National - International
ರಾಮಮಂದಿರ ಪ್ರಾದೇಶಿಕ ಶಾಂತಿಗೆ ಬೆದರಿಕೆ; ಪಾಕಿಸ್ತಾನದ ಹೊಸ ವರಸೆ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಇದೀಗ ಬನಾರಸ್ನ ಜ್ಞಾನವ್ಯಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ವಿಚಾರವೂ ಇದೀಗ ಮುನ್ನಲೆಗೆ ಬಂದಿದೆ. ಜ್ಞಾನವ್ಯಾಪಿ ಮಸೀದಿ ಕುರಿತು ಗುರುವಾರ ಬಿಡುಗಡೆ ಮಾಡಿದ ಭಾರತೀಯ ಪುರಾತತ್ವ ಇಲಾಖೆಯ ವರದಿಯಲ್ಲಿ ದೇವಾಲಯದ ಕಂಬಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಹೀಗಿರುವಾಗ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ತಲ್ಲಣ ಉಂಟಾಗಿದೆ.
ಪಾಕಿಸ್ತಾನದ ಡಾನ್ ನ್ಯೂಸ್ನ ಸುದ್ದಿ ಪ್ರಕಾರ, ಪಾಕಿಸ್ತಾನ ಸರ್ಕಾರವು ಈಗ ಈ ವಿಷಯವನ್ನು ವಿಶ್ವಸಂಸ್ಥೆಯ (ಯುಎನ್) ಬಳಿ ಎತ್ತಿದೆ. ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ವಿಶ್ವಸಂಸ್ಥೆಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದಲ್ಲಿ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ ಏನೆಂದು ಎಲ್ಲರಿಗೂ ತಿಳಿದಿದೆ. ಇಷ್ಟೆಲ್ಲಾ ಆದರೂ ಪಾಕಿಸ್ತಾನ ಇತರ ದೇಶಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದರಿಂದ ಹಿಂದೆ ಸರಿಯುವುದಿಲ್ಲ. ಪಾಕಿಸ್ತಾನವು ತನ್ನ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಬದಲು, ಇತರ ದೇಶಗಳಲ್ಲಿ ಭಯೋತ್ಪಾದನೆಯನ್ನು ಹರಡುವುದರತ್ತ ಹೆಚ್ಚು ಗಮನಹರಿಸುತ್ತಿದೆ.
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಖಾಯಂ ಸದಸ್ಯ ಮುನೀರ್ ಅಕ್ರಂ ಅವರು ವಿಶ್ವಸಂಸ್ಥೆಯ ಅಲಯನ್ಸ್ನ ಅಧೀನ-ಕಾರ್ಯದರ್ಶಿ-ಜನರಲ್ಗೆ ಬರೆದ ಪತ್ರದಲ್ಲಿ, ‘ನಾನು ನನ್ನ ಪತ್ರದಲ್ಲಿ ‘ರಾಮ ಮಂದಿರ ಉದ್ಘಾಟನೆಯನ್ನು ಪಾಕಿಸ್ತಾನ ಕಟುವಾಗಿ ಖಂಡಿಸುತ್ತದೆ. ಮಂದಿರ ನಿರ್ಮಾಣ ಅದರ ಲೋಕಾರ್ಪಣೆ ಸೌಹಾರ್ದತೆ ಹಾಗೂ ಶಾಂತಿಗೆ ಮಾರಕವಾಗಿದೆ. ಭಾರತದಲ್ಲಿರುವ ಧಾರ್ಮಿಕ ಸ್ಥಳಗಳ ರಕ್ಷಣಗೆ ಕೂಡಲೇ ವಿಶ್ವಸಂಸ್ಥೆ ಹಸ್ತಕ್ಷೇಪ ಮಾಡಬೇಕು” ಎಂದು ಒತ್ತಾಯ ಮಾಡಿದ್ದಾರೆ.
ಧ್ವಂಸಗೊಂಡ ಬಾಬರಿ ಮಸೀದಿಯು ಹಿಂದೂ ಬಹುಸಂಖ್ಯಾತತೆಯ ಗೊಂದಲದ ಉದಾಹರಣೆಯಾಗಿದೆ. ಈ ಪ್ರವೃತ್ತಿಯು ಭಾರತೀಯ ಮುಸ್ಲಿಮರ ಶಾಂತಿ ಮತ್ತು ಸಾಮರಸ್ಯಕ್ಕೆ ಅವರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಯೋಗಕ್ಷೇಮಕ್ಕೆ ಗಮನಾರ್ಹ ಬೆದರಿಕೆಯಾಗಿದೆ ಎಂದು ಬರೆದಿದ್ದಾರೆ.
National - International
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ

ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು.
ಕಳೆದ ಜನವರಿಯಲ್ಲಿ ಜಸ್ಟಿನ್ ಟ್ರುಡೊ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ನಿ ಅವರು ಲಿಬರಲ್ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಅವರು ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಈ ಬಗ್ಗೆ ಮಾತನಾಡಿದ ಕಾರ್ನಿ ಅವರು, ನಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದೆ. ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
National - International
ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಹಕ್ಕು ರಕ್ಷಿಸಲು ನಾವು ಬದ್ಧ: ಸ್ಟಾಲಿನ್ಗೆ ಸಿದ್ದು ಪತ್ರ

ಬೆಂಗಳೂರು: ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು, ಈ ವಿರುದ್ಧ ಮಾರ್ಚ್ 22 ರಂದು ನಡಯುವ ಸಭೆಗೆ ಕರ್ನಾಟಕ ಸರ್ಕಾರದ ಬೆಂಬಲ ಕೋರಿ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಮರು ಪತ್ರ ಬರೆದಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಎಂ.ಕೆ ಸ್ಟಾಲಿನ್ಗೆ ಬರೆದಿರುವ ಪತ್ರದೊಂದಿಗೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ರಾಜ್ಯ ಸ್ವಾಯತ್ತತೆ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ನಿರ್ಣಾಯಕ ವಿಷಯಗಳ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಂದ ಪತ್ರ ಬಂದಿದೆ. ಪೂರ್ವ ಬದ್ಧತೆಗಳಿಂದಾಗಿ ಮಾರ್ಚ್ 22 ರಂದು ನಡೆಯುವ ಸಭೆಗೆ ಹಾಜರಾಗಲು ನನಗೆ ಸಾಧ್ಯವಾಗದಿದ್ದರೂ, ಕರ್ನಾಟಕವನ್ನು ಪ್ರತಿನಿಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಅವರನ್ನು ಕೇಳಿಕೊಂಡಿದ್ದೇನೆ.
ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.
National - International
ಸ್ಟಾರ್ಲಿಂಕ್ ಜೊತೆಗೆ ಏರ್ಟೆಲ್, ಜಿಯೋ ಒಪ್ಪಂದ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

ನವದೆಹಲಿ: ವಿಶ್ವದ ಅಗ್ರಗಣ್ಯ ಉದ್ಯಮಿ ಎಲಾನ್ ಮಸ್ಕ್ ಅವರ ಸ್ಟಾರ್ಲಿಂಕ್ ಕಂಪೆನಿಯೊಂದಿಗೆ ಏರ್ಟೆಲ್ ಹಾಗೂ ಜಿಯೋ ಕಂಪೆನಿಗಳು ಒಪ್ಪಂದ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಖುಷಿ ಪಡಿಸಲು ಪ್ರಧಾನಿ ಮೋದಿ ಮುಂದೆ ನಿಂತು ಈ ಒಪ್ಪಂದ ಮಾಡಿಸಿದ್ದಾರೆ. ಇದು ದೇಶದ ಭದ್ರತೆಗೆ ಧಕ್ಕೆ ಉಂಟುಮಾಡಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
https://x.com/Jairam_Ramesh/status/1900058528104276088
ಕೇವಲ 12 ಗಂಟೆಗಳಲ್ಲಿ ಏರ್ಟೆಲ್ ಮತ್ತು ಜಿಯೋ ಎರಡೂ ಸ್ಟಾರ್ಲಿಂಕ್ ಜೊತೆ ಪಾಲುದಾರಿಕೆಯನ್ನು ಘೋಷಿಸಿವೆ, ಭಾರತಕ್ಕೆ ಅದರ ಪ್ರವೇಶಕ್ಕೆ ಅವರ ಎಲ್ಲಾ ಆಕ್ಷೇಪಣೆಗಳನ್ನು ನಿವಾರಿಸಿದಂತೆ ತೋರುತ್ತಿದೆ – ಅವರು ಬಹಳ ಸಮಯದಿಂದ ಧ್ವನಿಸುತ್ತಿದ್ದಾರೆ.
ಸ್ಟಾರ್ಲಿಂಕ್ನ ಮಾಲೀಕ ಶ್ರೀ ಎಲಾನ್ ಮಸ್ಕ್ ಮೂಲಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಸದ್ಭಾವನೆಯನ್ನು ಖರೀದಿಸಲು ಈ ಪಾಲುದಾರಿಕೆಗಳನ್ನು ಬೇರೆ ಯಾರೂ ಅಲ್ಲ, ಸ್ವತಃ ಪ್ರಧಾನಿಯೇ ಸಂಘಟಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ಆದರೆ ಹಲವು ಪ್ರಶ್ನೆಗಳು ಉಳಿದಿವೆ. ಬಹುಶಃ ಅತ್ಯಂತ ಮುಖ್ಯವಾದದ್ದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ. ರಾಷ್ಟ್ರೀಯ ಭದ್ರತೆಗೆ ಅಗತ್ಯವಿರುವಾಗ ಸಂಪರ್ಕವನ್ನು ಆನ್ ಅಥವಾ ಆಫ್ ಮಾಡುವ ಅಧಿಕಾರ ಯಾರಿಗೆ ಇರುತ್ತದೆ? ಅದು ಸ್ಟಾರ್ಲಿಂಕ್ ಅಥವಾ ಅದರ ಭಾರತೀಯ ಪಾಲುದಾರರಾಗುತ್ತದೆಯೇ? ಇತರ ಉಪಗ್ರಹ ಆಧಾರಿತ ಸಂಪರ್ಕ ಪೂರೈಕೆದಾರರಿಗೂ ಅನುಮತಿ ನೀಡಲಾಗುತ್ತದೆಯೇ ಮತ್ತು ಯಾವ ಆಧಾರದ ಮೇಲೆ?
ಮತ್ತು, ಸಹಜವಾಗಿ, ಭಾರತದಲ್ಲಿ ಟೆಸ್ಲಾ ಉತ್ಪಾದನೆಯ ದೊಡ್ಡ ಪ್ರಶ್ನೆ ಉಳಿದಿದೆ. ಸ್ಟಾರ್ಲಿಂಕ್ ಭಾರತಕ್ಕೆ ಪ್ರವೇಶವನ್ನು ಸುಗಮಗೊಳಿಸಲಾಗಿರುವುದರಿಂದ ಈಗ ಅದಕ್ಕೆ ಸ್ವಲ್ಪ ಬದ್ಧತೆ ಇದೆಯೇ? ಎಂದು ಹಲವು ಪ್ರಶ್ನಗಳನ್ನು ಜೈರಾಮ್ ರಮೇಶ್ ಕೇಳಿದ್ದಾರೆ.
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu19 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
National - International21 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu22 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State22 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Chikmagalur7 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
Hassan23 hours ago
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು
-
Chamarajanagar5 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ