Health
ವೈದ್ಯರು ಕ್ಯಾಪಿಟಲ್ ಲೆಟರ್ಗಳಲ್ಲೇ ಪ್ರಿಸ್ಕ್ರಿಪ್ಷನ್ ಬರೀಬೇಕು: ಜಿಗ್ಜ್ಯಾಗ್ ಬರಹದ ವಿರುದ್ಧ ಒಡಿಶಾ ಹೈಕೋರ್ಟ್ ಕಿಡಿ

ಭುವನೇಶ್ವರ್: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರ ಬರಹ ಅಸ್ಪಷ್ಟವಾಗಿರುತ್ತದೆ. ಹೀಗಾಗಿ ಏನು ಬರೆದಿದ್ದಾರೆ ಎಂದು ತಿಳಿದುಕೊಳ್ಳಲು ಕಷ್ಟವಾಗುತ್ತದೆ. ಔಷಧ ಚೀಟಿ ನೋಡಿ ವೈದ್ಯರನ್ನು ಶಪಿಸಿದವರಲ್ಲಿ ನೀವು ಕೂಡ ಒಬ್ಬರಾಗಿರಬಹುದು. ವೈದ್ಯರಿಗೆ ಹೇಳುವವರು ಯಾರೂ ಇಲ್ಲವಾ ಅನಿಸಿರಬಹುದು. ಆದರೆ, ಈ ವಿಚಾರದಲ್ಲಿ ಒಡಿಶಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಎಲ್ಲ ವೈದ್ಯರು ವೈದ್ಯಕೀಯ ಚೀಟಿ, ಮರಣೋತ್ತರ ವರದಿ ಮತ್ತು ವೈದ್ಯಕೀಯ ಅಧಿಕೃತ ದಾಖಲೆಗಳನ್ನು ಸ್ಪಷ್ಟವಾದ ಕೈಬರಹ ಅಥವಾ ಕ್ಯಾಪಿಟಲ್ ಲೆಟರ್ಗಳಲ್ಲಿ ಬರೆಯುವುದನ್ನು ಆರೋಗ್ಯ ಇಲಾಖೆ ಖಚಿತಪಡಿಸಿಕೊಳ್ಳಬೇಕೆಂದು ಒಡಿಶಾ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಪಾಣಿಗ್ರಹಿ ನಿರ್ದೇಶನ ನೀಡಿದ್ದಾರೆ. ಸಾರ್ವಜನಿಕರು ಮತ್ತು ನ್ಯಾಯಾಂಗ ವ್ಯವಸ್ಥೆಗೆ ಸುಲಭವಾಗುವಂತೆ ಸ್ಪಷ್ಟ ಕೈಬರಹ ಇರಲಿ ಎಂದು ಎಲ್ಲ ವೈದ್ಯಕೀಯ ಕೇಂದ್ರ, ಖಾಸಗಿ ಕ್ಲೀನಿಕ್ಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೂ ಕೂಡ ನ್ಯಾಯಾಲಯ ಸೂಚಿಸಿದೆ.
ಒಡಿಶಾದ ದೆಂಕನಾಲ್ ಜಿಲ್ಲೆಯ ರಾಸನಂದಾ ಭೋಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಹಾವು ಕಡಿತದಿಂದ ರಾಸನಂದಾ ಅವರ ಹಿರಿಯ ಮಗ ಸೌವಾಗ್ಯ ರಂಜನ್ ಭೋಯಿ ಮೃತಪಟ್ಟಿದ್ದಾರೆ. ಸರ್ಕಾರದಿಂದ ಪರಿಹಾರ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರ ವಿಚಾರಣೆ ವೇಳೆ ಸರ್ಕಾರ ಸಲ್ಲಿಸಿದ್ದ ಮರಣೋತ್ತರ ವರದಿಯಲ್ಲಿನ ವೈದ್ಯರ ಬರಹ ಸ್ಪಷ್ಟವಾಗಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.
ಔಷಧಿಗಳ ಹೆಸರುಗಳಲ್ಲಿ ಸ್ಪಷ್ಟತೆ ಇರುವಂತೆ ಪ್ರಿಸ್ಕ್ರಿಪ್ಷನ್ ಬರೆಯುವಾಗ ಸ್ಪಷ್ಟವಾದ ಕೈಬರಹವನ್ನು ಅನುಸರಿಸಬೇಕು ಎಂದು ನ್ಯಾಯಾಲಯದ ನಿರ್ದೇಶನವು ಒತ್ತಿಹೇಳುತ್ತದೆ. ಅನೇಕ ಸಂದರ್ಭಗಳಲ್ಲಿ, ಮರಣೋತ್ತರ ಪರೀಕ್ಷೆಯ ವರದಿಯನ್ನು ಬರೆಯುವಾಗ ಹೆಚ್ಚಿನ ವೈದ್ಯರ ಸಾಮಾನ್ಯ ವಿಧಾನವು ದಾಖಲೆಗಳ ಪರಿಶೀಲನೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಮತ್ತು ನ್ಯಾಯಾಂಗ ವ್ಯವಸ್ಥೆಯು ಆ ಪತ್ರಗಳನ್ನು ಓದಲು ಮತ್ತು ಖಚಿತವಾದ ತೀರ್ಮಾನಕ್ಕೆ ಬರಲು ತುಂಬಾ ಕಷ್ಟಕರವಾಗಿದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.
ಜಿಗ್ಜ್ಯಾಗ್ ಕೈಬರಹವನ್ನು ಅನುಸರಿಸುವುದು ವೈದ್ಯರಲ್ಲಿ ರೂಢಿಯಾಗಿದೆ. ಇದರಿಂದಾಗಿ ಸಾಮಾನ್ಯ ಜನರು ಮತ್ತು ನ್ಯಾಯಾಂಗವು ವೈದ್ಯಕೀಯ ದಾಖಲೆಗಳನ್ನು ಓದಲು ಕಷ್ಟವಾಗುತ್ತದೆ ಎಂದು ಒಡಿಸ ನ್ಯಾಯಾಲಯ ಹೇಳಿದೆ
Health
ಕಡಿಮೆ ದರಕ್ಕೆ ಸಿಗುತ್ತದೆ ಎಂದು ಈ ಎಣ್ಣೆಯನ್ನು ಅಡುಗೆ ಮಾಡಲು ಬಳಸಿದರೆ ಕ್ಯಾನ್ಸರ್, ಶುಗರ್ ಬರುವುದು ಖಂಡಿತ

Effects of Refined Oil in food : ಅನೇಕ ಜನರು ಅಡುಗೆ ಮಾಡಲು ಕಡಿಮೆ ದರಕ್ಕೆ ಸಿಗುತ್ತದೆ ಅಥವಾ ಅದರ ಬಗ್ಗೆ ಅರಿವಿಲ್ಲದ ಕಾರಣದಿಂದಾಗಿ ಸಂಸ್ಕರಿಸಿದ ಎಣ್ಣೆಯನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.
ಈ ಲೇಖನದಲ್ಲಿ ಸಂಸ್ಕರಿಸಿದ ಎಣ್ಣೆ ಎಂದರೇನು? ಯಾವೆಲ್ಲಾ ಸಂಸ್ಕರಿಸಿದ ಎಣ್ಣೆಯ ಅಡಿಯಲ್ಲಿ ಬರುತ್ತವೆ? ಹಾಗಿದ್ದರೆ ಅಡುಗೆ ಮಾಡಲು ಯಾವ ಎಣ್ಣೆ ಬಳಸಿದರೆ ಉತ್ತಮ ಎಂದು ಈ ಲೇಖನದಲ್ಲಿ ತಿಳಿಸಳಿದ್ದೇವೆ.
ಸಂಸ್ಕರಿಸಿದ ಎಣ್ಣೆ ಎಂದರೇನು?
ನೈಸರ್ಗಿಕ ತೈಲದ ಸಂಸ್ಕರಿತ ರೂಪವೆ ಸಂಸ್ಕರಿಸಿದ ತೈಲ ಅಥವಾ ಇಂಗ್ಲಿಷ್ ನಲ್ಲಿ ಇದನ್ನು Refined Oil ಎಂದು ಕರೆಯಲಾಗುತ್ತದೆ. ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವ ಉದ್ದೇಶದಿಂದ ನೈಸರ್ಗಿಕ ತೈಲವನ್ನು ಹಲವಾರು ರಾಸಾಯನಿಕಗಳೊಂದಿಗೆ ಸಂಸ್ಕರಿಸಿ, ದೀರ್ಘಾವಧಿಯ ಜೀವಿತಾವಧಿಯೊಂದಿಗೆ ವಾಸನೆ-ಮುಕ್ತ & ಸುವಾಸನೆ-ಮುಕ್ತ ತೈಲವಾಗಿ ಇದನ್ನು ತಯಾರಿಸಲಾಗುತ್ತದೆ.
ಸಂಸ್ಕರಣೆಯ ಮಾಡುವ ಪ್ರಕ್ರಿಯೆಯಲ್ಲಿ ಇದಕ್ಕೆ ಅಧಿಕ ತಾಪಮಾನ ಕೊಡುವುದರಿಂದ ಅದರಲ್ಲಿರುವ ಎಲ್ಲಾ ಮೌಲ್ಯವಾದ ಅಂಶಗಳು ಕಳೆದು ಹೋಗುತ್ತವೆ. ಜೊತೆಗೆ ಇದರಲ್ಲಿ ಕೆಟ್ಟ LDL ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್ಗಳು ಹಾಗೂ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಬಹುದಾದ ಟ್ರಾನ್ಸ್ ಕೊಬ್ಬಿನ ಪ್ರಮಾಣಗಳನ್ನು ಹೆಚ್ಚಿಸುತ್ತದೆ.
ಸಂಸ್ಕರಿಸಿದ ಎಣ್ಣೆಗೆ ಉದಾಹರಣೆಗಳು :
• ಸೂರ್ಯಕಾಂತಿ ಎಣ್ಣೆ
• ಅಕ್ಕಿ ಹೊಟ್ಟು ಎಣ್ಣೆ
• ಸೋಯಾ ಬೀನ್ ಎಣ್ಣೆ
• ಕಡಲೆಕಾಯಿ ಎಣ್ಣೆ ಹಾಗೂ ಮುಂತಾದವು
ಇದರಿಂದ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬಿರಲಿದೆ?
ಸಂಸ್ಕರಿಸಿದ ಎಣ್ಣೆಯನ್ನು ದಿನನಿತ್ಯ ಸೇವಿಸಿದಂತೆ ನಿಯಮಿತ ಕ್ಯಾನ್ಸರ್, ಶುಗರ್ ಸೇರಿದಂತೆ ಹಲವಾರು ಅರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ.
ಆದ್ದರಿಂದ ನೀವು ಅಡುಗೆ ಮಾಡಲು ಈ ಕೆಳಗಿನ ಎಣ್ಣೆಗಳನ್ನು ಬಳಸಬಹುದು :
• ಕೋಲ್ಡ್ ಪ್ರೆಸ್ ಎಣ್ಣೆಗಳು –
ಎಳ್ಳೆಣ್ಣೆ, ಕಡಲೆಕಾಯಿ ಎಣ್ಣೆ, ಸಾಸಿವೆ ಎಣ್ಣೆ ಮುಂತಾದವು..
ವಿ. ಸೂ : ಈ ಮೇಲಿನ ಲೇಖನವು ಕೇವಲ ಮಾಹಿತಿ ನೀಡುವ ಉದ್ದೇಶವಾಗಿದ್ದು, ನಿಮ್ಮ ಆರೋಗ್ಯಕ್ಕೆ ಸಂಬಂದಿಸಿದ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೊದಲು ಇದಕ್ಕೆ ಸಂಬಂದಿಸಿದ ಪರಿಣಿತರ ಸಹಾಯ ಪಡೆದು ನಿರ್ಧಾರ ತೆಗೆದುಕೊಳ್ಳಿ.
Health
ಮೀಸಲ್ಸ್- ರುಬೆಲ್ಲಾ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಿ

ಮಂಡ್ಯ : ದಢಾರ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದು ಒಬ್ಬರಿಂದ ಮತ್ತೊಬ್ಬರಿಗೆ ಬಹುಬೇಗ ಹರಡುತ್ತದೆ. ಜಿಲ್ಲೆಯಲ್ಲಿ ಮಕ್ಕಳು ಮೀಸಲ್ಸ್- ರುಬೆಲ್ಲಾ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮತ್ತು ದಢಾರ ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿ ಮಾತನಾಡಿದರು.
ಮಧ್ಯಮ ಅಥವಾ ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳಲ್ಲಿ ರೋಗದ ಹರಡುವಿಕೆ ಹೆಚ್ಚು. ದಢಾರ-ರುಬೆಲ್ಲಾ ಖಾಯಿಲೆಯಿಂದ ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಮಕ್ಕಳಿಗೆ 9 ರಿಂದ 11 ತಿಂಗಳುಗಳಲ್ಲಿ ಮೊದಲನೇ ವರಸೆ ಲಸಿಕೆಯನ್ನು ಮತ್ತು 16 ರಿಂದ 24 ತಿಂಗಳಲ್ಲಿ ಎರಡನೇ ವರಸೆ ದಢಾರ-ರುಬೆಲ್ಲಾ ಲಸಿಕೆ ಯನ್ನು ನೀಡಲಾಗುವುದು ಎಂದರು.
ಮಂಡ್ಯ ಜಿಲ್ಲೆಯಲ್ಲಿ ಏಪ್ರಿಲ್ 2024 ರಿಂದ ಅಕ್ಟೋಬರ್ 2024 ರವರೆಗೆ ಮೀಸಲ್ಸ್- ರುಬೆಲ್ಲಾ ಮೊದಲನೇ ವರಸೆ ಲಸಿಕೆ ಪಡೆಯಲು 12361 ಗುರಿ ನಿಗಧಿಯಾಗಿದ್ದು 11885 ಮಕ್ಕಳಿಗೆ ಲಸಿಕೆ ನೀಡಿ ಶೇ 96.1 % ಗುರಿ ಸಾಧಿಸಲಾಗಿದೆ. ಎರಡನೇ ವರಸೆಯಲ್ಲಿ 12361 ಗುರಿ ನಿಗಧಿಯಾಗಿದ್ದು 11759 ಮಕ್ಕಳಿಗೆ ಲಸಿಕೆ ನೀಡಿ 95.1% ಗುರಿ ಸಾಧಿಸಲಾಗಿದೆ. ಶೇ 100 ರಷ್ಟು ಸಾಧನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದರು.
ಮೀಸಲ್ಸ್- ರುಬೆಲ್ಲಾ ಖಾಯಿಲೆಯ ಲಕ್ಷಣಗಳು ಅಥವಾ ಯಾವುದೇ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಗೆ ವರದಿ ಮಾಡುವಂತೆ ತಿಳಿಸಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಕುರಿತು ಹಾಗೂ ದಢಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವಲ್ಲಿ ಧಾರ್ಮಿಕ ಮುಖಂಡರು/ಪ್ರಭಾವಿ ವ್ಯಕ್ತಿಗಳು/ಇಲಾಖಾ ಮುಖ್ಯಸ್ಥರುಗಳು ವ್ಯಾಪಕವಾಗಿ ಐ.ಇ.ಸಿ ಚಟುವಟಿಕೆ ನಡೆಸಿ ಸಹಕರಿಸುವುದು ಎಂದರು.
ತಾಲ್ಲೂಕು ಮಟ್ಟದಲ್ಲಿ ಆರೋಗ್ಯ ಇಲಾಖಾ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಕ್ಕಳು ಲಸಿಕೆ ಪಡೆದಿರುವುದರ ಕುರಿತು ಖಾತರಿಪಡಿಸಿಕೊಳ್ಳಬೇಕು ಎಂದರು
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಅಶ್ವಥ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಸೇರಿದಂತೆ ಇನ್ನಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Health
ಆಧುನಿಕ ಜೀವನ ಶೈಲಿಯಿಂದಾಗಿ ಕಾಯಿಲೆ ಹೆಚ್ಚಳ : ಸಂಸದ ಡಾ.ಸಿ.ಎನ್ ಮಂಜುನಾಥ್

ಮಂಡ್ಯ : ಇಂದಿನ ದಿನಗಳಲ್ಲಿ ಹೃದಯ ಮತ್ತು ಮಧುಮೇಹದಂತಹ ಕಾಯಿಲೆಗಳು ಹೆಚ್ಚಾಗಲು ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿಯೇ ಕಾರಣವಾಗಿದೆ. ಭಾರತ ದೇಶವು ಹೃದಯ ಮತ್ತು ಮಧುಮೇಹ ರೋಗದ ರಾಜಧಾನಿಯಾಗಿ ಮಾರ್ಪಟ್ಟಿದೆ ಎಂದು ಖ್ಯಾತ ಹೃದಯ ತಜ್ಞರೂ ಆದ ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.ಮಂಡ್ಯ ನಗರದ ಸ್ಪಂದನ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕ್ಯಾತ್ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆಲ್ಲ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಅದೇ ರೀತಿ ಒಳ್ಳೆಯ ಆಹಾರವನ್ನು ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರ ಕಾಯಿಲೆ ಎನ್ನುತ್ತಿದ್ದರು. ಆದರೆ ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದ್ದು, ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಯೊಬ್ಬರೂ ಕೆಲಸ ಮಾಡುವ ಮೂಲಕ ಇಂತಹ ರೋಗಗಳಿಂದ ದೂರ ಇರಬೇಕು. ನಡಿಗೆಯನ್ನು ರೂಢಿಸಿಕೊಳ್ಳಬೇಕು. ಸಂಗಾತಿ ಎಂದರೆ ಜೀವನ ಸಂಗಾತಿಯಲ್ಲ. ಸಂಗಾತಿ ಎಂದರೆ ನಮ್ಮ ದೇಹ. ಅದು ನಮ್ಮ ಉಸಿರು ಇರುವವರೆಗೂ ನಮ್ಮ ಜೊತೆಯೇ ಇರುತ್ತದೆ. ಇಂತಹ ಸಂಗಾತಿಯನ್ನು ಅಚ್ಚುಕಟ್ಟಾಗಿ ಯಾವುದೇ ರೋಗಗಳಿಲ್ಲದಂತೆ ಕಾಪಾಡಿಕೊಳ್ಳುವುದು ಅತ್ಯಗತ್ಯ. ಪ್ರತಿದಿನ ಒಂದು ಗಂಟೆಯಾದರೂ ನಡಿಗೆಯನ್ನು ಮಾಡವುದು ಒಳಿತು. ನಾನು ನಿನಗಾಗಿ ಜೀವನ ಪರ್ಯಂತ ಇರುತ್ತೇನೆ ಎನ್ನುವ ರೀತಿ ಹೃದಯ ಕೆಲಸ ಮಾಡುತ್ತದೆ. ಅದನ್ನು ಮನವರಿಕೆ ಮಾಡಿಕೊಂಡು ಪ್ರತಿನಿತ್ಯ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಹೃದಯ ಸಮಸ್ಯೆಯಿಂದ ಸ್ವಲ್ಪವಾದರೂ ದೂರ ಇರಬಹುದು ಎಂದರು.ಹೃದಯಾಘಾತವಾದಲ್ಲಿ ತಕ್ಷಣ ಅವರಿಗೆ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಕನಿಷ್ಟ 3 ರಿಂದ 6 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ಸಿಕ್ಕಲ್ಲಿ ಅವರು ಬದುಕುವ ಸಾಧ್ಯತೆಗಳಿವೆ. 12 ಗಂಟೆಯಾದಲ್ಲಿ ಶೇ. 7ರಷ್ಟು ಮಾತ್ರ ಬದುಕುವ ಸಾಧ್ಯತೆಗಳಿರುತ್ತವೆ. ಚಿಕಿತ್ಸೆ ದೊರೆಯುವುದು ವಿಳಂಬವಾದಲ್ಲಿ ಸಾವಿನ ಸಾಧ್ಯತೆಯೂ ಹೆಚ್ಚಾಗುತ್ತದೆ. ಇದನ್ನು ಮನಗಂಡು ನಾನು ಇತ್ತೀಚೆಗೆ ಸಂಸತ್ತಿನಲ್ಲಿ ಪ್ರತೀ 50 ಕಿ.ಮೀ.ಗೊಂದರಂತೆ ಹೃದಯ ಚಿಕಿತ್ಸೆ ನೀಡುವಂತಹ ಆಸ್ಪತ್ರೆಗಳನ್ನು ತೆರೆಯುವುದು ಅಗತ್ಯ ಎಂದು ಪ್ರತಿಪಾದಿಸಿದ್ದೇನೆ ಎಂದು ತಿಳಿಸಿದರು.
ಮಂಡ್ಯದಂತಹ ನಗರಕ್ಕೆ ಹೃದಯ ಚಿಕಿತ್ಸೆ ನೀಡುವಂತಹ ಆಸ್ಪತ್ರೆಯ ಆಗತ್ಯತೆ ಇದೆ. ಕಾರ್ಡಿಯಾಕ್ ಕ್ಯಾತ್ಲಾಗ್ ಬೇಕಾಗಿದೆ. ನಮ್ಮ ದೇಶದಲ್ಲಿ ಮೂರೂವರೆ ಸಾವಿರ ಇಂತಹ ಘಟಕಗಳಿವೆ. ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಟ ಆರೂವರೆ ಸಾವಿರ ಕಾರ್ಡಿಯಾಕ್ ಕ್ಯಾತ್ಲಾಗ್ ಆಸ್ಪತ್ರೆಗಳ ಅಗತ್ಯತೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನ ಸಳೆಯುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.ನಾವು ಮೈಸೂರಿನಲ್ಲಿ ಜಯದೇವ ಕೇಂದ್ರವನ್ನು ತೆರೆದಿದ್ದೆವು. ಇದರೊಂದಿಗೆ 45 ಕಡೆಗಳಲ್ಲಿ ಇಂತಹ ವ್ಯವಸ್ಥೆ ರೂಪಿಸಿದ್ದು, ಮೈಸೂರು ವಿಭಾಗದಲ್ಲಿ 15, ಬೆಂಗಳೂರು ವಿಭಾಗದಲ್ಲಿ 15 ಹಾಗೂ ಗುಲ್ಬರ್ಗಾ ವಿಭಾಗದಲ್ಲಿ 15 ಆಸ್ಪತ್ರೆಗಳಲ್ಲಿ ಹೃದಯ ತಪಾಸಣಾ ಘಟಕಗಳನ್ನು ಸ್ಥಾಪಿಸಿದ್ದೇವೆ ಎಂದರು.ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆದಿತ್ಯ, ಹೃದ್ರೋಗ ತಜ್ಞೆ ಡಾ.ದೀಪ್ತಿ ಮಂಗೇಶ್, ಸ್ತ್ರೀ ರೋಗತಜ್ಞೆ ಡಾ. ಶ್ರೀಕಲಾ, ಡಾ.ರವೀಂದ್ರನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Mysore20 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu21 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu24 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore20 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya22 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Mandya20 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Tech14 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan18 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ