Connect with us

Chamarajanagar

ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾನೂನು ಅರಿವು ಶಿಬಿರ

Published

on

ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ಕಾಯ೯ಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಮಾತುನಾಡಿದ ಅವರು ತಾಲೂಕಿನ ವಕೀಲರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು,

ತಾಲೂಕಿನ ವಕೀಲರ ಸಂಘದ ಅಧ್ಯಕ್ಷರಾದ ರಾಜಣ್ಣ ರವರು ವಿದ್ಯಾರ್ಥಿಗಳಿಗೆ 14 ರಿಂದ 32ನೇ ವಿಧಿಗಳ ವರೆಗಿನ ಮಾಹಿತಿ


ಮೂಲಭೂತ ಹಕ್ಕುಗಳು, ಮೋಟಾರ್ ವಾಹನ ಕಾಯಿದೆಯ ಬಗ್ಗೆ ಮಾಹಿತಿ, ಹೆಣ್ಣು ಮಕ್ಕಳಿಗೆ ಆಸ್ತಿ ಹಕ್ಕು ಇರುವುದರ ಬಗ್ಗೆ ಶಿಕ್ಷಣದ ಹಕ್ಕು ಇತರ ವಿಚಾರಗಳ ಬಗ್ಗೆ ತಿಳಿಸಿದರು,

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕಾಂತರಾಜು, ಕಾಯ೯ದಶಿ೯ ಕುಮಾರಸ್ವಾಮಿ, ಹಾಗೂ ಶಾಲೆಯ ಹಿರಿಯ ಶಿಕ್ಷಕರಾದ ತ್ರಿವೇಣಿ, ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಾಗಿದ್ದರು,

Continue Reading
Click to comment

Leave a Reply

Your email address will not be published. Required fields are marked *

Chamarajanagar

ಅಪರಾಧ ತಡೆಯುವ ನಿಟ್ಟಿನಲ್ಲಿ ಜಾಗೃತರಾಗಿ: ಪಿಎಸ್ಐ ತಾಜುದ್ದೀನ್

Published

on

ಚಾಮರಾಜನಗರ: ವಿದ್ಯಾರ್ಥಿಗಳು ಸಮಾಜದ ಶಕ್ತಿಯಾಗಿ ಹೊರಹೊಮ್ಮುವುದರಿಂದ ಸುತ್ತಮುತ್ತನಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಜಾಗೃತರಾಗಬೇಕೆಂದು ಸಂತೇಮರಹಳ್ಳಿ ಸಬ್ ಇನ್ಸ್ ಪೆಕ್ಟರ್ ತಾಜುದ್ದೀನ್ ತಿಳಿಸಿದರು.

ತಾಲೂಕಿನ ಸಂತೇಮರಹಳ್ಳಿ ಜೆ ಎಸ್ ಎಸ್ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಕಾನೂನಿನ ಕಾಯ್ದೆಗಳನ್ನು ತಿಳಿದುಕೊಳ್ಳುವ ಮೂಲಕ ಅಪರಾಧಗಳಿಗೆ ಕಡಿವಾಣ ಆಕಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆಗಳ್ಳತನ, ಸರ ಕಳ್ಳತನ ಸೇರಿದಂತೆ ಅನೇಕ ಅಪರಾಧ ಕೃತ್ಯಗಳು ನಿರಂತರವಾಗಿ ನಡೆಯುತ್ತಿದೆ.ಇಂತಹ ಕೃತ್ಯಗಳ ಬಗ್ಗೆ ಹಳ್ಳಿಗಳಲ್ಲಿ ಕುಟುಂಬಸ್ಥರಿಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ಬಾಲ್ಯವಿವಾಹ ಕುರಿತು ಜಾಗೃತರಾಗಬೇಕು ಮತ್ತು ತಂದೆ ತಾಯಿಗಳು ಕೂಡ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ತಿಳುವಳಿಕೆ ಕಾನೂನು ಅರಿವು ತಿಳಿಸಬೇಕಾಗಿದೆ.

ಅತಿಯಾಗಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು ಕೆಲವು ಮಾದಕ ವಸ್ತುಗಳ ದುಷ್ಟಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ವಿದ್ಯಾರ್ಥಿ ಜೀವನ ಹಾಳಾಗುತ್ತದೆ.

ತಂದೆ ತಾಯಿಗಳು ಮಕ್ಕಳ ಏಳಿಗೆಗೆ ಸಾಕಷ್ಟು ಶ್ರಮವಿಸಿ ದುಡಿಮೆ ಮಾಡುತ್ತಾರೆ. ಆದರೆ ಇಂತಹ ಚಟಗಳಿಗೆ ಬಲಿಯಾಗಬೇಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮರಿಸ್ವಾಮಿ, ಪೊಲೀಸ್ ಸಿಬ್ಬಂದಿಗಳಾದ ರಮೇಶ್, ರಾಜೇಶ್ವರಿ ಹಾಗೂ ಶಾಲಾ ಸಿಬ್ಬಂದಿಗಳು ಹಾಜರಿದ್ದರು.

Continue Reading

Chamarajanagar

ಚಿರತೆ ದಾಳಿ ಕರು ಬಲಿ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಹುಳಿ ದಾಳಿಯಿಂದ ಕರು ಬಲಿ.

ಗ್ರಾಮದ ಸೋಮೇಶ್ ಎಂಬುವವರ ಜಮೀನಿನಲ್ಲಿ ಚಿರತೆ ದಾಳಿ ಮಾಡಿದ ಪರಿಣಾಮ ಕರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಾಜಿ ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ತ್ವರಿತಗತಿಯಲ್ಲಿ ಕೋಮಿಂಗ್ ಕಾರ್ಯಾಚರಣೆ ಮತ್ತು ಬೋನ್ ಇಡಲು ಮನವಿ ಮಾಡಿದರು.

ಈ ಭಾಗದಲ್ಲಿ ರಾತ್ರಿ ಸಮಯದಲ್ಲಿ ಹುಲಿ ಸಂಚಾರ ಜಾಸ್ತಿ ಆಗಿದ್ದು, ಇದರ ಬಗ್ಗೆ ಸರಿಯಾದ ರೀತಿಯಲ್ಲಿ ಕ್ರಮ ವಹಿಸುವಂತೆ ಮನವಿ ಮಾಡಿದರು.

Continue Reading

Chamarajanagar

ಗ್ರಾ.ಪಂ.15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಗೆ ಗುರುಪ್ರಸಾದ್ ಒತ್ತಾಯ

Published

on

ಚಾಮರಾಜನಗರ: ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆ ಮಾಡುವಂತೆ ಸಾಗಡೆ ಗ್ರಾಮ ಪಂಚಾಯಿತಿ ಸದಸ್ಯ ಎಸ್.ಆರ್.ಗುರುಪ್ರಸಾದ್ ಒತ್ತಾಯಿಸಿದರು.

ನಗರದಲ್ಲಿ ಪತ್ರಿಕಾ ಹೇಳಿಕೆ ಮೂಲಕ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳಿಗೆ ನೀಡಬೇಕಾದ 2025 -26 ನೇ ಸಾಲಿನ 15ನೇ ಹಣಕಾಸಿನ ಆಯೋಗದ ಅನುದಾನವನ್ನು ಈ ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು.

ಪಕ್ಕದ ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರಪ್ರದೇಶಕ್ಕೆ ಈ ಅನುದಾನ ಬಿಡುಗಡೆಯಾಗಿದೆ ಅದರಂತೆ ನಮ್ಮ ರಾಜ್ಯಕ್ಕೆ ಅನುದಾನ ಬಿಡುಗಡೆಯಾಗಬೇಕು.

ಉದ್ಯೋಗ ಖಾತ್ರಿ ಯೋಜನೆಯ ಸಾಮಾಗ್ರಿ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳ ಸಾಮಾಗ್ರಿಯ ವೆಚ್ಚ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಇದರ ಜೊತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಹಾಗೂ ಕೂಸಿನ ಮನೆ ಕಾರ್ಯಕರ್ತೆಯರ ಮಾಸಿಕ ವೇತನವನ್ನು ಸರ್ಕಾರವೇ ಭರಿಸಬೇಕು ಎಂದು ಗುರುಪ್ರಸಾದ್ ಒತ್ತಾಯಿಸಿದ್ದಾರೆ.

Continue Reading

Trending

error: Content is protected !!