Connect with us

Chamarajanagar

ಬಿಜೆಪಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿಎಸ್ ನಿರಂಜನ್ ಕುಮಾರ್ ಸನ್ಮಾನ

Published

on

ಹನೂರು: ಚಾಮರಾಜನಗರ ಜಿಲ್ಲೆಯ ಬಿಜೆಪಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿಎಸ್ ನಿರಂಜನ್ ಕುಮಾರ್ ರವರನ್ನು ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಸನ್ಮಾನಿಸಿ ಶುಭ ಕೋರಿದರು.

ನಂತರ ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿರವರು ಮೂರನೇ ಬಾರಿ ಪ್ರಧಾನಮಂತ್ರಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಈಗಾಗಲೇ ದೇಶಾದ್ಯಂತ ನರೇಂದ್ರ ಮೋದಿ ರವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಲು ಜನ ಕಾತುರದಿಂದ ಕಾಯುತ್ತಿದ್ದಾರೆ.


ನೂತನ ಅಧ್ಯಕ್ಷರಾದ ನಿರಂಜನ್ ಕುಮಾರ್ ರವರು ಗುಂಡ್ಲುಪೇಟೆ ಶಾಸಕರಾಗಿ 5 ವರ್ಷ ಆಡಳಿತ ನಡೆಸಿರುವ ಅನುಭವವಿದೆ, ಇವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಈ ಬಾರಿಯೂ ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಇವರು ಜಿಲ್ಲೆಯ ನಾಯಕರುಗಳು, ಮುಖಂಡರುಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದು ಇವರ ಅಧ್ಯಕ್ಷತೆಯಲ್ಲಿ ಮುಂಬರುವ ಲೋಕಸಭೆ ಜಿ ಪಂ, ತಾಪಂ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದರು.

ಈ ವೇಳೆ ಮಾಜಿ ಶಾಸಕರಾದ ಎಸ್ ಬಾಲರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷರಾದ ನಟರಾಜ್ ಗೌಡ ಹಾಜರಿದ್ದರು.

ವರದಿ : ಗೋವಿಂದ ಕೆ ಗೌಡ ಹನೂರು…

Continue Reading
Click to comment

Leave a Reply

Your email address will not be published. Required fields are marked *

Chamarajanagar

ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಸವಾರಿಗೆ ಗಾಯ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಬೆಟ್ಟದಮಾದಹಳ್ಳಿ ಹಾಗೂ ಭೋಗಯ್ಯನಹುಂಡಿಯ ಮುಖ್ಯ ರಸ್ತೆಯಲ್ಲಿ ಎರಡು ಸ್ಕೋಟರ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು.

ಗಾಯಾಳುಗಳಾದ ಭೋಗಯ್ಯನಹುಂಡಿ ಗ್ರಾಮದ ಸುನಿ ಹಾಗೂ ಬೆಟ್ಟದಮಾದಹಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಬೈಕ್ ಗಳ ನಡುವಿನ ಡಿಕ್ಕಿಯಾಗಿ ಇಬ್ಬರಿಗೂ ತಲೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

Continue Reading

Chamarajanagar

ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ

Published

on

ಹನೂರು : ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ..

ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಿವಾಸಿ ಪರಶುರಾಮ್( 32) ಮೃತಪಟ್ಟ ದುರ್ದೈವಿ.

ಕಳೆದ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಕಳೆದ 2 ವರ್ಷಗಳಿಂದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ಬೆಳಿಗ್ಗೆ ಕುಸಿದು ಬಿದಿದ್ದು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ, ಮೃತ ವ್ಯಕ್ತಿಯು ರಾಯಚೂರು ಜಿಲ್ಲೆಯವರಾಗಿದ್ದು ಕುಟುಂಸ್ಥರಿಗೆ ರಾಮಾಪುರ ಪೊಲೀಸರು ಮಾಹಿತಿ ನೀಡಿ ಮೃತ ವ್ಯಕ್ತಿಯ ಶವವನ್ನು ಚಾಮರಾಜನಗರದ ಸೀಮ್ಸ್ ಆಸ್ಪತ್ರೆ ಇರಿಸಲಾಗಿದ್ದು, ಕುಟುಂಬಸ್ಥರು ಬಂದಾಗ ಅವರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ..

ಸಂತಾಪ : ಮೃತ ಪರುಶುರಾಮ್ ಅವರಿಗೆ ಸಾವಿನ ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ರಾಮಾಪುರ ಠಾಣೆಯ ಸಿಬ್ಬಂದಿ ಮೃತ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ…

Continue Reading

Chamarajanagar

ಏ.27 ರಂದು ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ

Published

on

ಚಾಮರಾಜನಗರ, ಏಪ್ರಿಲ್ 26: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರ ಕುಂದು-ಕೊರತೆ ಸಭೆಯನ್ನು ಏ.27ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ (ಎಸ್.ಸಿ/ಎಸ್.ಟಿ ಜನಾಂಗದವರು) ಮುಖಂಡರು, ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸದುಪಯೋಗ ಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Trending

error: Content is protected !!