಗಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಶನಿವಾರದಂದು ನಗರದ ಎನ್.ಆರ್. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೂ ನಿಮಾಣ ಹಂತದಲ್ಲಿರುವ ಮೇಲ್ಸೇತುವೆ ಮೇಲೆ ತೆರಳಿ ಎಲ್ಲೆಲ್ಲಿ ಕಾಮಗಾರಿ ಆಗಬೇಕು ಎಂಬುವರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹಲವು ಕಾರಣಗಳಿಂದಾಗಿ ಕೆಲ ವರ್ಷಗಳಿಂದ ಕಾಮಗಾರಿ ನಿಂತಿತ್ತು. ಇದೀಗ ತಮ್ಮ ತಮ್ಮ ಪಾಲಿನ ಅನುದಾನ ನೀಡಲು ಸಮ್ಮತಿಸಿವೆ. ಹೀಗಾಗಿ ಈಗಾಗಲೇ ಶುರುವಾಗಿರುವ ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು ಎಂದು ಸೂಚನೆ ನೀಡಲಾಗಿದೆ ಎಂದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.

ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ೮೩.೭೨ ಕೋಟಿ. ಇದರಲ್ಲಿ ರಾಜ್ಯದ ಪಾಲು ೪೯.೫೪ ಕೋಟಿ ನೀಡಬೇಕಿದೆ. ಈಗ ೨೧.೮೧ ಕೋಟಿ ರೂ. ನೀಡುವುದಾಗಿ ಸರ್ಕಾರ ಹೇಳಿದ್ದು, ಹೆಚ್‌ಎಂಆರ್‌ಡಿಸಿ ಅಡಿ ೧೫ ಕೋಟಿ ನೀಡಲಾಗಿದೆ. ಅನುದಾನಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ಸೇತುವೆ ಮೇಲಿನ ಕಬ್ಬಿಣದ ಬೃಹತ್ ಕಮಾನು ನಿರ್ಮಾಣ ಹೈದ್ರಾಬಾದ್‌ನಲ್ಲಿ ಆಗಲಿದೆ, ಅದಕ್ಕಾಗಿ ೮ ತಿಂಗಳು ಸಮಯಾವಕಾಶ ಬೇಕಿದೆ. ಅಲ್ಲೀವರೆಗೂ ಸಿವಿಲ್ ವರ್ಕ್ ಸೇರಿ ಉಳಿದ ಕಾಮಗಾರಿ ನಡೆಯಲಿವೆ ಎಂದರು. ಉಸುಮಾರು ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೇಂದ್ರ ಸಹ ತನ್ನ ಪಾಲಿನ ಅನುದಾನ ನೀಡಲು ಒಪ್ಪಿದೆ. ಹೀಗಾಗಿ ಮೇಲ್ಸೇತುವೆ ಕಾಮಗಾರಿ ಇನ್ನು ಮಂದೆ ಯಾವುದೇ ಅಡೆ-ತಡೆ ಇಲ್ಲದೆ ಮುನ್ನಡೆಯಲಿದೆ ಎಂದರು. ಎರಡೂ ಬದಿಯ ನಾಲ್ಕು ಪಥದ ಮೇಲ್ಸೇತುವೆ ನಿರ್ಮಾಣ ಆದರೆ ವಾಹನ ಸಮಸ್ಯೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

Hassan

ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್‌ ಪಟೇಲ್‌

Published

on

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್‌ಪಟೇಲ್ ಹೇಳಿಕೆ ನೀಡಿದರು.

ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ‌. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ‌ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.

ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

Continue Reading

Hassan

ಆಟೋ ಹತ್ತಿಸುವ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿ

Published

on

ಹಾಸನ: ಆಟೋ ಹತ್ತಿಸುವ ನೆಪದಲ್ಲಿ ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಅಪರಿಚಿತ ಪರಾರಿಯಾಗಿರುವ ಘಟನೆ
ಸಾಲಗಾಮೆ ಹೋಬಳಿ ಸುಂಕದಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಎಂಬುವರು ಸಾಲಗಾಮೆ ಗೇಟ್‌ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ಏ.೧೮ ರಂದು ಊರಿನಿಂದ ಬಸ್ಸಿನಲ್ಲಿ ಹಾಸನಕ್ಕೆ ಹೋಗಿದ್ದರು.

ಅಲ್ಲಿಂದ ಹೂವಿನಹಳ್ಳಿ ಕಾವಲು ಹೊಸೂರಿಗೆ ಬಸ್ಸಿನಲ್ಲಿ ಬಂದು ಇಳಿದು ಸರ್ಕಾರಿ ಆಸ್ಪತ್ರೆಗೆ ಹೋದರು. ಆದರೆ ಗುಡ್‌ಫ್ರೈಡೆ ನಿಮಿತ್ತ ರಜೆ ಇದ್ದುದರಿಂದ ವಾಪಸ್ ಊರಿಗೆ ಹೋಗಲೆಂದು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಆಸ್ಪತ್ರೆ ಮುಂದೆ ರಸ್ತೆಯ ಬದಿಯಲ್ಲಿ ನಿಂತಿದ್ದರು.

 

ಅಲ್ಲಿಗೆ ಬಂದ ಸುಮಾರು ೩೦-೩೫ ವರ್ಷ ವಯಸ್ಸಿನ ವ್ಯಕ್ತಿ, ಅಜ್ಜಿ ನಿಂತಿದ್ದಲ್ಲಿಗೆ ಬಂದು ಯಾವೂರವ್ವ ಎಂದು ಕೇಳಿ, ನನ್ನ ಬೈಕಿಗೆ ಬನ್ನಿ ಕರೆದುಕೊಂಡು ಹೋಗುತ್ತೇನೆಂದು ಹೇಳಿದ್ದಾನೆ.

ಮಗಳ ಊರಾದ ಅರೇಕಲ್ ಹೊಸಳ್ಳಿ ಗ್ರಾಮದ ಮನೆಗೆ ಹೋಗುತ್ತೇನೆಂದು ಹೇಳಿದಾಗ ಆಟೋದಲ್ಲಿ ಹೋಗಿ ಎಂದು ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದ ಆಸಾಮಿ, ರಸ್ತೆಯಲ್ಲಿ ಹೋಗುತ್ತಿದ್ದ ಆಟೋವನ್ನು ಅಡ್ಡಹಾಕಿ ನಿಲ್ಲಿಸಿ, ಅಜ್ಜಿ ಆಟೋದ ಒಳಕ್ಕೆ ಕಾಲಿಟ್ಟು ಹತ್ತುವಾಗ ಅವರ ಕೊರಳಿನಲ್ಲಿದ್ದ ಸುಮಾರು ೪೦ ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಮಾಂಗಲ್ಯ ಸರದ ಅಂದಾಜು ಬೆಲೆ ೩ ಲಕ್ಷ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!