Chamarajanagar
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ರಚನೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಜನಾರ್ಧನ್ ಕಾರ್ಯದರ್ಶಿಯಾಗಿ ಸ್ವಾಮಿ ರವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಈ ಹಿಂದೆ ಪ್ರಾಧಿಕಾರದ ನೌಕರರಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿದ್ದ ಹಿನ್ನೆಲೆ ಯಾವುದೇ ಸಭೆಗಳಲ್ಲಿ ಬಂದು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ, ಕೇವಲ ರಾಜಕೀಯ ಮುಖಂಡರುಗಳು ಹಾಗೂ ಅಧಿಕಾರಿಗಳನಷ್ಟೇ ಭೇಟಿ ಮಾಡಲು ಸಾಧ್ಯವಾಗುತ್ತಿತ್ತು ಇದರಿಂದ ನೌಕರರ ಸಮಸ್ಯೆ ಬಗೆಹರಿಯುತಿರಲಿಲ್ಲ, ಆದ್ದರಿಂದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವ ಅಧ್ಯಕ್ಷರಾಗಿ ಗೋಪಾಲ್, ಅಧ್ಯಕ್ಷರಾಗಿ ಜನಾರ್ಧನ್, ಕಾರ್ಯದರ್ಶಿಯಾಗಿ ಸ್ವಾಮಿ, ಉಪಾಧ್ಯಕ್ಷರಾಗಿ ಸರಗೂರು ಮಹಾದೇವಸ್ವಾಮಿ, ಸುಮಿತ್ರ ಬಾಯಿ ಸಹ ಕಾರ್ಯದರ್ಶಿಯಾಗಿ ರಾಜು, ಸಂಘಟನಾ ಕಾರ್ಯದರ್ಶಿಯಾಗಿ ಉಮೇಶ್, ಮಹೇಶ್ ಖಜಾಂಚಿಯಾಗಿ ಕಲಾವಿದ ರವಿ, ಜಂಟಿ ಕಾರ್ಯದರ್ಶಿಯಾಗಿ ಮಾದೇಶ್ ಸೇರಿದಂತೆ ಇನ್ನಿತರರನ್ನು ಪದಾಧಿಕಾರಿಗಳನ್ನಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ ನಾವು ಮುಂದಿನ ಫೆಬ್ರವರಿ ತಿಂಗಳಿನಲ್ಲಿ ಹಮ್ಮಿಕೊಂಡಿರುವ ಗಡಿನಾಡ ಉತ್ಸವ ಕಾರ್ಯಕ್ರಮ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ರವರನ್ನು ಭೇಟಿ ಮಾಡಲು ಆಗಮಿಸಿದ್ದೆವು .ಆದರೆ ಕಾಕತಾಳಿಯ ಎಂಬಂತೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ನಾವು ಯಾವುದೇ ಸೌಲಭ್ಯಗಳನ್ನು ಪಡೆಯಬೇಕಾದರೆ ಸಂಘಟನೆ ಅತಿ ಮುಖ್ಯವಾಗಿದೆ.ನಾವು ಯಾವುದೇ ಹೋರಾಟಗಳನ್ನು ಮಾಡಬೇಕಾದರೂ ಸಂಘಟನೆ ಇದ್ದರೆ ಮಾತ್ರ ಯಶಸ್ಸು ಪಡೆಯಬಹುದು ಆದ್ದರಿಂದ ಈಗ ರಚನೆ ಮಾಡಿಕೊಂಡಿರುವ ನೂತನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಘವನ್ನು ಎತ್ತರಕ್ಕೆ ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು, ನಾವು ಎಲ್ಲರೂ ಒಗ್ಗಟ್ಟಾಗಿ ಎಲ್ಲವನ್ನು ಎದುರಿಸಿದರೆ ಏನನ್ನು ಬೇಕಾದರೂ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.
ಕಾರ್ಯದರ್ಶಿ ಸರಸ್ವತಿ ಮಾತನಾಡಿ ನೂತನವಾಗಿ ರಚನೆ ಮಾಡಿಕೊಂಡಿರುವ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸಿ ನೌಕರರ ಹಿತ ಕಾಪಾಡಲಿ, ನೌಕರರ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಭೇಟಿ ಮಾಡಿ ಸಮಸ್ಯೆಯನ್ನು ಬಗೆಹರಿಸಲು ನಾನು ಸಹ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು .
ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಹದೇವಸ್ವಾಮಿ, ಕ್ರೀಡಾ ಕಾರ್ಯದರ್ಶಿಗಳಾದ ರಕ್ಷಿತ್ ಕುಮಾರ್, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ , ಹನೂರು ತಾಲೂಕು ಅಧ್ಯಕ್ಷರಾದ ಗುರುಸ್ವಾಮಿ, ಪ್ರಭಾರ ಕಾರ್ಯದರ್ಶಿಗಳಾದ ಚಂದ್ರಶೇಖರ್, ಜಿಲ್ಲಾ ಸರ್ಕಾರಿ ನೌಕರರ ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್ ಸೇರಿದಂತೆ ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ ನಾಯ್ಡು, ಪ್ರೀತಮ್ ಇನ್ನಿತರರು ಹಾಜರಿದ್ದರು.
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
Chamarajanagar
ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12 ರಲ್ಲಿ ಕಾಂಗ್ರೆಸ್ 11 ರಲ್ಲಿ ಕ್ಷೇತ್ರದಲ್ಲಿ ಬಿಜೆಪಿ 1 ರಲ್ಲಿ ಗೆಲುವು ಸಾಧಿಸಿದೆ
ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವ ಗೆಲುವು ಸಾಧಿಸಿದ್ದಾರೆ. ಸಹಕಾರ ಸಂಘದ ಅಧಿಕಾರ ನಡೆಸಿದ್ದ ಬಿಜೆಪಿಗೆ ಅಧಿಕಾರ ಕಳೆದುಕೊಂಡು ಮುಖಭಂಗ ಅನುಭವಿಸಿದೆ.
ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ
ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಶೇಖರ ಪುಟ್ಟಸ್ವಾಮಿ ಬಸಪ್ಪ ದೇವರು ಸದಾಶಿವಪ್ಪ ಹಿಂದುಳಿದ ವರ್ಗ (ಎ) ಕ್ಷೇತ್ರದಿಂದ ರಾಮೇಗೌಡ, ಹಿಂದುಳಿದ ವರ್ಗ (ಬಿ) ಕ್ಷೇತ್ರದಿಂದ ಜಿ. ಮಹೇಶ್ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಮಕೃಷ್ಣಯ್ಯ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಹೊಣಕಾರನಾಯಕ, ಮಹಿಳಾ ಮೀಸಲು ಕ್ಷೇತ್ರದಿಂದ ಎಸ್. ರತ್ನಮ್ಮ, ಶಿವಮ್ಮ ಗೆಲುವು ಸಾಧಿಸಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎಂ. ಮಹದೇವಸ್ವಾಮಿ 90 ಮತ ಪಡೆದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಗುರುಮೂರ್ತಿಯನ್ನು 63 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಕೆಎ ಮಹಾದೇವಸ್ವಾಮಿ ಗೆಲುವು ಸಾಧಿಸಿದ್ದಾರೆ.
*ಬಿಜೆಪಿಯ ಅಭ್ಯರ್ಥಿ ಗೆಲುವು*
ಕೋಟೆಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭೋಗಯ್ಯನ ಹುಂಡಿಯ ಬಿಎನ್ ಗಣೇಶ್ ರವರು ಜಯಶೀಲರಾಗಿದ್ದಾರೆ
*.*ತಮ್ಮ ಮತ ಹಾಕದೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ***
ಚುನಾವಣೆಯಲ್ಲಿ ಒಂದು ಮತಕ್ಕೆ ಅದರದೇ ಆದ ಮಹತ್ವವಿದೆ. ವಿಧಾನಸಭೆ ಚುನಾವಣೆಯಲ್ಲಿ 1 ಮತದಿಂದ ಸೋತ ಸಾಕಷ್ಟು ಉದಾಹರಣೆಗಳಿವೆ ಆದರೆ, ಶುಕ್ರವಾರ ನಡೆದ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸದಾಶಿವಪ್ಪ ಶಬರಿ ಮಲೆಗೆ ಯಾತ್ರೆಗೆ ಹೋಗಿದ್ದರು. ಶುಕ್ರವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆದಿದೆ. ತನ್ನ ಮತ ಹಾಕಿಕೊಳ್ಳದ ಸದಾಶಿವಪ್ಪ 165 ಮತ ಪಡೆದು ಗೆಲುವು ಸಾಧಿಸಿದ್ದರೆ
ಈ ಸಂದರ್ಭದಲ್ಲಿ
ಬೆಟ್ಟದಮಾದಹಳ್ಳಿ ಮಹದೇವಸ್ವಾಮಿ, ಎಪಿಎಂಸಿ ಆರ್.ಎಸ್.ನಾಗರಾಜು, ಸಾಹುಕಾರ್ ಬಿ.ಪಿ. ನಂದೀಶ್, ಮಲ್ಲೇಶ್, ಗೌಡಿಕೆ ಬಸವರಾಜಪ್ಪ, ಗೌಡಿಕೆ ಕೆಪಿ ಕುಮಾರ್ ಕುರುಬರಹುಂಡಿ ಕೋಟೆ ಕೆರೆಯ ರಂಗನಾಥ, ಶಂಕರನಾಯಕ ಸಿದ್ದು ಶಿವಲಿಂಗನಾಯಕ, ಬೆಟ್ಟದಮಾದಹಳ್ಳಿ ಮಲ್ಲು ಕುರುಬರಹುಂಡಿ ಚೇರ್ಮನ್ ಮಹೇಶ್, ಶಿವಲಿಂಗಪ್ಪ ಕೆಂಚಪ್ಪ,
ಚಿಕ್ಕಮಾದಪ್ಪ ಮಾದಪ್ಪ ಬೇಗೂರು ಜಗದೀಶ್ ನೂತನ ನಿರ್ದೇಶಕರು ಹಾಗೂ ಕೋಟೆಕೆರೆ, ಭೋಗಯ್ಯನಹುಂಡಿ, ಕುರುಬರಹುಂಡಿ, ಬೆಟ್ಟದಮಾದಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು…
ಗೆದ್ದ ಅಭ್ಯರ್ಥಿಗಳಿಗೆ ಶಾಸಕರಿಂದ ಶುಭ ಹಾರೈಕೆ**
ಕೋಟೆಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಗುಂಡ್ಲುಪೇಟೆ ತಾಲೂಕಿನ ಶಾಸಕರಾದ ಎಚ್ ಎಂ ಗಣೇಶ್ ಪ್ರಸಾದ್ ಅವರು ಹಾಗೂ ಜಿಲ್ಲಾ ಸಹಕಾರ ಸಂಘದ ಒಕ್ಕೂಟದ ಅಧ್ಯಕ್ಷರಾದ ಎಚ್ ಎಸ್ ನಂಜುಂಡ ಪ್ರಸಾದ್ ರವರು ಶುಭಾಶಯ ಕೋರಿದರು..
*ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ **
ಕೋಟೆಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಹಾಗೂ ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮವನ್ನು ಆಚರಣೆ ಮಾಡಿದರು…
*ಕುರುಬರಹುಂಡಿ ಬಿಜೆಪಿಗರಿಗೆ ತೀವ್ರ ಮುಖಭಂಗ ***
ಕುರಬರಹುಂಡಿ ಗ್ರಾಮದ ಕೆಪಿ ಶಿವರಾಜ್ ಹಾಗೂ ಸಂಗಡಿಗರಿಗೆ ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯ ಸೋಲು ತೀವ್ರ ಮುಜುಗರ ಕೀಡಾಗಿದೆಮಾಡಿದೆ
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu19 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
Chamarajanagar24 hours ago
ಸತತ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಎಂ.ಪಿ.ಸುನೀಲ್ ಆಯ್ಕೆ
-
National - International20 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu21 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State22 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Hassan23 hours ago
ಗಮನಸೆಳೆದ ತಿಂಗಳ ಮಾಮನ ತೇರು: ಚಂದ್ರನಿಗೆ ಮದುವೆ ಮಾಡಿದ ನಿವಾಸಿಗಳು
-
Mysore23 hours ago
ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ: ಶಾಸಕ ತನ್ವೀರ್ ಸೇಠ್