Chikmagalur
ಮಾಡದ ತಪ್ಪಿಗೆ ೧೪ ವರ್ಷದಿಂದ ಬಹಿಷ್ಕಾರ ಶಿಕ್ಷೆ – ರಾಗಿಬಸವನಹಳ್ಳಿಯಲ್ಲಿ ಅನಿಷ್ಟ ಬಹಿಷ್ಕಾರ ಪದ್ದತಿ ಇಂದಿಗೂ ಜೀವಂತ

ನ್ಯಾಯಕ್ಕಾಗಿ ಹೋರಾಡಿ ಪ್ರಾಣ ಬಿಡುತ್ತೇವೆ, ಸ್ವತಂತ್ರ ಒತ್ತೆ ಇಡಲ್ಲ, ನ್ಯಾಯಕ್ಕಾಗಿ ಅಲೆದು ಅಲೆದು ಸುಸ್ತಾದ ಪುಟ್ಟಸ್ವಾಮಿ ಕುಟುಂಬ
ಚಿಕ್ಕಮಗಳೂರು : ಸಾಮಾಜಿಕ ಬಹಿಷ್ಕಾರ ದಂತಹ ಅನಿಷ್ಟ ಪದ್ದತಿ ಇನ್ನು ಕೂಡಾ ಜೀವಂತವಾಗಿದೆ ಎನ್ನುವುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿ ಗ್ರಾಮ ಸಾಕ್ಷಿಯಾಗಿದ್ದು. ಸಾಮಾಜಿಕ ಬಹಿಷ್ಕಾರ ಅನ್ನೋ ಅನಿಷ್ಟ ಪದ್ಧತಿ ತೊಲಗಿದಂತೆ ಕಾಣುತ್ತಿಲ್ಲ.ಈ ಗ್ರಾಮದ ಒಂದು ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದ್ದು. ಕಳೆದ ೧೪ ವರ್ಷದಿಂದ ನ್ಯಾಯಕ್ಕಾಗಿ ಹೋರಾಡುತ್ತಿದೆ.
೧೪ ವರ್ಷದ ಹಿಂದೆ ಈ ಗ್ರಾಮದಿಂದ ಬಹಿಷ್ಕಾರ ಹಾಕಲಾಗಿದ್ದ ವ್ಯಕ್ತಿಯೊಬ್ಬರ ಬಳಿ ಅಡಕೆ ಏರಲು ಎತ್ತಿನ ಗಾಡಿಯನ್ನು ಕೇಳಿ ಪಡೆದುಕೊಂಡಿದ್ದ ಎಂಬ ಒಂದೇ ಒಂದು ಕಾರಣಕ್ಕಾಗಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಪುಟ್ಟಸ್ವಾಮಿ ಮತ್ತಾತನ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ಈ ವೇಳೆ ತಪ್ಪೊಪ್ಪಿಕೊಂಡು ೧೧೦೧ ರೂ. ದಂಡ ಕಟ್ಟಿ ತಪ್ಪಿಕೊಳ್ಳುವಂತೆ ಷರತ್ತು ವಿಧಿಸಿದ್ದಾರೆ. ಆದರೆ, ಸಾವಿರಾರು ಮಹನೀಯರ ಪ್ರಾಣ ತ್ಯಾಗದಿಂದ ದೊರೆತಿರುವ ಸ್ವತಂತ್ರವನ್ನು ಮಾರಿಕೊಳ್ಳುವುದಿಲ್ಲ. ಸ್ವಾಭಿಮಾನದಿಂದಲೇ ಬದುಕುತ್ತೇನೆ ಎಂದು. ಅಂದಿನಿಂದ ಇಂದಿನವರೆಗೂ ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಜಿಲ್ಲಾಧಿಕಾರಿ ಕಚೇರಿ ಬಾಗಿಲು ತಟ್ಟಿದ್ದಾರೆಯೇ ವಿನಃ ಗ್ರಾಮದ ಮುಂದೆ ಒತ್ತೆಯಾಳಾಗಲು ಇಚ್ಛೆಪಟ್ಟಿಲ್ಲ.
ರಾಗಿಬಸವನಹಳ್ಳಿಯಲ್ಲಿ ಈ ಹಿಂದಿನಿಂದಲೂ ಈ ಅನುಷ್ಟ ಪದ್ದತಿ ನಡೆದುಕೊಂಡುಬಂದಿದ್ದು. ಬಹಿಷ್ಕಾರಕ್ಕೊಳಗಾಗಿರುವ ಪುಟ್ಟಸ್ವಾಮಿಯನ್ನ ಗ್ರಾಮದ ಯಾರಾದರೂ ಮಾತನಾಡಿಸಿದರೆ ಅಂದೇ ಗ್ರಾಮದಲ್ಲಿ ಪಂಚಾಯ್ತಿ ಸೇರಿ, ದಂಡ ವಿಧಿಸುವ ಪದ್ದತಿ ಇಂದಿಗೂ ಕೂಡಾ ಜೀವಂತವಾಗಿರುವುದರ ಜೊತೆಗೆ ಈ ಗ್ರಾಮದ ಬಹುತೇಕ ಪ್ರಜ್ಞಾವಂತರು ಬದುಕಿದ್ದೂ ನಿತ್ಯ ಸಾಯುವಂತೆ ಮಾಡಿದೆ.
ಒಟ್ಟಾರೆ ನಾಗರಿಕ ಸಮಾಜ ಬೆಳೆದಂತೆ ಅನಿಷ್ಟ ಪದ್ಧತಿಗಳು ದೂರಾಗುತ್ತವೆ ಅಂತಾ ನಂಬಿರೋ ಈ ದಿನಗಳಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿರೋದು ದುರಂತದ ಸಂಗತಿ. ಈ ಕುರಿತು ದೂರು ನೀಡಲಾಗಿದ್ರೂ ಕ್ರಮ ವಹಿಸದೇ ನಿರ್ಲಕ್ಷ್ಯ ವಹಿಸಿರೋ ಅಧಿಕಾರಿಗಳ ಕ್ರಮ ಕೂಡ ಖಂಡನೀಯ. ಆದಷ್ಟು ಬೇಗ ಇವರ ಕುಟುಂಬಕ್ಕೆ ನ್ಯಾಯ ಸಿಗಲಿ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
* ಊರವರು ಮಾತಡ್ಸಲ್ಲ, ಅಂಗಡಿಯಲ್ಲಿ ದಿನಸಿ ಕೊಡಲ್ಲ :
ಕಳೆದ ಹದಿನಾಲ್ಕು ವರ್ಷಗಳ ಹಿಂದೆ ಗ್ರಾಮಸ್ಥರು ಪುಟ್ಟಸ್ವಾಮಿ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಊರಿನವರು ಕೆಲಸಕ್ಕೆ ಕರೆಯುತ್ತಿಲ್ಲ. ಅಂಗಡಿಗೆ ಹೋದ್ರೆ ದಿನಸಿ ಪದಾರ್ಥ ಕೊಡುತ್ತಿಲ್ಲ. ಮೋಟರ್ ರೀವೈಂಡಿಂಗ್ ಕೆಲಸ ಮಾಡಿ ಬದುಕುತ್ತಿರುವ ಈ ಕುಟುಂಬವನ್ನ ಊರಿನಿಂದ ಹೊರ ಇಡಲಾಗಿದೆ. ಸದ್ಯ ತೋಟದಲ್ಲೇ ಮನೆ ಕಟ್ಟಿಕೊಂಡಿರೋ ಪುಟ್ಟಸ್ವಾಮಿ ಅಕ್ಕಪಕ್ಕದ ಹಳ್ಳಿಗಳಿಗೆ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದಾರೆ. ಆದರೆ, ಆಪತ್ತು ಎಂಬುದು ಎದುರಾದರೆ ಸಹಾಯಕ್ಕೆ ನಿಲ್ಲುವವರಿಲ್ಲದೆ ಈ ಕುಟುಂಬ ಆಧುನಿಕ ಯುಗದಲ್ಲೂ ವನವಾಸ ಅನುಭವಿಸುತ್ತಿದೆ.
* ಪೊಲೀಸರಿಗೆ ದೂರು ಕೊಟ್ರೂ ಕಿಮ್ಮತ್ತಿಲ್ಲ :
ಕಳೆದ ಹದಿನಾಲ್ಕು ವರ್ಷ ಹಿಂದೆ ಬಹಿಷ್ಕಾರಕ್ಕೊಳಗಾಗಿರುವ ಪುಟ್ಟಸ್ವಾಮಿ ಮತ್ತವನ ಕುಟುಂಬ ಅಂದಿನಿಂದಲೂ ನ್ಯಾಯಕ್ಕಾಗಿ ನಿರಂತರವಾಗಿ ಹೋರಾಡುತ್ತಲೇ ಬಂದಿದ್ದು. ಈ ಕುರಿತು ಪೊಲೀಸ್ ಠಾಣೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ನಮ್ಮ ಮೇಲಿನ ಬಹಿಷ್ಕಾರ ತೆರವುಗೊಳಿಸಿ ನ್ಯಾಯದ ಜೊತೆಗೆ ಸ್ವತಂತ್ರ ಕೊಡಿಸಿ ಎಂದು ಅಲೆದು ಬೇಸತ್ತು ಸುಮ್ಮನಾಗಿದೆ. ಪೊಲೀಸರು ಗ್ರಾಮಕ್ಕೆ ಬಂದು ಹೋದರೂ ಕೂಡಾ ನಮಗೆ ನ್ಯಾಯ ಸಿಕ್ಕಿಲ್ಲ ಹಾಗಾಗಿ ಇದರ ಕುರಿತು ಯಾವುದೇ ಅಧಿಕಾರಿಗಳ. ಬಳಿ ನ್ಯಾಯ ಕೊಡಿಸುವಂತೆ ಕೇಳುವುದನ್ನೇ ಬಿಟ್ಟಿದ್ದೇವೆ ಎಂದು ಇವರ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
* ಬಹಿಷ್ಕಾರಕ್ಕೆ ಕಾರಣವೇನು.?
ಇದಕ್ಕೂ ಮೊದಲು ಬಹಿಷ್ಕಾರಕ್ಕೆ ಒಳಗಾಗಿದ್ದ ಇದೇ ರಾಗಿ ಬಸವನಹಳ್ಳಿ ಗ್ರಾಮದ ಉಪ್ಪಾರ ಸಮುದಾಯಕ್ಕೆ ಸೇರಿದ್ದ ವ್ಯಕ್ತಿಯೊಬ್ಬರಿಂದ ತಮ್ಮ ತೋಟದಿಂದ ಅಡಕೆ ತರಲು ಎತ್ತಿನ ಗಾಡಿ ಕೇಳಿ ಪಡೆದುಕೊಂಡಿದ್ದರು. ಆದರೆ, ಅವರನ್ನು ಮಾತನಾಡಿಸಿದ್ದೂ ಅಲ್ಲದೆ ಎತ್ತು-ಗಾಡಿ ಎರಡನ್ನೂ ತೆಗೆದುಕೊಂಡಿದ್ದೀಯ ಗ್ರಾಮದ ನಿಯಮ ಮೀರಿರುವುದರಿಂದ ಸಾವಿರದ ಒಂದುನೂರ ಒಂದು ರೂ. ದಂಡ ಕಟ್ಟಿ ತಪ್ಪೊಪ್ಪಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಆದರೆ, ಮಾಡದ ತಪ್ಪಿಗೆ ನಾನೇಕೆ ದಂಡ ಕಟ್ಟಲಿ ಕಾನೂನು ರೀತಿ ಹೋರಾಡುತ್ತೇನೆಯೇ ವಿನಃ ಮಹಾತ್ಮರು ತಮ್ಮ ಪ್ರಾಣ ಅರ್ಪಿಸಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದು ಹೇಳಿದ್ದೇ ಬಹಿಷ್ಕಾರಕ್ಕೆ ಕಾರಣವಾಗಿದೆ.
* ಈ ಗ್ರಾಮದಲ್ಲಿ ಬಹಿಷ್ಕಾರಕ್ಕೊಳಗಾದವರಿಗೆ ವಿಧಿಸುವ ಷರತ್ತುಗಳು:
೧)ಗ್ರಾಮದಲ್ಲಿ ನೀರು ತೆಗೆದುಕೊಳ್ಳುವಂತಿಲ್ಲ.
೨)ಅಂಗಡಿಗಳಲ್ಲಿ ಸಾಮಾಗ್ರಿಗಳನ್ನು ಖರೀದಿಸುವಂತಿಲ್ಲ.
೩) ಯಾರ ಮನೆಯಲ್ಲಿಯೂ ಕೂಡ ಉಪ್ಪು ನೀರು ನೀಡುವಂತಿಲ್ಲ.
೪) ಬಹಿಷ್ಕಾರಕ್ಕೆ ಒಳಪಟ್ಟ ಕುಟುಂಬಗಳನ್ನು ಮಾತನಾಡಿಸಿದರೂ 1101 ರೂ. ದಂಡ ವಿಧಿಸಲಾಗುತ್ತದೆ.
* ಮನೆಗೆ ಬೆಂಕಿ ಬಿದ್ದಾಗಲೂ ಗ್ರಾಮಸ್ಥರ ಅಸಹಕಾರ : ಬಹಿಷ್ಕಾರಕ್ಕೆ ಒಳಗಾಗಿರುವ ಪುಟ್ಟಸ್ವಾಮಿಯವರ ಮನೆಗೆ ೭ ವರ್ಷಗಳ ಹಿಂದೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿಕೊಂಡಾಗಲೂ ಕೂಡಾ ಗ್ರಾಮಸ್ಥರು ಯಾರೂ ಸಹ ಇವರ ಸಹಕಾರಕ್ಕೆ ಧಾವಿಸಿಲ್ಲ. ಆ ವೇಳೆ ಪಕ್ಕದ ಜಮೀನಿಗೆ ಶುಂಠಿ ಕೆಲಸಕ್ಕೆಂದು ಬಂದಿದ್ದ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೂಲಿ ಕಾರ್ಮಿಕರು ಬೆಂಕಿನದಿಸಲು ಸಹಾಯ ಮಾಡಿ ಮಾನವೀಯತೆ ಮೆರೆದರೂ ಕೂಡಾ ಗ್ರಾಮಸ್ಥರು ಮಾತ್ರ ಮನುಷ್ಯತ್ವವೇ ಇಲ್ಲದಂತೆ ವರ್ತಿಸಿದ್ದರು ಎಂಬುದನ್ನು ನೆನೆದು ಈ ಕುಟುಂಬ ಇಂದಿಗೂ ಕಂಬನಿ ಮಿಡಿಯುತ್ತಿದೆ.
* ಚುನಾವಣೆಯಲ್ಲಿ ಮತ ಕೇಳಲೂ ಹಿಂದೇಟು :
ರಾಗಿ ಬಸವನಹಳ್ಳಿಯಲ್ಲಿ ಒಮ್ಮೆ ಬಹಿಷ್ಕಾರಕ್ಕೆ ಒಳಗಾದರೆ ಆ ವ್ಯಕ್ತಿಯನ್ನು ಮಾತನಾಡಿಸುವುದಿರಲಿ ಚುನಾವಣೆ ಸಂದರ್ಭದಲ್ಲಿ ಮತ ಕೇಳಲೂ ಸಹ ಹೊಂದೇಟು ಹಾಕುತ್ತಾರೆ. ಸದ್ಯ ಒಂದೂವರೆ ದಶಕದಿಂದ ಬಹಿಷ್ಕಾರಕ್ಕೊಳಗಾಗಿರುವ ಪುಟ್ಟಸ್ವಾಮಿ ಮನೆ ಯಾರೂ ಮತ ಕೇಳಲು ಬರುವುದಿಲ್ಲ. ಬಂದರೆ ಅವರಿಗೆ ಇಡೀ ಊರಲ್ಲಿ ಯಾರೂ ಕೂಡಾ ಮತ ಹಾಕಲ್ಲ. ನಿಜವಾಗಿಯೂ ಇದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರವೇ ಎಂದು ಹೇಳಬಹುದಾಗಿದೆ.
ಬಹಿಷ್ಕಾರಕ್ಕೊಳಗಾಗಿದ್ದವರ ಬಳಿ ಎತ್ತು, ಗಾಡಿ ಪಡೆದುಕೊಂಡಿದ್ದಕ್ಕೆ ನನಗೆ ಮತ್ತು ನನ್ನ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಆ ವೇಳೆ ದಂಡ ಕಟ್ಟಿ ತಪ್ಪೊಪ್ಪಿಕೊಳ್ಳುವಂತೆ ಹೇಳಿದರು. ಆದರೆ ಸಾವಿರಾರು ಮಹಾತ್ಮರ ತ್ಯಾಗ, ಬಲಿದಾನದ ಸಂಕೇತವಾಗಿರುವ ಸ್ವತಂತ್ರವನ್ನು ನಾನು ಇವರಿಗೆ ಪಣಕ್ಕಿಟ್ಟರೆ. ಸ್ವತಂತ್ರಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಕಾನೂನು ಹೋರಾಟ ಮಾಡುತ್ತಿದ್ದೇನೆ. ಊರಲ್ಲಿ ನನ್ನನ್ನು ಮಾತನಾಡಿಸಿದ ಅದೇಷ್ಟೋ ಮಂದಿ ದಂಡ ಕಟ್ಟಿ ಇಂದಿಗೂ ದಾಸ್ಯಕ್ಕೊಳಗಾಗಿ ಬದುಕುತ್ತಿದ್ದಾರೆ. ಪ್ರಾಣಿಗಳಿಗಾದರೂ ಒಂದು ದಯೆ ಎನ್ನುವುದು ಇದೆ. ನಾನು ಆ ಪ್ರಾಣಿಗಳಿಗಿಂತಲೂ ಕಡೆಯೇ? ಅಥವಾ ಈ ಊರಲ್ಲಿ ಮಾನವುಯತೆಯೇ ಇಲ್ಲವೇ? ಎನ್ನುವ ಪ್ರಶ್ನೆ ನನ್ನನ್ನು ಕಾಡುತ್ತಿದೆ. ಇನ್ನೂ ಹದಿನಾಲ್ಕು ವರ್ಷ ಇದೇ ರೀತಿ ವನವಾಸ ಅನುಭವಿಸಿ ನ್ಯಾಯಕ್ಕಾಗಿ ಕಾನೂನು ಹೋರಾಟ ಮಾಡುತ್ತೇನೆಯೇ ವಿನಃ ಮಾಡದ ತಪ್ಪನ್ನು ಒಪ್ಪಿಕೊಳ್ಳಲ್ಲ, ಗಾಂಧೀಜಿ ಕೊಟ್ಟ ಸ್ವಾತಂತ್ರ್ಯವನ್ನು ಒತ್ತೆಯಿಡಲ್ಲ.
– ಪುಟ್ಟಸ್ವಾಮಿ, ಬಹಿಷ್ಕಾರಕ್ಕೆ ಒಳಗಾದ ವ್ಯಕ್ತಿ
ಯೋಗೀಶ್ ಕಾಮೇನಹಳ್ಳಿ
Chikmagalur
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.
ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ತೀರ್ಪು ನೀಡಿತು.
Chikmagalur
ಜನಿವಾರ ತೆಗೆಸಿರುವುದು ಖಂಡನೀಯ

ಜಯಪುರ : ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಪತ್ರಿಕೆಗೆ ತಿಳಿಸಿದರು.
ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ.
ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಕೂಡಲೇ ಇಂತಹ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕಾಗಿ ಆಗ್ರಹಿಸುತ್ತೇವೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ :-ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಒಂಟಿ ಸಲಗ

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಕಾಣಿಸಿಕೊಳ್ಳದೊಡಗಿದೆ
ಮೂರು ದಿನದ ಹಿಂದೆ ಎಂಟನೇ ತಿರುವು ಬಳಿ ಸಂಜೆ ವೇಳೆ ಕಾಣಿಸಿದ್ದ ಆನೆ ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ನಿಂತಿದೆ.
ಸಂಜೆಯೂ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿದ್ದು, ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಇದ್ದು,ಆನೆ ದಾಳಿಗೆ ಮುಂದಾದರೆ ತಪ್ಪಿಸಿಕೊಳ್ಳೋದು ಕಷ್ಟ.
ನಿನ್ನೆ ಸಂಜೆ ಕಾರು ಚಾಲಕ ಆನೆಯಿಂದ ಜಸ್ಟ್ ಮಿಸ್ ಆಗಿದ್ದು ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳಿಯರು, ಪ್ರವಾಸಿಗರು ಒತ್ತಾಯಿಸಿದ್ದಾರೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu19 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Kodagu16 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ