Connect with us

Uncategorized

ಪಿತೃ ಪಕ್ಷದಲ್ಲಿ ಮರೆತರು ಈ 8 ತಪ್ಪುಗಳನ್ನ ಮಾಡಬೇಡಿ ಪಿತೃ ದೋಷ ಅಂಟುತ್ತದೆ!

Published

on

ಸಾಮಾನ್ಯವಾಗಿ ದೇವರ ಪೂಜೆಯನ್ನು ಶ್ರೇದ್ದೆ ಭಕ್ತಿಯಿಂದ ಮಾಡುತ್ತೀರಾ.ಇದೆ ರೀತಿ ಪಿತೃ ಪಕ್ಷ ಆಚರಣೆಯನ್ನು ಮಾಡಬೇಕಾಗುತ್ತದೆ.ಪ್ರತಿಯೊಬ್ಬರೂ ಕೂಡ ಆಚರಣೆ ಮಾಡಲೇಬೇಕು.ಪಿತೃ ಪಕ್ಷವನ್ನು ಕೆಲವರು ಗಣೇಶ ಹಬ್ಬದಲ್ಲಿ, ದೀಪಾವಳಿ ಹಾಗೂ ಮಹಾಲಯ ಅಮಾವಾಸ್ಯೆ ಸಮಯದಲ್ಲಿ ಮಾಡುತ್ತಾರೆ.ಯಾವುದೇ ಸಮಯದಲ್ಲಿ ಪಿತೃ ಪಕ್ಷ ಮಾಡಿದರು ಈ ತಪ್ಪುಗಳನ್ನು ಮಾಡಬಾರದು.ಭದ್ರಪದ ಮಾಸ ಶುಕ್ಲ ಪಕ್ಷದಲ್ಲಿ ಹುಣ್ಣಿಮೆ ದಿನಾಂಕದಿಂದ ಶುರು ಆಗಿದೆ.ಅಶ್ವಿಜ ಮಾಸದ ಅಮವಾಸ್ಯೆವರೆಗೆ ಪಿತೃ ಪಕ್ಷ ಇರುತ್ತದೆ.ಈ 15 ದಿನಗಳಲ್ಲಿ ಹಿರಿಯನ್ನು ನೆನಪಿಸುತ್ತ ಪಿತೃ ಪಕ್ಷ ಆಚರಣೆ ಮಾಡಬೇಕು.ಈ ಸಮಯದಲ್ಲಿ ಪೂರ್ವಜರು ಭೂಮಿಗೆ ಬರುತ್ತಾರೆ ಎಂಬ ನಂಬಿಕೆ ಕೂಡ ಇದೆ. ಅವರಿಗೆ ಖುಷಿ ಆಗುವ ರೀತಿಯಲ್ಲಿ ಶ್ರದಾಂಜಲಿ ಆಚರಣೆ ಮಾಡಿದರೆ ಅವರಿಗೂ ಕೂಡ ತುಂಬಾ ಖುಷಿ ಆಗುತ್ತಾದೇ ಹಾಗೂ ಹಿರಿಯರ ಆಶೀರ್ವಾದ ಸಿಗುತ್ತದೆ.
ಪಿತೃ ಪಕ್ಷದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.

1, ಪಿತೃ ಪಕ್ಷದ ದಿನ ಹೇರ್ ಕಟ್ ಮಾಡಬಾರದು.2, ಪಿತೃ ಪಕ್ಷ ಸಮಯದಲ್ಲಿ ಮುಡಿ ಅನ್ನು ಕೊಡಬಾರದು.
3, ಪಿತೃ ಪಕ್ಷ ಸಮಯದಲ್ಲಿ ನಿಮಗೆ ಅಥವಾ ನಿಮ್ಮ ಮನೆಯವರಿಗೆ ಬಟ್ಟೆಯನ್ನು ತೆಗೆದುಕೊಳ್ಳಬೇಡಿ. ಹಿರಿಯರಿಗೆ ಮಾತ್ರ ಬಟ್ಟೆಯನ್ನು ತೆಗೆದುಕೊಳ್ಳಿ
4,ಪಿತೃ ಪಕ್ಷ ಸಮಯದಲ್ಲಿ ಚಿನ್ನ ಬೆಳ್ಳಿ ತೆಗೆದುಕೊಂಡು ಬರುವುದನ್ನು ಕೂಡ ಅವಾಯ್ಡ್ ಮಾಡಬೇಕು.
5,ಹೊಸದಾಗಿ ವ್ರತವನ್ನು ಶುರು ಮಾಡುವುದಕ್ಕೆ ಈ ಸಮಯ ಸೂಕ್ತವಲ್ಲ.
6, ಪಿತೃ ಪಕ್ಷ ಸಮಯದಲ್ಲಿ ಯಾವುದೇ ಕಾರಣಕ್ಕೂ ದೂರದ ಪ್ರಯಾಣವನ್ನು ಮಾಡಬಾರದು.
7, ಪಿತೃ ಪಕ್ಷ ಸಮಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಸಮಯದಲ್ಲಿ ಮಾಂಸ ಆಹಾರವನ್ನು ತೆಗೆದುಕೊಂಡು ಹೋಗಬಾರದು. 8,ಪಿತೃ ಪಕ್ಷ ಸಮಯದಲ್ಲಿ ಮನೆ ಶಿಫ್ಟಿಂಗ್ ಅನ್ನು ಕೂಡ ಮಾಡಬಾರದು.9,ಗರ್ಭಿಣಿ ಮಹಿಳೆಯರು ಈ ಸಮಯದಲ್ಲಿ ತುಂಬಾ ಕೇರ್ಫುಲ್ ಆಗಿ ಇರಬೇಕು ಮತ್ತು ರಾತ್ರಿ ಸಮಯದಲ್ಲಿ ಪ್ರಯಾಣವನ್ನು ಅವಾಯ್ಡ್ ಮಾಡಿ.10, ಯಾವುದೇ ಶುಭ ಕಾರ್ಯವನ್ನು ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ಮಾಡಬೇಡಿ.

Continue Reading
Click to comment

Leave a Reply

Your email address will not be published. Required fields are marked *

Uncategorized

ಬಿರಿಯಾನಿ ತಿಂದು ೧೭ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Published

on

ಚಿಕ್ಕಮಗಳೂರು : ಬಿರಿಯಾನಿ ತಿಂದು 17 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.

ಒಂದು ದಿನ ಹಿಂದೆ ಮಾಡಿದ್ದ ಬಿರಿಯಾನಿ ತಿಂದಿದ್ದ ಗ್ರಾಮಸ್ಥರು ಅಸ್ವಸ್ಥರಾಗಿದ್ದು, ಬಿರಿಯಾನಿ ಸೇವಿಸಿದವರಲ್ಲಿ 17 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ಮಾಡಲಾಗಿತ್ತು. ಆದರೆ, ಬಿರಿಯಾನಿಯನ್ನು ತಿಂದ ಕೂಡಲೇ ವಾಂತಿ ಭೇದಿಯಾಗಿದೆ.
ತಕ್ಷಣ ಅಸ್ವಸ್ಥಗೊಂಡವರನ್ನು ಕಡೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕ್ಕ ಪುಟ್ಟ ಮಕ್ಕಳು ಸೇರಿದಂತೆ 17 ಜನ ಅಸ್ವಸ್ಥಗೊಂಡು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ, ಇನ್ನೂ ವಿಷಯ ತಿಳಿಯುತ್ತಿದ್ದಂತೆ ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ

Continue Reading

Uncategorized

ಮಾದಕ ವಸ್ತು ಮಾರಾಟ ಮಾಡುತಿದ್ದ ಇಬ್ಬರ ಬಂಧನ

Published

on

ಮಡಿಕೇರಿ : ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹೆಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ನ. 19 ರಂದು ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಕುಂಜಿಲ ನಿವಾಸಿ ನೌಫಲ್ (25), ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರನ್ನು ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಸದರಿ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಜಿಲಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿದ್ದಾರೆ.

Continue Reading

Uncategorized

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೀರ್ಣೋದ್ಧಾರ ಹಾಗೂ ಕಳಸ, ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Published

on

ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಚನ್ನರಾಯಪಟ್ಟಣ ತಾಲ್ಲೂಕು ಅತ್ತಿಹಳ್ಳಿ ಗ್ರಾಮದ
ಶ್ರೀ ದೊಡ್ಡಮ್ಮ ಚಿಕ್ಕಮ್ಮ ದೇವಸ್ಥಾನದ
ಜೀರ್ಣೋದ್ಧಾರ ಹಾಗೂ ಕಳಸ, ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜೊತೆಯಲ್ಲಿ ಕ್ಷೇತ್ರದ ಶಾಸಕರಾದ ಸಿ.ಎನ್.ಬಾಲಕೃಷ್ಣ ರವರು ಹಾಗೂ ಗ್ರಾಮಸ್ಥರು ಇದ್ದರು.

Continue Reading

Trending

error: Content is protected !!