Mysore
ಸಹಕಾರ ಸಂಘ ಅವ್ಯವಹಾರ, ಅವೈಜ್ಞಾನಿಕ ಕಾಮಗಾರಿ, ಗಬ್ಬು ನಾರುತ್ತಿರುವ ಆಸ್ಪತ್ರೆ, ಜಮೀನು ಅಳತೆ ವ್ಯತ್ಯಾಸ, ಲೋಕಾಯುಕ್ತರಿಗೆ ದೂರು,

ಸಾಲಿಗ್ರಾಮ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ಸಲ್ಲಿಸಿದರು.
ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2012 ರಿಂದಲೂ ಲಕ್ಷಾಂತರ ರೂಗಳ ಬಾರಿ ಅವ್ಯವಹಾರ ನಡೆದಿದೆ, ಇದರ ಬಗ್ಗೆ ಸಂಬಂಧ ಪಟ್ಟವರಿಗೆ ತನಿಖೆ ನಡೆಸಲು ನಮೂನೆಯಲ್ಲಿ ದೂರು ನೀಡಿದ್ದೇವೆ, ಅದಕ್ಕೆ ಉತ್ತರವೇ ನೀಡಿಲ್ಲ, ಎಂದು ಗ್ರಾಮದ ಯುವ ಮುಖಂಡ ಸಾರಾ ಸತೀಶ್ ರವರು ದೂರು ನೀಡಿದರು.
ಮಾಗಡಿ – ಸೋಮುವಾರ ಪೇಟೆ ಮುಖ್ಯ ರಸ್ತೆಯ ಕಾಮಗಾರಿಯನ್ನು ಕೆ – ಶಿಪ್ ರವರು (ಕೆ ಎನ್ ಆರ್ ಕಂಪನಿ ) ಅವೈಜ್ಞಾನಿಕವಾಗಿ ಮಾಡಿದ್ದಾರೆ.ರಸ್ತೆ ಬಿರುಕು ಬಿಟ್ಟಿದೆ, ಮುಖ್ಯ ರಸ್ತೆಯಲ್ಲಿ ಹಾದು ಹೋಗಿರುವ ಹಾರಂಗಿ ಎಡದಂಡೆ ನಾಲೆಯ ಕಿರು ಗಾಲುವೆ ಮುಚ್ಚಿ, ಧನ, ಕರು, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ತೊಂದರೆ ಉಂಟಾಗಿದೆ. ಲೋಕೋಪಯೋಗಿ ಇಲಾಖೆಯ ಪೈಪ್ ಲೈನ್ ಮುಚ್ಚಿದ್ದಾರೆ. ರಸ್ತೆಯಲ್ಲಿಯೇ ವಿದ್ಯುತ್ ಕಂಬ ಇದೆ, ಚರಂಡಿ ಹಾಗೂ ರಸ್ತೆ ಕಾಮಗಾರಿ ಅರ್ಧ ಭಾಗ ಮಾಡಿ ನಿಲ್ಲಿಸಿದ್ದಾರೆ. ಅಪಘಾತ ಗಳು ನಡೆದು ಸಾವು ಸಂಭವಿಸಿದೆ. ಸಮರ್ಪಕವಾಗಿ ಕಾಮಗಾರಿ ಮಾಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ದೂರು ಸಲ್ಲಿಸಿ ಮನವಿ ಮಾಡಿದರು.
ಸಾಲಿಗ್ರಾಮದ ಸರ್ಕಾರಿ ಆಸ್ಪತ್ರೆ ಒಳಗಡೆ ಹೋದರೆ ಮೂಗು ಮುಚ್ಚಿ ಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ, ಸ್ವಚ್ಛತೆ ಇಲ್ಲಾ, ಗಬ್ಬು ನಾರುತ್ತಿದೆ, ಎಂದು ರೈತ ಸಂಘದ ಅಧ್ಯಕ್ಷ ಎಸ್ ಬಿ ಶೇಖರ್ ದೂರಿದರು.
ಸರ್ವೆ ಇಲಾಖೆಯಲ್ಲಿ ಸರಿಯಾದ ದಾಖಲಾತಿ ಗಳನ್ನು ನೀಡದೆ ಬಾರಿ ಗೊಂದಲಗಳು ಉಂಟಾಗಿವೆ, ನೊಂದಣಿ ಕಚೇರಿ, ಗ್ರಾಮ ಪಂಚಾಯತಿಯ ಕೆಲವು ಪಿ ಡಿ ಒ ಗಳಿಂದ ಕಡತ ಗಳು ಸರಿಯಾಗಿ ವಿಲೇವಾರಿಯಾಗದೆ ಇರುವುದು, ಇವುಗಳ ಬಗ್ಗೆ ಜನತೆ ದೂರು ಸಲ್ಲಿಸಿದರು.
ಅತೀ ಹೆಚ್ಚಿನ ರೀತಿಯಲ್ಲಿ ರಸ್ತೆ ಕಾಮಗಾರಿಯ ಬಗ್ಗೆ ದೂರು ನೀಡಿದರು.
ಲೋಕಾಯುಕ್ತ ಎಸ್ ಪಿ ಸಜಿತ್ ದೂರು ಸ್ವೀಕರಿಸಿ ಮಾತನಾಡಿ ದೂರು ನೀಡಿರುವ ಬಗ್ಗೆ ಪರಿಶೀಲನೆ ಮಾಡಿ ಸಂಬಂಧ ಪಟ್ಟ ಇಲಾಖೆಗೆ ತಿಳಿಸಿ ಮುಂದಿನ ಕ್ರಮ ಕೈ ಗೊಳ್ಳಲಾಗುವುದು, ಅಧಿಕಾರಿಗಳು ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಬಂದು ಹಾಜರಾಗಬೇಕು, ಎಲ್ಲಾ ಕಚೇರಿಗಳಲ್ಲಿ ಲೋಕಾಯುಕ್ತರ ನಾಮ ಫಲಕವನ್ನು ಕಡ್ಡಾಯವಾಗಿ ಹಾಕಬೇಕು,ಅರ್ಜಿ ಸಲ್ಲಿಸಿದ ಅವಧಿ ಹಾಗೂ ಕಾಲಮಿತಿ ಫಲಕ ಹಾಕಬೇಕು, ಜನತೆಗೆ ತೊದರೆ ಕೊಡದ ರೀತಿಯಲ್ಲಿ ಕಾನೂನು ಪರಿಮಿತಿ ಒಳಗಡೆ ಕೆಲಸ ಮಾಡಿ ಎಂದು ತಿಳಿಸಿದರು.
ಲೋಕಾಯುಕ್ತ ಡಿ ವೈ ಎಸ್ ಪಿ ಮಾಲತೇಶ್, ಕೃಷ್ಣಯ್ಯ ವೃತ್ತ ನಿರೀಕ್ಷಕ ಉಮೇಶ್, ಸಬ್ ಇನ್ಸ್ಪೆಕ್ಟರ್ ರವಿಕುಮಾರ್, ತಹಸೀಲ್ದಾರ್ ನರಗುಂದ, ಇ.ಒ.ಸತೀಶ್ ಸಾಲಿಗ್ರಾಮ ಠಾಣೆ ವೃತ್ತ ನಿರೀಕ್ಷಕ ಕೃಷ್ಣ ರಾಜು, ಉಪ ತಹಸೀಲ್ದಾರ್ ಮಹೇಶ್, ಶರತ್ ಕುಮಾರ್, ಶಿರಸ್ಡೆದಾರ್ ಶಿವಕುಮಾರ್, ಮಹೇಶ್, ಎ ಡಿ ಎಲ್ ಆರ್ ಶರ್ಮಾ, ಚೆಸ್ಕಾಂ ಮಧುಸೂದನ್,ಕಾರ್ಮಿಕ ಇಲಾಖೆ ಧನುಷ, ಬಿ ಸಿ ಎಂ ಅಶೋಕ್, ಅರಣ್ಯ ಇಲಾಖೆ ರಶ್ಮಿ,, pwd ಭಾರತಿ, ಪಶು ವೈದ್ಯ ಸುರೇಂದ್ರ, ವಕೀಲ ಮಂಜುನಾಥ್, ರಾಜೇಗೌಡ, ಶೇಖರ್, ಚಂದ್ರು, ಸತೀಶ್, ಸುನಿಲ್, ಗ್ರಾಮ ಪಂಚಾಯಿತಿ ಪಿ ಡಿ ಒ ಗಳು ಸೇರಿದಂತೆ ಇನ್ನಿತರರು ಇದ್ದಾರೆ.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Mysore
ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Mysore
ಎಚ್ಸಿಎಂ ಮನೆಗೆ ದಸಂಸ ಮುಖಂಡರಿಂದ ಮುತ್ತಿಗೆ ಯತ್ನ

ಮೈಸೂರು: ಸಚಿವ ಡಾ. ಹೆಚ್ ಸಿ ಮಹದೇವಪ್ಪ ನಿವಾಸಕ್ಕೆ ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ದಸಂಸ ಕಾರ್ಯಕರ್ತರು ರಾಜ್ಯ ಸರ್ಕಾರರವನ್ನು ಎಷ್ಟೇ ಮನವಿ ಮಾಡಿದರೂ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಬೇಸತ್ತು ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ ಮಹದೇವಪ್ಪ ನಿವಾಸಕ್ಕೆ ಕೂಡಲೇ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.
ದಲಿತ ಸಂಘರ್ಷ ಸಮಿತಿ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದು ಎಲ್ಲರನ್ನು ಪೊಲೀಸರು ಬಂಧಿಸಿದ್ದಾರೆ.
Mysore
ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿ

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್,ಸದಸ್ಯರಾದ ಗೌತಮ್ ಸಾಲೇಚ ಮತ್ತು ರಿತೇಶ್ ಗೌಡ ಭೇಟಿ ಮಾಡಿ ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಬೇಸ್ ಮೆಂಟ್ನಲ್ಲಿ ನಿಲ್ಲಿಸಿದ್ದು ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿಸಿದರು .
ಕಾಮಗಾರಿ 2019 ರಲ್ಲಿ ಆದೇಶ ಪಡೆದ ಗುತ್ತಿಗೆದಾರರು 2021 ರಲ್ಲಿ ಬೇಸ್ ಮೆಂಟ್ ವರೆಗೆ ಮಾತ್ರ ಮಾಡಿ ನಿಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಮಳೆಗೆ ಶಿಥಿಲವಾಗುತ್ತಿದೆ. ಕೇಂದ್ರ ಸರ್ಕಾರದ 3 ಕೋಟಿ ರೂಪಾಯಿ
ರಾಜ್ಯ ಸರ್ಕಾರದ 1 ಕೋಟಿ ರೂಪಾಯಿ ಮೈಸೂರು ಕೈಗಾರಿಕೆಗಳ ಸಂಘದ 50 ಲಕ್ಷ ರೂಪಾಯಿ ಕೆ.ಐ.ಎ.ಡಿ.ಬಿ.ಗೆ ವಿ.ಐ.ಪಿ.ಸಿ ಮೂಲಕ ನೀಡಿ 20020 ರಲ್ಲಿ ಕಟ್ಟಡ ಪೂರ್ಣ ಗೊಳಿಸುವ ಭರವಸೆ ಹುಸಿಯಾಗಿದೆ.
ಕೂಡಲೇ ಕಾಮಗಾರಿ ಪುನಾರಂಬಿಸುವಂತೆ ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯ ನಿರ್ವಾಹಕ ಮಹೇಶ್ ಅವರಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೂರವಾಣಿಯಲ್ಲಿ ಸೂಚಿಸಿದರು.
ಜಿತೋ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಸ್ಟಾರ್ ಏರ್ ಲೈನ್ಸ್ ಮಾಲೀಕ ಶ್ರೀ ಸಂಜಯ್ ಗೋದಾವತ್ ಮೈಸೂರಿನಲ್ಲಿ ಅವರ ವಿಮಾನ ಸೇವೆಯನ್ನು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಪೂರ್ಣಗೊಂಡ ಬಳಿಕ ಒದಗಿಸಲಾಗುವುದು ಎಂದು ತಿಳಿಸಿದ ವಿಷಯವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಇತು.
ಇದಕ್ಕೆ ಪ್ರಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು ವಿಮಾನಗಳ ಸದ್ಭಳಕೆ ದಿಕ್ಕಿನಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಸೂಕ್ತ ಪ್ರಚಾರ ಮಾಡಬೇಕೆಂದರು.
-
Mandya6 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan13 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya9 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Hassan12 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu9 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Mandya8 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan8 hours ago
ಮತಾಂತರಕ್ಕೆ ಪ್ರಯತ್ನಿಸುತ್ತಿರುವುದಾಗಿ ಸುಳ್ಳು ದೂರು ದಾಖಲು: ಪ್ರಶಾಂತ್