Connect with us

Hassan

“ಬೇಲೂರಿಲ್ಲಿ ಪ್ಲಾಸ್ಟಿಕ್ ಬಳಕೆ-ಮಾರಾಟ ಸಂಪೂರ್ಣ ನಿಷೇಧ”

Published

on

ಕೇಂದ್ರ ಸರ್ಕಾರದ ಆದೇಶದಂತೆ ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಬೇಲೂರು ಪುರಸಭಾ ವ್ಯಾಪ್ತಿಯ ಸಮಸ್ತ ನಾಗರೀಕರು, ಉದ್ದಿಮೆದಾರರು, ವಾಣಿಜ್ಯ ವ್ಯಾಪಾರಸ್ಥರು, ಬೀದಿ ವ್ಯಾಪಾರಸ್ಥರು, ಹೋಟಲ್ ಕ್ಯಾಂಟೀನ್ ಮಾಲೀಕರು, ಟೀ ಸ್ಟಾಲ್ ಸೇರಿದಂತೆ ಇನ್ನಿತರ ವ್ಯಾಪಾರಸ್ಥರು ಇನ್ನು ಮುಂದೆ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣ ನಿಷೇಧಿಸುವುದು, ಒಂದು ವೇಳೆ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪುರಸಭಾ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಅವರು ಅಧ್ಯಕ್ಷತೆಯಲ್ಲಿ ಪುರಸಭಾ ವೇಲಾಪುರಿ ಸಭಾಂಗಣದಲ್ಲಿ ವರ್ತಕರ ಸಭೆಯನ್ನು ನಡೆಸಲಾಯಿತು.
            ಈ ಸಂದರ್ಭದಲ್ಲಿ ಮಾತನಾಡಿದ ಪುರಸಭಾ ಅಧ್ಯಕ್ಷೆ ತೀರ್ಥಕುಮಾರಿ, ಪ್ಲಾಸ್ಟಿಕ್ ಬಳಕೆ ಇತ್ತೀಚಿನ ದಿನದಲ್ಲಿ ಹೆಚ್ಚಾಗುತ್ತಿರುವುದು ನಿಜಕ್ಕೂ ಶೋಷನೀಯ, ಇದ್ದರಿಂದ ಪರಿಸರದ ಮೇಲೆ ತೀವ್ರ ಮಾರಕ ಪರಿಣಾಮ ಉಂಟಾಗುವ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶದಂತೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂಬ ಹಿನ್ನಲೆಯಲ್ಲಿ ಇಂದು ಪಟ್ಟಣದ ಎಲ್ಲಾ ವರ್ತಕರ ಸಭೆಯನ್ನು ಕರೆಯಲಾಗಿದೆ ಎಂದ ಅವರು ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಕಂಡು ಬಂದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಜರುಗಿಸಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ವಸ್ತುಗಳನ್ನು ಸಂಪೂರ್ಣವಾಗಿ ವಶ ಪಡಿಸಿಕೊಂಡು ದಂಡವನ್ನು ವಿಧಿಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
           ಪುರಸಭಾ ಮುಖ್ಯಾಧಿಕಾರಿ ಎಸ್.ಡಿ.ಮಂಜುನಾಥ್ ಮಾತನಾಡಿ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಯಬೇಕು ಎಂಬ ಹಿನ್ನಲೆಯಲ್ಲಿ ಅಧ್ಯಕ್ಷರು ಇಂದು ವರ್ತಕರ ಸಭೆಯನ್ನು ಕರೆದು ತಿಳುವಳಿಕೆ ನೀಡಿದ್ದಾರೆ. ಕ್ಯಾರಿಬ್ಯಾಗ್ ಬಳೆಸುವ ಸಾರ್ವಜನಿಕರು, ಅಂಗಡಿ ಮುಗ್ಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ, ಸಗಟು ಪ್ಲಾಸ್ಟಿಕ್ ವ್ಯಾಪಾರ, ಕಲ್ಯಾಣ ಮಂಟಪ, ದೇವಸ್ಥಾನ, ಸಮುದಾಯ ಭವನ ಇನ್ನಿತರ ಕಡೆಗಳಲ್ಲಿ ಪ್ಲಾಸ್ಟಿಕ್ ಬಳಕೆ, ಬೀದಿ ವ್ಯಾಪಸ್ಥರಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಕ್ರಮಬದ್ದವಾಗಿ ದಂಡವನ್ನು ವಿಧಲಾಗುತ್ತದೆ ಎಂದ ಅವರು ದಿನ-ನಿತ್ಯ ಕಸ ವಿಲೇವಾರಿಯಲ್ಲಿ ಅರ್ದಪಾಲು ಪ್ಲಾಸ್ಟಿಕ್ ಇರುವ ಕಾರಣದಿಂದ ಸಾರ್ವಜನಿಕರು ಪುರಸಭೆಯೊಂದಿಗೆ ಕೈಜೊಡಿಸಬೇಕು ಎಂದು ಮನವಿ ಮಾಡಿದರು.
            ಈ ಸಂದರ್ಭದಲ್ಲಿ ಪುರಸಭಾ ಉಪಾದ್ಯಕ್ಷೆ ಜಮೀಲಾತೌಫಿಕ್, ಸದಸ್ಯರಾದ ಜಗದೀಶ್,ರತ್ಯ ಸತ್ಯನಾರಾಯಣ್,  ಪರಿಸರ ಅಭಿಯಂತರ ಮಧುಸೂದನ್ ಹಾಗೂ ಡಾ.ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ತೀರ್ಥಂಕರ್,ವರ್ತಕರ ಸಂಘದ ಅಧ್ಯಕ್ಷ ಗಿರಿಯಪ್ಪಶೆಟ್ಟಿ, ಹೊಯ್ಸಳ ಮಾರುಕಟ್ಟೆ ಅಧ್ಯಕ್ಷ ಎಸ್.ಎಂ.ರಾಜು, ವರ್ತಕ ಗುರುಪಾದಸ್ವಾಮಿ, ರಂಗನಾಥ್ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.
Continue Reading
Click to comment

Leave a Reply

Your email address will not be published. Required fields are marked *

Hassan

ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ

Published

on

ಹಾಸನ : ಕಾಡಾನೆ ಸೆರೆ, ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಭಾರೀ ದುರಂತ
ಕಾಡಾನೆ ದಾಳಿಗೆ ಪಳಗಿದ ಆನೆ ಅರ್ಜುನ ಬಲಿ
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಯಸಳೂರು ಬಾಳೆಕೆರೆ ಫಾರೆಸ್ಟ್ ನಲ್ಲಿ ಘಟನೆ
ಅರ್ಜುನ‌ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಇಂದೂ ಕಾರ್ಯಾ ಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ
ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಅರ್ಜುನನ ಮೇಲೆ ಅಟ್ಯಾಕ್ ಮಾಡಿದ ಒಂಟಿ ಸಲಗ
ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಹಿಮ್ಮೆಟ್ಟಿದ ಉಳಿದ ಮೂರು ಸಾಕಾನೆಗಳು
ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ


ಮದಗಜಗಳ ಕಾಳಗದಲ್ಲಿ ವೀರ ಮರಣ ಹೊಂದಿದ ಅರ್ಜುನ
ಎರಡು ಸಲಗ ಕಾಳಗಕ್ಕೆ ಇಳಿಯುತ್ತಿದ್ದಂತೆಯೇ ಅರ್ಜುನನ ಮೇಲಿನಿಂದ ಇಳಿದು ಓಡಿದ ಮಾವುತರು
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ
ಅರ್ಜುನ ಆನೆ ಸಾವಿನಿಂದ ಪ್ರಾಣಿಪ್ರಿಯರಿಗೆ ಶಾಕ್
ಹೊಟ್ಟೆ ಭಾಗಕ್ಕೆ ತಿವಿತಕ್ಕೆ ಒಳಗಾಗಿ ಕಣ್ಮುಚ್ಚಿದ ಅರ್ಜುನ
ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಜನಮನಗೆದ್ದಿದ್ದ ಅರ್ಜುನ
ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ


2012 ರಿಂದ 19 ರವರೆಗೆ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ.
ಎಲ್ಲಾ ರೀತಿಯಲ್ಲೂ ಜನರ ಪ್ರೀತಿಗೆ ಪಾತ್ರನಾಗಿದ್ದ ಕ್ಯಾಪ್ಟನ್
ಅರ್ಜುನನ ಹಠಾತ್ ಸಾವು ಕಂಡು ಮಾವುತರು ಕಣ್ಣೀರು
ನ. 24 ರಿಂದ ಆರಂಭವಾಗಿದ್ದ ರೇಡಿಯೋ ಕಾಲರ್ ಅಳವಡಿಕೆ ಹಾಗೂ ಕಾಡಾನೆ ಸೆರೆ, ಸ್ಥಳಾಂತರ ಕಾರ್ಯಾಚರಣೆ

Continue Reading

Hassan

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

Published

on

ಹಾಸನ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ

ಬೈಕ್ ಸವಾರ ಸ್ಥಳದಲ್ಲೇ ಸಾವು

ಮತ್ತಿಘಟ್ಟ ಗ್ರಾಮದ ವೇಣುಗೋಪಾಲ್ (38) ಮೃತ ವ್ಯಕ್ತಿ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಳೇಬೀಡು-ಜಾವಗಲ್‌ ರಸ್ತೆಯಲ್ಲಿ ಘಟನೆ

ಸ್ವಗ್ರಾಮ ಮತ್ತಿಘಟ್ಟಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಣುಗೋಪಾಲ್

ಈ ವೇಳೆ ಡಿಕ್ಕಿ ಹೊಡೆದಿರುವ ಅಪರಿಚಿತ ವಾಹನ

ಅಪಘಾತದ ನಂತರ ವಾಹನ ನಿಲ್ಲಿಸದೆ ಎಸ್ಕೇಪ್ ಆಗಿರುವ ಚಾಲಕ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Hassan

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಯಸಳೂರು ಆರ್‌ಎಫ್‌ಓ ಜಗದೀಶ್ ಅಮಾನತು

Published

on

ಹಾಸನ : ಯಸಳೂರು ಆರ್‌ಎಫ್‌ಓ ಜಗದೀಶ್ ಅಮಾನತು

ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರಚ ದಿಕ್ಷಿತ್‌ರಿಂದ ಆದೇಶ

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಯಸಳೂರು ಆರ್‌ಎಫ್‌ಓ ಜಗದೀಶ್

ಹಾಸನ ಜಿಲ್ಲೆ, ಸಕಲೇಸಪುರ ತಾಲ್ಲೂಕು ಯಸಳೂರು ಆರ್‌ಎಫ್‌ಓ ಜಗದೀಶ್

ಸೀಜ್ ಮಾಡಿದ್ದ ಜೆಸಿಬಿ ಬಿಡುಗಡೆಗಾಗಿ 1.20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಜಗದೀಶ್

ಬಾಚೀಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ-ಚರಂಡಿ ನಿರ್ಮಾಣ ಮಾಡುವ ವೇಳೆ ಸೀಜ್ ಆಗಿದ್ದ ಜೆಸಿಬಿ

ಜೆಸಿಬಿ ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಿದ್ದ ಆರ್‌ಎಫ್ಒ ಜಗದೀಶ್

ಆರ್‌ಎಫ್‌ಓಯಿಂದ ಜೆಸಿಬಿ ದುರ್ಬಳಕೆ ಸಾಬೀತಾದ ಹಿನ್ನಲೆ

ಜಗದೀಶ್ ಅಮಾನತುಗೊಳಿಸಿ ಆದೇಶ

Jagadish GR, RFO Yasalur Range-Suspension order.

Continue Reading

Trending

error: Content is protected !!