Uncategorized
ಬರ ಪಟ್ಟಿಯಿಂದ ಅರಸೀಕೆರೆ ತಾಲ್ಲೂಕನ್ನು ಕೈಬಿಟ್ಟಿದ್ದಕ್ಕೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

ಹಾಸನದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿಕೆ
ಇವತ್ತು ರಾಜ್ಯ, ಜಿಲ್ಲೆಯಲ್ಲಿ ಬರಗಾಲ ತಾಂಡವವಾಡುತ್ತಿದೆ
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಗೈಡ್ಲೈನ್ಸ್ ಮೂಲಕ ರಾಜ್ಯ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಗೈಡ್ಲೈನ್ಸ್ನಿಂದ ಕೇಂದ್ರ ಸರ್ಕಾರ ರೈತರಿಗೆ ಮಣ್ಣು ಎರೆಚುತ್ತಿದೆ
ಇದರಿಂದಾಗಿ ರೈತರಿಗೆ ಅನ್ಯಾಯವಾಗುತ್ತಿದೆ
ಇವತ್ತು ರೈತರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ
ಗೈಡ್ಲೈನ್ಸ್ ಅನ್ನು ಚೇಂಜ್ ಮಾಡ್ತಿಲ್ಲ
ರೈನ್ ಗೇಜ್ ಇಡ್ತಾರೆ ಸರಿಯಾಗಿ ವರ್ಕ್ ಮಾಡ್ತವೋ, ಇಲ್ಲವೋ ಗೊತ್ತಿಲ್ಲ
ಏಪ್ರಿಲ್ನಲ್ಲಿ ಸರಿಯಾಗಿ ಮಳೆ ಬರಲಿಲ್ಲ
ಬಂದ ಅಲ್ಪಸ್ವಲ್ಪ ಮಳೆಗೆ ಬಿತ್ತನೆ ಮಾಡಿದ್ರು
ಸಂಪೂರ್ಣವಾಗಿ ಮುಂಗಾರು ಮಳೆ ಬಾರದಿದ್ದರಿಂದ ನಾಶವಾಯ್ತು
ಇದನ್ನು ಸರ್ಕಾರವೇ ಘೋಷಣೆ ಮಾಡಿತು
ಮೇ.15 ರಿಂದ ಜುಲೈ ಅಂತ್ಯದವರೆಗೂ ಸ್ವಲ್ಪ ಮಳೆ ಬಂತು
ರೈತರು ಮನೆಯಲ್ಲಿದ್ದಿದ್ದನ್ನೆಲ್ಲಾ ಅಡವಿಟ್ಟು ಸಾಲ ಮಾಡಿ ಬಿತ್ತನೆ ಮಾಡಿದರು
40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ, 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ, 15,16 ಸಾವಿರ ಹೆಕ್ಟೇರ್ನಲ್ಲಿ ಉಳಿದ ಬೆಳೆ ಬಿತ್ತನೆ ಮಾಡಿದರು
ಆಗಸ್ಟ್ ನಿಂದ ಇಲ್ಲಿಯವರಗೂ ಒಂದು ಹನಿ ಮಳೆ ಬಂದಿಲ್ಲ
ಮೇ, ಜೂನ್ನಲ್ಲಿ ಮಳೆ ಆದರೆ ಬಂದಿರುವ ಬೆಳೆ ಯಾವುದು
ನಮ್ಮ ಅರಸೀಕೆರೆ ತಾಲ್ಲೂಕನ್ನೂ ಏಕೆ ಬರಗಾಲ ಎಂದು ಘೋಷಣೆ ಮಾಡಿಲ್ಲ
ನಮ್ಮ ತಾಲ್ಲೂಕನ್ನು ಎ ಗ್ರೇಡ್ಗೆ ಸೇರಿಸಿದ್ದಾರೆ
ನಿಮ್ಮ ರೈನ್ ಗೇಜ್ ಕಿತ್ತು ಎಸೆಯಿರಿ, ಸ್ಥಳಕ್ಕೆ ಬಂದು ಅಧ್ಯಯನ ಮಾಡಿ
ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ, ಬರ ಎಂದು ಡಿಕ್ಲೇರ್ ಮಾಡಿ
ಈ ಕಷ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕಿತ್ತು
ಸಭೆ ಮಾಡಬೇಕಿತ್ತು, ಮಾಡಲಿಲ್ಲ
ಅಧಿಕಾರಿಗಳು ಖಾಲಿ ಡಬ್ಬಗಳನ್ನು ಇಟ್ಟುಕೊಂಡಿದ್ದಾರೆ
ಖಾಲಿ ಡಬ್ಬಗಳನ್ನು ಇಟ್ಕಂಡು ರಿಸಲ್ಟ್ ಕೊಡ್ತಾ ಇದ್ದಾರೆ
ಎನ್ಡಿಆರ್ಅಫ್ ಗೈಡ್ಲೈನ್ಸ್ ನವೀಕರಣ ಆಗಲೇಬೇಕು
ನಮ್ಮ ತಾಲ್ಲೂಕಿನ 33% ಪರ್ಸೆಂಟ್ ಬೆಳೆ ಬಂದಿದಿಯಾ ಚಾಲೆಂಜ್ ಮಾಡ್ತಿನಿ
ಎನ್ಡಿಆರ್ಎಫ್ ಗೈಡ್ಲೈನ್ಸ್ ಚೇಂಜ್ ಮಾಡಲೇಬೇಕು
ಇದರ ಬಗ್ಗೆ ಹೋರಾಟ ಮಾಡುತ್ತೇನೆ
ನಾಳೆ ಹನ್ನೆರಡು ಗಂಟೆಗೆ ಮುಖ್ಯಮಂತ್ರಿ ಭೇಟಿ ಮಾಡ್ತಿನಿ
ನಮ್ಮ ತಾಲ್ಲೂಕನ್ನು ಬರ ಎಂದು ಘೋಷಣೆ ಮಾಡಲೇಬೇಕು
Hassan
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,
ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,
*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*
ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,
ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,
ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,
ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,
ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು
Kodagu
ಉಡೋತ್ ಮೊಟ್ಟೆ : ಡಿ.6 & 7 ರಂದು ಕೊರಗಜ್ಜ ದೈವದ ನೇಮೋತ್ಸವ
ಮಡಿಕೇರಿ : ಉಡೋತ್ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ.
ಡಿ.6ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು. ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ.

ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9900931278 , 9591304757೯೫೯೧೩೦೪೭೫೭, ೯೪೮೩೩೯೯೦೭೭ ಸಂಪರ್ಕಿಸಬಹುದಾಗಿದೆ.
Uncategorized
ತರಳಬಾಳು ಸಮಾಗಮ, ಶಿಕ್ಷಣ ಕೇಂದ್ರದಿಂದ ರಾಜ್ಯೋತ್ಸವ, ದತ್ತಿ ಉಪನ್ಯಾಸ
ಮೈಸೂರು: ನಗರದ ಟಿ.ಕೆ. ಬಡಾವಣೆಯ ತರಳಬಾಳು ಶಿಕ್ಷಣ ಕೇಂದ್ರದಲ್ಲಿ ತರಳಬಾಳು ಸಮಾಗಮ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವ ಹಾಗೂ ಎಚ್.ಎಸ್. ರುದ್ರಪ್ಪ, ರೇವಮ್ಮ ಹಾಗೂ ಆರ್.ಬಿ. ಚನ್ನಬಸಪ್ಪ, ಎನ್. ಸುವರ್ಣ ಮತ್ತು ಎಚ್. ಗುರುಸಿದ್ದಪ್ಪ, ಕಲ್ಲಮ್ಮ ಹಾಗೂ ಎಂ. ಸಿದ್ದಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಉದ್ಘಾಟಿಸಿದರು. ಜೆಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಲ್. ತಿಪ್ಪೇಸ್ವಾಮಿ ಉಪನ್ಯಾಸ ನೀಡಿದರು.

ತರಳಬಾಳು ಸಮಾಗಮ ಅಧ್ಯಕ್ಷ ಡಿ.ಎನ್. ಲೋಕಪ್ಪ ಅಧ್ಯಕ್ಷತೆ ವಹಿಸಿದ್ದರು. ತರಳಬಾಳು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಮಹದೇವಸ್ವಾಮಿ, ಡಾ.ಎಚ್.ಎಸ್. ರುದ್ರೇಶ್ ಇದ್ದರು. ತರಳಬಾಳು ಸಮಾಗಮದ ಕಾರ್ಯದರ್ಶಿ ಶಿವಕುಮಾರ್ ಹಂಜಿ ಸ್ವಾಗತಿಸಿದರು. ದಾಕ್ಷಾಯಿಣಿ ಕಾರ್ಯಕ್ರಮ ನಿರೂಪಿಸಿದರು.
ಕನ್ನಡದಲ್ಲಿ ಅಧಿಕ ಅಂಕಗಳನ್ನು ಪಡೆದ ಪಿಯುಸಿಯ ಮೌರ್ಯ ಲೋಕೇಶ್, ಸಿ.ಎಸ್. ನಿಶ್ಚಲ್, ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಂ. ಧನುಷ್ ಹಾಗೂ ಜಿ. ನಮಿತಾ ಅವರಿಗೆ ಪುರಸ್ಕಾರ ನೀಡಲಾಯಿತು. ಆರು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳು ನೃತ್ಯ, ಸಾನ್ವಿ ಹಾಗೂ ಕವನ ಅವರು ಕನ್ನಡ ಭಾವಗೀತೆ ಹಾಡಿದರು.
-
Mysore17 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mandya33 minutes agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Mysore20 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Special15 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
State22 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur20 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Chikmagalur20 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Mysore2 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ