State
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು.
ಅಲ್ಲದೆ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.
State
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?

Cochin Shipyard Recruitment – ಮಿನಿರತ್ನ ಕಂಪನಿಯಾಗಿರುವ ಕೋಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ 70 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಬಾಕಿ ಇದೆ.
ಹಾಗಿದ್ದರೆ ಈ ನೇಮಕಾತಿಯಲ್ಲಿ ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ..
ಯಾವ ಯಾವ ಹುದ್ದೆಗಳು ಖಾಲಿ ಇವೆ?
• Scaffolder ಹುದ್ದೆಗಳು – 11
• Semi Skilled Rigger – 59 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?
• Scaffolder ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 2 ವರ್ಷದ ಅನುಭವ ಹೊಂದಿರಬೇಕು.
• Semi Skilled Rigger ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ ಅರ್ಹತೆ – ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು ಇರಲಿದೆ?
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,100 ಸಂಬಳದ ಜೊತೆಗೆ ಹೆಚ್ಚಿನ ಕೆಲಸಕ್ಕೆ ಮಾಸಿಕ ₹5,530 ರೂ. ಪಡೆಯುವ ಅವಕಾಶವಿದೆ.
ಅರ್ಜಿ ಶುಲ್ಕ – 200ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಮಾರ್ಚ್ 2025
ಅರ್ಜಿ ಸಲ್ಲಿಸುವ ವಿಧಾನ : ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.
ಅಧಿಕೃತ ಜಾಲತಾಣ – https://cochinshipyard.in/careerdetail/career_locations/672
State
ಎಚ್ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಫಸ್ಟ್ ರಿಯಾಕ್ಷನ್

ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್ ನಾಯಕರಿಗೆ ಹೇಳಿದ್ದೇನೆ. ಎಚ್ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.
State
ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್ಸಿ ರಾಜೇಂದ್ರ ಹೊಸ ಬಾಂಬ್

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
-
Special11 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State7 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan8 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
State9 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
Kodagu5 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan5 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Hassan5 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ