Connect with us

Chamarajanagar

ವಕೀಲರೊಬ್ಬರ ಮೇಲೆ ದುವರ್ತನೆ ಖಂಡಿಸಿ ಕಾನೂನು ಕ್ರಮ ಜರುಗಿಸಬೇಕೆಂದು ತಹಸೀಲ್ದಾರ್‍ಗೆ ಕರವೇ ದೂರು ನೀಡಿದೆ

Published

on

ಕೊಳ್ಳೇಗಾಲ: ಜನನ ಮರಣ ಪತ್ರ ವಿಭಾಗದ ಗುಮಾಸ್ತ ಕೆ.ವಿ.ಶ್ರೀಧರ್ ವಕೀಲರೊಬ್ಬರ ಮೇಲೆ ದುವರ್ತನೆ ಖಂಡಿಸಿ ಕಾನೂನು ಕ್ರಮ ಜರುಗಿಸಬೇಕೆಂದು ತಹಸೀಲ್ದಾರ್‍ಗೆ ಕರವೇ ದೂರು ನೀಡಿದೆ.
ವಕೀಲ ಚಂದ್ರಶೇಖರ್ ಅವರು ಜನನ ಮರಣ ಪತ್ರದ ವಿಭಾಗದ ಗುಮಾಸ್ತ ಕೆ.ವಿ.ಶ್ರೀಧರ್ ಅವರಿಂದ ಹಿಂಬರಹ ಪತ್ರ ಕೇಳಿದಾಗ 500 ರೂ. ನೀಡಬೇಕು ಎಂದು ಬೇಡಿಕೆ ಇಟ್ಟಾಗ ವಕೀಲರು 500 ರೂ. ಕೊಡಬೇಕೆಂದರೆ ನನಗೆ ರಶೀದಿ ಕೊಡಿ
ಹಣ ಕೊಡುತ್ತೇನೆ ಎಂದಿದ್ದಾರೆ. ಆಗ ಗುಮಾಸ್ತ ಶ್ರೀಧರ್ ವಕೀಲರೊಂದಿಗೆ ಅಸಭ್ಯದಿಂದ ವರ್ತಿಸಿದ್ದಾರೆ ಎಂದು ತಹಶಿಲ್ದಾರ್ ಅವರಿಗೆ ನೀಡಿರುವ ದೂರಿನಲ್ಲಿ  ತಿಳಿಸಲಾಗಿದೆ.
ದೂರು ಸ್ವೀಕರಿಸಿದ ತಹಶಿಲ್ದಾರ್ ಮಂಜುಳಾ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ವಕೀಲ ಚಂದ್ರಶೇಖರ್, ಹಿಂಬರ ಕೇಳಲು ಕಾನೂನು ಪ್ರಕಾರ 10 ರೂ. ಮಾತ್ರ ಕಟ್ಟಬೇಕು. ಆದರೆ ಗುಮಾಸ್ತರು 200 ರೂ. ಬೇಡಿಕೆ ಇಟ್ಟಿದ್ದನ್ನು ಕಾರಣ ಕೇಳಿದಾಗ
ಬೇರೆಯವರಿಂದ 500 ರೂ. ತೆಗೆದುಕೊಳ್ಳುತ್ತಿದೆ. ವಕೀಲರೆಂದು 200 ರೂ. ಕೊಡಿ ಎಂದು ಮರು ಬೇಡಿಕೆ ಇಟ್ಟಾಗ, ಈ ರೀತಿ ಅದರೆ ನಿಮ್ಮ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಕೇಳಿದಾಗ ವಕೀಲರು ಏನು ಸಜಾನಾ ನೀವು ಲಂಚ
ತೆಗೆದುಕೊಳ್ಳುವುದಿಲ್ಲವ ಎಂದು ಅವಹೇಳನಕಾರಿಯಾಗಿ ಮಾತನಾಡಿ ಅವಮಾನ ಮಾಡಿದ್ದಾರೆ.
ನಮ್ಮಂತ ವಕೀಲರ ಬಳಿ ಈ ರೀತಿಯ ಲಂಚ ಕೇಳುವ ಈತ ಸಾರ್ವಜನಿಕರ ಬಳಿ ಯಾವ ರೀತಿ ವರ್ತಿಸಿರಬಹುದು ಎನ್ನುವುದು ಊಹೆ ಮಾಡುವುದು ಅಸಾಧ್ಯ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗುಮಾಸ್ತನ ಮೇಲೆ ಶಿಸ್ತಿನ ಕ್ರಮ
ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ಆರ್.ಮೋಹನ್ ಪತ್ರಿಕೆ ಹೇಳಿಕೆ ನೀಡಿ, ಇಂತಹ ಭ್ರಷ್ಟ ನೌಕರರನ್ನು ಕೂಡಲೇ ವಜಾಗೊಳಿಸಬೇಕು. ಇಲ್ಲದಿದ್ದರೆ ನಮ್ಮ ಸಂಘಟನೆಯವರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಕರವೇ(ಪ್ರವೀಣ್ ಶೆಟ್ಟಿ ಬಣ) ಕಾರ್ಯದರ್ಶಿ ರಿಯಾಜ್ ಪಾಷ್, ಉಪಾಧ್ಯಕ್ಷ ನಾಗೇಶ್ ನಾಯ್ಕ, ಕಾರ್ಯಾಧ್ಯಕ್ಷ ಅಯಾಜ್, ಕೊಳ್ಳೇಗಾಲ ತಾಲೂಕು ಸಂಚಾಲಕ ಅಫೆÇ್ರೀಜ್ ಪಾಷ, ಹಿಮಾದದ್, ಅಬ್ಜಲ್, ಪ್ರಜ್ವಲ್, ನವೀನ,
ಮಧು, ಭಗತ್ ಸತ್ಯ ಸೇರಿದಂತೆ ಇತರರು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಚಾಮರಾಜನಗರ: ಫೆ.13ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

Published

on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತಾಲೂಕಿನ ಕಾಗಲವಾಡಿ ಶಾಖಾ ವ್ಯಾಪ್ತಿಯ ಚಂದಕವಾಡಿ ಉಪಕೇಂದ್ರದ ನವೋದಯ ಎನ್.ಜೆ.ವೈ ಹಾಗೂ ಹಿರಿಕೆರೆ ಎನ್.ಜೆ.ವೈ ಫೀಡರ್ ಗಳ ತುರ್ತು ಕಾಮಗಾರಿಯನ್ನು ಫೆಬ್ರವರಿ 13 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೆಬ್ಬಸೂರು, ಬಸಪ್ಪನಪಾಳ್ಯ, ಸರಗೂರು, ಹುರಳಿನಂಜನಪುರ, ಕಾಗಲವಾಡಿ, ಲಿಂಗರಾಜಪುರ, ಕರಿಯನಕಟ್ಟೆ, ಮಲ್ಲುಪುರ, ಹಂಚಿತಾಳಪುರ, ಕೊಕ್ಕನಹಳ್ಳಿ, ಅಯ್ಯನಪುರ, ಹಿತ್ತಲಗುಡ್ಡ, ಕೋಟಂಬಳ್ಳಿ, ಮಲ್ಲೇದೇವನಹಳ್ಳಿ ಹಾಗೂ ನಾಗವಳ್ಳಿ, ನಲ್ಲೂರು, ದೇವರಾಜಪುರ, ಕೋಟೆತಿಟ್ಟು, ಹೊಂಡರಬಾಳು, ಚಂದಕವಾಡಿ, ಅರಳೀಪುರ ಗ್ರಾಮಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸುವಂತೆ ನಿಗಮದ ಸಂತೇಮರಹಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಚಿಣ್ಣರ ಕರ್ನಾಟಕ ದರ್ಶನ: ವಿದ್ಯಾರ್ಥಿಗಳಿಗೆ ವೈವಿಧ್ಯತೆ ತಿಳಿಯಲು ಸಹಕಾರಿ ಎಂದ ಮಾರಯ್ಯ

Published

on

ಯಳಂದೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಶೇಷ ಯೋಜನೆಯಡಿ ತಾಲ್ಲೂಕಿನ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 75 ಮಕ್ಕಳಿಗೆ ಐದು ದಿನಗಳ ಚಿಣ್ಣರ ಕರ್ನಾಟಕ ದರ್ಶನಕ್ಕೆ ಮಂಗಳವಾರ (ಫೆ.11) ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ಚಾಲನೆ ನೀಡಿದರು.

ದೇಶ ಸುತ್ತು ಕೋಶ ಓದು ಎಂಬಂತೆ ಪ್ರವಾಸದ ಸದುಪಯೋಗ ಪಡೆದು ವಿವಿಧ ರೀತಿಯ ಪ್ರದೇಶಗಳ ವೈವಿಧ್ಯತೆ ತಿಳಿಯಲು ಮಾಹಿತಿ ನೀಡಿದರು.

ಈ ವೇಳೆ ನೌಕರರ ಸಂಘದ ನಿರ್ದೇಶಕ ಎಂ. ರಾಜು ಮಕ್ಕಳಿಗೆ ಸಿಹಿ ನೀಡಿ ಶುಭ ಹಾರೈಸಿದರು. ಶಿಕ್ಷಕರ ಸಂಘದ ಚಂದ್ರಮ್ಮ, ಸಲೀನಾ, ಶಿಕ್ಷಣ ಸಂಯೋಜಕರಾದ ಕುಮಾರ್, ಸಿ ಆರ್ ಪಿ ಎಸ್ ರೇಚಣ್ಣ, ತೇಜಸ್ವಿನಿ, ಶಿಕ್ಷಕರಾದ ಮಹದೇವ್, ಗಿರಿನಾಯಕ್ ಶಶಿಧರ್, ನಾಗರಾಜ್, ಸುನೀಲ್ ಇತರರು ಹಾಜರಿದ್ದರು.

Continue Reading

Chamarajanagar

ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Published

on

ಚಾಮರಾಜನಗರ: ಮಹಿಳೆಯೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣದ ಬ್ಯಾಗ್ ಅನ್ನು ವಾಪಸ್ ನೀಡಿ ನಗರದ ಆಟೋ ಚಾಲಕ ಸಿದ್ದರಾಜು ಪ್ರಾಮಾಣಿಕತೆ ಮೆರೆದಿದ್ದಾರೆ.

ನಗರದ ಶ್ರೀ ಭುವನೇಶ್ವರಿ ವೃತ್ತದ ಬಳಿ ಹನುಮನಪುರ ನಿವಾಸಿಯಾದ ರಶ್ಮಿ ಅವರು ಬಸ್ ಹತ್ತುವ ಅವಸರದಲ್ಲಿ ಚಿನ್ನಾಭರಣವಿದ್ದ ಬ್ಯಾಗನ್ನು ಆಟೋದಲ್ಲೇ ಮರೆತು ಹೋಗಿದ್ದು, ಬಳಿಕ ಬ್ಯಾಗ್ ಅನ್ನು ಕಳೆದುಕೊಂಡ ವಿಷಯವನ್ನು ಪಟ್ಟಣ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

ಅಷ್ಟರಲ್ಲೇ ನಗರದ ಆಟೋ ಚಾಲಕ ಸಿದ್ದರಾಜು ಎಂಬುವವರು ಆಟೋದಲ್ಲಿದ್ದ ಚಿನ್ನಾಭರಣದ ಬ್ಯಾಗ್ ಅನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ತದನಂತರ ಪೊಲೀಸರು ಬ್ಯಾಗ್ ಅನ್ನು ರಶ್ಮಿಗೆ ಒಪ್ಪಿಸಿದರು.

Continue Reading

Trending

error: Content is protected !!