Chamarajanagar
ಯಳಂದೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಶ್ರೀ ವೈ.ಎಂ.ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಳಂದೂರು ಇಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಜಯ ರವರು ಮಾತನಾಡುತ್ತಾ ಇಬ್ಬರೂ ಮಹಾ ನಾಯಕರ ಜಯಂತಿಯನ್ನು ಆಚರಣೆಗೆ ಮಾತ್ರ ಸೀಮಿತಗೊಳಿಸದೆ ಪ್ರತಿದಿನವೂ ಅವರ ಜೀವನ ಆದರ್ಶಗಳ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಬರಿ ಮೈ ಪಕೀರರಾದ ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಸತ್ಯ ಮತ್ತು ಅಹಿಂಸೆಯ ಮೂಲಕ ಹೋರಾಟ ಮಾಡಿ ಶಾಂತಿಯಿಂದ ಸ್ವಾತಂತ್ರ್ಯ ಪಡೆಯಬಹುದೆಂದು ವಿಶ್ವಕ್ಕೆ ತೋರಿಸಿದವರಾಗಿದ್ದಾರೆ. ಸ್ವಚ್ಛ ಭಾರತದ ನಿರ್ಮಾಣ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಶಾಸ್ತ್ತೀಜಿಯವರು ಪ್ರಾಮಾಣಿಕತೆ ಹಾಗೂ ಸರಳ ಸಜ್ಜನ ರಾಜಕಾರಣಿಯಾಗಿದ್ದು ಈಗಿನ ರಾಜಕರಣಕ್ಕೆ ಮಾದರಿಯಾಗಿ ಪರಿಗಣಿಸಬಹುದಾದ ಚೇತನ ಎಂದರು. ಪ್ರೊ.ಶ್ವೇತಾರವರು ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜೀವನ, ಸಾಧನೆಗಳು, ಅವರ ಬದುಕಿನ ಹೋರಾಟಗಳನ್ನು ತಿಳಿಸಿದರು. ಯುವ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಪರಿಪಾಲಿಸುವ ಮೂಲಕ ಗುರಿ ಸಾಧಿಸ ಬಹುದೆಂದು ತಿಳಿಸಿದರು. ಗಾಂಧಿ ಜಯಂತಿ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸ್ವಯಂ ಸೇವಕ ವಿದ್ಯಾರ್ಥಿಗಳು ಎಲ್ಲಾ ಅಧ್ಯಾಪಕರೊಂದಿಗೆ ಸೇರಿ ಕಾಲೇಜಿನಲ್ಲಿ ಶ್ರಮದಾನ ಮಾಡಿದರು. ಶ್ರಮದಾನ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ವಿಜಯಹನೂರು, ಅಧ್ಯಾಪಕರಾದ ಶ್ವೇತಾ, ಗಿರಿಜ, ಲಿಖಿತ ಎಸ್ ಅನುರಾಧ, ಮಹಂತೇಶ ಹಾಗೂ ಅಧ್ಯಾಪಕೇತರರು ,ವಿದ್ಯಾರ್ಥಿಗಳು ಭಾಗವಹಿಸಿದ್ದರು.
Chamarajanagar
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಚೇರ್ ನೀಡಿದ ಗ್ರಾಪಂ ಸದಸ್ಯ ಗುರುಲಿಂಗಯ್ಯ
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-2 ಗೆ ಗ್ರಾಮ ಪಂಚಾಯತಿ ಸದಸ್ಯ ಗುರುಲಿಂಗಯ್ಯ ಕೆಸ್ತೂರು ಗ್ರಾಮ ಪಂಚಾಯತಿ 15 ನೇ ಹಣಕಾಸಿನಲ್ಲಿ 30 ಚೇರ್ ಗಳನ್ನು ಒದಗಿಸಿಕೊಟ್ಟಿದ್ದಾರೆ.
ವಿದ್ಯಾರ್ಥಿಗಳು ಚೇರ್ ನಲ್ಲಿ ಕೂತು ಅಧ್ಯಾಯನ ಮಾಡಲಿ. ವಿದ್ಯಾರ್ಥಿಗಳ ಹಿತಾ ದೃಷ್ಟಿಯಿಂದ ಚೇರ್ ಗಳನ್ನು ಪಂಚಾಯತಿ ಅನುದಾನದಲ್ಲಿ ನೀಡಲಾಗಿದೆ ಎಂದರು.
ಈ ಶಾಲೆಯು ಪರಿಶಿಷ್ಟರ ಕಾಲೋನಿಯಲ್ಲಿದ್ದು ಶೋಷಿತರ ಮಕ್ಕಳು ಚೆನ್ನಾಗಿ ಓದಬೇಕು ಅವರಿಗೆ ಯಾವುದೇ ಮೂಲಭೂತ ಸಮಸ್ಯೆಗಳು ಇರಬಾರದು ಡಾ ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲರೂ ಅವರ ಮಾರ್ಗದಲ್ಲಿ ನಡೆಯಬೇಕಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಭಿನ್ನವಾಗಿರಬೇಕು. ಪೋಷಕರು ದಯವಿಟ್ಟು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯಲ್ಲಿಯೇ ಗುಣಮಟ್ಟ ಶಿಕ್ಷಣವನ್ನು ನೀಡಲಾಗುತ್ತದೆ.
ನಮಗೆ ಸಹಕಾರ ನೀಡಿದ ಗ್ರಾಮಪಂಚಾಯತಿ ಅಧ್ಯಕ್ಷಕರಿಗೆ, ಎಲ್ಲಾ ಸದಸ್ಯರಿಗೆ ಹಾಗೂ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಸಹಕಾರದಿಂದ ಈ ಶಾಲೆಗೆ ಚೇರ್ ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕೆ.ಚಿನ್ನಸ್ವಾಮಿ, ಮುಖ್ಯೋಪಾಧ್ಯಾಯರಾದ ಸಿದ್ದರಾಜು, ಶಿಕ್ಷಕರಾದ ನಂಜಯ್ಯ, ರಾಜೇಶ್, ಯುವ ಮುಖಂಡ ಮನೋಹರ್ ಹಾಗೂ ಇತರರು ಹಾಜರಿದ್ದರು.
Chamarajanagar
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 23ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಂತೇಮರಹಳ್ಳಿ ರಸ್ತೆ, ಆದಿಶಕ್ತಿ ದೇವಸ್ಥಾನ ಸುತ್ತಮುತ್ತ, ಪುಟ್ಟಮಣಿ ಪಾರ್ಕ್, ರೈಲ್ವೆ ಬಡಾವಣೆ, ಮೈಸೂರು ನಂಜನಗೂಡು ರಸ್ತೆ, ನಂದಿಭವನ ರಸ್ತೆ, ಹೊಸ ಖಾಸಗಿ ಬಸ್ ನಿಲ್ದಾಣ ಸುತ್ತಮುತ್ತ, ಪೊಲೀಸ್ ಕ್ವಾಟ್ರಸ್ ಮತ್ತು ಕೆ.ಹೆಚ್.ಬಿ ಕಾಲೋನಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳ ನಿರ್ದೇಶಕರಾಗಿ ಲಿಂಗರಾಜು ಆಯ್ಕೆ
ಯಳಂದೂರು ಜ 22
ತಾಲೂಕಿನ ವಿವಿಧ ಮುಖಂಡರಿಂದ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳ ನಿರ್ದೇಶಕರಾಗಿ ಆಯ್ಕೆಯಾದ ಅಗರ ಕೆ ಲಿಂಗರಾಜು ಅವರನ್ನು ಪಟ್ಟಣದ ಅಂಬೇಡ್ಕರ್ ಭವನದಲ್ಲಿರುವ ಬುದ್ಧ ಕೇಂದ್ರದಲ್ಲಿ ಅಭಿನಂದಿಸಲಾಯಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಗರ ಕೆ ಲಿಂಗರಾಜು ಜಿಲ್ಲೆಯ ಮೀನುಗಾರರಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ. ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ರಾಜ್ಯದಲ್ಲಿ ಮೀನುಗಾರರ ಸಮಸ್ಯೆ ಹೆಚ್ಚಾಗಿದೆ ಇವರ ಅಭಿವೃದ್ಧಿಗೆ ಹಲವಾರು ಯೋಜನೆಗಳಿವೆ. ಸರ್ಕಾರ ಮಟ್ಟದಲ್ಲಿ ಸಂಬಂಧಪಟ್ಟ ಸಚಿವರ ಗಮನ ಸೆಳೆದು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಮೀನುಗಾರರ ಮಕ್ಕಳಿಗೆ ಶಿಕ್ಷಣ ಸಿಗುವುದರ ಜೊತೆಗೆ ಅವರ ಆರ್ಥಿಕ ಮಟ್ಟವನ್ನು ಸುಧಾರಿಸಲಾಗುವುದು. ರಾಜ್ಯದ ಮೀನುಗಾರರು ಸೇರಿದಂತೆ ಜಿಲ್ಲೆಯ ಮೀನುಗಾರರಿಗೆ ಸರ್ಕಾರದಿಂದ ದೊರಕುವ ಸೌಲತ್ತುಗಳನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಮುಖಂಡ ಕಿನಕಹಳ್ಳಿ ರಾಚಯ್ಯ ಮಾತನಾಡಿ ಸತತವಾಗಿ ಎರಡನೇ ಬಾರಿಗೆ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗುವುದು ಸುಲಭವಾದ ಮಾತಲ್ಲ, ಅಗರ ಕೆ ಲಿಂಗರಾಜು ಅವರು ಸರಳ ಜೀವಿಯಾಗಿದ್ದು ಅವರು ಸತತವಾಗಿ ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರಾಮಾಣಿಕತೆ, ಪ್ರಬುದ್ಧತೆ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ .ಮುಂದಿನ ದಿನಗಳಲ್ಲಿ ಮಹಾಮಂಡಲದ ಅಧ್ಯಕ್ಷರಾಗಬೇಕು ಎಂದು ಹಾರೈಸಿದರು.
ಗುತ್ತಿಗೆದಾರ ಮದ್ದೂರು ನಾರಾಯಣಸ್ವಾಮಿ, ಮುಖಂಡರಾದ ಜನಾರ್ಧನ ,ಗೌಡಳ್ಳಿ ಚಂದ್ರು, ಚಕ್ರವರ್ತಿ, ಇರಿಸವಾಡಿ ಶಿವಪ್ರಕಾಶ್, ರೇವಣ್ಣ, ಜಯರಾಮ, ಪರಿಶಿವ ,ಟೌನ್ ನಂಜುಂಡಸ್ವಾಮಿ, ನಟರಾಜು ಸೇರಿದಂತೆ ಇತರರು ಹಾಜರಿದ್ದರು
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International11 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan16 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ