Agriculture
ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಮಾರ್ಗ; 200 ರೂ. ಖರ್ಚು ಮಾಡಿದರೆ ಸಾಕು!

ರೈತನ ಆಧಾರವೇ ಕೃಷಿ. ಕೃಷಿ ಇಲ್ಲದೆ ಅವನ ಬದುಕು ಸಾಗುವುದಿಲ್ಲ. ಯಾವುದೇ ಬೇಸಾಯಕ್ಕೆ ನೀರು, ಉತ್ತಮ ಹವಾಗುಣ, ಮಣ್ಣು ,ಈ ಮೂರು ಅಂಶಗಳು ಬಹಳ ಮುಖ್ಯವಾದವು.ಮಣ್ಣಿನ ಗುಣಧರ್ಮ ಬಹಳ ಮುಖ್ಯವಾಗಿದೆ. ಮಣ್ಣಿನ ಗುಣಧರ್ಮ ಎಂದರೆ ಅದರ ಸಾರ, ಸತ್ವ ,ಪೋಷಕಾಂಶ ,ಪ್ರೋಟೀನ್, ಜೈವಿಕ ವರ್ಧಕಗಳು, ಎನ್ನಬಹುದು. ಹಲವು ರೈತರ ಪ್ರಶ್ನೆಯೇನೆಂದರೆ. ಈ ಅಂಶಗಳು ನಮ್ಮ ಮಣ್ಣಿನಲ್ಲಿ ಇದೆಯೇ? ಅಥವಾ ಇವುಗಳನ್ನು ಹೆಚ್ಚು ಮಾಡುವುದು ಹೇಗೆ ? ಎಂಬ ಪ್ರಶ್ನೆಗಳು ಸ್ಥಳೀಯ ರೈತರಲ್ಲಿ ಸಹಜವಾಗಿ ಮೂಡುತ್ತದೆ.
ನಮ್ಮ ರೈತ ಬಾಂಧವರಲ್ಲಿ ಒಂದು ತಪ್ಪು ಕಲ್ಪನೆ ಬೇರೂರಿಬಿಟ್ಟಿದೆ. ಏನೆಂದರೆ ಗೊಬ್ಬರವನ್ನು ಸಸ್ಯಕ್ಕೆ ಕೊಡುತ್ತಿದ್ದೇವೆ ಎನ್ನುವುದು. ತಿಳಿಯಬೇಕಾದ ವಿಷಯ ಏನೆಂದರೆ ನಾವು ನೀಡಿದ ಯಾವುದೇ ಗೊಬ್ಬರವನ್ನು ಸಸ್ಯ ನೇರವಾಗಿ ಹೀರಿಕೊಳ್ಳುವುದಿಲ್ಲ. ಬದಲಾಗಿ ಮೊದಲು ಅದನ್ನು ಮಣ್ಣು ಹೀರಿಕೊಂಡು ನಂತರ ಮಣ್ಣಿನ ಮುಖಾಂತರ ಅದರ ಸತ್ವವನ್ನು ಸಸ್ಯಗಳು ಬಯಸುತ್ತವೆ. ಈ ಕಾರಣದಿಂದ ನಾವು ಮಣ್ಣಿಗೆ ಮೊದಲು ಆಹಾರ ನೀಡಬೇಕು. ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದು. ಮಣ್ಣನ್ನು ಮೃದುತ್ವ ಮಾಡುವುದು. ಇವೆಲ್ಲ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಇದಕ್ಕೆ ಸೂಕ್ತವಾಗಿ ಸಾವಯವ ಪದ್ಧತಿಯ ಮೂಲಕ ಜೀವಮೃತ ಎಂಬ ಒಂದು ಸಾವಯವ ದ್ರವ್ಯ ಬಳಸಿ ಎಲ್ಲಾ ಸಮಸ್ಯೆಗೆ ಪರಿಹಾರ. ಕಂಡುಕೊಳ್ಳಬಹುದು.

ಜೀವಮೃತ ತಯಾರಿಸುವುದು ಹೇಗೆ? ಎಂಬುದನ್ನು ನೋಡೋಣ.
ಜೀವಮೃತ ಸಾವಯವ ಕೃಷಿ ಪದ್ಧತಿಯ ಮೂಲಕ ತಯಾರಿಸಬಹುದಾದ ಒಂದು ಪೋಷಕಾಂಶಗಳ ದ್ರವ್ಯ. ಇದನ್ನು ತಯಾರಿಸಲು ಮೊದಲಿಗೆ 200 ಲೀಟರ್ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೊಂದಿರುವ ಪ್ಲಾಸ್ಟಿಕ್ ಬ್ಯಾರೆಲ್ ಅಥವಾ ನೀರಿನ ತಟ್ಟಿಯಾದರು ಆಗಬಹುದು. ನಂತರ 10 ಕೆಜಿ ನಾಟಿ ಹಸುವಿನ ಸಗಣಿಯನ್ನು ಬ್ಯಾರೆಲ್ ನಲ್ಲಿ ನೀರಿನೊಂದಿಗೆ ಚೆನ್ನಾಗಿ ಕಲಕಬೇಕು. ರೈತರಲ್ಲಿ ಒಂದು ಪ್ರಶ್ನೆ ಮೂಡಬಹುದು ಯಾಕೆ ? ನಾಟಿಯ ಹಸುವಿನ ಸಗಣಿಯನ್ನೆ ಬಳಸಬೇಕು?
ನಿಮ್ಮ ಪ್ರಶ್ನೆಗೆ ಉತ್ತರ, ನಮ್ಮಲ್ಲಿ ಎರಡು ರೀತಿಯ ಹಸುವಿನ ತಳಿಗಳಿವೆ. ಒಂದು ಬಸ್ತಾರ್ಸ್ ಮತ್ತು ಬಾಸ್ ಇಂಡಿಕಾಸ್ (ಜಬೂ ತಳಿ) ಜಬೂ ತಳಿಯ ಹಸು ಭಾರತವನ್ನು ಒಳಗೊಂಡು ಏಷ್ಯಾದ ಕೆಲವು ಭಾಗಗಳಲ್ಲಿ ವಾಸಿಸುತ್ತದೆ. ಸಾಮಾನ್ಯವಾಗಿ ಈ ಬಗೆಯ ಹಸುಗಳಿಗೆ ಭುಜ, ಗದ್ದ ವಟ್ಟಿಗೆ ,ಕೊಂಬು ,ಜೊತೆಗೆ ಸೂರ್ಯನಾಡಿ ಎಂಬ ಇದರ ಬೆನ್ನಲ್ಲಿ ಇರುತ್ತದೆ. ಈ ನರವು ಸೂರ್ಯನ ಬೆಳಕಿಗೆ ರಾಸಾಯನಿಕವನ್ನು ಉತ್ಪಾದಿಸಿ ಹಾಲು ಮತ್ತು ಗಂಜಲದ ಮೂಲಕ ಹೊರಹಾಕುತ್ತದೆ.
ಇದರಲ್ಲಿ ಔಷಧೀಯ ಗುಣ ಹೊಂದಿರುವುದರಿಂದ ಇದು ಸೂಕ್ತವೆನಿಸಿದೆ. ನಂತರ 20 ಲೀಟರ್ ಗಂಜಲವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ತದನಂತರ 2ಕೆಜಿ ಕರಿ ಬೆಲ್ಲವನ್ನು ಚೆನ್ನಾಗಿ ಪುಡಿಮಾಡಿ ಬಳಸುವುದು ಸೂಕ್ತ. ಕರಿ ಬೆಲ್ಲದಲ್ಲಿ ಯಾವುದೇ ರಾಸಾಯನಿಕಗಳ ಮಿಶ್ರಣ ಇಲ್ಲದಿರುವುದರಿಂದ ಇದು ಸೂಕ್ತವಾಗಿರುತ್ತದೆ. 2ಕೆಜಿ ಕಡಲೆ ಹಿಟ್ಟನ್ನು ನೀರಿನಲ್ಲಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ಜೊತೆಗೆ ಒಂದು ಬೊಗಸೆ ನಮ್ಮ ಭೂಮಿಯ ಮಣ್ಣನ್ನು ಅದರಲ್ಲಿ ಸೇರಿಸಬೇಕು. ದ್ವಿದಳ ಧಾನ್ಯದ ಪುಡಿ ಅಂದರೆ ಸೋಯಾಬಿನ್ ಮತ್ತು ಶೇಂಗಾ ಎರಡರಲ್ಲಿ ಎಣ್ಣೆ ಅಂಶ ಹೊಂದಿರುವುದರಿಂದ ಇವೆರಡನ್ನು ಹೊರತುಪಡಿಸಿ ಮಿಕ್ಕೆಲ್ಲ ದ್ವಿದಳ ಧಾನ್ಯಗಳ ಪುಡಿಯನ್ನು ಬಳಸಬಹುದು.
ಮಿಶ್ರಣ ಮಾಡುವಾಗ ಎಡದಿಂದ ಬಲಕ್ಕೆ ಮರದ ಕೋಲಿನಿಂದ ತಿರುಗಿಸಬೇಕು. ಕಾರಣ ಅದರಲ್ಲಿರುವ ಸೂಕ್ಷ್ಮಜೀವಿಗಳಿಗೆ ತೊಂದರೆ ಆಗದಿರಲಿ ಎಂಬ ಕಾರಣಕ್ಕಾಗಿ. ದಿನಕ್ಕೆ 3 ಬಾರಿ ಮಿಶ್ರಣ ಮಾಡಬೇಕು. ನಂತರ ಗೋಣಿಚೀಲ ಬಳಸಿ ಮುಚ್ಚಳವನ್ನು ಮುಚ್ಚಬೇಕು.ಮೂರರಿಂದ ನಾಲ್ಕು ದಿನಗಳಲ್ಲಿ ಜೀವಮೃತ ತಯಾರಾಗುತ್ತದೆ. 7 ದಿನಗಳವರೆಗೆ ಇದರ ಬಳಕೆ ಮಾಡಬಹುದು. ಇದರಲ್ಲಿ ಇರುವಂತಹ ಸೂಕ್ಷ್ಮಣು ಜೀವಿಗಳು ಮತ್ತು ಜೈವಿಕ ವರ್ಧಕಗಳ ಸಂಖ್ಯೆ ದ್ವಿಗುಣಗೊಳ್ಳುತ್ತದೆ.
ಇದರಿಂದ ಮಣ್ಣಿನ ಪಿಎಚ್ ಮೌಲ್ಯ ಅಧಿಕವಾಗಲು ಸಹಾಯವಾಗುತ್ತದೆ. ಪಿಎಚ್ ಮೌಲ್ಯ ಅಧಿಕವಾದರೆ ಮಣ್ಣು ನಿರರ್ಗಳವಾಗಿ ತನ್ನಲ್ಲಿ ಎಲ್ಲಾ ಅಂಶಗಳನ್ನು ಹೀರಿಕೊಳ್ಳುತ್ತದೆ. ಸಸ್ಯವು ಮಣ್ಣಿಂದ ಪೋಷಕಾಂಶಗಳನ್ನು ಇರುತ್ತಾ ಸದೃಢವಾಗಿ ಬೆಳೆಯಲು ಸಹಾಯವಾಗುತ್ತದೆ. ಇದನ್ನು ತಿಂಗಳಿಗೊಮ್ಮೆ ಬಳಸುವುದು ಸೂಕ್ತ. 15 ದಿನಗಳಿಗೊಮ್ಮೆ ಬಳಸುವುದು ಇನ್ನು ಸೂಕ್ತ. ಸುಮಾರು ಒಂದು ನಾಟಿ ಹಸುವಿನಿಂದ 30 ಎಕರೆ ಜಮೀನಿಗೆ ಜೀವಾಮೃತವನ್ನು ನೀಡಬಹುದು.
ಈ ವಿಧಾನವು ಬಹಳ ಯಶಸ್ವಿಯಾಗಿ ಇರುವಂತಹದ್ದು. ಮತ್ತು ನಮ್ಮ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗುತ್ತದೆ ಇದನ್ನು ಬಳಸುವುದರಿಂದ ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಬಳಸುವಂತಿಲ್ಲ. ಕಡಿಮೆ ಕರ್ಚು ಇದ್ದರೆ ಸಾಕು ಈ ವಿಧಾನವನ್ನು ಬಳಸಬಹುದು. ಎಲ್ಲಾ ಬೆಳೆಗಳಿಗೂ ಬಳಸಬಹುದು. ರೈತರು ಇದರ ಬಗ್ಗೆ ಸ್ವಲ್ಪ ಯೋಚಿಸುವುದು ಸೂಕ್ತ.
Agriculture
25 ಲಕ್ಷದವರೆಗೆ ಸಾಲ ಮತ್ತು ಅದಕ್ಕೆ 35% ಸಬ್ಸಿಡಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಯಾರಿಗೆ ಸಿಗಲಿದೆ ಈ ಸೌಲಭ್ಯ?

PMEGP Scheme | How to apply? – ಕೇಂದ್ರ ಸರ್ಕಾರವು ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವ ಯುವ ಜನತೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಆದರೆ ಹಲವು ಜನರಿಗೆ ಈ ಯೋಜನೆಗಳ ಮಾಹಿತಿ ತಿಳಿದಿರುವುದೇ ಇಲ್ಲ. ಈ ಒಂದು ಲೇಖನದಲ್ಲಿ ಕೇಂದ್ರ ಸರ್ಕಾರದ ಒಂದು ಉತ್ತಮ ಯೋಜನೆಯ ಬಗ್ಗೆ ತಿಳಿಸಲಿದ್ದೇವೆ.
ಯಾವುದು ಈ ಯೋಜನೆ?
ಈ ಯೋಜನೆಯ ಹೆಸರು ” ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ “. ಈ ಯೋಜನೆಯನ್ನು 2008 ಆಗಸ್ಟ್ 15ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರು ಜಾರಿಗೋಳಿಸಿದ್ದರು. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವವರಿಗೆ ಆರ್ಥಿಕ ಸಹಾಯ ಮಾಡುವುದಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಬ್ಯಾಂಕಗಳು ನಿಮ್ಮ ಯೋಜನಾ ಮೊತ್ತದ ಗರಿಷ್ಟ 90% ನಿಂದ 95% ವರೆಗಿನ ಹಣವನ್ನು ಮಂಜೂರು ಮಾಡುತ್ತವೆ. ನೀವು ಪಡೆದ ಸಾಲದ ಮೊತ್ತದ ಮೇಲೆ PMEGP ಯೋಜನೆಯ ಅಡಿಯಲ್ಲಿ 15% ನಿಂದ 35% ನವರೆಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ.
ಹಾಗಿದ್ದರೆ ಈ ಯೋಜನೆಗೆ ಅರ್ಜಿ ಯಾರು ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಕನಿಷ್ಠ 8ನೇ ತರಗತಿ ಪಾಸಾದಂತಹ 18 ವರ್ಷದ ಮೇಲಿನ ಭಾರತೀಯ ಪ್ರಜೆಗಳಾಗಿರಬೇಕು. ಈ ಮೊದಲು ಉದ್ಯಮ ಆರಂಭಿಸಲು ಸರ್ಕಾರದಿಂದ ಯಾವುದೇ ರೀತಿಯ ಲಾಭ ಪಡೆದುಕೊಂಡಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವಂತಹ ಅವಶ್ಯಕ ದಾಖಲೆಗಳು :
ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದರೆ ಈ ಕೆಳಗಿನ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ.
1. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
2. ಶೈಕ್ಷಣಿಕ ಪ್ರಮಾಣಪತ್ರ
3. ವಿವರವಾದ ಯೋಜನಾ ವರದಿ
4. ಜಾತಿ ಪ್ರಮಾಣಪತ್ರ
5. ಗ್ರಾಮೀಣ ಪ್ರಮಾಣ ಪತ್ರ (ಅನ್ವಯವಾದಲ್ಲಿ ಮಾತ್ರ)
ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಹತೆ ಹೊಂದಿರುವ ಅಭ್ಯರ್ಥಿಗಳು PMEGP ಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಕೊಂಡು ಬೇಕಾಗುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
PMEGP ಅಧಿಕೃತ ಜಾಲತಾಣ –
https://www.kviconline.gov.in/pmegpeportal/pmegphome/index.jsp
Agriculture
ಆರ್ ಬಿ ಐ ನಿಂದ ರೈತರಿಗೆ ಗುಡ್ ನ್ಯೂಸ್ : ಅಡಮಾನ ಇಲ್ಲದೆ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ

Loan for farmers upto 2 lakh without Surity – ದೇಶದ ರೈತರಿಗೆ ಮೇಲಾಧಾರ – ಮುಕ್ತ ಕೃಷಿ ಸಾಲದ ಮಿತಿಯನ್ನು ಏರಿಸಲಾಗಿದೆ. ಈ ಮೊದಲು ₹1.6 ಲಕ್ಷ ರೂ. ವರೆಗೆ ಇದ್ದ ಸಾಲದ ಮಿತಿಯನ್ನು ₹2.0 ಲಕ್ಷ ರೂ. ಗೆ ಏರಿಸಲಾಗಿದೆ. ಈ ನಿರ್ಧಾರವನ್ನು ಜನವರಿ 01, 2025 ರಿಂದಲೇ ಜಾರಿಗೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.
ಈ ಹೊಸ ಉಪಕ್ರಮದ ಮೂಲ ಉದ್ದೇಶವೇನು?
ಕೃಷಿ ವಲಯದ ಅಧಾಯವನ್ನು ಬೆಂಬಲಿಸಲು ಮತ್ತು ಹೆಚ್ಚಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈಗಿನ ಸಮಯದಲ್ಲಿ ಆಗಿರುವ ಹಣದುಬ್ಬರ (Inflation) ಮತ್ತು ಹೆಚ್ಚುತ್ತಿರುವ ಕೃಷಿ ಒಳಹರಿವಿನ ವೆಚ್ಚಕ್ಕೆ ರೈತರಿಗೆ ಸಹಾಯವಾಗುವಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಇದರಿಂದ ರೈತರಿಗೆ ಆರ್ಥಿಕ ನೆರವು ಸಿಗಲಿದೆ.
ಈ ಉಪಕ್ರಮದಿಂದ ದೇಶದ 86% ಕ್ಕಿಂತಲೂ ಹೆಚ್ಚು ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಪ್ರಯೋಜನ ಸಿಗಲಿದೆ. ಆರ್ ಬಿಐ ನ ಈ ಹೊಸ ಮಾರ್ಗಸೂಚಿಯು ದೇಶದ ಪ್ರತಿಯೊಬ್ಬ ರೈತನಿಗೂ ತಲುಪಲಿ ಎಂಬ ಉದ್ದೇಶದಿಂದ ಸರ್ಕಾರವು ವ್ಯಾಪಾಕ ಪ್ರಚಾರ ಕೈಗೊಳ್ಳಲಿದೆ.
ಇದರಿಂದ ಕೃಷಿ ವಲಯದಲ್ಲಿ ಹೆಚ್ಚಿನ ಹೂಡಿಕೆ, ರೈತರ ಜೀವನ ಅಭಿವೃದ್ಧಿಗೊಳ್ಳಲಿದೆ. ಮುಂದಿನ ವರ್ಷ ಅಂದರೆ, ಜನವರಿ 01, 2025ರಿಂದ ದೇಶಾದ್ಯಂತ ಇದು ಜಾರಿಯಾಗಲಿದ್ದು ಇದರ ಲಾಭ ಪಡೆಯಲು ರೈತರು ತಮ್ಮ ಬ್ಯಾಂಕ್ ಗಳಿಗೆ ಭೇಟಿ ನೀಡಿ ಇದರ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
Agriculture
ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ

ಚಿಕ್ಕಮಗಳೂರು: ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತುವರಿ ಸಮಸ್ಯೆ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಲೋಕಸಭೆ ಮಾಜಿ ಸದಸ್ಯ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ತಾವೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೇ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಿದ್ದೀವೆ ಎಂದು ಹೇಳಿದರು.
ಬಹಳಷ್ಟು ಉಹಾಪೋಹಗಳು ಭೂ ಒತ್ತುವರಿ ಬಗ್ಗೆ ಹರಿದಾಡುತ್ತಿದ್ದು, ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಅಪಪ್ರಚಾರ ಮಾಡುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಈಗಾಗಲೇ ಸರ್ಕಾರ ಒತ್ತುವರಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಿ ಆದೇಶಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನವನ್ನು ನೀಡಿದ್ದಾರೆ. ಜತೆಗೆ ಕಾನೂನಿನ ಚೌಕಟ್ಟಿನಡಿಯಲ್ಲಿ ಅರ್ಹ ಪ್ರಕರಣಗಳಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒತ್ತುವರಿ ಸಮಸ್ಯೆ ಬಹಳಷ್ಟು ವರ್ಷಗಳ ಸಮಸ್ಯೆಯಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಜನಸಂಖ್ಯೆಯಲ್ಲಿ ಭಾರೀ ಪ್ರಮಾಣದ ಬದಲಾವಣೆಯಾಗಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತುವರಿಯೂ ನಡೆದಿದೆ. ಅರಣ್ಯವೂ ಕ್ಷೀಣಿಸಿದೆ ಎಂದು ತಿಳಿಸಿದರು.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya11 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar17 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar11 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore12 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special16 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar11 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು