Connect with us

Mysore

ಪಾಲಿಕೆ ಕಾಮಗಾರಿ ವೇಳೆ ಕೇಬಲ್ ಹಾನಿ ಚೆಸ್ಕಾಂ ಹೊಣೆ

Published

on

ಮೈಸೂರು: ಅವೈಜ್ಞಾನಿಕ ಕೇಬಲ್ ಗಳಿಗೆ ಪಾಲಿಕೆ ಕಾಮಗಾರಿ ವೇಳೆ ಹಾನಿಯಾದರೆ ಅದನ್ನು ಪಾಲಿಕೆ ಭರಿಸುವುದಿಲ್ಲ. ಅದಕ್ಕೆ ಚೆಸ್ಕಾಂ ಅಧಿಕಾರಿಗಳೇ ಹೊಣೆಯಾಗಬೇಕೆಂದು ಮಹಾಪೌರ ಶಿವಕುಮಾರ್ ತಾಕೀತು ಮಾಡಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚೆಸ್ಕಾಂ ಅಧಿಕಾರಿಗಳೊಂದಿಗೆ ಅವೈಜ್ಞಾನಿಕ ಕೇಬಲ್ ಕಾಮಗಾರಿಯಿಂದ ಆಗುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅವರು ಮಾತನಾಡಿದರು. ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಾಮಗಾರಿಗಳಿಗೆ ಚೆಸ್ಕಾಂ ಕೇಬಲ್ ಗಳು ಅಡ್ಡ ಬರುತ್ತಿವೆ. ಕೇಬಲ್ ಎಲ್ಲಿದೆ ಎಂಬ ಮಾಹಿತಿಯೂ ಸ್ಥಳೀಯ ಇಂಜಿನಿಯರ್ ಗೆ ಲಭ್ಯ ಇಲ್ಲದಿರುವುದು ನೋಡುತ್ತಿದ್ದೇವೆ. ಕನಿಷ್ಠ ಒಂದು ಮೀಟರ್ ಕೆಳಗೆ ಸೀಮೆಂಟ್ ಪೈಪ್ ಲೈನ್ ಒಳಗೆ ಇರಬೇಕೆಂಬ ನಿಯಮವಿದೆ. ಅದಾವುದು ಚೆಸ್ಕಾಂ ಇಲಾಖೆ ಪಾಲನೆ ಮಾಡಿಲ್ಲ. ಸಂಪೂರ್ಣ ಅವೈಜ್ಞಾನಿಕ ಕೇಬಲ್ ಅಳವಡಿಕೆಯಿಂದ ಪಾಲಿಕೆ ಕಾಮಗಾರಿಗೆ ಅಡಚಣೆ ಉಂಟಾಗಿರುವುದು ಸರಿ ಪಡಿಸಲು ಕ್ರಮವಹಿಸಬೇಕಿದೆ. ಟೆಲಿಕಾಂ ಕೇಬಲ್ ಗಳು ಸಹ ಇಷ್ಟ ಬಂದಂತೆ ಎಳೆಯುವ ಮೂಲಕ ನಗರದ ಸೌಂದರ್ಯ ಕ್ಕೆ ಧಕ್ಕೆ ತರುವ ಕೆಲಸ ಆಗುತ್ತಿದೆ. ರಸ್ತೆಗೆ ಅಡ್ಡಲಾಗಿ ಕೇಬಲ್ ಸಿಕ್ಕಿ ಅಪಘಾತ ಆಗುವ ಸಂಭವವು ಇರುವುದರಿಂದ ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ ಎಂದರು.
ಮಾತ್ರವಲ್ಲದೆ, ನಿಯಮದ ಪ್ರಕಾರ ಕೇಬಲ್ ಹಾಕುವ ಕಾರ್ಯ ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ಪಾಲಿಕೆ ತುರ್ತು ಕಾಮಗಾರಿ ವೇಳೆ ಚೆಸ್ಕಾಂ ಕೇಬಲ್ ಗಳಿಗೆ ಹಾನಿಯಾದರೆ ಅದನ್ನು ಪಾಲಿಕೆ ಅಥವಾ ಗುತ್ತಿಗೆದಾರರು ಭರಿಸುವುದಿಲ್ಲ. ಬದಲಿಗೆ ಚೆಸ್ಕಾಂ ಹೊಣೆ ಹೊರಬೇಕು. ಶೀಘ್ರ ಕೇಬಲ್ ಅಳವಡಿಕೆಯ ನೀಲನಕ್ಷೆಯನ್ನು ವಲಯವಾರು ಕೊಡುವ ಕೆಲಸ ಮಾಡಬೇಕು. ಕಾಮಗಾರಿ ಸ್ಥಳದ ಮಾಹಿತಿ ತಿಳಿಸಿದೊಡನೆ ನಿಮ್ಮ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಕೇಬಲ್ ಇರುವ ಜಾಗ ಖಾತರಿ ಪಡಿಸಬೇಕೆಂದು ಹೇಳಿದರು.
ಪಾಲಿಕೆ ಸದಸ್ಯರು ಮಾತನಾಡಿ ಅಪಾಯಕಾರಿ ಕೇಬಲ್ ಹಾಕುವುದು ಬೇಡ. ಎಡಿಪಿ ಪೈಪ್ ಅಳವಡಿಸಿ. ರಸ್ತೆಯಲ್ಲಿ ಟ್ರಾನ್ಸ್ ಫಾರ್ ಕೂರಿಸಿದ್ದು, ಇದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಆಗಿದೆ. ಓವರ್ ಲೈನ್ ಕಾಣಬಾರದು ಎಂಬ ಕಾರಣಕ್ಕೆ ಯುಜಿ ಕೇಬಲ್ ಮಾಡಿದ್ದೇವೆ. ಆದರೆ, ಇಂದಿಗೂ ಅನೇಕ ಕಡೆ ಲೈನ್ ಗಳು ಕಾಣಿಸುತ್ತಾ ನಗರದ ಸೌಂದರ್ಯ ಹಾಳು ಮಾಡಿವೆ ಎಂದು ದೂರಿದರು.
ಪಾಲಿಕೆಯಿಂದ ಒಳಚರಂಡಿ, ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿ ಆರಂಭಿಸುವಾಗ ರಸ್ತೆಯಲ್ಲಿ ಸೆಸ್ಕ್ ಅಳವಡಿಸಿರುವ ಯುಜಿ ಕೇಬಲ್ ಬಗ್ಗೆ  ಸರಿಯಾದ ಮಾಹಿತಿ ಸಿಗದೇ ಇರುವುದರಿಂದ ಕಾಮಗಾರಿ ನಡೆಸಲು ತೊಡಕಾಗುತ್ತಿದೆ. ಈ ಬಗ್ಗೆ ಸೆಸ್ಕ್ ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ಇರುವುದಿಲ್ಲ. ಏನಾದರೂ ಅನಾಹುತವಾದರೆ ಅದನ್ನು ಪಾಲಿಕೆಯೇ ಜವಬ್ದಾರಿ ಎಂದು ಕೆಲಸ ಮಾಡಿಸಿರುವ ಗುತ್ತಿಗೆದಾರರ ಮೇಲೆ ಹೊರಿಸಲಾಗುತ್ತಿದೆ. ಅಲ್ಲದೇ ಕಾಮಗಾರಿ ವಿಳಂಬಕ್ಕೆ ಕೂಡ ಕಾರಣವಾಗುತ್ತಿದೆ. ಜತೆಗೆ ಅವೈಜ್ಞಾನಿಕವಾಗಿ ಕೇಬಲ್ ಅಳವಡಿಕೆ ಮಾಡಲಾಗಿದೆ ಎಂದು ಮೇಯರ್ ಶಿವಕುಮಾರ್ ಹೇಳಿದರು.
 ಮೇಯರ್ ಅವರ ಮಾತಿಗೆ ಸದಸ್ಯರಾದ ರಮೇಶ್, ಕೆ.ವಿ.ಶ್ರೀಧರ್, ಅಯೂಬ್ ಖಾನ್, ಬಿ.ವಿ.ಮಂಜುನಾಥ್, ಶಾಂತಕುಮಾರಿ ಕೂಡ ದನಿಗೂಡಿಸಿದರು.
ನಗರದಲ್ಲಿ ಹಾದು ಹೋಗಿರುವ ಯುಜಿ ಕೇಬಲ್ ಅನ್ನು ಜಿಪಿಎಸ್ ಮೂಲಕ ಗುರುತಿಸುವ ತಂತ್ರಜ್ಞಾವನನ್ನು ಬಳಸಿಕೊಂಡರೆ ಸೆಸ್ಕ್ ಮತ್ತು ಪಾಲಿಕೆಗೆ ಅನುಕೂಲವಾಗಲಿದೆ ಎಂದು ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಸಲಹೆ ನೀಡಿದರು.
ಜತೆಗೆ  ಪಾಲಿಕೆ ಸದಸ್ಯೆ ಶಾಂತ ಕುಮಾರಿ ಅವರು, ಯುಜಿ ಕೇಬಲ್ ಪತ್ತೆಯ ಸ್ಕ್ಯಾನರ್‌ಗಳನ್ನು ಸೆಸ್ಕ್‌ನಿಂದ ಪಾಲಿಕೆಗೆ ನೀಡಿದರೆ ಕೆಲಸ ನಡೆಸಲು ಅನುಕೂಲವಾಗಲಿದೆ ಎಂದರು.
ನಗರದಲ್ಲಿ ಪುಟ್ಪಾತ್, ಚರಂಡಿ ಮತ್ತು ರಸ್ತೆ ಮಧ್ಯೆ ಹಾದು ಹೋಗಿರುವ ವಿದ್ಯುತ್ ಕಂಬಗಳನ್ನು ಗುರುತಿಸಿ ಅವುಗಳನ್ನು ತುರ್ತಾಗಿ ತೆರವುಗೊಳಿಸಲು ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ  ಉಪಮೇಯರ್ ರೂಪ, ಮಾಜಿ ಮೇಯರ್‌ಗಳಾದ ಅಯೂಬ್ ಖಾನ್,ಪುಷ್ಪ ಲತಾ ಜಗನ್ನಾಥ್, ಪಾಲಿಕೆ ಸದಸ್ಯರಾದ ರಮೇಶ್, ಕೆ.ವಿ.ಶ್ರೀಧರ್, ಪ್ರೇಮಾ ಶಂಕರೇಗೌಡ, ಲಕ್ಷ್ಮೀ ಶಿವಣ್ಣ, ಬಿ.ವಿ.ಮಂಜುನಾಥ್ ಶಾಂತಕುಮಾರ್,  ಸುಬ್ಪಯ್ಯ, ಸತ್ಯರಾಜು, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಒಳಚರಂಡಿ ವಿಭಾಗದ ಇಇ ಸಿಂಧು, ಸೆಸ್ಕ್ ಎಂಡಿ ಶ್ರೀಧರ್ ಮತ್ತು ಅಧಿಕಾರಿಗಳು ಇದ್ದರು.
Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡಿನಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ವಿಜೃಂಭಣೆ

Published

on

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ
ಚಿಕ್ಕ ಜಾತ್ರೆ ಮಹೋತ್ಸವ ಮಂಗಳವಾರ ವೈಭವಯುತವಾಗಿ ನೆರವೇರಿತು.

ಬೆಳಿಗ್ಗೆ 10.45 ರಂದು ಸಲ್ಲುವ ಶುಭ ಮಕರ ಲಗ್ನದಲ್ಲಿ ದೇಗುಲದ ಪ್ರಧಾನ ಆಗಮಿಕ ಜೆ. ನಾಗ ಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕಯ೯ ನೆರವೇರಿಸಿ ರಥಗಳಿಗೆ ಪೂಜೆ ಸಲ್ಲಿಸಿದರು.

ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಉತ್ಸವ ರಥಕ್ಕೆ ಚಾಲನೆ ನೀಡಿ ತೇರನ್ನು ಎಳೆದರು.

ಹೂವಿನ ಹಾರ ಅಲಂಕೃತಗೊಂಡ ರಥೋತ್ಸವ ನಂಜುಂಡೇಶ್ವರ ಸ್ವಾಮಿಯ ಹಾಗೂ ಪಾರ್ವತಿ ದೇವಿ ಸಮೇತ ಉತ್ಸವ ಮೂರ್ತಿ, ಗಣಪತಿ ಚಂಡಿಕೇಶ್ವರ, ಸೇರಿದಂತೆ ಮೂರು ರಥಗಳು ರಥ ಬೀದಿಯಲ್ಲಿ
ರಥಗಳನ್ನು ಸಾವಿರಾರು ಭಕ್ತಾದಿಗಳು ಹಗ್ಗ ಹಿಡಿದು ಜೈ ನಂಜುಂಡೇಶ್ವರ, ಜೈ ಶ್ರೀಕಂಠೇಶ್ವರ, ಜೈ ನಂಜುಂಡ, ಎಂಬ ಘೋಷಣೆಗಳನ್ನು ಕೂಗುತ್ತಾ ಎಳೆದರು.

ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ರಥಕ್ಕೆ ಹಣ್ಣು ದವನ ಎಸೆದು ಪುನೀತರಾದರು.

ರಥ ಬೀದಿಗಳಲ್ಲಿ ನಿಧಾನವಾಗಿ ಚಲಿಸಿ ಭಕ್ತಾದಿಗಳು ಭಕ್ತಿಯಿಂದ ನಮಿಸಿದರು.

ಪೋಲಿಸ್ ಇಲಾಖೆಯಿಂದ ಬಿಗಿ ಬಂದೋಬಸ್ತು ಇರುವುದರಿಂದ ರಥದಲ್ಲಿ ಯಾವುದೇ ಅಡೆ-ತಡೆಗಳಿಲ್ಲದೆ ಮೂರು ರಥಗಳು 12.50 ಗಂಟೆಗೆ ಸ್ವಸ್ಧಾನಕ್ಕೆ ಸೇರಿದವು.

ಜಾತ್ರಾಯಲ್ಲಿ: ಶಾಸಕರಾದ ದರ್ಶನ್ ಧ್ರುವನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಕಾರ್ಯನಿವ೯ಹಣಾಧಿಕಾರಿ ಎಂ. ಜಗದೀಶ್ ಕುಮಾರ್, ಪೌರಾಯುಕ್ತಧಿಕಾರಿ ನಂಜುಂಡಸ್ವಾಮಿ, ಡಿಎಸ್ಪಿ ಗೋವಿಂದ್ ರಾಜ್, ಇದ್ದರು.

Continue Reading

Mysore

ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

Published

on

ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದರು.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಅದರಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.

ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

Continue Reading

Mysore

ಪತ್ರಕರ್ತ ಪುನೀತ್ ಗೆ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿ

Published

on

ಪಿರಿಯಾಪಟ್ಟಣ: ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಜನಮಿತ್ರ ವರದಿಗಾರ ಪತ್ರಕರ್ತ ಸಿ.ಜಿ ಪುನೀತ್ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನೀಡಲಾಗುವ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಪ್ರಸ್ತಕ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗೆ ಸಿ.ಜಿ ಪುನೀತ್ ಆಯ್ಕೆಯಾಗಿದ್ದು, ನ.29ರ ಬುಧವಾರ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಕನ್ನಡಾಂಬೆ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

Continue Reading

Trending