Connect with us

State

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

* ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಉನ್ನತ ಮಟ್ಟದ ಸಭೆ ನಡೆಸಲಾಯಿತು.

• ಕೋವಿಡ್‌ 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್‌ ಪತ್ತೆಯಾಗಿದೆ.

• ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ.

• ಕರ್ನಾಟಕದಲ್ಲಿ ಪ್ರಸ್ತುತ 92 Active COVID Cases ವರದಿಯಾಗಿವೆ. ಕೇರಳದಲ್ಲಿ 2041, ತಮಿಳು ನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 Active cases ಇವೆ.

• ರಾಜ್ಯದಲ್ಲಿರುವ ಒಟ್ಟು 92 Active COVID Case ಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

• ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation). 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.

• ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 5000 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 Rapid Antigen Test ಹಾಗೂ 3500 RTPCR ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು.

• ಕರ್ನಾಟಕದಲ್ಲಿ ಡಿಸೆಂಬರ್‌ 15 ರಂದು ಒಂದು ಹಾಗೂ ಡಿಸೆಂಬರ್‌ 20 ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (Co-Morbidity) ಬಳಲುತ್ತಿದ್ದರು.

• ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್‌ 19 ಈಗ Pandemic ಆಗಿ ಉಳಿದಿಲ್ಲ. Endemic ಆಗಿದೆ.

• ಸರ್ಕಾರವೂ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ.

• ಮೃತರಾದವರು, Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ.

ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದರಂತೆ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:

• ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು.

• ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು.

• ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.

• ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.
• ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
• ಎಲ್ಲ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳು ಹಾಗೂ ರಾಜ್ಯದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು
• 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್‌ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್‌ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು.
• ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್‌ ಧರಿಸುವುದು.
• ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
• ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದು ಉತ್ತಮ.
• ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು.
• ಭಾರತ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ.
• ರಾಜ್ಯವೂ ಕೇರಳ ಮತ್ತು ತಮಿಳು ನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
• ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರ (ILI) ದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ.

State

ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು: ಸಿಎಂ ಫಸ್ಟ್‌ ರಿಯಾಕ್ಷನ್‌

Published

on

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ವಿದ್ಯಾರ್ಥಿ ನಿಧನಕ್ಕೆ ಸಂತಾಒಪ ಸೂಚಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು.

ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಬರೆದುಕೊಂಡು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Continue Reading

State

ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ

Published

on

BMRCL Train Operator’s Recruitment 2025 : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೋಟಿಫಿಕೇಷನ್ ಬಿಡುಗಡೆ ಮಾಡಿದ್ದಾರೆ.

ನಮ್ಮ ಮೆಟ್ರೋ, BMRCL ನಲ್ಲಿ ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೆಟ್ರೋ ಇಲಾಖೆಯ ಏನೆಲ್ಲಾ ಅರ್ಹತೆಗಳನ್ನು ನಿಗದಿಪಡಿಸಿದೆ? ಯಾವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಮಾಹಿತಿ ಇಲ್ಲಿದೆ..

ಹುದ್ದೆಗಳ ವಿವರ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇನ್ ಆಪರೇಟರ್ ಹುದ್ದೆಗಳನ್ನು 5 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರದಲ್ಲಿ ಅಭ್ಯರ್ಥಿಯು ಮಾಡುವ ಕೆಲಸದ ಆಧಾರದ ಮೇಲೆ ಸೇವಾ ಅವಧಿಯನ್ನು ಹೆಚ್ಚಿಸಲಾಗುವುದು.

ಯಾವ ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ?

ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ 38 ವರ್ಷದ ಒಳಗಿನ ಅಭ್ಯರ್ಥಿಗಳಾಗಿದ್ದು, ಈ ಕೆಳಗಿನ ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ ಕೋರ್ಸ್ ಮುಗಿಸಿರಬೇಕು.

Electrical Engineering / Electrical & Electronics
Engineering / Telecommunications/ Electronics & Communication Engineering/ Electrical
Power Systems /Industrial Electronics/ Mechanical Engineering

ಆಯ್ಕೆಯಾಗುವವರಿಗೆ ಸಿಗುವ ಸಂಬಳ : ನೇಮಕಾತಿಯಲ್ಲಿ ಅಂತಿಮವಾಗಿ ಕೆಲಸಕ್ಕೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 35,000 ರೂಪಾಯಿಯಿಂದ 82,660 ರೂಪಾಯಿವರೆಗೆ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಯಾವಾಗ?

ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯೂ ಮಾರ್ಚ್ 12, 2025 ರಂದು ಬಿಡುಗಡೆಯಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವು ಏಪ್ರಿಲ್ 09, 2025 ಆಗಿರುತ್ತದೆ.

ಅರ್ಜಿ ಸಲ್ಲಿಕೆಯ ಪ್ರಕ್ರಿಯೆ :

ಮೊದಲು ಕೆಳಗೆ ನೀಡಿರುವ ಲಿಂಕ್ ಮೇಲೆ ಒತ್ತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆಸಿ ಅದಕ್ಕೆ ನಿಗದಿತ ಸ್ಥಳದಲ್ಲಿ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ವಿಳಾಸ : The General Manager (HR), Bangalore Metro Rail Corporation Limited, III Floor, BMTC Complex, K.H.Road, Shanthinagar, Bangalore 560027

ಅಧಿಕೃತ ಜಾಲತಾಣ – https://projectrecruit.bmrc.co.in/

Continue Reading

State

ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ

Published

on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ.

ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Continue Reading

Trending

error: Content is protected !!