Connect with us

Chikmagalur

ಸಡಗರ ಮತ್ತು ಸಂಭ್ರಮದಿಂದ ಹೆಗ್ಗರವಳ್ಳಿ ಶಾಲೆಯಲ್ಲಿ ಗಣರಾಜ್ಯೋತ್ಸವ

Published

on

75 ನೇ ಗಣರಾಜ್ಯೋತ್ಸವವನ್ನು ಇಂದು ಹೆಗ್ಗರವಳ್ಳಿ ಶಾಲೆಯಲ್ಲಿ ಶಾಲೆಯ SDMC ಅಧ್ಯಕ್ಷರಾದ C R ರವಿ ಅವರ ಅಧ್ಯಕ್ಷತೆಯಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ವಿದ್ಯಾರ್ಥಿ ಪುಟಾಣಿಗಳಿಂದ ವಿವಿಧ ನೃತ್ಯ ಮತ್ತು ಗೀತೆ, ಡ್ಯಾನ್ಸ್, ಕೋಲಾಟ ಹಾಗೂ ಭಾಷಣ ಮೂಲಕ ನೆರೆದಿದ್ದ ಗ್ರಾಮಸ್ಥರನ್ನು ರಂಜಿಸಿದರು ಹಾಗೂ ಗಣರಾಜ್ಯೋತ್ಸವದ ಬಗ್ಗೆ ಸುದೀರ್ಘವಾಗಿ ಶಾಲೆಯ SDMC ಉಪಾಧ್ಯಕ್ಷರು ಅದ ಶ್ರೀಯುತ C E ಜಗದೀಶ್ ಅವರ ಭಾಷಣದ ಮೂಲಕ ತಿಳಿಸಿದರು. ವೇದಿಕೆಯಲ್ಲಿ ಶಾಲೆಯ ಮುಕ್ಯೋಪಾಧ್ಯಾಯರಾದ ವೆಂಕಟರಮಣ ಸರ್ ಅವರು ವೇದಿಕೆಯಲ್ಲಿ ನೆರಿದಿದ್ದ ಗಣ್ಯರನ್ನು ಸ್ವಾಗತಿಸಿದರು. ಹಾಗೂ ಗ್ರಾಮದ ಉತ್ಸಹಿ ಯುವಕ C M ರಚಿತ್ ಕುಮಾರ್ ಹಾಗೂ ಅತಿಥಿ ಶಿಕ್ಷಕರಾದ ಸುಜಾತ ಯೋಗೆಂದ್ರ ಅವರು ಮತ್ತು ಶಾಲೆಯ SDMC ಸದಸ್ಯರು ಹಾಗೂ ಗ್ರಾಮಸ್ಥರು ಹಾಗೂ ಅಡುಗೆ ದಾಸೋಹದ ಶ್ರೀಮತಿ ಯಶೋಧ ಸುರೇಶ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಗ್ರಾಮಸ್ಥರನ್ನು ಮೆರಗು ಗೊಳಿಸಿತು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪೂರ್ವ ತಯಾರಿಗೊಳಿಸಿದ ಸುಜಾತಾ ಅವರು ತುಂಬಾ ಅಚ್ಚುಕಟ್ಟಾಗಿ ತಮ್ಮ ಕಾರ್ಯನಿರ್ವಾಹಿಸಿದ್ದರು.

ವರದಿ : ಸಿ .ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading
Click to comment

Leave a Reply

Your email address will not be published. Required fields are marked *

Chikmagalur

ಹುಯಿಗೆರೆಯಲ್ಲಿ ಶಂಕರ ಭಾರತಿ ಗೋಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Published

on

ಬಾಳೆಹೊನ್ನೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪ ಸಂಖ್ಯಾತರ ತುಷ್ಟೀಕರಣದ ಪಕ್ಷವಾಗಿದೆ ಇವರ ಆಡಳಿತದಲ್ಲಿ ರಾಜ್ಯಾದ್ಯಂತ ಅವ್ಯಾಹತವಾಗಿ ಗೋ ಸಾಗಾಣಿಕೆ, ಹತ್ಯೆ, ಹಿಂದೂಗಳ ಮೇಲೆ ದೌರ್ಜನ್ಯ, ಲವ್ ಜಿಹಾದ್ ನಿರಂತರವಾಗಿ ಮುಂದುವರೆಯುತ್ತಿರುವುದು ಆತಂಕ ಸೃಷ್ಠಿಸಿದೆ ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಹ ಕಾರ್ಯದರ್ಶಿ ಗೋಪಾಲ್ ಜಿ ತಿಳಿಸಿದರು .

ಅವರು ಬಾಳೆಹೊನ್ನುರು ಸಮೀಪದ ಹುಯಿಗೆರೆಯಲ್ಲಿರುವ ಶಂಕರ ಭಾರತಿ ಗೋಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ & ಹಸು, ಕರುವನ್ನು ಪೂಜಿಸಿ ಬಿಡುವ ಮೂಲಕ ಉದ್ಘಾಟಿಸಲಾಯಿತು.

ಸತತ 500 ವರ್ಷಗಳ ಸಂಘರ್ಷದ ಬಳಿಕ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಂಡಿರುವುದು ನಾವು ಹೆಮ್ಮೆಪಡುವ ವಿಚಾರವಾಗಿದೆ. 30 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳನ್ನು ಆಕ್ರಮಣಕಾರಿಗಳು ಧ್ವಂಸ ಮಾಡಿದ್ದು, ಅದರಲ್ಲಿ ಅಯೋಧ್ಯೆಯನ್ನು ವ್ಯಾಪಕ ಜನಾಂದೋಲನ, ಕಾನೂನಿನ ಮೂಲಕ ಕಡೆಗೂ ನಮ್ಮದಾಗಿಸಿಕೊಳ್ಳಲಾಗಿದೆ.

ವಿಶ್ವ ಹಿಂದೂ ಪರಿಷತ್ ಸಂಘಟನೆಯು ಮುಂದಿನ ದಿನಗಳಲ್ಲಿ ಕಾಶಿ, ಮಥುರಾ, ಅಯೋಧ್ಯೆಯ ಉಳಿವಿನ ಛಲದ ಹೋರಾಟಕ್ಕೆ ಹಂತಹಂತವಾಗಿ ಜಯ ಲಭಿಸುವ ಕಾಲ ಸನ್ನಿಹಿತವಾಗುತ್ತಿದ್ದು, ಮುಂದೆ ಐತಿಹಾಸಿಕ ಮಥುರೆ, ಕಾಶಿಯನ್ನು ನಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ಚುರುಕು ಗತಿಯಲ್ಲಿ ಸಾಗಲಿದೆ.

ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಗೋಶಾಲೆಗಳು ಹೆಚ್ಚಿನ ಪ್ರಮಾಣದಲ್ಲಿ ನಿರ್ಮಾಣಗೊಳ್ಳುವ ಮೂಲಕ ಗೋ ಸಂರಕ್ಷಣೆಯ ಆಂದೋಲನದಲ್ಲಿ ಹೊಸ ಆತ್ಮ ವಿಶ್ವಾಸ, ಚೈತನ್ಯವನ್ನು ಹೆಚ್ಚಿಸಿದೆ. ಪ್ರವೀಣ್ ಖಾಂಡ್ಯ ಮತ್ತು ತಂಡ ನಿರ್ವಹಣೆ ಮಾಡುತ್ತಿರುವ ಈ ಗೋ ಸೇವಾ ಕೈಂಕರ್ಯಕ್ಕೆ ಶೃಂಗೇರಿ ಶಾರದಾ ಪೀಠದ ಅನುಗ್ರಹ, ಸಹಕಾರ ದೊರೆತಿದ್ದು, ಅನೇಕ ಕಾರ್ಯಕರ್ತರು ಈ ಸೇವೆಯಲ್ಲಿ ತೊಡಗಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ.

ಸಾಕಲು ಅಸಹಾಯಕರಾದ ರೈತರು, ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ಹಿಡಿದು ರಕ್ಷಿಸಿದ ಗೋವುಗಳಿಗೆ ಆಶ್ರಯ ನೀಡಿ ಪುನರ್ಜನ್ಮ ಕಲ್ಪಿಸುವಲ್ಲಿ ಗೋ ಸೇವಾ ಕೇಂದ್ರಗಳು ಸಹಕಾರಿಯಾಗಿದೆ. ಸಮಾಜ, ಮಠ, ಮಾನ್ಯಗಳ ಬೆಂಬಲ ಸಿಗದೆ ಇದ್ದಲ್ಲಿ ಇವುಗಳು ಉಳಿಯಲಾರವು. ಪ್ರತಿಯೊಬ್ಬರೂ ಆರ್ಥಿಕ ನೆರವು, ಆಹಾರ, ಮೇವಿನ ರೂಪದಲ್ಲಿ ಧರ್ಮಾಭಿಮಾನಿಗಳು ಗೋಗ್ರಾಸದ ರೂಪದಲ್ಲಿ ದಾನ ನೀಡಬೇಕು ಎಂದರು.

ಆಳುವ ಕಾಂಗ್ರೆಸ್ ಸರಕಾರವು ಮತಾಂಧತೆಗೆ ಬೆಂಬಲ ನೀಡುತ್ತಿದ್ದು, ಹಿಂದೂ ಸಮಾಜ ಅದನ್ನು ದಿಟ್ಟ ಹೋರಾಟದ ಮೂಲಕ ಎದುರಿಸಬೇಕಾಗಿದೆ. ದತ್ತಪೀಠದ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಚ್ಚ ನ್ಯಾಯಾಲಯದ ತೀರ್ಪಿನಂತೆ ರಾಮ ಮಂದಿರಕ್ಕೆ ಅಯೋಧ್ಯೆ ಮೀಸಲಿಟ್ಟು, ಮುಸ್ಲಿಮರಿಗೆ ಪ್ರತ್ಯೇಕ ಜಾಗ ನೀಡಿದ ಕ್ರಮವನ್ನೇ ದತ್ತಪೀಠಕ್ಕೂ ಅನ್ವಯಿಸುವಂತೆ ಮಾಡುವ ತೀರ್ಪು ಬಂದಾಗ ಸಮಸ್ಯೆ ಬಗೆಹರಿಯಬಲ್ಲದು ಎಂದರು.

ಇದರ ಅಂಗವಾಗಿ ರುದ್ರ, ಶತರುದ್ರ ಹೋಮ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು. ಬೆಂಗಳೂರಿನ ಐಎಎಸ್ ಅಧಿಕಾರಿ ವಿಶ್ವನಾಥ್ ಹಿರೇಮಠ್, ವಿಹಿಂಪ ಮುಖಂಡ ದಾವಣಗೆರೆಯ ಮುರಳಿ, ಶಂಕರ ಭಾರತಿ ಗೋಶಾಲೆ ಟ್ರಸ್ಟ್ ಅಧ್ಯಕ್ಷೆ ಶೃತಿ ಪ್ರವೀಣ್, ಉಪಾಧ್ಯಕ್ಷ ಮುರಳಿಧರ್, ಖಜಾಂಚಿ ಪ್ರವೀಣ್ ಖಾಂಡ್ಯ, ಸಾವಿತ್ರಮ್ಮ ಕೇಶವಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಕಿರಿಯ ಜಗದ್ಗುರುಗಳ ಆಪ್ತ ಸಹಾಕ ಕೃಷ್ಣಮೂರ್ತಿ ಮಾತನಾಡಿ, ಶ್ರೀ ಪೀಠದಿಂದ ಸಹಕಾರ ಧರ್ಮ, ಸಂಸ್ಕೃತಿ, ಪರಂಪರೆಗಳ ಉಳಿವಿಗಾಗಿ ಯಾವ ಸಂಘಟನೆ, ವ್ಯಕ್ತಿಗಳು ಮುಂದೆ ಬರುತ್ತಾರೋ ಅವರಿಗೆ ಶ್ರೀ ಪೀಠದ ಉಭಯ ಜಗದ್ಗುರುಗಳ ಅನುಗ್ರಹ ಹಾಗೂ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು

Continue Reading

Chikmagalur

ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನ ಕಟ್ಟಡ

Published

on

ಚಿಕ್ಕಮಗಳೂರು: ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಹೇಳಿದರು.

ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು.ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.

ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಎಂಎಲ್ಸಿ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು

Continue Reading

Chikmagalur

ಚಿಕ್ಕಮಗಳೂರಿನಲ್ಲಿ ಮನಸ್ಮಿತಾ ಅವರಿಗೆ ಗೌರವ ಸಮರ್ಪಣೆ

Published

on

ರಾಷ್ಟ್ರ ಪ್ರಶಸ್ತಿ ವಿಜೇತೆ ಮನಸ್ಮಿತಾ ಅವರನ್ನು ಗೌರವಿಸಿದ ಜಿಲ್ಲಾ ಒಕ್ಕಲಿಗ ಸಂಘ
ಚಿಕ್ಕಮಗಳೂರು: ಪುಟ್ಟ ವಯಸ್ಸಿನಲ್ಲಿಯೇ ತನ್ನ ಅಸಾಮಾನ್ಯ ಬುದ್ಧಿಶಕ್ತಿಯಿಂದ 4 ಗ್ಲೋಬಲ್ ಅವಾರ್ಡ್ಗಳು ಮತ್ತು ಒಂದು ರಾಷ್ಟ್ರ ಪ್ರಶಸ್ತಿ ಹಾಗೂ 4 ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ಗ್ರಾಮದ ಮನಸ್ಮಿತಾ ಅವರನ್ನು ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ವತಿಯಿಂದ ಗೌರವಿಸಲಾಯಿತು.

ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಹುಲಿಯಪ್ಪ ಗೌಡ ಮತ್ತು ಧನಲಕ್ಷ್ಮಿ ಕುಮಾರಿ ಡಿ.ಎಂ ದಂಪತಿ ಪುತ್ರಿ ಎರಡು ವರ್ಷದ ಮನಸ್ಮಿತಾ ಅವರಿಗೆ ಚಿಕ್ಕಮಗಳೂರಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ನೆಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ವತಿಯಿಂದ ಗೌರವ ಸಮರ್ಪಣೆ ಮಾಡಿದ್ದಾರೆ.

ಈ ಕಾರ್ಯಕ್ರಮವನ್ನು ಸಾಮಾಜಿಕ ವಾಣಿಜ್ಯೋದ್ಯಮಿ ಪಲ್ಲವಿ ಸಿ.ಟಿ. ರವಿ ಉದ್ಘಾಟನೆ ಮಾಡಿದರು. ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ಅಧ್ಯಕ್ಷರಾದ ರೀನಾಸುಜೇಂದ್ರ, ಮೈಸೂರು ಜಿಲ್ಲಾ ಹಾಲು ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಜಂಟಿ ನಿರ್ದೇಶಕರಾದ ಬಿ.ಎಲ್ ಶ್ವೇತ, ಟಿ. ರಾಜಶೇಖರ್, ಟಿ.ಡಿ. ಮಲ್ಲೇಶ್, ಎಂ.ಎಸ್. ಪ್ರದೀಪ್‌ಕುಮಾರ್, ಎ. ಪೂರ್ಣೇಶ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Continue Reading

Trending

error: Content is protected !!