Kodagu
ಮಡಿಕೇರಿ ದಸರಾದಲ್ಲಿ ಕಂಗೊಳಿಸಲಿದೆ ಮರಳಿನ ವನದೈವ ಕಲಾಕೃತಿ

ಗಾಂಧಿ ಮೈದಾನಕ್ಕೆ ಬನ್ನಿ.. ಫೋಟೋ ಪಾಯಿಂಟ್ನಲ್ಲಿ ಫೋಟೋ ತೆಗೆಯಿರಿ
ಜನಮಿತ್ರ ಮಡಿಕೇರಿ : ಮರಳನ್ನೇ ಮೂಲವಾಗಿರಿಸಿಕೊಂಡು ಅದ್ಬುತ ದೃಶ್ಯಕಾವ್ಯ ಸೃಷ್ಟಿಸುವ ಕರ್ನಾಟಕದ ಹೆಸರಾಂತ ಮರಳು ಕಲಾವಿದೆ ಎಂ.ಎನ್. ಗೌರಿ ಈ ಬಾರಿ ಮಡಿಕೇರಿ ದಸರಾದ ವಿಶೇಷ ಆಕರ್ಷಣೆಯಾಗಿ ಮರಳಿನಲ್ಲಿ ವನದೈವದ ಕಲಾಕೃತಿ ರೂಪಿಸಲಿದ್ದಾರೆ. ಅಂತೆಯೇ ಮಡಿಕೇರಿ ದಸರಾ ಫೋಟೋ ಗ್ಯಾಲರಿ ಕೂಡ ಈ ಬಾರಿಯ ಮಡಿಕೇರಿ ದಸರಾ ಆಕರ್ಷಣೆಗಳಲ್ಲೊಂದಾಗಲಿದೆ.
ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ 5 ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್. ಗೌರಿ, ಈ ಸಂಗ್ರಹಾಲಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.
2013 ರಲ್ಲಿ ಒರಿಸ್ಸಾದಲ್ಲಿ ಆಯೋಜಿತವಾಗಿದ್ದ ಅಂತರರಾಷ್ಟ್ರೀಯ ಮರಳು ಕಲಾಕೃತಿ ಸ್ಪರ್ಧೆಯಲ್ಲಿ ವಿಶ್ವದ ಹಲವೆಡೆಗಳಿಂದ ಪಾಲ್ಗೊಂಡಿದ್ದ 27 ಕಲಾವಿದರಲ್ಲಿ ಭಾರತದ ಗೌರಿ ಏಕೈಕ ಮಹಿಳಾ ಕಲಾವಿದೆಯಾಗಿದ್ದರು. ಫೈನ್ ಆರ್ಟ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಗೌರಿ, ಮರಳು ಕಲೆಯತ್ತ ಒಲವು ತೋರಿದ್ದು ಈವರೆಗೂ ರಾಜ್ಯವ್ಯಾಪಿ ನೂರಾರು ಕಲಾಕೃತಿಗಳನ್ನು ಮರಳಿನಲ್ಲಿಯೇ ರೂಪಿಸಿದ್ದಾರೆ.
ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ, ಡಾ.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಈಶ್ವರ, ಸೇರಿದಂತೆ ಹಲವಾರು ವಿಭಿನ್ನ ಮರಳು ಕಲಾಕೃತಿಯನ್ನು ರಚಿಸಿರುವ ಗೌರಿ ಈ ಬಾರಿ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಆಹ್ವಾನದ ಮೇರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿನ ಗ್ಯಾಲರಿಯಲ್ಲಿ ವನ ವೈವ ಕುರಿತಂತೆ ಮರಳು ಕಲಾಕೃತಿ ರೂಪಿಸಲಿದ್ದಾರೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಈ ಮರಳು ಕಲಾಕೃತಿಯನ್ನು ಅ. 16 ರಂದು ಸಂಜೆ 6 ಗಂಟೆಗೆ ಜಿಲ್ಲಾಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಮತ್ತು ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ.
ಮರಳು ಕಲಾಕೃತಿಯನ್ನು ಅ.16 ರಿಂದ 25 ರವರೆಗೆ ಪ್ರತಿ ನಿತ್ಯ ಬೆಳಗ್ಗೆ 10 ಗಂಟೆಯಿAದ ರಾತ್ರಿ 10 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ.
ಫೋಟೋ ಗ್ಯಾಲರಿ ಆಕರ್ಷಣೆ : ಈ ವರ್ಷ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ನಗರದ ಗಾಂಧಿ ಮೈದಾನಕ್ಕೆ ಬರುವವರಿಗೆ ಮತ್ತೊಂದು ಆಕರ್ಷಣೆಯೂ ಸಜ್ಜಾಗಿದೆ. ಮಡಿಕೇರಿ ದಸರಾ 2023 ಎಂಬ ಫೋಟೋ ಪಾಯಿಂಟ್ನ್ನು ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೂಪಿಸಲಾಗಿದ್ದು, ಹಿನ್ನಲೆಯಲ್ಲಿ ಕೊಡಗಿನ ನಿಸರ್ಗ ವೈಭವದ ಆಕರ್ಷಕ ಚಿತ್ರ ಕಂಗೊಳಿಸಲಿದೆ. ಈ ಪೋಟೋ ಗ್ಯಾಲರಿಯಲ್ಲಿ ನಿಂತು ಕಲಾಪ್ರೇಮಿಗಳು ಫೋಟೋಗಳನ್ನು ಕ್ಲಿಕ್ಕಿಸಿಕೊಳ್ಳುವ ಮೂಲಕ ಮಡಿಕೇರಿ ದಸರಾದ ನೆನಪನ್ನು ಸ್ಮರಣೀಯವಾಗಿಸಲು ಅವಕಾಶ ನೀಡಲಾಗಿದೆ. ಫೋಟೋ ಗ್ಯಾಲರಿಯು ಅ.16 ರಂದು ಸಂಜೆ 6 ಗಂಟೆಗೆ ಉದ್ಘಾಟನೆಯಾಗಲಿದೆ. ಈ ರೀತಿ ತಾವು ತೆಗೆದ ಫೋಟೋಗಳನ್ನು #MadikeriDasara ಇಲ್ಲಿ ಫೇಸ್ ಬುಕ್, ಇನ್ಸ್ ಟ್ರಾಗ್ರಾಂ ಮೂಲಕ ಪೋಸ್ಟ್ ಮಾಡಬಹುದು.
Kodagu
ಅನುಮಾನಸ್ಪದವಾಗಿ ವೈದ್ಯನ ಮೃತದೇಹ ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 275 ರ
ಆನೆಕಾಡು ಬಳಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ಪಿರಿಯಾಪಟ್ಟಣ ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಸತೀಶ್ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ.
ಮೂಲತಹ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದವರಾದ ಡಾ. ಸತೀಶ್ (47) ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಣಸುಾರು ಗ್ರಾಮದ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು ಪಟ್ಟಣದ ತಾಲೂಕು ಆಯುರ್ವೇದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕಡೆಯವವರಿಗೆ ಮಾಹಿತಿ ನೀಡಿದ್ದಾರೆ
Kodagu
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ ಕೆ ಒತ್ತಾಯ

ಮಡಿಕೇರಿ : ಅಲೆಮನೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಅತ್ಯಂತ ಆಘಾತಕಾರಿ ಹಾಗೂ ಅಮಾನವೀಯವಾದ ಘಟನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕೊಡಗಿನ ಹಾಕತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಸರ್ಕಾರಕ್ಕೆ ಈ ಪ್ರಕರಣದಲ್ಲಿ ಯಾರ ಯಾರ ಪಾತ್ರಗಳು ಇದೆ ಎಂಬುದು ಗೊತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕು. ಇದು ಸ್ಯಾಂಪಲ್ ಅಷ್ಟೇ, ಆರೋಗ್ಯ ಇಲಾಖೆ ಅಧಿಕಾರಿಗಳು ಗೊತ್ತೇ ಇಲ್ಲದಂತೆ ನಟಿಸ್ತಾರೆ. ಹೀಗಾಗಿ ಸರ್ಕಾರ ಎಲ್ಲವನ್ನು ಕೂಲಂಕೂಷವಾಗಿ ಪರಿಶೀಲನೆ ಮಾಡಿ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಏನು ಮಾಡಿಕೊಳ್ಳುತ್ತಾರೋ ಅದು ಅವರ ಪಕ್ಷಕ್ಕೆ ಬಿಟ್ಟಿರುವ ವಿಚಾರ. ಆದರೆ ನಮಗೆ ಬೇಕಾಗಿರುವುದು ರಾಜ್ಯದಲ್ಲಿ ಬರಗಾಲಕ್ಕೆ ಪರಿಹಾರ. ಆ ಬರಗಾಲಕ್ಕೆ ಒಂದು ಕಡೆ ದುಡ್ಡಿಲ್ಲ, ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿ ಹಾಕಿಕೊಂಡಿದ್ದಾರೆ. ಆದರೆ ಈಗ ತಾನೆ ಎಲ್ಲಾ ಸಚಿವರಿಗೆ ಹೊಸ ಕಾರು ಕೊಡಿಸಿದ್ದಾರೆ, ಅದಕ್ಕೆ ಒಂಭತ್ತುವರೆ ಕೋಟಿ ಖರ್ಚು ಮಾಡಿದ್ದಾರೆ. ಮನೆ ರಿನೋವೇಷನ್ಗಾಗಿ ಕೋಟ್ಯಂತರ ಖರ್ಚು ಮಾಡಿದ್ದಾರೆ. ಇದಕ್ಕೆ ಹಣ ಎಷ್ಟೊಂದು ಖರ್ಚಾಗುತ್ತದೆ ಎಂದು ಪ್ರಶ್ನಿಸಿದರು.
೮೦೦ ಕೋಟಿ ಡಿಸಿ ಖಾತೆಗಳಲ್ಲಿ ಇರುವುದು ಬರಗಾಲ ಹಣ ಅಲ್ಲ. ಅದು ಕುಡಿಯುವ ನೀರು ಮತ್ತು ಮೇವಿಗಾಗಿ ಮೀಸಲಿರಿಸಿರುವ ಹಣ. ರೈತರ ಪರಿಸ್ಥಿತಿ ಏನು ಎನ್ನುವುದಕ್ಕೆ ಇವರು ಚಿಂತಿಸುತ್ತಿಲ್ಲ. ಈಗ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿದರೆ ದುಡ್ಡು ಎಷ್ಟು ಖರ್ಚಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷದಿಂದ ಹಣ ಕೊಡುತ್ತಾರಾ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಗರಂ ಆದರು.
ನ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ. ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ನೈಜ ಪರಿಸ್ಥಿತಿ ಅರ್ಥವಾಗಿದೆ ಎಂದುಕೊAಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನಾ ಮಾಡುವುದನ್ನು ನಾನು ಅಭಿನಂದಿಸುತ್ತೇನೆ ಎಲ್ಲವನ್ನು ಟೀಕಿಸುವುದಿಲ್ಲ, ಮುಂದಿನ ೩ ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ ೩ ತಿಂಗಳ ಗಡುವು ನೀಡಿದ್ದಾರೆ. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ಈಗ ಅವರಿಗೆ ಅರ್ಥ ಆಗಿರಬಹುದು ಎಂದು ಹೇಳಿದ್ದಾರೆ.
ನಾನು ಜನತಾ ದರ್ಶನ ಮಾಡಿದಾಗ ಬೆಳಿಗ್ಗೆ ೯ ರಿಂದ ರಾತ್ರಿ ೧ ಗಂಟೆವರೆಗೆ ಮಾಡಿದ್ದೆ. ಅವತ್ತು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ. ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಆರ್ ಅಶೋಕ್ ಅವರು ಕೂಡ ಮಾಡಿದ್ದರು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಅಂತ ಮಾಡಿದ್ರು. ತಿಂಗಳಿಗೆ ಒಂದು ಗ್ರಾಮಕ್ಕೆ ಅವರು ಭೇಟಿ ನೀಡಿದ್ದರು. ಈಗ ಸಿಎಂ ಅವರು ಜನಸ್ಪಂದನಾ ಮಾಡಿದ್ದಾರೆ. ಅವರಿಗೆ ಮನವರಿಕೆ ಆಗಿರುವ ಕಷ್ಟಗಳನ್ನು ಸಿಎಂ ಬಗೆಹರಿಸಲಿ. ಆಗ ಅವು ಅರ್ಥಪೂರ್ಣ ಆಗುತ್ತವೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ಸಾ.ರಾ ಮಹೇಶ್, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಮಹದೇವ್, ಮನ್ಸೂರ್ ಆಲಿ ಪ್ರಮುಖರು ಇದ್ದರು.
Kodagu
ಕೊಡಗಿನಾದ್ಯಂತ ಇಂದು ಪುತ್ತರಿ ಹಬ್ಬದ ಸಂಭ್ರಮ

ನಾಪೋಕ್ಲುವಿನಲ್ಲಿ ಪುತ್ತರಿ ಸಂಭ್ರಮಿಸಲು ಪಟಾಕಿಗಾಗಿ ಮುಗಿಬಿದ್ದ ಜನ
ನಾಪೋಕ್ಲು : ಕೊಡಗು ಜಿಲ್ಲೆಯಲ್ಲಿ ಇಂದು ಪುತ್ತರಿ ಹಬ್ಬದ ಸಂಭ್ರಮದ ಸಡಗರ, ಇನ್ನೇನು ಕ್ಷಣಗಣನೆಯಲ್ಲಿ ಹಬ್ಬವನ್ನು ಆಚರಿಸಲಾಗುವುದು.
ಪುತ್ತರಿ ಎಂದರೆ ಕೊಡಗಿನ ಸುಗ್ಗಿಯ ಹಬ್ಬ ಎಂದೇ ಪ್ರಖ್ಯಾತಿಯನ್ನು ಪಡೆದಿದೆ. ಹಬ್ಬಕ್ಕೆ ಮೊದಲು ಮನೆಗಳನ್ನು ಸುಣ್ಣ,ಬಣ್ಣ ಪೇಂಟಿಂಗ್ ಗಳಿಂದ ಸಿಂಗರಿಸಿ ಹಬ್ಬಕ್ಕೆ ಮೆರಗು ನೀಡುತ್ತಾರೆ.
ಅದರಂತೆ ಹಬ್ಬಕ್ಕೆ 5 ದಿನಗಳ ಮೊದಲು ಊರಿನ ಮಂದ್ ನಲ್ಲಿ ಈಡು ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ನಂತರ 5ನೇ ದಿನ ಪುತ್ತರಿ ಹಬ್ಬವನ್ನು ಕೊಡಗಿನ ಜನರು ವಿಜೃಂಭಣೆಯಿಂದ ಆಚರಿಸುತ್ತಾರೆ.
ಕೊಡಗಿನ ಕುಲದೇವರಾದ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ಇಂದು ರಾತ್ರಿ 7.20ಕ್ಕೆ ನೆರೆ ಕಟ್ಟುವುದು,8.20ಕ್ಕೆ ಕದಿರು ತೆಗೆಯುವುದು,9.20ಕ್ಕೆ ಪ್ರಸಾದ ವಿತರಣೆಯ ಮೂಲಕ ಪುತ್ತರಿ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಅದರಂತೆ ಜಿಲ್ಲಾದ್ಯಂತ 7.45ಕ್ಕೆ ನೆರೆ ಕಟ್ಟುವುದು 8.45ಕ್ಕೆ ಕದಿರುತೆಗೆಯುವುದು 9.45ಕ್ಕೆ ಭೋಜನ ಮಾಡಲಾಗುವುದೆಂದು ವರದಿಯಾಗಿದೆ.
: ಪುತ್ತರಿ ಸಂಭ್ರಮಿಸಲು ನಾಪೋಕ್ಲುವಿನಲ್ಲಿ ಪಟಾಕಿಗಾಗಿ ಮುಗಿಬಿದ್ದ ಜನ
ನಾಪೋಕ್ಲು ಪಟ್ಟಣದ ಮಾರುಕಟ್ಟೆಯ ಬಳಿ ಪಟಾಕಿ ಮಾರಾಟ ಬಿರುಸಿನಿಂದ ಸಾಗುತ್ತಿದೆ.ಪುತ್ತರಿಹಬ್ಬವು ಸಂಭ್ರಮವಾಗಬೇಕಾದರೆ ಪಟಾಕಿ ಮುಖ್ಯ, ಪಟಾಕಿಯ ಶಬ್ದಗಳು ಪ್ರತಿ ಮನೆಗಳಲ್ಲಿ ಸ್ಪರ್ಧೆಯಂತೆ ನಡೆಯುತ್ತವೆ.
ನೆಲದ ಮೇಲೆ ಪಟಾಕಿ ಶಬ್ದದ ಭರಟೆಯಾದರೆ, ಆಗಸದಲ್ಲಿ ನಕ್ಷತ್ರಗಳ ಚಿತ್ತಾರದ ಪಟಾಕಿಗಳು ನೋಡುಗರನ್ನು ಮೂಕ ಪ್ರೇಕ್ಷಕರನ್ನಾಗಿಸುತ್ತದೆ.
ಪ್ರತಿಯೊಬ್ಬರೂ ಈ ಹಬ್ಬಕ್ಕಾಗಿ 5ರಿಂದ 10 ಸಾವಿರಗಳಷ್ಟು ಹಣವನ್ನು ಬರೀ ಪಟಾಕಿಗಾಗಿ ವಹಿಸುತ್ತಾರೆ. ಅದರಂತೆ ನಾಪೋಕ್ಲು ನಗರದ ಮಾರುಕಟ್ಟೆಯ ಬಳಿಯಲ್ಲಿ ಪಟಾಕಿ ಮಾರಾಟದ 5 ಮಳಿಗೆಗಳಿದ್ದು ಪಟಾಕಿ ಕೊಂಡುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ದೀಪಾವಳಿಯ ಸಂದರ್ಭದಲ್ಲಿ ಸರ್ಕಾರ ಈಗಾಗಲೇ ಪಟಾಕಿಯ ಮೇಲೆ ನಿರ್ಬಂಧ ಏರಿ ಬರೀ ಹಸಿರು ಪಟಾಕಿಯನ್ನು ಮಾರಾಟ ಮಾಡಬೇಕೆಂದು ವ್ಯಾಪಾರಿಗಳ ಮೇಲೆ ಕಡ್ಡಾಯದ ನಿರ್ಬಂಧ ಹೇರಿದ್ದರೂ ಕೂಡ ಪುತ್ತರಿ ಹಬ್ಬಕ್ಕೆ ಪಟಾಕಿ ವ್ಯಾಪಾರ ಮಾತ್ರ ಬರದಿಂದ ಸಾಗಿದೆ.
ವರದಿ :ಝಕರಿಯ ನಾಪೋಕ್ಲು
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan4 hours ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore2 months ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore3 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ