Connect with us

Mandya

ಮನಸೋ ಇಚ್ಚೆಯಂತೆ ಥಳಿಸಿದ್ದವರಲ್ಲಿ ಎಸ್ಐ ಅಯ್ಯನಗೌಡ ಸಸ್ಪೆಂಡ್, ಉಳಿದ ಪೊಲೀಸರ ಅಮಾನತು ಯಾವಾಗ ?

Published

on

ಮಂಡ್ಯ: ರೈತ ಮಹಿಳೆಗೆ ಥಳಿಸಿ ಆಸ್ಪತ್ರೆ ಸೇರುವಂತೆ ಮಾಡಿದ್ದ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನಗೌಡ ಸೇವೆಯಿಂದ ಅಮಾನತು ಮಾಡಲಾಗಿದ್ದು, ಉಳಿದ ಪುರುಷ ಪೊಲೀಸರು ಶೂ ಕಾಲಿನಿಂದ ಒದ್ದು, ಲಾಠಿಯಿಂದ ಮನಸೋ ಇಚ್ಚೆ ಥಳಿಸಿದ್ದವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಲಾಗಿದೆ.

ಮಂಡ್ಯದ ಅಶೋಕ್ ನಗರದ ರೂಪ ಮೇಲೆ ದೌರ್ಜನ್ಯ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಯ್ಯನಗೌಡ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸೇವೆಯಿಂದ ಅಮಾನತು ಮಾಡಲಾಗಿದೆ. ಆದರೆ ಉಳಿದ ಪುರುಷ ಪೊಲೀಸರ ಅಮಾನತು ಯಾವಾಗ ಎಂದು ಸಾರ್ವಜನಿಕರು ಮತ್ತು ಪ್ರಗತಿಪರ ಹೋರಾಟಗಾರರು ಪ್ರಶ್ನಿಸುತ್ತಿದ್ದಾರೆ.

ಜನವರಿ 5 ರಂದು ವಿವೇಕಾನಂದ ರಸ್ತೆಯ ರವಿ ನರ್ಸಿಂಗ್ ಹೋಮ್ ಬಳಿ ಪೊಲೀಸ್ ಪೇದೆ ವನಜಾಕ್ಷಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹಸು ಅಡ್ಡ ಬಂದಿದ್ದು,ಇದರಿಂದ ಮಹಿಳಾ ಪೇದೆ ಹಸು ಸಾಕಾಣಿಕೆದಾರರಿಗೆ ನಿಂದನೆ ಮಾಡಿ ಕಪಾಲ ಮೋಕ್ಷವನ್ನು ಮಾಡಿ ಭಯಹುಟ್ಟಿಸಿ, ಕೇಸು ಕೂಎ ದಾಖಲಿಸಿದ್ದರು.

ಇದೇ ವಿಚಾರವಾಗಿ ಪೂರ್ವ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನಗೌಡ ಸ್ಥಳಕ್ಕೆ ತೆರಳಿ ಜೀಪ್ ಚಾಲಕನ ಜೊತೆ ಸೇರಿ ಮಹಿಳೆ ರೂಪರನ್ನು ಬಲವಂತವಾಗಿ ಜೀಪ್ ಗೆ ಹತ್ತಿಸಿಕೊಂಡು ಠಾಣೆಗೆ ಕರೆದುಕೊಂಡು ಬಂದು, ಆನಂತರ ಠಾಣೆಯ ಕೊಠಡಿಯಲ್ಲಿ ಕೂಡಿ ಹಾಕಿ ಅಯ್ಯನಗೌಡ ಮತ್ತು ಇತರೆ ಪೊಲೀಸರು ಮಹಿಳೆಯ ಮೇಲೆ ಮನಸೋ ಇಚ್ಚೆ ಥಳಿಸಿದ್ದಾರೆ.


ರೂಪಳ ತಾಯಿ ಗೌರಮ್ಮ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಎಸ್ ಐ ಅಯ್ಯನಗೌಡನನ್ನು ಸೇವೆಯಿಂದ ಅಮಾನತು ಮಾಡಿದ್ದು, ಉಳಿದವರನ್ನು ತಕ್ಷಣವೇ ಅಮಾನತು ಮಾಡದಿದ್ದರೆ ಕಮಿಷನರ್ ಅವರಿಗೆ ದೂರು ನೀಡುವುದಾಗಿ ಪ್ರಗತಿಪರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!