Mysore
ಮೈಸೂರು ಮತ್ತು ವಾಸ್ಕೋ-ಡ-ಗಾಮಾ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು
ನೈಋತ್ಯ ರೈಲ್ವೆ ಮೈಸೂರು ವಿಭಾಗ
ತಡೆರಹಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಹುಬ್ಬಳ್ಳಿ ಮುಖಾಂತರವಾಗಿ ಮೈಸೂರು ಮತ್ತು ವಾಸ್ಕೋ-ಡ-ಗಾಮಾ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.
ರೈಲು ಗಾಡಿ ಸಂಖ್ಯೆ.06231 ಶುಕ್ರವಾರ – 22ನೇ ಡಿಸೆಂಬರ್ ಮತ್ತು 29ನೇ ಡಿಸೆಂಬರ್ – ರಾತ್ರಿ 19:10 ಗಂಟೆಗೆ ಮೈಸೂರಿನಿಂದ ಹೊರಟು ಮರುದಿನ ಮಧ್ಯಾಹ್ನ 13:50 ಗಂಟೆಗೆ ವಾಸ್ಕೋ-ಡ-ಗಾಮಾ ತಲುಪಲಿದೆ.

ರೈಲಿಗೆ ಮಾರ್ಗ ಮಧ್ಯದಲ್ಲಿ ಮಂಡ್ಯ, ರಾಮನಗರಂ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ತಿಪಟೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್ ರಾಕ್, ಕ್ಯೂಲಂ, ಸಾನ್ವೊರ್ಡಾಮ್ ಕರ್ಚೋರೆಮ್ ಮತ್ತು ಮಡಗಾಂವ್ನಲ್ಲಿ ವಾಣಿಜ್ಯ ನಿಲುಗಡೆ ಇರುತ್ತದೆ.
ಹಿಂದಿರುಗುವ ದಿಕ್ಕಿನಲ್ಲಿ ರೈಲು ಗಾಡಿ ಸಂಖ್ಯೆ.06232 ಸೋಮವಾರ – 25ನೇ ಡಿಸೆಂಬರ್ 2023 ಮತ್ತು 1ನೇ ಜನವರಿ 2024 ರಂದು 14:30 ಗಂಟೆಗೆ ವಾಸ್ಕೋ-ಡ-ಗಾಮಾದಿಂದ ನಿರ್ಗಮಿಸುತ್ತದೆ ಮತ್ತು ಮಾರ್ಗ ಮಧ್ಯದಲ್ಲಿ ಮೇಲಿನ ಪಟ್ಟಿಯಂತೆ ಅವೇ ವಾಣಿಜ್ಯ ನಿಲುಗಡೆಗಳ ನಂತರ ಮೈಸೂರು ತಲುಪುತ್ತದೆ.

ರೈಲು ಈ ಕೆಳಗಿನಂತೆ 22 ಕೋಚ್ಗಳ ಸಂಯೋಜನೆಯನ್ನು ಹೊಂದಿರುತ್ತದೆ
• ಮೊದಲ ದರ್ಜೆ AC ಕೋಚ್ (FAC): 01
• ಎರಡನೇ ಶ್ರೇಣಿ AC (ACCW): 02
• ಮೂರನೇ ಶ್ರೇಣಿ AC (ACCN): 07
• ಸ್ಲೀಪರ್ ದರ್ಜೆ (GSCN): 08
• ಸಾಮಾನ್ಯ ದರ್ಜೆ ಕೂರುವ ಕೋಚ್ (GS): 02
• ಎರಡನೇ ದರ್ಜೆಯ ಲಗೇಜ್-ಕಮ್-ಬ್ರೇಕ್ ವ್ಯಾನ್ (SLR): 02
ಗಮನಿಸಿ * ಎಸಿ ಕೋಚ್ಗಳಲ್ಲಿ ಲಿನೆನ್ ಅನ್ನು ಒದಗಿಸಲಾಗುವುದಿಲ್ಲ ಮತ್ತು ಪ್ರಯಾಣಿಕರು ತಮ್ಮ ಸ್ವಂತ ಬೆಡ್ರೋಲ್ಗಳನ್ನು ಒಯ್ಯಲು ವಿನಂತಿಸಲಾಗಿದೆ
ಪ್ರಯಾಣಿಸುವ ಸಾರ್ವಜನಿಕರು ಎರಡು ಜನಪ್ರಿಯ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಈ ವಿಶೇಷ ರೈಲಿನ ಸೇವೆಗಳನ್ನು ಆರಾಮದಾಯಕ ಪ್ರಯಾಣಕ್ಕಾಗಿ ಬಳಸಿಕೊಳ್ಳುವಂತೆ ಕೋರಲಾಗಿದೆ.
Mysore
ಮಚ್ಚಿನಿಂದ ಒಡೆದು ಓರ್ವ ವ್ಯಕ್ತಿಯ ಬರ್ಬರ ಹ*ತ್ಯೆ
ತಿ.ನರಸೀಪುರ: ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಒಡೆದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಟ್ಟಣದ ಸಮೀಪದ ಹಳೇ ತಿರುಮಕೂಡಲಿನ ಚೌಡಯ್ಯ ವೃತ್ತದ ಬಳಿ ಕಳೆದ ರಾತ್ರಿ ಸಂಭವಿಸಿದೆ.
ಹೊಸ ತಿರುಮಕೂಡಲು ರಾಮಚಂದ್ರ ಎಂಬುವರ ಮಗ ವಿನೋದ್ ಕುಮಾರ್ (ಪಚ್ಚರ್) (35) ಕೊಲೆಯಾದ ವ್ಯಕ್ತಿ.
ಮೃತರಿಗೆ ಪತ್ನಿ ಹಾಗೂ 7 ವರ್ಷದ ಗಂಡು ಮಗವಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ತಿರುಮಕೂಡಲು ಚೌಡಯ್ಯ ವೃತ್ತದ ಸೇತುವೆ ಬಳಿ ಕಳೆದ ರಾತ್ರಿ ವಿನೋದ ಕುಮಾರ್ (ಪಚ್ಚರ್)ನನ್ನು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಬೆಳಿಗ್ಗೆಯವರೆಗೂ ರಕ್ತದ ಮಡುವಿನಲ್ಲಿ ಬಿದ್ದು ಜೀವಂತವಾಗಿ ಒದ್ದಾಡುತ್ತಿದ್ದ ವಿನೋದಕುಮಾರ್ನನ್ನು ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದರಾದರೂ ಆಸ್ವತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮೃತನ ಸಹೋದರ ಸುರೇಂದ್ರ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಳಲಾಗಿದೆ.

ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಧನಂಜಯ್, ಸಬ್ ಇನ್ಸ್ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ, ಭೇಟಿ ನೀಡಿ ಪರಿಶೀಲನೆ ನಡೆಸಿ ಪೋಲೀಸರು ಕೊಲೆ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
Mysore
ಡಿ.16 ರಿಂದ ಶ್ರೀ ಅಯ್ಯಪ್ಪ ಸ್ವಾಮಿಯ ಬ್ರಹ್ಮೋತ್ಸವ : ನಂಜನಗೂಡಿನಲ್ಲಿ ಸಿದ್ದತೆ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು : ನಗರದ ಕಪಿಲಾ ನದಿ ತೀರದಲ್ಲಿರುವ ಶ್ರೀ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ 28 ನೇ ವರ್ಷದ ಬ್ರಹ್ಮೋತ್ಸವದ ಅಂಗವಾಗಿ ಡಿ. 16 ರಿಂದ 26 ರವರೆಗೆ ಒಟ್ಟು 11 ದಿನಗಳ ಕಾಲ ಧಾರ್ಮಿಕ ಪೂಜಾ ಕಾರ್ಯಗಳು ನೆರವೇರಲಿದೆ ಎಂದು ದೇವಾಲಯದ ಗುರುಸ್ವಾಮಿ ಗಳು ಪಿ.ದೇವರಾಜಸ್ವಾಮಿ ತಿಳಿಸಿದ್ದಾರೆ.
ದೇವಸ್ಥಾನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ರಹ್ಮೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರ ಶಬರಿ ಮಲೈ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀಕಂಠ ರಾಜೀವರು ತಂತ್ರಗಳ ಮಾರ್ಗದರ್ಶನದಲ್ಲಿ ಡಿ. 16ರ ಬೆಳಗ್ಗೆ 9.30ರಿಂದ 10.15ರ ಸಮಯದಲ್ಲಿ ಧ್ವಜಾರೋಹಣ ನೆರವೇರಲಿದ್ದು ಡಿ.20ರ ವರೆಗೆ ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ದೇವತಾ ಕಾರ್ಯಗಳು ನೆರವೇರಲಿದೆ.

ಡಿ. 17ರ ಸಂಜೆ 6 ಕ್ಕೆ ವಿಶೇಷ ಪಡಿ ಪೂಜೆ ಹಾಗೂ 20.ರಂದು ಬೆಳಗ್ಗೆ 7ಕ್ಕೆ ಉತ್ಸವ ಮೂರ್ತಿಗೆ ವಿಶೇಷ ಪೂಜೆಯನ್ನು ಆಯೋಜಿಸಲಾಗಿದೆ. ಇದೇ ದಿನ ಬೆಳಗ್ಗೆ 11ಕ್ಕೆ ಅನ್ನ ಸಂತರ್ಪಣೆ ಹಾಗೂ ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಜರುಗಲಿದೆ. ರಾತ್ರಿ 7 ಗಂಟೆ ದೇವಾಲಯದ ಆವರಣದ ಕಪಿಲಾ ನದಿ ತೀರದಲ್ಲಿ ಅರಾಟ್ಟು ಹಾಗೂ ತೆಪ್ಪೋತ್ಸವ ಜರುಗಲಿದೆ. ರಾತ್ರಿ 8 ಗಂಟೆಯಿಂದ ಮಾರುತಿ ಸಾಂಸ್ಕೃತಿಕ ಕಲಾಸಂಘ ಇವರಿಂದ ಕುರುಕ್ಷೇತ್ರ ನಾಟಕ ನಡೆಯಲಿದೆ.
ಪಾದಯಾತ್ರೆ ಮೂಲಕ ಆಗಮಿಸಿ 18 ಮೆಟ್ಟಿಲುಗಳನ್ನು ಹತ್ತುವ ಭಕ್ತಾಧಿಗಳಿಗಾಗಿ 24ರಂದು ದೇವಾಲಯದ ಆವರಣದಲ್ಲಿ ಇರುಮುಡಿ ಕಟ್ಟಲಾಗುವುದು. ನಂತರ ಅಯ್ಯಪ್ಪ ಯಾತ್ರಿಗಳು 25ರ ಸೋಮವಾರ ಬೆಳಗ್ಗೆ 5.ಗಂಟೆ ಮೈಸೂರಿನ ಶ್ರೀ ದತ್ತ ವೆಂಕಟೇಶ್ವರಸ್ವಾಮಿ ದೇವಾಲಯದಿಂದ ಪಾದಯಾತ್ರೆ ಮೂಲಕ ನಂಜನಗೂಡಿಗೆ ತಲುಪಿ ದೇವರ ದರ್ಶನ ಪಡೆದುಕೊಳ್ಳಲಿದ್ದಾರೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳು: ಬ್ರಹ್ಮೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರತಿ ದಿನ ಸಂಜೆ ದೇವಾಲಯದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಡಿ. 16ರ ಸಂಜೆ 6ಕ್ಕೆ ನಂಜನಗೂಡಿನ ನೂಪುರ ನೃತ್ಯ ಶಾಲೆಯ ಮಕ್ಕಳಿಂದ ನೃತ್ಯ ರೂಪಕ ಜರುಗಲಿದ್ದು ಜೊತೆಗೆ ಡಿ. 26ರವರೆಗೆ ಪ್ರತಿದಿನ ರಾತ್ರಿ 8 ಗಂಟೆಗೆ ನಾಟಕ ಪ್ರದರ್ಶನ ಜರುಗಲಿದೆ.
ಸುದ್ದಿಗೋಷ್ಠಿಯಲ್ಲಿ ಗುರುಸ್ವಾಮಿಗಳು ಪಿ.ದೇವರಾಜಸ್ವಾಮಿ, ದೇವಾಲಯದ ಸಮಿತಿಯ ಅಧ್ಯಕ್ಷ ನಾರಾಯಣ್, ಎನ್.ಎಂ.ಮಂಜುನಾಧ್, ಭಕ್ತ ವತ್ಸಲ, ನಾರಾಯಣ್ ರಾವ್, ಸೇರಿದಂತೆ ಉಪಸ್ಥಿತರಿದ್ದರು.
Mysore
ಎಂಸಿಡಿಸಿಸಿ ಬ್ಯಾಂಕ್ನಲ್ಲಿ ಮತ ಚೋರಿ: ಶಾಸಕ ಜಿ.ಡಿ.ಹರೀಶ್ಗೌಡ ಆರೋಪ
ಮೈಸೂರು: ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಎAಸಿಡಿಸಿಸಿ) ಚುನಾವಣೆಯಲ್ಲಿ ಮತಪತ್ರವನ್ನೇ ಬದಲಾವಣೆ ಮಾಡಲಾಗಿದೆ. ಇದು ಕಾಂಗ್ರೆಸ್ ಪಕ್ಷ ಮಾಡಿದ ನಿಜವಾದ ಮತ ಚೋರಿ ಎಂದು ಬ್ಯಾಂಕ್ ಮಾಜಿ ಅಧ್ಯಕ್ಷರೂ ಆದ ಹುಣಸೂರು ಶಾಸಕ ಜಿ.ಡಿ.ಹರೀಶ್ಗೌಡ ಆರೋಪಿಸಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಬೂತ್ನಲ್ಲೇ ಮತಪತ್ರ ಬದಲಾಯಿಸಿದ್ದಾರೆಂದು ಹೇಳುತ್ತಿದ್ದಾರೆ. ಮತ ಚಲಾವಣೆ ಮಾಡಿರುವ ಮತದಾರರು ಈ ಬಗ್ಗೆ ಹೇಳಿದ್ದಾರೆ. ಇವೆಲ್ಲವನ್ನು ನೋಡಿದರೆ ಯಾವುದನ್ನೂ ನಂಬಲು ಆಗುತ್ತಿಲ್ಲ. ಆಡಳಿತ ವ್ಯವಸ್ಥೆಯ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ಮತಗಳ್ಳತನದ ಬಗ್ಗೆ ಎಂದು ಹೇಳುತ್ತಿದ್ದಾರೆ. ಆದರೆ, ಮೈಸೂರಿನ ಎಂಸಿಡಿಸಿಸಿ ಚುನಾವಣೆಯಲ್ಲಿ ಮತಪತ್ರ ಬದಲಾಯಿಸಿದ್ದಾರೆ. ಯಾವುದೇ ಸರ್ಕಾರದ ಅವಧಿಯಲ್ಲೂ ಈ ರೀತಿ ಆಗಿರಲಿಲ್ಲ. ಇಷ್ಟೊಂದು ದ್ವೇಷ, ಅಸೂಯೆ ಇರುವ ಸರ್ಕಾರವನ್ನೂ ಯಾವಾಗಲೂ ನೋಡಿರಲಿಲ್ಲ. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.
ಸಹಕಾರಿ ಸಂಘಗಳ ಚುನಾವಣೆಯಲ್ಲಿ 5 ಮತಗಳನ್ನು ಹೆಚ್ಚುವರಿಯಾಗಿ ಸೇರಿಸಿ ಗೆಲುವು ಸಾಧಿಸಿದ್ದೇವೆಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದರು. ಅದರ ಮುಂದಿನ ಭಾಗ ಇದು. ನ್ಯಾಯಾಲಯ ಫಲಿತಾಂಶ ಪ್ರಕಟಿಸದಂತೆ ಆದೇಶ ನೀಡಿತ್ತು. ಆದರೂ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಫಲಿತಾಂಶ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿದರು.

ಸಿಎಂ ಕುರ್ಚಿಗಾಗಿ ಕಚ್ಚಾಟ: ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆ. ಪರಿಣಾಮ ಬೆಳಗಾವಿ ಅಧಿವೇಶನದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬಹುತೇಕ ಸಚಿವರು ಸದನಕ್ಕೆ ಗೈರು ಹಾಜರಾಗುತ್ತಿದ್ದಾರೆ. ಯಾವುದಾದರೂ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಲು ಸಚಿವರೇ ಇರುವುದಿಲ್ಲ. ಆಡಳಿತ ಪಕ್ಷದ ನಾಯಕರು ಪರಸ್ಪರ ಕಚ್ಚಾಟದಲ್ಲೇ ದಿನ ದೂಡುತ್ತಿದ್ದಾರೆ. ಸಿಎಂ, ಡಿಸಿಎಂ ಅಕ್ಕಪಕ್ಕದಲ್ಲಿ ಕುಳಿತಾಗಲೂ ಒಬ್ಬರ ಮುಖ ಮತ್ತೊಬ್ಬರು ನೋಡಲಾಗದ ಪರಿಸ್ಥಿತಿ ಇದೆ. ಎಲ್ಲವನ್ನೂ ಜನರ ತೀರ್ಮಾನಕ್ಕೆ ಬಿಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
-
Hassan1 hour agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special3 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Hassan21 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
Hassan19 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
State21 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Mandya19 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
State16 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
Kodagu20 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
